Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues.
breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee
All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath
ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಿತು. ಮಂಗಳೂರು ಪೋಲಿಸ್ ಆಯುಕ್ತ ಎನ್.ಶಶಿಕುಮಾರ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ವರ್ಷವಿಡೀ ಪತ್ರಕರ್ತರು ಹಾಗೂ ಪೊಲೀಸರು ಕರ್ತವ್ಯದಲ್ಲಿರುತ್ತಾರೆ. ಅವರಿಗೆ ಇಂತಹ ಕ್ರೀಡಾ ಕೂಟ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ ಎಂದರು.
ಸಮಾಜದ ಓರೆಕೋರೆ ತಿದ್ದುವವರು ಪತ್ರಕರ್ತರು. ಪತ್ರಕರ್ತರು ಸಂಘಟಿತರಾಗಿದ್ದರೆ ಇನ್ನಷ್ಟು ಕ್ರಿಯಾಶೀಲರಾಗಿರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಏಷ್ಯ ನ್ ಪತ್ರಕರ್ತರ ಒಕ್ಕೂಟ ದ ಸಂಚಾಲಕ ಮದನ್ ಗೌಡ ಮಾತನಾಡಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯ ಚಟುವಟಿಕೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಂಗಳೂರು ಸೌಹಾರ್ದತೆಯ ನೆಲ. ಇಲ್ಲಿನ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆ ಮಾದರಿಯಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ. ಕೆ, ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಹಿರಿಯ ಪತ್ರಕರ್ತ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿದರು. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ
ಪ್ರಧಾನ ಕಾರ್ಯದರ್ಶಿ, ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತ ವಿಜಯ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಬೆಂಗಳೂರು : ಈಗಾಗಲೇ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಫ್ರೈ ಬಸ್ ಸಾರಿಗೆ ಸಂಚಾರವನ್ನು ಆರಂಭಿಸಲಾಗಿತ್ತು. ಇದೀಗ ಮುಂದುವರೆದು ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಡಿಕೇರಿ, ಕುಂದಾಪುರಕ್ಕೆ ಫ್ಲೈ ಬಸ್ ಸಾರಿಗೆ ಸಂಚಾರ ಆರಂಭಿಸಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಮುಂದುವರೆದು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಡಿಕೇರಿಗೆ ಫ್ಲೈ ಬಸ್ ಸಾರಿಗೆಗಳನ್ನು ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಂದಾಪುರ ಮಾರ್ಗದಲ್ಲಿ ಫ್ಲೈ ಬಸ್ ಸಾರಿಗೆಗಳು ಕಾರ್ಯಾಚರಣೆಯನ್ನು ದಿನಾಂಕ 05-03-2021ರಿಂದ ಆರಂಭಿಸುತ್ತಿರುವುದಾಗಿ ತಿಳಿಸಿದೆ.
ವೇಳಾಪಟ್ಟಿ ಮತ್ತು ಪ್ರಯಾಣದರದ ವಿವರ ಹೀಗಿದೆ..
ಬೆಂಗಳೂರಿನಿಂದ ಮಡಿಕೇರಿಗೆ ಫ್ಲೈ ಬಸ್ ಸಂಚಾರ ಕೆಐಎಲ್ ನಿಂದ 00:30, 12:00ಕ್ಕೆ ಹೊರಡಲಿದೆ. ಮಡಿಕೇರಿಯಲನ್ನು 06:45, 18:30ಗೆ ತಲುಪಲಿದೆ. ಮಡಿಕೇರಿಯಿಂದ 08.30, 20.30ಗೆ ಹೊರಡಲಿರುವಂತ ಫ್ಲೈ ಬಸ್, ಕೆಐಎಎಲ್ ಅನ್ನು 15.30, 03.30 ಸಮಯಕ್ಕೆ ತಲುಪಲಿದೆ. ಇಂತಹ ಬಸ್ ಸಂಚಾರಕ್ಕೆ ರೂ.1000 ಟಿಕೆಟ್ ದರವನ್ನು ನಿಗದಿ ಪಡಿಸಲಾಗಿದೆ.
ಬೆಂಗಳೂರಿನಿಂದ ಕುಂದಾಪುರಕ್ಕೆ ಕೆಐಎಎಲ್ ನಿಂದ ಫ್ಲೈ ಬಸ್ 21.00ಕ್ಕೆ ಹೊರಟು, ಕುಂದಾಪುರವನ್ನು 08.30ಕ್ಕೆ ತಲುಪಲಿದೆ. ಕುಂದಾಪುರದಿಂದ 19.00ಕ್ಕೆ ಹೊರಡಲಿರುವಂತ ಪ್ಲೈ ಬಸ್, ಕೆಐಎಎಲ್ ಅನ್ನು 05.15ಕ್ಕೆ ತಲುಪಲಿದೆ. ಬಸ್ ಟಿಕೆಟ್ ದರ ರೂ.1,210 ಆಗಿದೆ.
