Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲಿಗೆ `ಬ್ಯಾಲೆಟ್ ಪೇಪರ್’ ಬಳಸಲು ಸಚಿವ ಸಂಪುಟ ಒಪ್ಪಿಗೆ.!

04/09/2025 5:58 PM

BIG NEWS : ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ : ಗೃಹ ಸಚಿವ ಡಾ.ಜಿ.ಪರಮೇಶ್ವರ್

04/09/2025 5:53 PM

ಅತಿ ಹೆಚ್ಚು ಮದ್ಯಪಾನಿಗಳು ಭಾರತದ ಯಾವ ನಗರದಲ್ಲಿದ್ದಾರೆ ಗೊತ್ತಾ.?

04/09/2025 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಚನ್ನಪಟ್ಟಣ ಉಪ ಚುನಾವಣೆ’ಗೆ ಮಂಗಳವಾರ ಅಥವಾ ಬುಧವಾರ ‘ಅಭ್ಯರ್ಥಿ’ ಘೋಷಣೆ: HD ಕುಮಾರಸ್ವಾಮಿ
KARNATAKA

‘ಚನ್ನಪಟ್ಟಣ ಉಪ ಚುನಾವಣೆ’ಗೆ ಮಂಗಳವಾರ ಅಥವಾ ಬುಧವಾರ ‘ಅಭ್ಯರ್ಥಿ’ ಘೋಷಣೆ: HD ಕುಮಾರಸ್ವಾಮಿ

By kannadanewsnow0920/10/2024 7:41 PM

ಮಂಡ್ಯ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಡಕು ಉಂಟು ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಕೆಲವರು ಚನ್ನಪಟ್ಟಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಅವರ ಆಸೆ ಈಡೇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಕಟ್ಟಿ ಹಾಕಿದ್ದಾರೆ. ಅವರ ಆಶಯದಂತೆ ನಾವು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ತಂತ್ರಗಾರಿಕೆ ಫಲಿಸುವುದಿಲ್ಲ ಎಂದರು.

ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಆಗಸ್ಟ್ 11ರಂದು ಭತ್ತ ನಾಟಿ ಮಾಡಿದ್ದ ಜಾಗಕ್ಕೆ ಭೇಟಿ ನೀಡಿ ಫಸಲು ವೀಕ್ಷಿಸಿದ ಬಳಿಕ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸುತ್ತಾರೆ ಎನ್ನುವ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಕುಟುಂಬದವರನ್ನೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಹೀಗಾಗಿ ನಮ್ಮ ಮಿತ್ರ ಪಕ್ಷವೂ ಔದಾರ್ಯ ತೋರಲಿ ಎನ್ನುವ ಆಶಯ ನನ್ನದು. ಅವರು ಔದಾರ್ಯ ತೋರುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದರು.

ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸುವ ವಿಚಾರ ನನ್ನೊಂದಿಗೆ ಚರ್ಚೆಯಾಗಿಲ್ಲ. ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನ್ನ ಮುಂದೆ ಆ ಕುರಿತು ಪ್ರಸ್ತಾಪವೂ ಬಂದಿಲ್ಲ . ಮಾಧ್ಯಮಗಳಲ್ಲಿ ಆ ಕುರಿತು ವರದಿ ಬಂದಿರುವುದನ್ನು ನೋಡಿದ್ದೇನೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ನಾಯಕರು ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದಾರೆನ್ನುವ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಅವರು ಪಕ್ಷೇತರ ಅಭ್ಯರ್ಥಿಯಾಗುತ್ತಾರೆ ಎಂಬ ವಿಚಾರ ಕಳೆದ ಹದಿನೈದು ದಿನದಿಂದ ಹರಿದಾಡುತ್ತಿದೆ. ಕಾಂಗ್ರೆಸ್ ನವರು ತಮ್ಮ ಪಕ್ಷಕ್ಕೆ ಕರೆದುಕೊಂಡು ಹೋಗಿ ನಿಲ್ಲಿಸಲು ಕಾಯುತ್ತಿದ್ದಾರೆ‌. ನಮ್ಮ ನಡುವೆ ಒಡಕು ತರುವುದು ಅವರ ಉದ್ದೇಶ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ

NDA ಮೈತ್ರಿಕೂಟದಲ್ಲಿ ಒಡಕು ಮೂಡಲಿ ಎಂದು ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ. ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕುತ್ತಿದ್ದಾರೆ. ಅಂತಹ ಅವಕಾಶ ಬರಬಾರದೆಂದು ನಾನು ತಾಳ್ಮೆ ವಹಿಸಿದ್ದೇನೆ. ಇನ್ನೂ ನಾಲ್ಕು ದಿನ ಇದೆ, ಕೂತು ಚರ್ಚೆ ಮಾಡ್ತೇವೆ. ಮಂಗಳವಾರ ಅಥವಾ ಬುಧವಾರ ಫೈನಲ್ ಆಗಲಿದೆ ಎಂದರು ಕುಮಾರಸ್ವಾಮಿ ಅವರು.

ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಟಿಕೆಟ್ ಸಮಸ್ಯೆ ಇಲ್ಲ, ಕಳೆದ ಎರಡು ಬಾರಿ ಚನ್ನಪಟ್ಟಣ ಕ್ಷೇತ್ರವನ್ನು ನಾನು ಪ್ರತಿನಿಧಿಸಿದ್ದೇನೆ ಎಂದರು ಅವರು.

ಬೆಂ.ಗ್ರಾಮಾಂತರದಲ್ಲಿ ನಮ್ಮ ಕುಟುಂಬದವರೇ ಬಿಜೆಪಿ ಅಭ್ಯರ್ಥಿ ಆಗಿದ್ದರು

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಇದೆ. ಮೂರು ಉಪ ಚುನಾವಣೆ ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ. ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂ.ಗ್ರಾಮಾಂತರ ಕ್ಷೇತ್ರ ಬಿಟ್ಟು ಕೊಟ್ಟೆವು. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಬಿಜೆಪಿ ನಾಯಕರು ಔದಾರ್ಯ ತೋರಲಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಶಾಸಕ ಮಂಜುನಾಥ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಇನ್ನಿತರರು ಸಚಿವರ ಜತೆಯಲ್ಲಿ ಇದ್ದರು.

SHOCKING NEWS: ಗಾಝಾದ ಯಜಿದಿ ಒತ್ತೆಯಾಳುಗಳಿಗೆ ‘ಕೊಂದ ಶಿಶು’ಗಳನ್ನು ಬೇಯಿಸಿ, ತಿನ್ನಿಸಿದ ‘ISIS’

Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲಿಗೆ `ಬ್ಯಾಲೆಟ್ ಪೇಪರ್’ ಬಳಸಲು ಸಚಿವ ಸಂಪುಟ ಒಪ್ಪಿಗೆ.!

04/09/2025 5:58 PM1 Min Read

BIG NEWS : ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ : ಗೃಹ ಸಚಿವ ಡಾ.ಜಿ.ಪರಮೇಶ್ವರ್

04/09/2025 5:53 PM1 Min Read
vidhana soudha

BREAKING : ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ `EVM’ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಸಚಿವ ಸಂಪುಟ ಒಪ್ಪಿಗೆ.!

04/09/2025 5:46 PM1 Min Read
Recent News

BREAKING : ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲಿಗೆ `ಬ್ಯಾಲೆಟ್ ಪೇಪರ್’ ಬಳಸಲು ಸಚಿವ ಸಂಪುಟ ಒಪ್ಪಿಗೆ.!

04/09/2025 5:58 PM

BIG NEWS : ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ : ಗೃಹ ಸಚಿವ ಡಾ.ಜಿ.ಪರಮೇಶ್ವರ್

04/09/2025 5:53 PM

ಅತಿ ಹೆಚ್ಚು ಮದ್ಯಪಾನಿಗಳು ಭಾರತದ ಯಾವ ನಗರದಲ್ಲಿದ್ದಾರೆ ಗೊತ್ತಾ.?

04/09/2025 5:47 PM
vidhana soudha

BREAKING : ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ `EVM’ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಸಚಿವ ಸಂಪುಟ ಒಪ್ಪಿಗೆ.!

04/09/2025 5:46 PM
State News
KARNATAKA

BREAKING : ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲಿಗೆ `ಬ್ಯಾಲೆಟ್ ಪೇಪರ್’ ಬಳಸಲು ಸಚಿವ ಸಂಪುಟ ಒಪ್ಪಿಗೆ.!

By kannadanewsnow5704/09/2025 5:58 PM KARNATAKA 1 Min Read

ಬೆಂಗಳೂರು : ಮುಂಬರುವ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಸಚಿವ ಸಂಪುಟ…

BIG NEWS : ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ : ಗೃಹ ಸಚಿವ ಡಾ.ಜಿ.ಪರಮೇಶ್ವರ್

04/09/2025 5:53 PM
vidhana soudha

BREAKING : ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ `EVM’ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಸಚಿವ ಸಂಪುಟ ಒಪ್ಪಿಗೆ.!

04/09/2025 5:46 PM

BREAKING : ರಾಯಸಂದ್ರದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ, ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ

04/09/2025 5:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.