Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಸೊರಬ ಪುರಸಭೆ’ಗೆ ಸಾಗರ ಉಪವಿಭಾಗಾಧಿಕಾರಿಯನ್ನು ‘ಆಡಳಿತಾಧಿಕಾರಿ’ಯಾಗಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

07/11/2025 9:03 PM

BIG NEWS: ರಾಜ್ಯದ ‘KUWJ ಚುನಾವಣೆ’ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ನ.9ರಂದು 20 ಜಿಲ್ಲೆಯಲ್ಲಿ ‘ಮತದಾನ ಫಿಕ್ಸ್’

07/11/2025 8:51 PM

BREAKING: ‘ಸಾಗರ ನಗರಸಭೆ’ಗೆ ಆಡಳಿತಾಧಿಕಾರಿಯಾಗಿ ‘ಜಿಲ್ಲಾಧಿಕಾರಿ’ ನೇಮಿಸಿ ಸರ್ಕಾರ ಆದೇಶ

07/11/2025 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಇಂದಿನಿಂದ `ಜಾತಿ ಗಣತಿ’ ಆರಂಭ : ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
KARNATAKA

ರಾಜ್ಯಾದ್ಯಂತ ಇಂದಿನಿಂದ `ಜಾತಿ ಗಣತಿ’ ಆರಂಭ : ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

By kannadanewsnow5722/09/2025 5:44 AM

ಬೆಂಗಳೂರು : ಸೆಪ್ಟೆಂಬರ್ 22 ರ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ.

ಸಮೀಕ್ಷೆಗೆ ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಪಡಿತರ ಚೀಟಿ

ಮತದಾರರ ಗುರುತಿನ ಚೀಟಿ, ವಿಕಲಚೇತನರ ಸಂದರ್ಭದಲ್ಲಿ UID ಕಾರ್ಡ್ ಅಥವಾ ಪ್ರಮಾಣಪತ್ರಗಳು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ ಒಟಿಪಿ (OTP) ಗಾಗಿ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ಗೆ ಸಂದೇಶ ಕಳುಹಿಸಲಾಗುತ್ತದೆ.

ಸಮೀಕ್ಷೆಗೆ ಹಾಜರಾಗಲು ಬೇಕಾಗುವ ದಾಖಲೆಗಳು

ಆಧಾರ್ ಕಾರ್ಡ್ : ಪ್ರತಿ ಕುಟುಂಬದ ಸದಸ್ಯರಿಗೆ, ವಿಶೇಷವಾಗಿ 6 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಡ್ಡಾಯವಾಗಿದೆ.

ಪಡಿತರ ಚೀಟಿ : ಆಧಾರ್ ಸಂಖ್ಯೆಯನ್ನು ದೃಢೀಕರಿಸಲು ಪಡಿತರ ಚೀಟಿಯನ್ನು ಆಧಾರವಾಗಿ ಬಳಸಲಾಗುತ್ತದೆ.

ಮತದಾರರ ಗುರುತಿನ ಚೀಟಿ: ಇದು ಗುರುತಿನ ದೃಢೀಕರಣಕ್ಕೆ ಸಹಕಾರಿಯಾಗುತ್ತದೆ.

ವಿಕಲಚೇತನರಿಗಾಗಿ : ವಿಕಲಚೇತನರಾಗಿದ್ದರೆ, ಅವರ UID ಕಾರ್ಡ್ ಅಥವಾ ಸಂಬಂಧಪಟ್ಟ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ನೆನಪಿನಲ್ಲಿಡಬೇಕಾದ ಅಂಶಗಳು:

ಆಧಾರ್ ಲಿಂಕಿಂಗ್ : ನಿಮ್ಮ ಆಧಾರ್ಗೆ ಮೊಬೈಲ್ ನಂಬರ್ ಲಿಂಕ್ ಆಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಿ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ OTP ಸಂದೇಶವನ್ನು ಅದಕ್ಕೆ ಕಳುಹಿಸಲಾಗುತ್ತದೆ.