ಪುತ್ತೂರು ತಾಲೂಕಿನ ಅರ್ಲಪದವು ಎಂಬಲ್ಲಿ ಗುಂಡಿ ನಿರ್ಮಾಣ ಕಾರ್ಯದಲ್ಲಿ ಇಬ್ಬರು ಕಾರ್ಮಿಕರು ತೊಡಗಿದ್ದರು. ಇಂತಹ ಸಂದರ್ಭದಲ್ಲಿ, ದಿಢೀರ್ ಮಣ್ಣು ಕುಸಿತಗೊಂಡ ಪರಿಣಾಮ, ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಗುಂಡಿ ನಿರ್ಮಾಣದ ವೇಳೆ ಮಣ್ಣು ಕುಸಿದು ಅವಘಡ ಸಂಭವಿಸಿದ್ದರಿಂದಾಗಿ, ಪಾರ್ಪಳ್ಳಿ ನಿವಾಸಿಗಳಾದ ಬಾಬು, ರವಿ ಎಂಬುವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಉಡುಪಿ : ವಾಹನವೊಂದು ಅಪಘಾತಕ್ಕೆ ಒಳಗಾಗಿ, ಚಾಲಕನ ವಾಹನ ಚಾಲನಾ ಪರವಾನಗಿಯ ಅವಧಿ ಮುಕ್ತಾಯಗೊಂಡಿದ್ದರೂ, ವಿಮಾ ಪರಿಹಾರದ ಮೊತ್ತವನ್ನು ಪಾವತಿಸಲು ಆಗುವುದಿಲ್ಲ ಎಂಬುದಾಗಿ ಉಡುಪಿಯ ಗ್ರಾಹಕ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಈ ಮೂಲಕ ವಾಹನ ಸವಾರರಿಗೆ ಎಚ್ಚರಿಕೆಯ ಗಂಟೆಯನ್ನು ನೀಡಿದೆ.
ಅಂದಹಾಗೇ ಉಡುಪಿ ಜಿಲ್ಲೆಯ ಬೈಂದೂರಿನ ಕಲ್ತೋಡು ಗ್ರಾಮದ ಚಂದ್ರಶೇಖರ್ ಅವರ ಕಾರು, ಮೇ.25, 2019ರಂದು ಗೋಳಿಹೊಳೆಯ ಬಳಿ ಅಪಘಾತಕ್ಕೆ ಒಳಗಾಗಿತ್ತು. ಇಂತಹ ಅಪಘಾತದಿಂದಾಗಿ ಕಾರು ಚಾಲನೆ ಮಾಡುತ್ತಿದ್ದಂತ ಚಂದ್ರಶೇಖರ್(48) ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
ಇದರಿಂದಾಗಿ ಚಂದ್ರಶೇಖರ್ ಅವರ ಮಗ ವಿಮಾ ಕಂಪನಿಯಾದಂತ ರಾಯಲ್ ಸುಂದರಂಗೆ 15 ಲಕ್ಷ ವಿಮಾ ಮೊತ್ತಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಶೀಲಿಸಿದ್ದಂತ ರಾಯಲ್ ಸುಂದರಂ ವಿಮಾ ಕಂಪನಿಯು, ಮೃತರ ವಾಹನ ಚಾಲನಾ ಪರವಾನಗಿಯ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ವಿಮಾ ಮೊತ್ತವನ್ನು ಕಂಪನಿ ನೀಡಲು ಆಗುವುದಿಲ್ಲ ಎಂದು ತಿಳಿಸಿತ್ತು.
ರಾಯಲ್ ಸುಂದರಂ ವಿಮಾ ಕಂಪನಿಯ ಇಂತಹ ನಿರ್ಧಾರದ ವಿರುದ್ಧ ಚಂದ್ರಶೇಖರ್ ಅವರ ಪುತ್ರ ಉಡುಪಿಯ ಗ್ರಾಹಕರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ನ್ಯಾಯಾಲಯವು, ಮೃತ ವ್ಯಕ್ತಿಯ ಚಾಲನಾ ಪರವಾನಗಿ ಅವಧಿ ಮುಕ್ತಾಯಗೊಂಡಿದೆ. ಚಾಲನಾ ಪರವಾನಗಿ ಮಾನ್ಯವಾಗಿಲ್ಲದಿದ್ದರಿಂದಾಗಿ ವೈಯಕ್ತಿಕ ಅಪಘಾತ ವಿಮೆಯನ್ನು ವಿತರಿಸಲು ವಿಮಾ ಕಂಪನಿಯು ಜವಾಬ್ದಾರಿಯಾಗುವುದಿಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. ಈ ಮೂಲಕ ವಾಹನ ಸವಾರರ ಚಾಲನಾ ಪರವಾನಗಿ ಅವಧಿ ಮಾನ್ಯವಾಗಿದ್ದರೇ ಮಾತ್ರವೇ ವೈಯಕ್ತಿಕ ಅಪಘಾತ ವಿಮೆ ನೀಡಬಹುದು ಎಂಬುದಾಗಿ ಅಭಿಪ್ರಾಯ ಪಟ್ಟಿದೆ.
ಮಂಗಳೂರು : ಕೇರಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಂತ ವಿದ್ಯಾರ್ಥಿನಿಗೆ ಕಾಮುಕನೊಬ್ಬ, ರೈಲಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇಂತಹ ಕಿರುಕುಳವನ್ನು ವಿದ್ಯಾರ್ಥಿನಿ ರೆಕಾರ್ಡ್ ಮಾಡಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಮಂಗಳೂರಿನಲ್ಲಿ ಬಂದಿಸಿದ್ದಾರೆ.
