Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಮನವಿ ತಿರಸ್ಕೃತ

09/02/2026 6:42 PM

BIG NEWS: ಇನ್ಮುಂದೆ ‘ಸೋಷಿಯಲ್ ಮೀಡಿಯಾ ಪೋಸ್ಟ್’ಗಳ ವಿರುದ್ಧ ‘FIR ದಾಖಲು’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

09/02/2026 6:41 PM

BIGG NEWS : 2027ರಲ್ಲಿ ಭಾರತದ ನೈಜ GDP ಶೇ.6.4ರಷ್ಟು ಬೆಳವಣಿಗೆ ; ಮೂಡೀಸ್ ಭವಿಷ್ಯ

09/02/2026 6:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಟುಕರಿಗೆ ಕಣ್ಣೀರು ಬರೋದಿಲ್ಲ, ಭಾವನಾತ್ಮಕ ಜೀವಿಗಳಿಗೆ ಮಾತ್ರ ಬರುತ್ತೆ: ಕಾಂಗ್ರೆಸ್ ನಾಯಕರಿಗೆ HDD ತಿರುಗೇಟು
KARNATAKA

ಕಟುಕರಿಗೆ ಕಣ್ಣೀರು ಬರೋದಿಲ್ಲ, ಭಾವನಾತ್ಮಕ ಜೀವಿಗಳಿಗೆ ಮಾತ್ರ ಬರುತ್ತೆ: ಕಾಂಗ್ರೆಸ್ ನಾಯಕರಿಗೆ HDD ತಿರುಗೇಟು

By kannadanewsnow0905/11/2024 6:06 PM

ರಾಮನಗರ: ತಮ್ಮ ಆರೋಗ್ಯ ಹಾಗೂ ನಿಖಿಲ್ ಅವರ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಕಟುಕರಿಗೆ ಕಣ್ಣೀರು ಬರುವುದಿಲ್ಲ, ಹೃದಯವಿರುವ ಭಾವುಕ ಜೀವಿಗಳಿಗೆ ಮಾತ್ರ ಕಣ್ಣೀರು ಬರುತ್ತದೆ ಎಂದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ವಿರೂಪಾಕ್ಷಪುರ, ಕೊಡಂಬಹಳ್ಳಿ ಗ್ರಾಮಗಳಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಅವರು; ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಾನು ಆಂಬುಲೆನ್ಸ್ ನಲ್ಲಿ ಬಂದಿಲ್ಲ

ನನ್ನ ಆರೋಗ್ಯ ಚೆನ್ನಾಗಿದೆ. ನಾನು ಆಂಬುಲೆನ್ಸ್ ನಲ್ಲಿ ಬಂದಿಲ್ಲ, ವ್ಹೀಲ್ ಚೇರ್ ಮೇಲೆ ಬಂದಿಲ್ಲ. ನಾನು ನಿಮ್ಮೆಲ್ಲರ ಆಶೀರ್ವಾದದಿಂದ ಚೆನ್ನಾಗಿದ್ದೇನೆ. ಆರೋಗ್ಯವಾಗಿದ್ದೇನೆ. ಅದನ್ನು ತೋರಿಸಲು ಇಲ್ಲಿಗೆ ಬಂದಿದ್ದೇನೆ. ನೀವೇ ನನ್ನನ್ನು ನೋಡುತ್ತಿದ್ದೀರಿ, ಹೇಗೆ ಇದ್ದೇನೆ ಎಂದು ಗಮನಿಸುತ್ತಿದ್ದೀರಿ ಅಲ್ಲವೇ? ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಕಾಂಗ್ರೆಸ್‌ ನಾಯಕರು ನನ್ನ ಹೊರಗಿನವರು ಎನ್ನುತ್ತಿದ್ದಾರೆ. ನಾನು ಅವರಿಗೆ ಹೊರಗಿನವನು ಎಂದು ಈಗ ಅನ್ನಿಸುತ್ತಿದೆ. ಆದರೆ, ನಾನು ಈ ತಾಲ್ಲೂಕಿಗೆ ಶಾಶ್ವತ ನೀರಾವರಿ ಒದಗಿಸಲು ಇಗ್ಗಳೂರು ಬ್ಯಾರೇಜ್ ಕಟ್ಟಿಸಿದಾಗ ಹಾಗೆಂದು ಅನಿಸಲಿಲ್ಲವೇ? ರಾಜಕೀಯಕ್ಕಾಗಿ ಕಾಂಗ್ರೆಸ್ ನಾಯಕರು ಜನರಿಗೆ ಬರೀ ಸುಳ್ಳನ್ನೇ ಹೇಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಮಂಡಿ ನೋವು, ನಿಂತುಕೊಂಡು ಮಾತಾಡೋಕೆ ಆಗಲ್ಲ. ನನಗೀಗ 92 ವರ್ಷ, ಎಸ್.ಎಂ.ಕೃಷ್ಣ ಮತ್ತು ನಾನು ಒಂದೇ ವಯಸ್ಸಿನವರು. ಆದರೆ ನಾವು ಈಗಲೂ ಕೆಲಸ ಮಾಡುತ್ತಿದ್ದೇವೆ. ದೇಹಕ್ಕೆ ವಯಸ್ಸಾಗುತ್ತದೆ, ಇಚ್ಛಾಶಕ್ತಿಗೆ ಅಲ್ಲ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಮುದ್ದೆ ಸೊಪ್ಪಿನ ಸಾಂಬಾರು ಹಾಕಿ ಅಡುಗೆ ಮಾಡಿ ಬಡಿಸಿದ ತಾಯಂದಿರು ಇಲ್ಲಿದ್ದೀರಿ. ನಿಮ್ಮನ್ನು ಎಂದಿಗೂ ಮರೆಯೋಕೆ ಸಾಧ್ಯವಿಲ್ಲ. ನಿಮ್ಮ ಪಾದಕ್ಕೆ ನಾನು ನಮಸ್ಕಾರ ಮಾಡ್ತೀನಿ. ನಾನು ಈ ತಾಲೂಕಿಗೆ ಏನೇನು ಮಾಡಿದ್ದೇನೆ, ಹೇಗೆಲ್ಲಾ ಶ್ರಮಪಟ್ಟು ಇಗ್ಗಲೂರು ಅಣೆಕಟ್ಟು ಕಟ್ಟಿದ್ದೇನೆ, ಆ ಬಗ್ಗೆ ನಾನು ಚರ್ಚೆ ಮಾಡಲ್ಲ, ಆದರೆ ಇಗ್ಗಲೂರು ಅಣೆಕಟ್ಟು ನಿಮ್ಮ ಮುಂದೆ ಇದೆ ಎಂದರು ಅವರು.

