ಮೈಸೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರೋಧವಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

BIGG NEWS: ನಾಳೆ ಸದನದಲ್ಲಿ ಸಚಿವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ; ಕುಮಾರಸ್ವಾಮಿ

 

ನಗರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ವಿನಾಕಾರಣ ನನ್ನ ತಂದೆ ಯಡಿಯೂರಪ್ಪ ಅವರ ಹೆಸರನ್ನು ಎಳೆದ ತರಲಾಗುತ್ತಿದೆ. ನಮ್ಮನ್ನು ಪಂಚಸಾಲಿ ಸಮಾಜದ ವಿರೋಧಿಗಳು ಎಂದು ಬಿಂಬಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ಯಾರೋ ಶ್ರೀಗಳ ಮನಸ್ಸು ಕೆಡಿಸಿದ್ದಾರೆ. ಇಲ್ಲಸಲ್ಲದನ್ನು ಹೇಳಿ ಸ್ವಾಮೀಜಿಯನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದಿದ್ದಾರೆ.
ಮೀಸಲಾತಿ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಯಾವುದೇ ಒತ್ತಡ ಹೇರಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

BIGG NEWS: ನಾಳೆ ಸದನದಲ್ಲಿ ಸಚಿವರ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇವೆ; ಕುಮಾರಸ್ವಾಮಿ

ಶಿವಮೊಗ್ಗದಲ್ಲಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸುವ ಕುರಿತು ಪ್ರತಿಕ್ರಿಯಿಸಿದ ಅವರು,ವಿದ್ಯಾವಂತರು ಐಸಿಸ್ ಜೊತೆಗೆ ನಂಟು ಹೊಂದಿರುವುದು ಆತಂಕದ ವಿಷಯ. ಶಿವಮೊಗ್ಗ ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂಥದ್ದೇ ಬೆಳವಣಿಗೆಗಳು ಕಂಡು ಬಂದಿವೆ ಎಂದು ಆತಂಕ ವ್ಯಕ್ತಪಡಿಸಿದರು.

 

Share.
Exit mobile version