ಈ ಎಲ್ಲಾ ಲೈಂಗಿಕ ಕಿರುಕುಳದ ಕಾಮುಕನ ಆಟವನ್ನು ವಿದ್ಯಾರ್ಥಿನಿ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು, ನಂತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ಕಾಮುಕನ ಬಂಧನಕ್ಕೆ ಮನವಿ ಮಾಡಿದ್ದಳು. ಈ ವೀಡಿಯೋ ದೃಶ್ಯಾವಳಿ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಂತ ರೈಲ್ವೆ ಪೊಲೀಸರು, ಕಾಮುಕನನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಇಫ್ತಿಕಾರ್ ಪ್ರತಿಷ್ಟಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಪಾಲುದಾರರಾಗಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಐಟಿ ಅಧಿಕಾರಿಗಳಿಂದ ಇಫ್ತಿಕಾರ್ ಮನೆಯಲ್ಲಿನ ಮುಖ್ಯ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಉತ್ತರ ಕನ್ನಡ : ಜಿಲ್ಲೆಯ ಗುಡ್ಡಳ್ಳಿ ಎಂಬ ಗ್ರಾಮದಲ್ಲಿ ಇಂತದ್ದೊಂದು ಶೋಚನೀಯ ಸ್ಥಿತಿ ಇದೆ. ಯಾಕೆಂದ್ರೇ ಇಲ್ಲಿ ಸಾರಿಗೆ ವ್ಯವಸ್ಥೆಯಾಗಲಿ, ರಸ್ತೆ ಸೌಕರ್ಯವಾಗಲಿ ಇಲ್ಲವೇ ಇಲ್ಲ. ಇನ್ನೂ ಆಸ್ಪತ್ರೆಗೆ ಕರೆದೊಯ್ಯಬೇಕು ಅಂದ್ರೇ ಆಂಬುಲೆನ್ಸ್ ಕೇಳಂಗೆ ಇಲ್ಲ. ಹೀಗಾಗಿ ಇಲ್ಲಿ ಜೋಲಿಯೇ ಆಂಬುಲೆನ್ಸ್.
ಹೌದು.. ಇದು ಉತ್ತರ ಕನ್ನಡ ಜಿಲ್ಲೆಯ ಗುಡ್ಡಳ್ಳಿ ಗ್ರಾಮದ ಕತೆ. ಇದು ಈ ಗ್ರಾಮವೊಂದರ ಕತೆಯಲ್ಲ. ಬದಲಾಗಿ ಕಾರವಾರ, ಜೋಯಿಡಾ, ರಾಮನಗರ, ಶಿರಸಿ, ಸಿದ್ಧಾಪುರ ಹಾಗೂ ಕುಮಟಾ ಭಾಗದ ಗಟ್ಟ ಪ್ರದೇಶಗಳಲ್ಲಿನ ಅನೇಕಗಳ ಕತೆ. ಅದರಲ್ಲೂ ಗುಡ್ಡಳ್ಳಿ ಗ್ರಾಮದ ಜನರು ಮಾತ್ರ ಜೀವವನ್ನು ಕೈಯಲ್ಲಿ ಹಿಡಿದೇ ಜೀವನ ಸಾಗಿಸುತ್ತಿದ್ದಾರೆ. ಯಾಕೆಂದ್ರೇ ಇಲ್ಲಿ ಸಾರಿಗೆ ವ್ಯವಸ್ಥೆ, ರಸ್ತೆ ಸೌಕರ್ಯವಂತೂ ಇಲ್ಲವೇ ಇಲ್ಲವಾಗಿದೆ. ಅದರಲ್ಲೂ ಆಸ್ಪತ್ರೆಗೆ ರೋಗಿಗಳನ್ನು ಕರೆದುಕೊಂಡು ಹೋಗಬೇಕು ಅಂದ್ರೇ, ಆಂಬುಲೆನ್ಸ್ ಮಾತೇ ಇಲ್ಲ. ಹೀಗಾಗಿ ಇಲ್ಲಿನ ಜನರು ಜೋಲಿಯಲ್ಲೇ ಆಸ್ಪತ್ರೆಗೆ ಕರೆದೊಯ್ಯುವ ಶೋಚನೀಯ ಸ್ಥಿತಿ ಇದೆ.
ಅಂದಹಾಗೇ ಅಂಬುಲೆನ್ಸ್ ಇಲ್ಲದೇ ತುರ್ತು ಚಿಕಿತ್ಸೆ ಸಿಗದೇ ಪ್ರತಿ ವರ್ಷ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 200 ಗಡಿದಾಟಿದೆಯಂತೆ. ಅದರಲ್ಲೂ ಕಳೆದ ಐದು ವರ್ಷಗಳಲ್ಲಿ 1,249 ಜನರು ಸಾವು ಕಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಕಳೆದ ನಾಲ್ಕು ವರ್ಷಗಳಿಂದ ನುರಿತ ವೈದ್ಯರಿಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರೂ ವೈದ್ಯರನ್ನು ವ್ಯವಸ್ಥೆ ಮಾಡಿಲ್ಲ.
ಮಂಗಳೂರು ಹೊರವಲಯದ ದೇರಳಕಟ್ಟೆಯ ಕಣಚೂರು ಫಿಸಿಯೋಥರಪಿ ಮತ್ತು ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳಿಗೆ ಸೀನಿಯರ್ ಸ್ಟೂಡೆಂಟ್ಸ್ ರ್ಯಾಗಿಂಗ್ ಮಾಡಿದ್ದರಂತೆ. ಇಂತಹ ವಿಚಾರವನ್ನು ಜೂನಿಯರ್ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದರು.
