Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿಗೆ ‘ತುಳಸಿ ಟೀ’ ಅತ್ಯುತ್ತಮ ಔಷಧ.! ಯಾವಾಗ, ಹೇಗೆ ಕುಡಿಯಬೇಕು ಗೊತ್ತಾ?

26/06/2025 10:06 PM

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

26/06/2025 9:51 PM

BREAKING : ಮಧ್ಯ ಆಫ್ರಿಕಾ ಗಣರಾಜ್ಯದ ಶಾಲೆಯಲ್ಲಿ ಸ್ಫೋಟ, ಕಾಲ್ತುಳಿತ ; 29 ಮಕ್ಕಳ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

26/06/2025 9:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ
KARNATAKA

2 ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

By kannadanewsnow0902/06/2025 4:58 PM

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ ಮನವರಿಕೆ ಮಾಡುವ ಬದಲು ಬೆದರಿಕೆ ಹಾಕುವುದು ಒಳ್ಳೆಯದಲ್ಲ. ಎಲ್ಲ ರೈತರನ್ನು ಸಮಭಾವದಿಂದ ನೋಡಬೇಕೆ ಹೊರತು, ಮಠಾಧೀಶರ ಮೇಲೆ, ಜನಪ್ರತಿನಿಧಿಗಳ ಮೇಲೆ ಕೇಸು ಹಾಕಬಾರದು. ಕಾಂಗ್ರೆಸ್‌ನ ಶಾಸಕರೇ ಆದ ಗುಬ್ಬಿ ಶ್ರೀನಿವಾಸ್‌ ಕೂಡ ಇದರ ವಿರುದ್ಧ ನಿಂತಿದ್ದಾರೆ ಎಂದರು.

ರೈತರ ವಿರುದ್ಧ ಪ್ರಕರಣ ದಾಖಲಿಸುವುದು ಅಕ್ಷಮ್ಯ ಅಪರಾಧ. ರೈತರ ಜೊತೆಗೆ ಚರ್ಚಿಸಿ ಸಮನ್ವಯ ಸಾಧಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕುರ್ಚಿ ಹೋದರೆ ಅಧಿಕಾರವೇ ಇರುವುದಿಲ್ಲ. ರಾಜ್ಯ ಸರ್ಕಾರ ಎರಡು ಜಿಲ್ಲೆಗಳ ಸರ್ವಪಕ್ಷ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು, ಕೇಸುಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ಹಿಂದೂಗಳೇ ಗುರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌. ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಅಪಾದನೆ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದರೆ, ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕಾಂಗ್ರೆಸ್‌ ಪಕ್ಷದಿಂದ ಕರಾವಳಿ ಭಾಗಕ್ಕೆ ಹಣ ಬರುತ್ತಿಲ್ಲ. ಕಾಂಗ್ರೆಸ್‌ನ ಭಿಕ್ಷೆಯಿಂದ ಅಲ್ಲಿನ ಜನರು ಬದುಕುತ್ತಿಲ್ಲ. ಜನರ ಹಣದಲ್ಲೇ ಕಾಂಗ್ರೆಸ್‌ ನಾಯಕರು ಬದುಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಕರಾವಳಿ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ಗ್ರೇಟರ್‌ ಬೆಂಗಳೂರು ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ. ಕಸ ವಿಲೇವಾರಿ ಮಾಡಲು ಗುತ್ತಿಗೆದಾರರಿಗೆ ಜನವರಿಯಿಂದಲೇ ಬಿಲ್‌ ಪಾವತಿ ಮಾಡಿಲ್ಲ. ಹೊರರಾಜ್ಯದವರಿಗೆ ಗುತ್ತಿಗೆ ನೀಡಿ ಕಸದ ಲಾಬಿ ಸೃಷ್ಟಿ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ಚುನಾವಣೆ ಮಾಡಿದರೆ ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗುತ್ತಾರೆ? ಎಂದು ಪ್ರಶ್ನಿಸಿದರು.

ಮೇಕೆದಾಟು ಯೋಜನೆಗೆ ಆಗ್ರಹಿಸಿ ತಮಿಳುನಾಡು ಸರ್ಕಾರದ ಮುಂದೆ ಪ್ರತಿಭಟಿಸಲು, ಕಲ್ಲು ಹೊಡೆಯಲು ನಾವು ಸಿದ್ಧರಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಇದಕ್ಕೆ ಸಿದ್ಧರಿದ್ದಾರೆಯೇ? ಇಲಾಖೆಗಳಿಗೆ ಅನುದಾನ ನೀಡದೆಯೇ ಸಚಿವರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಕೆಎಸ್‌ಆರ್‌ಟಿಸಿಗೆ ಹಣ ನೀಡಿಲ್ಲ. ಜೋಳ ಖರೀದಿ ಕೇಂದ್ರಗಳಿಗೆ ಹಣ ನೀಡಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ಸಂಬಳಕ್ಕೆ ಹಣ ಕೊಟ್ಟಿಲ್ಲ ಎಂದರು.

ನಟ ಕಮಲ್‌ ಹಾಸನ್‌ ಅವರ ಯಾವುದೇ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡದ ವಿಚಾರಕ್ಕೆ ಬಂದಾಗ ಎಲ್ಲರೂ ಸ್ಪಷ್ಟವಾಗಿರಬೇಕು. ಕನ್ನಡದ ಎಲ್ಲ ಕಲಾವಿದರು ಕನ್ನಡದ ಪರವಾಗಿ ಮಾತಾಡಬೇಕು ಎಂದರು.

BREAKING: ಅಂತರರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಹೆನ್ರಿಕ್ ಕ್ಲಾಸೆನ್ | Heinrich Klaasen

BREAKING : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!

Share. Facebook Twitter LinkedIn WhatsApp Email

Related Posts

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

26/06/2025 9:51 PM1 Min Read

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

26/06/2025 9:22 PM2 Mins Read

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM1 Min Read
Recent News

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿಗೆ ‘ತುಳಸಿ ಟೀ’ ಅತ್ಯುತ್ತಮ ಔಷಧ.! ಯಾವಾಗ, ಹೇಗೆ ಕುಡಿಯಬೇಕು ಗೊತ್ತಾ?

26/06/2025 10:06 PM

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

26/06/2025 9:51 PM

BREAKING : ಮಧ್ಯ ಆಫ್ರಿಕಾ ಗಣರಾಜ್ಯದ ಶಾಲೆಯಲ್ಲಿ ಸ್ಫೋಟ, ಕಾಲ್ತುಳಿತ ; 29 ಮಕ್ಕಳ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

26/06/2025 9:50 PM

ಅಡುಗೆಮನೆಯಲ್ಲಿ ‘ಗ್ಯಾಸ್ ಸ್ಟೌವ್’ ಪಕ್ಕ ಈ ‘ವಸ್ತು’ಗಳನ್ನ ಇಡುತ್ತೀರಾ.? ಎಷ್ಟು ಅಪಾಯಕಾರಿ ಗೊತ್ತಾ?

26/06/2025 9:45 PM
State News
KARNATAKA

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

By kannadanewsnow0926/06/2025 9:51 PM KARNATAKA 1 Min Read

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ…

BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ

26/06/2025 9:22 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.