ಬೆಂಗಳೂರು: ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿದಂತ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ತನಿಖೆಗೆ ಐವರು ವೈದ್ಯರನ್ನೊಳಗೊಂಡ ತನಿಖಾ ತಂಡವನ್ನು ರಚಿಸಿ ತನಿಖೆಗೆ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದು, ಮಂಡ್ಯದಲ್ಲಿ ಮಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವು ಆರೋಪದ ಪ್ರಕರಣದ ತನಿಖೆಗೆ ಐವರು ವೈದ್ಯರನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದಿದ್ದಾರೆ.
ಮೈಸೂರು ಮೆಡಿಕಲ್ ಕಾಲೇಜಿನ ಡಾ.ಪ್ರದೀಪ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಡಾ.ಪ್ರದೀಪ್ ಅಧ್ಯಕ್ಷತೆಯಲ್ಲಿ ಡಾ.ಬಾಲಕೃಷ್ಣ, ಡಾ.ಚೇತನಾನಂದ, ಡಾ.ಮಹೇಶ್, ಡಾ.ಸೋಮಶೇಖರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ನುರಿತ ವೈದ್ಯರ ತಂಡವು 7 ವರ್ಷದ ಬಾಲಕಿ ಸಾನ್ವಿ ಸಾವಿನ ಬಗ್ಗೆ ತನಿಖೆ ನಡೆಸಿ, ಬಾಲಕಿಯ ಸಾವಿಗೆ ಕಾರಣ ಏನೆಂದು ಸರ್ಕಾರಕ್ಕೆ 15 ದಿನಗಳ ಒಳಗೆ ತನಿಕಾ ವರದಿಯನ್ನು ಸಲ್ಲಿಸುವಂತೆ ಡಿಸಿ ಸೂಚಿಸಿದ್ದಾರೆ.
BREAKING : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!
BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!