ವಿದ್ಯಾರ್ಥಿಗಳ ದೂರಿನ ಹಿನ್ನಲೆಯಲ್ಲಿ ಕಾಲೇಜು ಆಡಳಿತ ಮಂಡಳಿಯು ಉಳ್ಳಾಲ ಪೊಲೀಸ್ ಠಾಣೆಯಲ್ಲಿ 18 ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿತ್ತು. ಇಂತಹ ದೂರು ಸ್ವೀಕರಿಸಿದ್ದಂತ ಪೊಲೀಸರು ಕೇರಳ ಮೂಲದ 11 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಮಹ್ಮದ್ ಶಮ್ಮಸ್, ರಾಬಿನ್ ಬಿಜು, ಆಲ್ವಿನ್, ಜಾಬಿನ್, ಸಿರಿಲ್, ರಾಯ್ಚನ್, ಮಹ್ಮದ್ ಸೂರಜ್, ಅಶಿನ್ ಬಾಬು, ಅಬ್ದುಲ್ ಬಾಸಿತ್, ಅಬ್ದುಲ್ ಅನಾಸ್ ಮತ್ತು ಅಕ್ಷಯ್ ಎಂದು ಗುರುತಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಯುವ ಜನಾಂಗವನ್ನು ಗುರಿಯಾಗಿಟ್ಟುಕೊಂಡು ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಮುಂದಾಗಿದ್ದಂತ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಾದಕ ದ್ರವ್ಯ ವಿಭಾಗದ ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತಯ್ಯ ನೇತೃತ್ವದಲ್ಲಿ ತಂಡ 6 ಮಂದಿಯನ್ನು ಬಂಧಿಸಲಾಗಿದೆ ಎಂದರು.
ಬಂಧಿತ ಆರೋಪಿಗಳನ್ನು ಮಂಗಳೂರಿನ ರೌಡಿಶೀಟರ್ ಆಸ್ಗರ್ ಆಲಿ, ದಿಲ್ ಮಯಾಗ್ರಥಿ, ಮೀನಾಬುದ್ಧ ಮೊಗ್ರ, ಅನ್ವರ್ ಸದತ್, ಅಬ್ದುಲ್ ಲತೀಫ್ ಹಾಗೂ ಮೊಹಮದ್ ಹನೀಫ್ ಎಂದು ಗುರುತಿಸಲಾಗಿದೆ. ಇವರಿಂದ 35 ಲಕ್ಷ ಮೌಲ್ಯದ 4 ಕೆಜಿ ಚರಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಿದರು.
ಮಂಗಳೂರು : ಸಂಚರಿಸುತ್ತಿದ್ದಂತ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ, ನಡು ರಸ್ತೆಯಲ್ಲೇ ಧಗಧಗನೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವಂತ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಸಮೀಪದ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿಯ ಕೊಲ್ಮಾಡುವಿನಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಡಿಸೆಲ್ ಹಾಕಿಸಿಕೊಂಡು ಕೊಲ್ನಾಡು ತಲುಪುತ್ತಿದ್ದಂತೆ, ಏಕಾಏಕಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ.
ಇಂತಹ ಮಾಹಿತಿ ತಿಳಿದಂತ ಕಾರು ಚಾಲಕ ಕಾರ್ನಾಡು ನಿವಾಸಿ ಮಹ್ಮದ್ ಫಯಾಜ್ ಕೂಡಲೇ ಕಾರು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ಇಳಿದಿದ್ದಾನೆ. ಹೊಗೆಯ ನಂತ್ರ ಕಾಣಿಸಿಕೊಂಡ ಬೆಂಕಿಯಿಂದಾಗಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದಂತ ಅಗ್ನಿ ಶಾಮಕ ಸಿಬ್ಬಂದಿಗಳು ಬರೋ ವೇಳೆಗೆ ಕಾರು ಸಂಪೂರ್ಣ ಸುಟ್ಟು ಹೋಗಿದೆ.
ದಕ್ಷಿಣ ಕನ್ನಡ : ಸ್ನೇಹಿತರೊಬ್ಬರ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಫಾರ್ಮ್ ಹೌಸ್ ಗೆ ತೆರಳಿದ್ದಂತ ಯುವತಿಯ ಮೇಲೆ, ಪಾರ್ಟಿಯಲ್ಲಿ ಭಾಗವಹಿಸಿದ್ದಂತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಂಗಳೂರಿನ ಬ್ಯಾಂಕ್ ವೊಂದರಲ್ಲಿ ಚಾರ್ಖಂಡ್ ಮೂಲಕ ಯುವತಿಯೊಬ್ಬಳು ಕೆಲಸ ಮಾಡ್ತಾ ಇದ್ದರು. ಸ್ನೇಹಿತರೊಬ್ಬರು ವರ್ಗಾವಣೆಗೊಂಡಿದ್ದರಿಂದ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಪೂತ್ತೂರಿನ ಕೊಡಿಪ್ಪಾಡಿಯ ಫಾರ್ಮ್ ಹೌಸ್ ನಲ್ಲಿ ಆಯೋಜಿಸಲಾಗಿತ್ತು.
ಇಲ್ಲಿನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಂತ ಸಂದರ್ಭದಲ್ಲಿ ಸ್ನೇಹಿತರೊಬ್ಬರ ಜೊತೆಗಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತ ಯುವತಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸಿದಂತ ಪೊಲೀಸರು, ಇಂದು ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು : ಕಿನ್ನಿಗೋಳಿ ಸಮೀಪದ ಐಕಳ ಕಂಬಳ ಇಂದು ಮತ್ತೊಂದು ದಾಖಲೆ ಬರೆದಿದೆ. 9.55 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಕ್ರೀಡೆಯಲ್ಲಿ ಓಡಿ, ಕಂಬಳದ ಉಸೇನ್ ಬೋಲ್ಟ್ ಎಂಬುದಾಗಿ ಪ್ರಖ್ಯಾತವಾಗಿದ್ದ ಶ್ರೀನಿವಾಸ್ ಗೌಡ ದಾಖಲೆಯನ್ನು ಮತ್ತೊಬ್ಬ ಕಂಬಳ ವೀರ ಮುರಿದಿದ್ದಾನೆ. ಬೈಂದೂರಿನ ವಿಶ್ವನಾಥ್ 9.15 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಕಣದಲ್ಲಿ ಓಡುವ ಮೂಲಕ, ಹೊಸ ದಾಖಲೆಯನ್ನು ಬರೆದಿದ್ದಾನೆ.
ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಕ್ರೀಡೆ ಇಂದು ನಡೆಯಿತು. ಇಂತಹ ಕಂಬಳ ಕ್ರೀಡೆಯಲ್ಲಿ ಭಾಗವಹಿಸಿದ್ದಂತ ಬೈಂದೂರಿನ ವಿಶ್ವನಾಥ್, ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ್ ಗೌಡ ದಾಖಲೆ ಮುರಿದಿದ್ದಾರೆ. ಕೇವಲ 9.15 ಸೆಕೆಂಡ್ ನಲ್ಲಿ 100 ಮೀಟರ್ ಓಡಿ ಹೊಸ ದಾಖಲೆ ಸೃಷ್ಠಿಸಿದ್ದಾರೆ.
ಮಂಗಳೂರು : ಮಣಿಪಾಲದ ಕೆ.ಎಫ್ಸಿ ಹೋಟೆಲ್ ಬಳಿ ರಾತ್ರಿ ವೇಳೆಯಲ್ಲಿ ನಡೆದುಕೊಂಡು ಬರುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಕಾರ್ನಲ್ಲಿ ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಮೊಬೈಲ್, ವಾಚ್ ನಗದು ಹಣವನ್ನು ಸುಲಿಗೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿರುತ್ತಾರೆ.
ದಿನಾಂಕ: 31.01.2021 ರಂದು ರಾತ್ರಿ ಸುಮಾರು 12:15 ಗಂಟೆ ಸಮಯದಲ್ಲಿ ಮಣಿಪಾಲದ ಕೆ.ಎಫ್.ಸಿ ಬಿಲ್ಡಿಂಗ್ ಬಳಿ ಕುಳಿತು ಮಾತನಾಡುತ್ತಿದ್ದ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಯನ್ನು ನೋಡಿದ ಮೂರು ಆರೋಪಿತರು ಬೇರೆಯಾರೂ ಇಲ್ಲದೇ ಇರುವುದನ್ನು ಗಮನಿಸಿ ದೂರದಲ್ಲಿ ಕಾರ್ ನಿಲ್ಲಿಸಿ ಸಿಗರೇಟ್ ಕೇಳುವ ನೆಪದಲ್ಲಿ ವಿದ್ಯಾರ್ಥಿನಿಯ ಬಳಿ ಬಂದು ಅವಳ ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿ ಅವರ ಬಳಿಯಿದ್ದ 2 ಮೊಬೈಲ್ ಗಳು 250 ರೂಪಾಯಿ ನಗದು ಹಣ ಹಾಗೂ ಇಯರ್ಫೋನ್ಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಡುಪಿ ಎಸ್ಪಿ ಎನ್.ವಿಷ್ಣುವರ್ಧನ ಆರೋಪಿಗಳ ಪತ್ತೆಗೆ ಅಡಿಷನಲ್ ಎಸ್ಪಿ ಕುಮಾರಚಂದ್ರ ಮತ್ತು ಡಿವೈಎಸ್ಪಿ ಸುಧಾಕರ ನಾಯಕ ಅವರುಗಳು ಆರೋಪಿಗಳನ್ನು ಪತ್ತೆ ಮಾಡಲು ಮಣಿಪಾಲ ಪೊಲೀಸ್ ನಿರೀಕ್ಷಕರಾದ ಮಂಜುನಾಥ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದರು.
ಇಂತಹ ತಂಡದಲ್ಲಿ ಪಿಎಸ್ಐ ರಾಜ್ಶೇಖರ ವಂದಲಿ, ಪ್ರೋ.ಪಿ.ಎಸ್ಐ ನಿರಂಜನ್ ಗೌಡ ಮತ್ತು ದೇವರಾಜ ಬಿರದಾರ, ಎಎಸ್ಐ ಶೈಲೇಶ್ಕುಮಾರ್ ,ಹೆಚ್ ಸಿ ಮಹೇಶ್ , ಅಬ್ದುಲ್ ರಾಜಾಕ್, ಥಾಮ್ಸನ್, ಪ್ರಸನ್ನ , ವಿಶ್ವಜಿತ್ , ಪಿಸಿ ಮೊಹಮ್ಮದ್ ರಫೀಕ್, ಆದರ್ಶ ನಾಯ್ಕ ಹಾಗೂ ಸಿಡಿಆರ್ ಘಟಕದ ದಿನೇಶ್ ಮುಂಬೈ, ಥಾಣೆ, ಬೆಂಗಳೂರು, ಶಿವಮೊಗ್ಗಗಳಲ್ಲಿ ತಿರುಗಾಡಿ ಆರೋಪಿತರಾದ ಶಿವಮೊಗ್ಗದ ಆಶಿಫ್ ಹಾಗೂ ದಸ್ತಗೀರ್ ಬೇಗ್ ಬಂಧಿಸಿ ಕೃತ್ಯಕ್ಕೆ ಬಳಸಿದ ಹೋಂಡಾ ಸಿವಿಕ್ MH-04-CT-1339 ನೇ ಕಾರ್, 2 Android Mobile Phone ಮತ್ತು ಚಾಕುವನ್ನು ವಶಪಡಿಸಿಕೊಂಡಿರುತ್ತಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಣಿಪಾಲದಲ್ಲಿನ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಹಾಗೂ ಸಾರ್ವಜನಿಕರಿಗೆ ರಾತ್ರಿ ವೇಳೆಯಲ್ಲಿ ತಿರುಗಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿರುತ್ತಾರೆ.
