ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರಣಗಳಿಂದಾಗಿ ಈಗಾಗಲೇ ಲಕ್ಷಾಂತರ ಕಾರ್ಡ್ ಗಳನ್ನು ಸರ್ಕಾರ ರದ್ದುಗೊಳಿಸಿದೆ. ಈ ನಡುವೆಯೂ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ( BPL Ration Card ) ಅರ್ಜಿ ಸಲ್ಲಿಸುತ್ತಿರೋರ ಸಂಖ್ಯೆ ಏನೂ ಕಡಿಮೆ ಆಗಿಲ್ಲ. ಆದ್ರೇ ಹೊಸ ಕಾರ್ಡ್ ಗೆ ಅರ್ಜಿ ( New Ration Card Application ) ಸಲ್ಲಿಸಿ, ಆದ್ರೇ ಕಾರ್ಡ್ ಬಂತೋ ಇಲ್ಲವೋ, ಬರುತ್ತೋ ಇಲ್ಲವೇ ಎಂಬುದನ್ನು ಮಾತ್ರ ಕೇಳ ಬೇಡಿ ಎಂಬುದಾಗಿ ಆಹಾರ ಇಲಾಖೆ ಹೇಳುತ್ತಿದೆ.

ಹೌದು.. ರಾಜ್ಯದಲ್ಲಿ ಈವರೆ 3.11 ಲಕ್ಷ ಕುಟುಂಬಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಸಲ್ಲಿಕೆಯಾದಂತ ಕಾರ್ಡ್ ಗಳನ್ನು ಪರಿಶೀಲಿಸಿ, ಅರ್ಹರಿಗೆ ವಿತರಿಸಬೇಕಾದಂತ ಸರ್ಕಾರ ಮಾತ್ರ, ಯಾವುದೇ ಒಪ್ಪಿಗೆ ಸೂಚಿಸದ ಕಾರಣ, ವಿತರಣೆಯಾಗಿಲ್ಲ.

BIG NEWS: ಮಕ್ಕಳಲ್ಲಿ ಟೈಪ್ 1 ಮಧುಮೇಹದಲ್ಲಿ ಶೇ.72ರಷ್ಟು ಹೆಚ್ಚಳಕ್ಕೆ ಕೋವಿಡ್ ಕಾರಣ: ಅಧ್ಯಯನ ವರದಿ

ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕ ಅರ್ಹ ಕುಟುಂಬಗಳು ಆಹಾರ ಧಾನ್ಯವಿಲ್ಲದೇ, ಬಿಪಿಎಲ್ ಕಾರ್ಡ್ ನಿಂದ ವಂಚಿತವಾಗಿ ದಿನದೂಡುವಂತೆ ಆಗಿದೆ. ಇದಷ್ಟೇ ಅಲ್ಲದೇ ಬಿಪಿಎಲ್ ಕಾರ್ಡ್ ಇದ್ದರೇ ಉಚಿತ ಚಿಕಿತ್ಸೆ ಸೌಲಭ್ಯ ಕೂಡ ಸಿಗದೇ, ಪರದಾಡುವಂತೆ ಆಗಿದೆ.

ಅಂದಹಾಗೇ ರಾಜ್ಯದಲ್ಲಿ 1.26 ಕೋಟಿ ಬಿಪಿಎಲ್ ಕಾರ್ಡ್ ಗಳಿದ್ದಾವೆ. ಹೊಸ ಕಾರ್ಡ್ ಯಾಕೆ ವಿತರಣೆ ಮಾಡುತ್ತಿಲ್ಲ ಎಂಬುದಾಗಿ ಆಹಾರ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಟಿ ರೇಜು ಅವರನ್ನು ಕೇಳಿದ್ರೇ, ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ. ರಾಜ್ಯ ಸರ್ಕಾರ ಅನುಮತಿ ಕೊಟ್ಟಿಲ್ಲ. ಹೀಗಾಗಿ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳೋದಕ್ಕೆ ಆಗದೇ, ಹೊಸ ಕಾರ್ಡ್ ವಿತರಣೆ ಆಗಿಲ್ಲ. ಆದ್ರೇ ಹೊಸ ಕಾರ್ಡ್ ಗಾಗಿ ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಬಹುದಾಗಿದೆ ಎಂದಿದ್ದಾರೆ.

Mysore Dasara 2022: ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಡ್ರಪತಿ ದ್ರೌಪದಿ ಮುರ್ಮು

ಅಲ್ಲ ಸ್ವಾಮಿ ಪಡಿತರ ಚೀಟಿ ವಿತರಣೆಯನ್ನೇ ಮಾಡೋದರ ಬಗ್ಗೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಹೀಗಿದ್ದೂ ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಂತೀರಲ್ಲ. ಯಾವ ಹಿನ್ನಲೆಯಲ್ಲಿ ಕಾರ್ಡ್ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡು ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಆ ಬಗ್ಗೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಕರೋನ ಬೆನ್ನಲೇ ‘ಕರ್ನಾಟಕ’ ಸೇರಿದಂತೆ ಭಾರತದಲ್ಲಿ ‘ಡೆಂಗ್ಯೂ ಪ್ರಕರಣ’ಗಳ ಸಂಖ್ಯೆ ಹೆಚ್ಚಳ : ಆತಂಕದಲ್ಲಿ ಜನತೆ | Dengue cases rises in India

Share.
Exit mobile version