Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಆಹ್ವಾನ: ವೈಟ್‌ಹೌಸ್‌ಗೆ ಬರುವಂತೆ ಪ್ರೀತಿಯ ಕರೆ ನೀಡಿದ ಮಾರ್ಕೊ ರೂಬಿಯೋ!

ಕೇವಲ ಎದೆನೋವಷ್ಟೇ ಅಲ್ಲ, ಕೈಬೆರಳುಗಳ ಈ ಬದಲಾವಣೆಗಳೂ ಹೃದಯದ ಕಾಯಿಲೆಯ ಸಂಕೇತ!

ನರೇಗಾ ಪರ್ವ ಅಂತ್ಯದತ್ತ? ‘ವಿಬಿ-ಗ್ರಾಮ್ ಜಿ’ ಜಾರಿಗೆ ಕೇಂದ್ರದಿಂದ ಕರಡು ನಿಯಮ ಪ್ರಕಟ; ಉದ್ಯೋಗ ಖಾತರಿ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮೇ.2ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಅಂತಿಮ ತೀರ್ಮಾನ: ಸಿಎಂ ಸಿದ್ಧರಾಮಯ್ಯ
KARNATAKA

BREAKING: ಮೇ.2ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಅಂತಿಮ ತೀರ್ಮಾನ: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ.

ಸಮೀಕ್ಷೆಯ ಮಾನದಂಡಗಳ ಬಗ್ಗೆ ಚರ್ಚೆ

ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ ಎಂದರು.

ಈ ವರದಿಯನ್ನು ಇತ್ತೀಚೆಗೆ ಸರ್ಕಾರದ ಕೈಸೇರಿದ್ದು ಮಾನದಂಡಗಳನ್ನು ಚರ್ಚಿಸಿದ್ದೇವೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಲವಾರು ಮಾನದಂಡಗಳನ್ನು ಚರ್ಚಿಸಿದ್ದೇವೆ ಎಂದು ಸಚಿವರು ಪುನರುಚ್ಚರಿಸಿದರು.

ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆ

ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದರು. ಸಮೀಕ್ಷಾ ವರದಿಯ ಮಾಹಿತಿ ಪತ್ರಿಕೆಗಳಲ್ಲಿ ಈಗಾಗಲೇ ಬಂದಿದೆ.ವರದಿ ಮಂಡನೆಯಾಗಿ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದರು.

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 27 PI, 7 ಡಿವೈಎಸ್ಪಿ ವರ್ಗಾವಣೆ

BIG NEWS: ರಾಜ್ಯ ಸರ್ಕಾರದಿಂದ ‘PDO ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | PDO Transfer

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

1 Min Read

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

2 Mins Read

ಕಾರ್ಮಿಕರ ಕನಿಷ್ಠ ವೇತನ ಶೇ.60ರಷ್ಟು ಏರಿಕೆ: ಸಚಿವ ಸಂತೋಷ್ ಲಾಡ್

2 Mins Read
Recent News

​ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಆಹ್ವಾನ: ವೈಟ್‌ಹೌಸ್‌ಗೆ ಬರುವಂತೆ ಪ್ರೀತಿಯ ಕರೆ ನೀಡಿದ ಮಾರ್ಕೊ ರೂಬಿಯೋ!

ಕೇವಲ ಎದೆನೋವಷ್ಟೇ ಅಲ್ಲ, ಕೈಬೆರಳುಗಳ ಈ ಬದಲಾವಣೆಗಳೂ ಹೃದಯದ ಕಾಯಿಲೆಯ ಸಂಕೇತ!

ನರೇಗಾ ಪರ್ವ ಅಂತ್ಯದತ್ತ? ‘ವಿಬಿ-ಗ್ರಾಮ್ ಜಿ’ ಜಾರಿಗೆ ಕೇಂದ್ರದಿಂದ ಕರಡು ನಿಯಮ ಪ್ರಕಟ; ಉದ್ಯೋಗ ಖಾತರಿ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ!

ನಿಮ್ಮ ‘ಪಾದ’ಗಳ ಆರೋಗ್ಯವೇ ಹೇಳುತ್ತೆ ದೇಹದಲ್ಲಿ ಯಾವ ‘ವಿಟಮಿನ್’ ಕೊರತೆಯಿದೆ ಎಂದು!

State News
KARNATAKA

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಗರದಲ್ಲಿ ಮತ್ತೊಂದು ವಿಷಾದನೀಯ ಘಟನೆ ಸಂಭವಿಸಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಪೊಲೀಸ್ ಕಾನ್ಸ್‌ಟೇಬಲ್ ಅವರ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ…

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

ಕಾರ್ಮಿಕರ ಕನಿಷ್ಠ ವೇತನ ಶೇ.60ರಷ್ಟು ಏರಿಕೆ: ಸಚಿವ ಸಂತೋಷ್ ಲಾಡ್

BIG Alert: ಫ್ರಿಡ್ಜ್ ಕ್ಲೀನ್ ಮಾಡೋ ಮುನ್ನ ಎಚ್ಚರ! ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಪ್ರವಹಿಸಿ ಮಹಿಳೆ ಸಾವು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.