ಮಂಗಳೂರು : ಕಿನ್ನಿಗೋಳಿ ಸಮೀಪದ ಐಕಳ ಕಂಬಳ ಇಂದು ಮತ್ತೊಂದು ದಾಖಲೆ ಬರೆದಿದೆ. 9.55 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಕ್ರೀಡೆಯಲ್ಲಿ ಓಡಿ, ಕಂಬಳದ ಉಸೇನ್ ಬೋಲ್ಟ್ ಎಂಬುದಾಗಿ ಪ್ರಖ್ಯಾತವಾಗಿದ್ದ ಶ್ರೀನಿವಾಸ್ ಗೌಡ ದಾಖಲೆಯನ್ನು ಮತ್ತೊಬ್ಬ ಕಂಬಳ ವೀರ ಮುರಿದಿದ್ದಾನೆ. ಬೈಂದೂರಿನ ವಿಶ್ವನಾಥ್ 9.15 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಕಣದಲ್ಲಿ ಓಡುವ ಮೂಲಕ, ಹೊಸ ದಾಖಲೆಯನ್ನು ಬರೆದಿದ್ದಾನೆ.
ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಕ್ರೀಡೆ ಇಂದು ನಡೆಯಿತು. ಇಂತಹ ಕಂಬಳ ಕ್ರೀಡೆಯಲ್ಲಿ ಭಾಗವಹಿಸಿದ್ದಂತ ಬೈಂದೂರಿನ ವಿಶ್ವನಾಥ್, ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ್ ಗೌಡ ದಾಖಲೆ ಮುರಿದಿದ್ದಾರೆ. ಕೇವಲ 9.15 ಸೆಕೆಂಡ್ ನಲ್ಲಿ 100 ಮೀಟರ್ ಓಡಿ ಹೊಸ ದಾಖಲೆ ಸೃಷ್ಠಿಸಿದ್ದಾರೆ.
ಮಂಗಳೂರು : ಇಂದು ಮುಂಜಾನೆ ಮಂಗಳೂರು ನಗರದ ನಂತೂರು ಬಳಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಅವರ ಕಾರು ಅಪಘಾತಗೊಂಡಿದೆ. ಇದರಿಂದಾಗಿ ಅಧ್ಯಕ್ಷ ದಯಾನಂತ ಕತ್ತಲ್, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಅವರು ಮಂಗಳೂರು ನಗರ ನಂತೂರು ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಂತ ಸಂದರ್ಭದಲ್ಲಿ, ಇಂದು ಮುಂಜಾನೆ ಮೀನಿನ ಲಾರಿಗೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೇ ಯಾವುದೇ ಪ್ರಾಣಾಪಾಯವಿಲ್ಲ ಎಂಬುದಾಗಿ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಉಜಿರೆಯ ಬಾಲಕನ ಅಪರಹರಣ ಪ್ರಕರಣ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಹರಣ ಪ್ರಕರಣ ಯತ್ನ ನಡೆದಿದೆ. ಆದ್ರೇ ಸ್ಥಳದಲ್ಲಿದ್ದಂತ ಸಾರ್ವಜನಿಕರನ್ನು ಕಂಡು ಸ್ಥಳದಿಂದ ಕಾಲ್ ಕಿತ್ತಿರುವ ಘಟನೆ ಪದವಿನಂಗಡಿ ಬಳಿಯ ಕೊಂಚಾಡಿ ಮಹಾಲಸಾ ದೇವಸ್ಥಾನದ ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಉಜಿರಿಯ ಬಾಲಕನೊಬ್ಬನನ್ನು ಅಪಹರಿಸಿದ್ದಂತ ಆಗಂತಕರು, ಕೋಟಿ ಬಿಟ್ ಕಾಯಿನ್ ಗೆ ಬೇಡಿಕೆ ಇಟ್ಟಿದ್ದರು. ಆದ್ರೇ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸುಖಾಂತ್ಯಗೊಂಡಿತ್ತು. ಇದು ಮಾಸುವ ಮುನ್ನವೇ, ದಕ್ಷಿಣ ಕನ್ನಡ ಜಿಲ್ಲೆಯ ಪದವಿನಂಗಡಿ ಬಳಿ ಕೊಂಚಾಡಿ ಮಹಾಲಸಾ ದೇವಸ್ಥಾನದ ಬಳಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಮುಸುಕು ಧರಿಸಿ ಬಂದಂತ ಅಪರಿಚಿತರು ಕೊಂಚಾಡಿ ಮಹಾಲಸಾ ದೇವಸ್ಥಾನದ ಬಳಿ ರಾತ್ರಿಯ ವೇಳೆ ನಡೆದುಕೊಂಡು ಹೋಗುತ್ತಿದ್ದಂತ ಮೂವರು ಬಾಲಕರನ್ನು ಅಪಹರಣಕ್ಕೆ ಯತ್ನಿಸಿದ್ದಾರೆ. ಇದೇ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಾರ್ವಜನಿಕರು ಬರುತ್ತಿದ್ದನ್ನು ಗಮನಿಸಿದಂತ ಅಪರಿಚಿತರು, ಅಲ್ಲಿಂದ ಕಾಲ್ ಕಿತ್ತಿದ್ದಾರೆ. ಈ ಮೂಲಕ ಅಪಹರಣ ಯತ್ನ ವಿಫಲವಾಗಿದೆ. ಈ ಎಲ್ಲಾ ದೃಶ್ಯ ಸಮೀಪದಲ್ಲಿದ್ದಂತ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಳಿಯಲ್ಲಿ ವಿದೇಶಿ ಹಕ್ಕಿಗಳು ಸೇರಿದಂತೆ 6 ಪಕ್ಷಿಗಳು ಸಾವನ್ನಪ್ಪಿದ್ದವು. ಹಕ್ಕಿ ಜ್ವರದ ಭೀತಿಯ ಹಿನ್ನಲೆಯಲ್ಲಿ ಈ ಪಕ್ಷಿಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇಂತಹ ವರದಿ ಬಂದಿದ್ದು, ಹಕ್ಕಿ ಜ್ವರದಿಂದ ಸತ್ತಿರುವುದಲ್ಲ ಪಕ್ಷಿಗಳು ಎಂಬುದಾಗಿ ತಿಳಿಸಿದೆ. ಹೀಗಾಗಿ ಹಕ್ಕಿ ಜ್ವರದ ಆತಂಕದ ನಡುವೆಯೂ ನೆಮ್ಮದಿ ನೀಡಿದೆ.