ನಿಮ್ಮ ಆಶೀರ್ವಾದ ಇದ್ದರೆ ನೂರು ವರ್ಷ ಬದುಕುತ್ತೇನೆ

ನನಗೆ ನಿಮ್ಮ ಆಶೀರ್ವಾದ ಇದೆ. ನಾನು ಶತಾಯು ಆಗುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಬದುಕಿರುತ್ತೇನೆ ಎನ್ನುವ ಭರವಸೆ ಹೊಂದಿದ್ದೇನೆ. ದೇವರ, ನಿಮ್ಮೆಲ್ಲರ ಆಶೀರ್ವಾದ ಇದ್ದರೆ ನೂರು ವರ್ಷ ಬದುಕುತ್ತೇನೆ. ಆದರೆ, ಕಾಂಗ್ರೆಸ್ ನಾಯಕರಿಗೆ ನನ್ನ ಆರೋಗ್ಯದ ಬಗ್ಗೆಯೇ ಚಿಂತೆಯಾಗಿದೆ ಎಂದು ಮಾಜಿ ಪ್ರಧಾನಿಗಳು ಅತೀವ ನೋವು ವ್ಯಕ್ತಪಡಿಸಿದರು.

ನನ್ನ ಮೊಮ್ಮಗ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಾನೆ. ಅವರ ತಂದೆ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ನನ್ನ ಅರವತ್ತು ವರ್ಷದ ರಾಜಕಾರಣದಲ್ಲಿ ಇಂತಹ ಕೆಟ್ಟ ರಾಜಕಾರಣವನ್ನು ನಾನು ನೋಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು ಮಾಜಿ ಪ್ರಧಾನಿಗಳು.