ಒಟಿಪಿ (OTP ): ಒಬ್ಬ ಸದಸ್ಯ ಮನೆಯಲ್ಲಿ ಇಲ್ಲದಿದ್ದರೆ, ಕುಟುಂಬದ ಪರವಾಗಿ ಉತ್ತರ ನೀಡುವವರು ಫೋನ್ ಮೂಲಕ OTP ಸಂಖ್ಯೆಯನ್ನು ಪಡೆದು ಮಾಹಿತಿ ನೀಡಬೇಕಾಗುತ್ತದೆ.

ಆಧಾರ್ ಇಲ್ಲದಿದ್ದರೆ : ಆಧಾರ್ ಸಂಖ್ಯೆ ಇಲ್ಲದಿದ್ದರೆ, ಹತ್ತಿರದ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಸಂಖ್ಯೆಯನ್ನು ಪಡೆದು ಸಮೀಕ್ಷೆಯಲ್ಲಿ ಭಾಗವಹಿಸಬಹುದು.

ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.
ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.

ವಿವಾದದ 33 ಜಾತಿಗಳನ್ನು ಕೈ ಬಿಟ್ಟ ಆಯೋಗ

ವಿವಾದಕ್ಕೆ ಕಾರಣವಾಗಿದ್ದಂತ ಕ್ರಿಶ್ಚಿಯನ್ ಗೆ ಮತಾಂತರ ಆದ 33 ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗವು ಸಮೀಕ್ಷೆ ನಡೆಸುವ ನಿರ್ಧಾರದಿಂದ ಕೈ ಬಿಟ್ಟಿದೆ. ಹೀಗಾಗಿ ಮತಾಂತರ ಆಗಿದ್ದರೇ ಆ ಧರ್ಮವೇ ಫಿಕ್ಸ್ ಆದಂತೆ ಆಗಿದೆ.

ಹಿಂದುಳಿದ ವರ್ಗಗಳ ಆಯೋಗವು ಈ ಮಾಹಿತಿ ನೀಡಿದ್ದು, ಗೊಂದಲಕ್ಕೆ ಕಾರಣವಾದಂತ 33 ಜಾತಿಗಳನ್ನು ಸಾರ್ವಜನಿಕರ ಸಲಹೆಯ ಮೇರೆಗೆ ಕೈಬಿಡಲಾಗಿದೆ. ನಾಳೆಯಿಂದ ಆರಂಭಗೊಳ್ಳುವಂತ ಜಾತಿ ಗಣತಿ ಸಮೀಕ್ಷೆಯ ಪಟ್ಟಿಯಲ್ಲಿ ಆ ಜಾತಿಗಳು ಇರೋದಿಲ್ಲ. ಇಚ್ಚೆ ಇರೋರು ಅವುಗಳನ್ನು ಸ್ವಇಚ್ಚೆಯಿಂದ ಬರೆಸಬಹುದು ಎಂದಿದೆ.

ಇನ್ನೂ ಮತಾಂತರವಾದ ಜಾತಿಗಳಿಗೆ ಮೂಲ ಜಾತಿ ಬಿಟ್ಟು ಮತಾಂತರವಾದ ಧರ್ಮವೇ ಅನ್ವಯಿಸಲಿದೆ. ಮೂಲ ಜಾತಿ ಅವರಿಗೆ ಅನ್ವಯಿಸೋದಿಲ್ಲ. ಸಮೀಕ್ಷೆಯ ನಂತ್ರ ಯಾವ ಜಾತಿ ಯಾವ ಕೆಟಗರಿಯಲ್ಲಿ ಬರುತ್ತದೆ ಎಂಬುದಾಗಿ ತಜ್ಞರ ತಂಡವು ನಿರ್ಧರಿಸಲಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್ ಮಾಹಿತಿ ನೀಡಿದ್ದಾರೆ.

