Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೈಜೂಸ್ ಪತನ: ದೇಶದ ಅತಿದೊಡ್ಡ ಎಡ್‌ಟೆಕ್ ಸಂಸ್ಥೆಯ ಕಥೆ ಮುಗಿದಿದ್ದೇಗೆ?

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ
KARNATAKA

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಬಹುನಿರೀಕ್ಷಿತ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ”ಯನ್ನು (ಜಾತಿ ಜನಗಣತಿ ವರದಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಸ್ವೀಕರಿಸಿದರು.

ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್. ನಾಯಕ್ ಅವರು ಮುಖ್ಯಮಂತ್ರಿಗಳಿಗೆ ವರದಿಯನ್ನು ಹಸ್ತಾಂತರಿಸಿದರು.

ಹಿರಿಯ ಸಚಿವರು ಹಾಗೂ ಗಣ್ಯರ ಉಪಸ್ಥಿತಿ: ವರದಿ ಸ್ವೀಕರಿಸುವ ಸಂದರ್ಭದಲ್ಲಿ ಸರ್ಕಾರದ ಪ್ರಮುಖ ಸಚಿವರುಗಳು ಹಾಗೂ ಶಾಸಕರು ಉಪಸ್ಥಿತರಿದ್ದು, ಈ ಮಹತ್ವದ ಕ್ಷಣಕ್ಕೆ ಸಾಕ್ಷಿಯಾದರು. ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ. ಮಹದೇವಪ್ಪ, ಎಂ.ಸಿ. ಸುಧಾಕರ್, ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಶಾಸಕರುಗಳಾದ ಕೋನರೆಡ್ಡಿ, ನರೇಂದ್ರಸ್ವಾಮಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು ಉಪಸ್ಥಿತರಿದ್ದರು.

ಆಯೋಗದ ಪದಾಧಿಕಾರಿಗಳ ಹಾಜರಾತಿ: ವರದಿ ಸಲ್ಲಿಕೆಯ ವೇಳೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ. ಸಿ.ಎಂ. ಕುಂದಗೋಳ, ಡಾ. ಜಿ.ಎನ್. ಶ್ರೀಕಂಠಯ್ಯ, ಸದಸ್ಯ ಕಾರ್ಯದರ್ಶಿ ದಯಾನಂದ್, ಆಡಳಿತಾತ್ಮಕ ಕಾರ್ಯದರ್ಶಿ ಊರ್ಮಿಳಾ ಬಿ. ಹಾಗೂ ಆಯೋಗದ ವಿಶೇಷ ಸಲಹೆಗಾರರಾದ ಡಿ.ಎನ್. ನಾಯಕ್ ಸೇರಿದಂತೆ ಇತರೆ ತಜ್ಞರು ಸಭೆಯಲ್ಲಿದ್ದರು.

ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಈ ವರದಿ ಅತ್ಯಂತ ಮಹತ್ವದ್ದಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಇದನ್ನು ಹೇಗೆ ಅನುಷ್ಠಾನಕ್ಕೆ ತರಲಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

5 Mins Read

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

1 Min Read

BREAKING: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ’ಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

1 Min Read
Recent News

ಬೈಜೂಸ್ ಪತನ: ದೇಶದ ಅತಿದೊಡ್ಡ ಎಡ್‌ಟೆಕ್ ಸಂಸ್ಥೆಯ ಕಥೆ ಮುಗಿದಿದ್ದೇಗೆ?

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

State News
KARNATAKA

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 5 Mins Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

BREAKING: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ’ಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.