Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM

‘ಹಾರಾಟಕ್ಕೂ ಮುನ್ನ ವಿಮಾನ, ಮತ್ತದರ ಎಂಜಿನ್’ನಲ್ಲಿ ಯಾವುದೇ ಸಮಸ್ಯೆ ಇರ್ಲಿಲ್ಲ’ : ಅಪಘಾತದ ಕುರಿತು ಏರ್ ಇಂಡಿಯಾ ‘CEO’ ಮಾಹಿತಿ

19/06/2025 7:52 PM

BREAKING : ತಾಂತ್ರಿಕ ದೋಷದಿಂದಾಗಿ ‘ದೆಹಲಿ-ವಿಯೆಟ್ನಾಂ ಏರ್ ಇಂಡಿಯಾ ವಿಮಾನ’ ಮಧ್ಯದಲ್ಲೇ ವಾಪಸ್

19/06/2025 7:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » NEET-PG-2024 ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
KARNATAKA

NEET-PG-2024 ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow0902/10/2024 5:39 AM

ಬೆಂಗಳೂರು: ನೀಟ್ ಪರೀಕ್ಷೆ ಬರೆದು, ಅರ್ಹತೆ ಪಡೆದಿದ್ದಂತ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2024-25ನೇ ಸಾಲಿನ PG/ Diploma ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ KEA ಅರ್ಜಿ ಆಹ್ವಾನಿಸಿದೆ. ಅ.5ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.

ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು NEET-PG 2024 ರಲ್ಲಿ ಅರ್ಹತೆಯನ್ನು ಪಡೆದಿರುವ ಹಾಗು ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳಿಂದ 2024-25 ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ / ಡಿಪ್ಲೊಮ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಅಂದರೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸೀಟುಗಳು, ಖಾಸಗಿ ಮತ್ತು ಅಲ್ಪ ಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುವ ಸರ್ಕಾರಿ ಕೋಟದ ಸೀಟುಗಳು ಮತ್ತು ಖಾಸಗಿ ಮತ್ತು ಅಲ್ಪ ಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಖಾಸಗಿ ಸೀಟುಗಳ (KPCF, KRLMPCA, AMPCK and Private Universities) ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ ಎಂದು ತಿಳಿಸಿದೆ.

ಸರ್ಕಾರದ ಆದೇಶ ಸಂಖ್ಯೆ ಆಕುಕ 882 ಹೆಚ್.ಎಸ್.ಹೆಚ್. 2021 ಬೆಂಗಳೂರು ದಿನಾಂಕ 10-01-2022ರ ಅನ್ವಯ NEET-PG 2024 ರಲ್ಲಿ ಅರ್ಹತೆಯನ್ನು ಪಡೆದಿರುವ ಹಾಗು ಅರ್ಹತಾ ಮಾನದಂಡಗಳನ್ನು ಪೂರೈಸುವ ಕರ್ನಾಟಕ ಸೇವಾನಿರತ ಅರ್ಹ ಅಭ್ಯರ್ಥಿಗಳಿಂದ 2024-25 ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಡಿಎನ್‌ಬಿ ಹಾಗು ಡಿಪ್ಲೊಮ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿಯೂ ಸಹ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

PGNEET 2024 ರಲ್ಲಿ ನಿಗದಿಪಡಿಸಿರುವ ಕನಿಷ್ಠ ಪರ್ಸೆಂಟೈಲ್ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಪರ್ಸೆಂಟೈಲ್ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ನೊಂದಣಿ ಮಾಡಿಕೊಳ್ಳಲು ಅರ್ಹರಿರುತ್ತಾರೆ ಎಂದು ಹೇಳಿದೆ.

ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿಯ ಸವಲತ್ತುಗಳು ಅನ್ವಯಿಸುವುದಿಲ್ಲ. ಆದ್ದರಿಂದ NEET-PG 2024 ರಲ್ಲಿ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಪರ್ಸೆಂಟೈಲ್ ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ (50th Percentile) ಅರ್ಹತೆಯನ್ನು ಪಡೆಯಬಹುದಾಗಿದೆ ಹಾಗು ಪ್ರವೇಶಕ್ಕಾಗಿ ನೊಂದಣಿಯನ್ನು ಮಾಡಿ ಕೊಳ್ಳಬಹುದಾಗಿದೆ. SC/ST/OBC ಅರ್ಹತಾ ಮಾನದಂಡಗಳು ಕರ್ನಾಟಕ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.
5. ಆಸಕ್ತ ಅರ್ಹ ಅಭ್ಯರ್ಥಿಗಳು NEET-PG 2024 ಕರ್ನಾಟಕ ರಾಜ್ಯದಲ್ಲಿನ ಪಿಜಿ ವೈದ್ಯಕೀಯ ಪದವಿ / ಡಿಪ್ಲೊಮ ಕೋರ್ಸುಗಳ ಪ್ರವೇಶಾತಿಗೆ ಪಿಜಿಇಟಿ ಕೈ, ದಿನಾಂಕ 01-10-2024 ರ ಬೆ.11.00 ರಿಂದ 05-10-2024 ರ ಸಂಜೆ 5.30 ರ ವರೆಗೆ ಆನ್‌ಲೈನ್ ಮೂಲಕ ನೊಂದಣಿ ಮಾಡಿ, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬಹುದಾಗಿರುತ್ತದೆ.

ನೊಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವೇಳಾಪಟ್ಟಿ, ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು, ಹಾಗು ಇತರೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿಕೊಂಡು ನೊಂದಣಿ ಮಾಡಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ದಾಖಲಾತಿ ಪರಿಶೀಲನೆಗೆ ಹಾಜರಾಗಬಹುದು.