ಮಂಗಳೂರಿನಲ್ಲಿ ಕಾಗೆಗಳ ನಿಗೂಢ ಸಾವು ಪ್ರಕರಣದ ವರದಿ ಜಿಲ್ಲಾಡಳಿತದ ಕೈ ಸೇರಿದೆ. ವರದಿಯಲ್ಲಿ ಕಾಗೆಗಳ ಸಾವಿಗೆ ಹಕ್ಕಿ ಜ್ವರ ಕಾರಣವಲ್ಲ ಎಂದು ದೃಢಪಡಿಸಲಾಗಿದೆ. ಮಂಗಳೂರಿನ ಮಂಜನಾಡಿ ಗ್ರಾಮದ ಅರಂತಾಡಿ ಬಳಿ ಪತ್ತೆಯಾಗಿದ್ದ 6 ಕಾಗೆಗಳ ಮೃತದೇಹ ಸ್ಥಳೀಯರ ಆತಂಕಕ್ಕೆ ಕಾರಣವಾಗಿತ್ತು. ಮರಣೋತ್ತರ ಪರೀಕ್ಷೆಯನ್ನು ಬೆಂಗಳೂರಿನ ಹೆಬ್ಬಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ನಡೆಸಲಾಗಿತ್ತು.
ಮಂಗಳೂರು : ತಾನು ಹಾಡಿ ರಂಜಿಸೋದಕ್ಕೂ ಸೈ, ಕರ್ತವ್ಯದ ವಿಚಾರಕ್ಕೆ ಬಂದಾಗ ಮುಲಾಜಿಲ್ಲದೇ ಕಾನೂನು ಕ್ರಮಕ್ಕೂ ಜೈ ಎನ್ನುವಂತೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಎಲ್ಲರನ್ನು ಹಾಡಿನ ಮೂಲಕ ರಂಜಿಸಿದ್ದಾರೆ. ಭಕ್ತಿಗೀತೆಯ ಹಾಡಿನ ಮೂಲಕ ಭಕ್ತಿ ಭಾವದ ಹೊಳೆಯನ್ನೇ ಹರಿಸಿದ್ದಾರೆ.
ಮಂಗಳೂರು ಕಮೀಷನರ್ ಶಶಿಕುಮಾರ್ ಅವರು ಪಾಂಡೇಶ್ವರದ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಆಗಮಿಸಿದ್ದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ ಕೇಳುತ್ತಲೇ ಖುಷಿಗೊಂಡ ಅವರು, ಇದೇ ವೇದಿಕೆ ಏರಿ, ಭಕ್ತಿ ಗೀತೆ ಹಾಡುವ ಮೂಲಕ ಎಲ್ಲರನ್ನು ಹುಬ್ಬೇರಿಸಿದರು.
ಹೀಗೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಅವರ ಭಕ್ತಿ ಗೀತೆಯ ಹಾಡು ಕೇಳಿದ ಜನರು, ಮೆಚ್ಚುಗೆ ವ್ಯಕ್ತ ಪಡಿಸಿದ್ದಲ್ಲದೇ, ಖಡಕ್ ಅಧಿಕಾರಿಯ ಜೊತೆಗೆ, ಸದಭಿರುಚಿಯ ಆಸಕ್ತಿಯ ಅಧಿಕಾರಿ ಎಂಬುದಾಗಿ ಹಾಡಿ ಹೊಗಳುವಂತಾಗಿದೆ.
