Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳ ಅರೆಸ್ಟ್!

16/11/2025 10:18 AM

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

16/11/2025 10:13 AM

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ
KARNATAKA

BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow0929/08/2025 11:56 AM

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿನ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನಿಯೋಜನೆಯನ್ನು ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಛೇರಿಗಳಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಕಛೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಜಿಲ್ಲಾ ಆಸತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನೌಕರರು ಕ್ಷೇತ್ರೀಯ ಮಟದಲ್ಲಿ ಕಾರ್ಯನಿರ್ವಹಿಸಬೇಕಾದ ಸಿಬ್ಬಂದಿಗಳಾಗಿದ್ದು, ಅವರು ಜಿಲ್ಲಾ ಮಟ್ಟ / ತಾಲ್ಲೂಕು ಮಟ್ಟದ ಕಛೇರಿ /ಆಸ್ಪತ್ರೆಗಳಲ್ಲಿ ನಿಯುಕ್ತಿಗೊಂಡು ಯಾವುದೇ ಕ್ಷೇತೀಯ ಕೆಲಸ / ಕಾರ್ಯಗಳನ್ನು ನಿರ್ವಹಿಸುತ್ತಿರುವುದಿಲ್ಲ. ಕ್ರಮ ಬದ್ಧವಾಗಿ ಜನ ಸಂಖ್ಯೆ ಹಂಚಿಕೆಯಾಗಿರುವುದಿಲ್ಲ. ಸದರಿ ಸಿಬ್ಬಂದಿಯನ್ನು ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಅನುಕೂಲವಾಗುವಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಕ್ಷೇತ್ರ ಮಟ್ಟಕ್ಕೆ ನಿಯೋಜಿಸಲು ಶಿಫಾರಸ್ಸು ಮಾಡಿದೆ ಎಂದಿದ್ದಾರೆ.

ಹೀಗಾಗಿ ಸದರಿ ಸಿಬ್ಬಂದಿಗಳನ್ನು ಕ್ಷೇತ್ರೀಯ ಮಟದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸ್ಥಳ ನಿಯುಕ್ತಿಗೊಳಿಸಬಹುದಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಜಿಲ್ಲಾ ಆಸ್ಪತ್ರೆ, Autonomous institutions ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನೌಕರರ ಕಾರ್ಯನಿರತ ಸಂಖ್ಯೆ ವಿವರವನ್ನು ಈ ಕೆಳಕಂಡಂತೆ ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಕಛೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಜಿಲ್ಲಾ ಆಸ್ಪತ್ರೆ Autonomous institutions ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಮಂಜೂರಾದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ವೃಂದದ ನೌಕರರನ್ನು ಜಿಲ್ಲೆಗಳಲ್ಲಿನ ಕ್ಷೇತ್ರೀಯ ಮಟ್ಟದ ಆರೋಗ್ಯ ಸಂಸ್ಥೆ / ಆರೋಗ್ಯ ಕೇಂದ್ರಗಳಲ್ಲಿನ ಅಗತ್ಯವಿರುವ ಖಾಲಿ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) ನಿಯಮಗಳು, 2025 ರ ನಿಯಮ 15(1)(c) ರಂತ ನಿಯಮಾನುಸಾರ ವರ್ಗಾಯಿಸಿ ಮರುಹಂಚಿಕೆ ಮಾಡಲು ತೀರ್ಮಾನಿಸಲಾಗಿದ. ಅದರಂತ ನಿಯೋಜನೆಗಳನ್ನು ರದ್ದುಪಡಿಸುವ ಸಂಬಂಧ ಈ ಕೆಳಕಂಡ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಎಲ್ಲಾ ನಿಯೋಜನೆಗಳನ್ನು ರದ್ದು ಮಾಡಲಾಗಿದೆ.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ (Sr HIO) & ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (Sr PHCO) ರವರುಗಳ ಪೈಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಛೇರಿಗಳಾದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಕಛೇರಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ (Sr HIO) ಮತ್ತು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (Sr PHCO) ರವರುಗಳನ್ನು ಕೆಳಕಂಡ ಕೋಷ್ಟಕದಲ್ಲಿ ನಮೂದಿಸಿರುವ ಹಾಗೆ ಉಳಿಸಿಕೊಂಡು, (ಒಂದು ವೇಳೆ ಕೆಳಗೆ ತಿಳಿಸಿರುವ ಸಂಸ್ಥೆಗಳಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ / ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (Sr HIO/Sr PHCO) ಹುದ ಮಂಜೂರಾಗಿರದಿದ್ದಲ್ಲಿ, ಬದಲಾಗಿ ಆರೋಗ್ಯ ನಿರೀಕ್ಷಣಾಧಿಕಾರಿ / ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (HIO/PHCO) ಗಳನ್ನು ಪರಿಗಣಿಸುವುದು). ಎಲ್ಲಾ ನಿಯೋಜನಗಳನ್ನು ರದ್ದುಗೊಳಿಸುವುದು ಹಾಗೂ ಹೆಚ್ಚುವರಿ ಹುದ್ದೆಗಳನ್ನು lien ಸಮೇತ ಅಗತ್ಯವಿರುವ ಕ್ಷೇತ್ರೀಯ ಮಟ್ಟದ ಆರೋಗ್ಯ ಸಂಸ್ಥೆಗಳಿಗೆ ವರ್ಗಾಯಿಸಿ ಮರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ವಸಂತ ಬಿ ಈಶ್ವರಗೆರೆ.., ಸಂಪಾದಕರು

ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK

‘ಶ್ರೀರಂಗಪಟ್ಟಣ ದಸರಾ’ಗೆ ಮುಹೂರ್ತ ಫಿಕ್ಸ್: ಸೆ.25ರಿಂದ ನಾಲ್ಕು ದಿನ ಆಚರಣೆ

Share. Facebook Twitter LinkedIn WhatsApp Email

Related Posts

BREAKING : ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳ ಅರೆಸ್ಟ್!

16/11/2025 10:18 AM1 Min Read

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

16/11/2025 10:13 AM1 Min Read

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM1 Min Read
Recent News

BREAKING : ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳ ಅರೆಸ್ಟ್!

16/11/2025 10:18 AM

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

16/11/2025 10:13 AM

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ನಾಳೆ ಮತ್ತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

16/11/2025 10:02 AM
State News
KARNATAKA

BREAKING : ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳ ಅರೆಸ್ಟ್!

By kannadanewsnow0516/11/2025 10:18 AM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಧೂಮ್-1 ಸಿನಿಮಾ ನೋಡಿ 1.2 ಕೆಜಿ…

ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ಈ ಪ್ರಮುಖ 4 ಅಂಶಗಳನ್ನು ಮುಂದಿಟ್ಟ ಕಾಂಗ್ರೆಸ್ ಹೈಕಮಾಂಡ್

16/11/2025 10:13 AM

BIG NEWS : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕರೆ ನಾಯಕತ್ವ ಬದಲಾವಣೆ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

16/11/2025 10:06 AM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ : ನಾಳೆ ಮತ್ತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

16/11/2025 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.