ವಿವರವಾದ ಅರ್ಹತಾ ಮಾನದಂಡಗಳನ್ನೊಳಗೊಂಡ PGNEET-2024 ಮಾಹಿತಿ ಪುಸ್ತಕ ಅನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ. ನೊಂದಣಿ ಮಾಡಿಕೊಳ್ಳುವ ಮೊದಲು ಶೈಕ್ಷಣಿಕ ಅರ್ಹತೆ, ವಿವಿಧ ವರ್ಗಗಳ ಸೀಟುಗಳಿಗೆ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು ಮತ್ತು ಅಂತಹ ಸೀಟುಗಳಿಗೆ ನಿಗದಿಪಡಿಸಿರುವ ಅಭ್ಯರ್ಥಿಯ ಅರ್ಹತೆ ಹಾಗು ಇತ್ಯಾದಿ ಮಾನದಂಡಗಳನ್ನು ಓದಿಕೊಂಡು ನೊಂದಣಿ ಮಾಡಿಕೊಳ್ಳಲು ಸೂಚಿಸಿದೆ.

PGNEET 2024 ರಲ್ಲಿ ಅರ್ಹತೆಯನ್ನು ಪಡೆದ ಮಾತ್ರಕ್ಕೆ, ಅರ್ಹತಾ ಮಾನದಂಡಗಳನ್ನು ಪೂರೈಸದಿದ್ದಲ್ಲಿ | ನಿಗದಿತ ಪ್ರಮಾಣ ಪತ್ರಗಳನ್ನು ದಾಖಲಾತಿ ಪರಿಶೀಲನೆಗೆ ಹಾಜರು ಪಡಿಸದಿದ್ದಲ್ಲಿ ಅಭ್ಯರ್ಥಿಯು ಪ್ರವೇಶಾತಿಗಾಗಿ ಯಾವುದೇ ಹಕ್ಕನ್ನು ಹೊಂದುವುದಿಲ್ಲ. ಮುಂದುವರಿದು, ನೊಂದಣಿ ಮಾಡಿಕೊಂಡು ದಾಖಲಾತಿ ಪರೀಶೀಲನೆಯನ್ನು ಯಶಸ್ವಿಯಾಗಿ ಪೂರೈಸುವ ಅಭ್ಯರ್ಥಿಗಳು ಮಾತ್ರ ಕರ್ನಾಟಕದಲ್ಲಿನ ಸರ್ಕಾರಿ / ಖಾಸಗಿ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ / ದಂತ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ.

ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.in ಅನ್ನು ನೋಡಲು ಕೋರಿದೆ. ಸೂಚನೆ: ಎನ್‌ಎಮ್‌ಸಿ ಅವರ ಸೂಚನೆ ದಿನಾಂಕ 24-07-2023 ರ ಅನ್ವಯ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದಲೇ ನಡೆಸಲಾಗುವುದರಿಂದ, ಪಿಜಿ ನೀಟ್ 2024 ರಲ್ಲಿ ಅರ್ಹತೆ ಪಡೆದ ಎಲ್ಲಾ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿನ ಪಿಜಿ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗಲು ಕೆಇಎ ನಲ್ಲಿ ಆನ್‌ಲೈನ್ ಮೂಲಕ ನೊಂದಾಯಿಸಿ, ದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಿದೆ.

Share. Facebook Twitter LinkedIn WhatsApp Email

Related Posts

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM3 Mins Read

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM2 Mins Read

BIG NEWS: ‘ಕ್ರಿಮಿನಲ್ ಪ್ರಕರಣ’ಗಳನ್ನು ‘CID ತನಿಖೆ’ಗಾಗಿ ವರ್ಗಾಯಿಸುವಾಗ ಈ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

19/06/2025 7:27 PM3 Mins Read
Recent News

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM

‘ಹಾರಾಟಕ್ಕೂ ಮುನ್ನ ವಿಮಾನ, ಮತ್ತದರ ಎಂಜಿನ್’ನಲ್ಲಿ ಯಾವುದೇ ಸಮಸ್ಯೆ ಇರ್ಲಿಲ್ಲ’ : ಅಪಘಾತದ ಕುರಿತು ಏರ್ ಇಂಡಿಯಾ ‘CEO’ ಮಾಹಿತಿ

19/06/2025 7:52 PM

BREAKING : ತಾಂತ್ರಿಕ ದೋಷದಿಂದಾಗಿ ‘ದೆಹಲಿ-ವಿಯೆಟ್ನಾಂ ಏರ್ ಇಂಡಿಯಾ ವಿಮಾನ’ ಮಧ್ಯದಲ್ಲೇ ವಾಪಸ್

19/06/2025 7:36 PM

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM
State News
KARNATAKA

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

By kannadanewsnow0919/06/2025 8:11 PM KARNATAKA 3 Mins Read

ಬೆಂಗಳೂರು: ಇಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರು ಪ್ರದೇಶದ ವಿವಿಧ ರೈಲ್ವೆ…

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM

BIG NEWS: ‘ಕ್ರಿಮಿನಲ್ ಪ್ರಕರಣ’ಗಳನ್ನು ‘CID ತನಿಖೆ’ಗಾಗಿ ವರ್ಗಾಯಿಸುವಾಗ ಈ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

19/06/2025 7:27 PM

BREAKING : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ‘ಫಿಕ್ಸಿಸ್’ ಸ್ಪಾ ಮೇಲೆ ಸಿಸಿಬಿ ದಾಳಿ : ಬಾಂಗ್ಲಾದೇಶದ ಯುವತಿ ಪತ್ತೆ

19/06/2025 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.