ನಿಮ್ಮ ಮುಂದೆ ಎದೆ ಚಾಚಿ ಮಾತನಾಡುತ್ತಿದ್ದೇನೆ

ಇಂತಹ ಕೆಟ್ಟ ರಾಜಕಾರಣ ಮತ್ತೆ ಈ ರಾಜ್ಯದಲ್ಲಿ ಇರಬಾರದು. ನಾನು ಇದನ್ನು ಅಸೂಯೆ ದ್ವೇಷದಿಂದ ಹೇಳುತ್ತಿಲ್ಲ. ವೈಯಕ್ತಿಕವಾಗಿ ನಾನು ಯಾರ ಬಗ್ಗೆಯೂ ಮಾತಾಡಲ್ಲ ಎಂದ ಅವರು; ನಾನು ‌11ನೇ ತಾರೀಕಿನ ವರೆಗೂ ಬರುತ್ತೇನೆ. ಮೊಮ್ಮಗನ ಗೆಲ್ಲಿಸೋಕೆ ಬರುತ್ತಿಲ್ಲ. ನನಗೆ ಜೀವನದಲ್ಲಿ ಒಂದೇ ಒಂದು ಗುರಿ ಇದೆ. ಋಣಾನುಬಂಧವೋ ಏನೋ, ಈಗ ಯಾರ ಮನೆ ಅನ್ನ ತಿನ್ನುತ್ತೇನೆಯೋ ಗೊತ್ತಿಲ್ಲ. ಅನ್ನದ ಋಣ ಯಾರ ಮನೆಗೆ ಕರೆದುಕೊಂಡು ಹೋಗುತ್ತದೊ ಗೊತ್ತಿಲ್ಲ. ಮಾಧ್ಯಮದವರು ದೇವೇಗೌಡರು ಮಾತಾಡ್ತಾರಾ ಎಂದು ಕೇಳುತ್ತಿದ್ದರು. ದೇವೇಗೌಡ್ರು ಏನು ಇಂಟರ್ ನ್ಯಾಶನಲ್ ಅಪರಾಧಿ ಆಗಿದ್ನಾ? ಮೂರು ತಿಂಗಳು ನನ್ನ ಮನೆ ಮುಂದೆ ಇದ್ದರಲ್ಲ. ಇವತ್ತು ನಿಮ್ಮ ಮುಂದೆ ಎದೆ ಚಾಚಿ ಮಾತನಾಡುತ್ತಿದ್ದೇನೆ. ಇನ್ನೂ ನಾಲ್ಕಾರು ವರ್ಷ ನಿಮ್ಮ ಆಶೀರ್ವಾದದಿಂದ ಇರುತ್ತೇನೆ. ನನ್ನ ಕೊನೆ ಉಸಿರು ಇರೋ ತನಕ ನನ್ನ‌ ಶರೀರ ಇರೋ ತನಕ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಆಂಬ್ಯುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂದಿದ್ದ ಡಿಕೆ ಸುರೇಶ್ ಮಾತಿಗೆ ತಿರುಗೇಟು ಕೊಟ್ಟರು ದೇವೇಗೌಡರು.

ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಅನೇಕರು ನಾಯಕರು ಸಭೆಯಲ್ಲಿ ಹಾಜರಿದ್ದರು.

ಹೆಣದ ಮೇಲೆ ಹಣ ಮಾಡಿದ ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಜನ ಭಯದಲ್ಲಿ ಬದುಕು ಸಾಗಿಸುತ್ತಿದ್ದರು: DKS

2024ರ ಅಮೇರಿಕಾ ಚುನಾವಣೆಯ ಫಲಿತಾಂಶ ಯಾವಾಗ ಪ್ರಕಟ.? ಇಲ್ಲಿದೆ ಸಂಪೂರ್ಣ ಮಾಹಿತಿ | US Presidential Election Results 2024

Share. Facebook Twitter LinkedIn WhatsApp Email

Related Posts

BIG NEWS: ಇನ್ಮುಂದೆ ‘ಸೋಷಿಯಲ್ ಮೀಡಿಯಾ ಪೋಸ್ಟ್’ಗಳ ವಿರುದ್ಧ ‘FIR ದಾಖಲು’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

09/02/2026 6:41 PM3 Mins Read

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

09/02/2026 6:25 PM2 Mins Read

ಲಕ್ಷ್ಮಿ – ಸರಸ್ವತಿ ದೇವಿಯರ ಜಗಳದ ಪುರಾಣ ಕಥೆ | Lakshmi Saraswati jagalada kathe in kannada

09/02/2026 6:21 PM5 Mins Read
Recent News

2026ರ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ಮನವಿ ತಿರಸ್ಕೃತ

09/02/2026 6:42 PM

BIG NEWS: ಇನ್ಮುಂದೆ ‘ಸೋಷಿಯಲ್ ಮೀಡಿಯಾ ಪೋಸ್ಟ್’ಗಳ ವಿರುದ್ಧ ‘FIR ದಾಖಲು’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

09/02/2026 6:41 PM

BIGG NEWS : 2027ರಲ್ಲಿ ಭಾರತದ ನೈಜ GDP ಶೇ.6.4ರಷ್ಟು ಬೆಳವಣಿಗೆ ; ಮೂಡೀಸ್ ಭವಿಷ್ಯ

09/02/2026 6:29 PM

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

09/02/2026 6:25 PM
State News
KARNATAKA

BIG NEWS: ಇನ್ಮುಂದೆ ‘ಸೋಷಿಯಲ್ ಮೀಡಿಯಾ ಪೋಸ್ಟ್’ಗಳ ವಿರುದ್ಧ ‘FIR ದಾಖಲು’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

By kannadanewsnow0909/02/2026 6:41 PM KARNATAKA 3 Mins Read

ಬೆಂಗಳೂರು: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವ ನಿಯಮವನ್ನು ಬಿಗಿಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ…

GBA ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

09/02/2026 6:25 PM

ಲಕ್ಷ್ಮಿ – ಸರಸ್ವತಿ ದೇವಿಯರ ಜಗಳದ ಪುರಾಣ ಕಥೆ | Lakshmi Saraswati jagalada kathe in kannada

09/02/2026 6:21 PM

ಧರ್ಮಾವರಂ ರೈಲ್ವೆ ಯಾರ್ಡ್ ಕಾಮಗಾರಿ: ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು

09/02/2026 6:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.