ಬೆಂಗಳೂರು: ರಾಜ್ಯದ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯಾಧ್ಯಂತ ಖಾಸಗಿ ಸರ್ವೇಯರ್ ಮೂಲಕ ನಂಬರ್ ಪೋಡಿ ಅಭಿಯಾನ ಆರಂಭಿಸಲಾಗುತ್ತಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯಾದ್ಯಂತ 22 ಲಕ್ಷ ಖಾಸಗಿ ಸರ್ವೇ ನಂಬರ್ಗಳಲ್ಲಿ ಒಬ್ಬರಿಗಿಂತ ಹೆಚ್ಚು ಮಾಲೀಕರಿದ್ದಾರೆ. ಪ್ರತಿಯೊಬ್ಬರ ಹಿಸ್ಸಾಗೆ ತಕ್ಕಂತೆ ಪ್ರತ್ಯೇಕ ಪಹಣಿ ಮಾಡಿಕೊಡಬೇಕಾದ್ದು ಕಂದಾಯ ಇಲಾಖೆಯ ಮೂಲಕ ಕರ್ತವ್ಯ. ಆದರೆ, ಈವರೆಗೆ ಆ ಕೆಲಸ ಆಗಿಲ್ಲ. ನಾವು ಹೀಗೆ ಪಹಣಿ ಮಾಡಿಕೊಡಲು ಮುಂದಾದರೆ ಕನಿಷ್ಟ 60 ಲಕ್ಷ ಜನರಿಗೆ ಮಾಡಿಕೊಡಬೇಕಾಗುತ್ತದೆ ಎಂದರು.
ನಾವೂ ದರ್ಖಾಸ್ತು ಪೋಡಿ ಕೆಲಸದ ಜೊತೆಗೆ ಅದನ್ನೂ ಮಾಡಿಕೊಡಲು ತೀರ್ಮಾನಿಸಿದ್ದೇವೆ. ಅದೇ ಕಾರಣಕ್ಕೆ ಹಿಂದೆ ಪೋಡಿ ಮುಕ್ತ ಅಭಿಯಾನ ಆರಂಭಿಸಲಾಗಿತ್ತು. ಆದರೆ, ನಮ್ಮನ್ನು ಹುಡುಕಿ ಬಂದವರಿಗೆ ಪಹಣಿ ಮಾಡಿಕೊಡಲಾಯಿತೇ ವಿನಃ ಎಲ್ಲರಿಗೂ ಮಾಡಿಕೊಡಲಾಗಿಲ್ಲ. ಆದರೆ, ಈ ಬಾರಿ ಒಟ್ಟು ಎಷ್ಟು ಬಾಕಿ ಇದೆ ಅದನ್ನೆಲ್ಲ ಟಾರ್ಗೆಟ್ ಆಗಿ ತಗೊಂಡು ಎಲ್ಲರಿಗೂ ಕೆಲಸ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಜನತೆಗೆ ಬಿಗ್ ಶಾಕ್ ; 10 ದಿನಗಳಲ್ಲಿ ‘ಅಡುಗೆ ಎಣ್ಣೆ’ ಬೆಲೆ ಶೇ.20ರಷ್ಟು ಹೆಚ್ಚಳ