Caste census begins across the state from today: Keep these documents ready
Share. Facebook Twitter LinkedIn WhatsApp Email

Related Posts

BREAKING: ‘ಸೊರಬ ಪುರಸಭೆ’ಗೆ ಸಾಗರ ಉಪವಿಭಾಗಾಧಿಕಾರಿಯನ್ನು ‘ಆಡಳಿತಾಧಿಕಾರಿ’ಯಾಗಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

07/11/2025 9:03 PM1 Min Read

BIG NEWS: ರಾಜ್ಯದ ‘KUWJ ಚುನಾವಣೆ’ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ನ.9ರಂದು 20 ಜಿಲ್ಲೆಯಲ್ಲಿ ‘ಮತದಾನ ಫಿಕ್ಸ್’

07/11/2025 8:51 PM1 Min Read

BREAKING: ‘ಸಾಗರ ನಗರಸಭೆ’ಗೆ ಆಡಳಿತಾಧಿಕಾರಿಯಾಗಿ ‘ಜಿಲ್ಲಾಧಿಕಾರಿ’ ನೇಮಿಸಿ ಸರ್ಕಾರ ಆದೇಶ

07/11/2025 8:29 PM4 Mins Read
Recent News

BREAKING: ‘ಸೊರಬ ಪುರಸಭೆ’ಗೆ ಸಾಗರ ಉಪವಿಭಾಗಾಧಿಕಾರಿಯನ್ನು ‘ಆಡಳಿತಾಧಿಕಾರಿ’ಯಾಗಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

07/11/2025 9:03 PM

BIG NEWS: ರಾಜ್ಯದ ‘KUWJ ಚುನಾವಣೆ’ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ನ.9ರಂದು 20 ಜಿಲ್ಲೆಯಲ್ಲಿ ‘ಮತದಾನ ಫಿಕ್ಸ್’

07/11/2025 8:51 PM

BREAKING: ‘ಸಾಗರ ನಗರಸಭೆ’ಗೆ ಆಡಳಿತಾಧಿಕಾರಿಯಾಗಿ ‘ಜಿಲ್ಲಾಧಿಕಾರಿ’ ನೇಮಿಸಿ ಸರ್ಕಾರ ಆದೇಶ

07/11/2025 8:29 PM

BREAKING: ರಾಜ್ಯದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯ್ತಿಗಳಿಗೆ ‘ಆಡಳಿತಾಧಿಕಾರಿ’ ನೇಮಿಸಿ ಸರ್ಕಾರ ಆದೇಶ

07/11/2025 8:22 PM
State News
KARNATAKA

BREAKING: ‘ಸೊರಬ ಪುರಸಭೆ’ಗೆ ಸಾಗರ ಉಪವಿಭಾಗಾಧಿಕಾರಿಯನ್ನು ‘ಆಡಳಿತಾಧಿಕಾರಿ’ಯಾಗಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

By kannadanewsnow0907/11/2025 9:03 PM KARNATAKA 1 Min Read

ಬೆಂಗಳೂರು: ಸೊರಬ ಪುರಸಭೆಯ ಸದಸ್ಯರ ಅವಧಿಯು ಮುಕ್ತಾಯಗೊಂಡ ಹಿನ್ನಲೆಯಲ್ಲಿ ದಿನಾಂಕ 24-10-2025ರಿಂದ ಜಾರಿಗೆ ಬರುವಂತೆ ಸಾಗರದ ಉಪ ವಿಭಾಗಾಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ…

BIG NEWS: ರಾಜ್ಯದ ‘KUWJ ಚುನಾವಣೆ’ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ನ.9ರಂದು 20 ಜಿಲ್ಲೆಯಲ್ಲಿ ‘ಮತದಾನ ಫಿಕ್ಸ್’

07/11/2025 8:51 PM

BREAKING: ‘ಸಾಗರ ನಗರಸಭೆ’ಗೆ ಆಡಳಿತಾಧಿಕಾರಿಯಾಗಿ ‘ಜಿಲ್ಲಾಧಿಕಾರಿ’ ನೇಮಿಸಿ ಸರ್ಕಾರ ಆದೇಶ

07/11/2025 8:29 PM

BREAKING: ರಾಜ್ಯದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯ್ತಿಗಳಿಗೆ ‘ಆಡಳಿತಾಧಿಕಾರಿ’ ನೇಮಿಸಿ ಸರ್ಕಾರ ಆದೇಶ

07/11/2025 8:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.