Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ

05/10/2025 7:28 PM

ಭೂಲೋಕದ ಅತ್ಯಂತ ಹೇಯ ಜನ್ಮ ಅದು ಪಿಶಾಚಿ ಜನ್ಮ: ಇಲ್ಲಿದೆ ಪಿಶಾಚಿಗಳ ಕಿರು ಪರಿಚಯ

05/10/2025 7:11 PM

ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ, ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ ನಿಯೋಜನೆ

05/10/2025 6:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಿಜೆಪಿ ಸರ್ಕಾರ’ದ ಹಗರಣಗಳ ತನಿಖೆ ಚುರುಕುಗೊಳಿಸಲು ‘ಸಚಿವ ಸಂಪುಟ ಉಪ ಸಮಿತಿ’ ರಚನೆ: ಸಿಎಂ ಸಿದ್ದರಾಮಯ್ಯ
KARNATAKA

‘ಬಿಜೆಪಿ ಸರ್ಕಾರ’ದ ಹಗರಣಗಳ ತನಿಖೆ ಚುರುಕುಗೊಳಿಸಲು ‘ಸಚಿವ ಸಂಪುಟ ಉಪ ಸಮಿತಿ’ ರಚನೆ: ಸಿಎಂ ಸಿದ್ದರಾಮಯ್ಯ

By kannadanewsnow0911/09/2024 3:16 PM

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ. ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತ

ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಎಸ್ ಐ ಹಗರಣ- ಎಸ್ ಐಟಿ ಕ್ರಮಕ್ಕೆ ಸೂಚನೆ

ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಕಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ , ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.

‘ಭಾರತ ಸೇನೆ’ಗೆ ಭೀಮ ಬಲ: 1.44 ಲಕ್ಷ ಕೋಟಿ ಮೌಲ್ಯದ ‘ಯುದ್ಧ ಸಾಮಾಗ್ರಿ ಖರೀದಿ’ಗೆ ಕೇಂದ್ರದ ಒಪ್ಪಿಗೆ

BREAKING: ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಐವರು ಕೇಂದ್ರದ ‘GST ಅಧಿಕಾರಿ’ಗಳ ಬಂಧನ

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ

05/10/2025 7:28 PM4 Mins Read

ಭೂಲೋಕದ ಅತ್ಯಂತ ಹೇಯ ಜನ್ಮ ಅದು ಪಿಶಾಚಿ ಜನ್ಮ: ಇಲ್ಲಿದೆ ಪಿಶಾಚಿಗಳ ಕಿರು ಪರಿಚಯ

05/10/2025 7:11 PM2 Mins Read

ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ, ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ ನಿಯೋಜನೆ

05/10/2025 6:18 PM2 Mins Read
Recent News

ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ

05/10/2025 7:28 PM

ಭೂಲೋಕದ ಅತ್ಯಂತ ಹೇಯ ಜನ್ಮ ಅದು ಪಿಶಾಚಿ ಜನ್ಮ: ಇಲ್ಲಿದೆ ಪಿಶಾಚಿಗಳ ಕಿರು ಪರಿಚಯ

05/10/2025 7:11 PM

ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ, ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ ನಿಯೋಜನೆ

05/10/2025 6:18 PM

ಭಾರತ vs ಪಾಕಿಸ್ತಾನ ಮಹಿಳಾ ODI ವಿಶ್ವಕಪ್ 2025 ಪಂದ್ಯದ ಮೊದಲ ಇನ್ನಿಂಗ್ಸ್ ತಾತ್ಕಾಲಿಕವಾಗಿ ಸ್ಥಗಿತ

05/10/2025 6:16 PM
State News
KARNATAKA

ಬಂದ ಪುಟ್ಟ, ‘ಬೋರ್ಡ್ ನೆಟ್ಟು’ ಹೋದ ಪುಟ್ಟ: ಇದು ಸಾಗರದ ‘ಅರಣ್ಯಾಧಿಕಾರಿ’ಗಳ ‘ಒತ್ತುವರಿ ತೆರವು’ ಕಾರ್ಯಾಚರಣೆ

By kannadanewsnow0905/10/2025 7:28 PM KARNATAKA 4 Mins Read

ಶಿವಮೊಗ್ಗ: ಅರಣ್ಯ ಭೂಮಿ ಒತ್ತುವರಿ ತೆರವು ಅಂದ್ರೆ ಒತ್ತುವರಿಗೊಂಡಿರುವಂತ ಭೂಮಿಯನ್ನು ಮೂಲ ಅರಣ್ಯ ರೂಪಕ್ಕೆ ತರುವ ನಿಟ್ಟಿನಲ್ಲಿ ನೆಡೆಸಬೇಕಾದ ಕಾರ್ಯಾಚರಣೆಯಾಗಿದೆ.…

ಭೂಲೋಕದ ಅತ್ಯಂತ ಹೇಯ ಜನ್ಮ ಅದು ಪಿಶಾಚಿ ಜನ್ಮ: ಇಲ್ಲಿದೆ ಪಿಶಾಚಿಗಳ ಕಿರು ಪರಿಚಯ

05/10/2025 7:11 PM

ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ, ತುಮಕೂರು ಜಿಲ್ಲೆ ಚಿರತೆ ಕಾರ್ಯಪಡೆಗೆ 59 ಸಿಬ್ಬಂದಿ ನಿಯೋಜನೆ

05/10/2025 6:18 PM

ಸಾಗರದ ಅರಣ್ಯಾಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 6 ಎಕರೆ 24 ಗುಂಟೆ ಅರಣ್ಯ ಭೂಮಿ ಒತ್ತುವರಿ ತೆರವು

05/10/2025 5:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.