ಬೆಳ್ತಂಗಡಿ : ಕಳೆದ ನಿನ್ನೆ ಬೆಳ್ತಂಗಡಿ ತಾಲೂಕಿನ ಮತಏಣಿಕೆ ಕೇಂದ್ರ ಬಳಿ, ಎಸ್ ಡಿ ಪಿ ಐ ಕಾರ್ಯಕರ್ತರು ಗೆಲುವು ಸಾಧಿಸಿದಾಗ, ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದ್ದರು. ಹೀಗೆ ಘೋಷಣೆ ಕೂಗಿದ್ದಂತ 6 ಎಸ್ ಡಿ ಪಿ ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ನಿನ್ನೆ ಗ್ರಾಮ ಪಂಚಾಯ್ತಿ ಚುನಾವಣೆಯ ಮತಏಣಿಕ ಸಂದರ್ಭದಲ್ಲಿಯೇ ಬೆಳ್ತಂಗಡಿಯ ಮತಏಣಿಕೆ ಕೇಂದ್ರದ ಬಳಿಯಲ್ಲಿ, ವಿಜಯೋತ್ಸವಗೊಂಡ ಅಭ್ಯರ್ಥಿಯ ಪರವಾಗಿ ಎಸ್ ಡಿ ಪಿ ಐ ಕಾರ್ಯಕರ್ತರು ಪಾಕಿಸ್ತಾರ್ ಜಿಂದಾಬಾದ್ ಘೋಷಣೆ ಕೂಗಿರುವಂತ ಘಟನೆ ನಡೆದಿತ್ತು. ಹೀಗೆ ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದಂತ 6 ಎಸ್ ಡಿ ಪಿ ಐ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ವಶಕ್ಕೆ ಪಡೆದಂತ ಎಸ್ ಡಿ ಪಿ ಐ ಕಾರ್ಯಕರ್ತರನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಬೆಳ್ತಂಗಡಿ : ರಾಜ್ಯದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಗ್ರಾಮ ಪಂಚಾಯ್ತಿ ಚುನಾವಣೆಯ ಮತಏಣಿಕ ಸಂದರ್ಭದಲ್ಲಿಯೇ ಬೆಳ್ತಂಗಡಿಯ ಮತಏಣಿಕೆ ಕೇಂದ್ರದ ಬಳಿಯಲ್ಲಿ, ವಿಜಯೋತ್ಸವಗೊಂಡ ಅಭ್ಯರ್ಥಿಯ ಪರವಾಗಿ ಎಸ್ ಡಿ ಪಿ ಐ ಕಾರ್ಯಕರ್ತರು ಪಾಕಿಸ್ತಾರ್ ಜಿಂದಾಬಾದ್ ಘೋಷಣೆ ಕೂಗಿರುವಂತ ಘಟನೆ ನಡೆಸಿದೆ.
ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಇಂದು ತಾಲೂಕಿನ ಗ್ರಾಮ ಪಂಚಾಯ್ತಿಗಳಿಗೆ ನಡೆದಂತ ಚುನಾವಣೆಯ ಮತಏಣಿಕೆ ಕಾರ್ಯ ನಡೆಯುತ್ತಿತ್ತು. ಒಂದೊಂದು ಕ್ಷೇತ್ರದ ಮತಏಣಿಕೆಯ ಫಲಿತಾಂಶ ಹೊರಬೀಳುತ್ತಿದ್ದಂತ ಮತಏಣಿಕೆ ಕೇಂದ್ರದ ಬಳಿ ನೆರೆದಿದ್ದಂತ ಸಾವಿರಾರೂ ಕಾರ್ಯಕರ್ತರು, ಗೆದ್ದ ಅಭ್ಯರ್ಥಿಗೆ ಘೋಷಣೆ, ಜಯಕಾರ ಕೂಗುತ್ತಿದ್ದರು.
ಇಂತಹ ಸಂದರ್ಭದಲ್ಲಿ ಮತಏಣಿಕೆ ಸಂದರ್ಭದಲ್ಲಿ ಬಿಜೆಪಿ ಪರ ಅಭ್ಯರ್ಥಿ ಗೆಲುವು ಸಾಧಿಸಿದಾಗ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತ ಸಂದರ್ಭದಲ್ಲಿ, ಎಸ್ ಡಿ ಪಿ ಐ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ಬಳಿ ತೆರಳಿ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಪಾಕ್ ಪರ ಘೋಷಣೆ ಕೂಗಿ ವಿಕೃತಿ ಮೆರೆದಿದ್ದಾರೆ. ಇದರಿಂದ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಕೂಡ ನಿರ್ಮಾಣವಾಗಿದೆ.
ಮಂಗಳೂರು : ಇಡಿ ತನಿಖೆಯ ವಿರುದ್ಧ ಮಂಗಳೂರಿನ ಜಿಲ್ಲಾಡಳಿತದ ಮುಂಭಾಗದಲ್ಲಿ ಪಿಎಫ್ಐ ಕಾರ್ಯಕರ್ತರು ನಡೆಸುತ್ತಿದ್ದಂತ ಪ್ರತಿಭಟನೆ, ವ್ಯಾಪಕ ಸ್ವರೂಪ ಪಡೆದಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಕಚೇರಿಗೂ ಕಾರ್ಯಕರ್ತರು ಮುತ್ತಿಗೆ ಯತ್ನ ಕೂಡ ನಡೆಸಿದ್ದಾರೆ.
ನಗರದಲ್ಲಿ ಇಂದು PFI ಮುಂಖಡರ ಮೇಲೆ ಇಡಿ ತನಿಖೆಗೆ ವಿರೋಧಿಸಿ, ಪಿಎಫ್ಐ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಫ್ಐ ಕಾರ್ಯಕರ್ತರು ಮಂಗಳೂರಿನಲ್ಲಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಚೇರಿಗೂ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿದ್ದಂತ ಪೊಲೀಸರು, ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ : ಉಜಿರೆಯ ನಿವಾಸಿ ಎಂಟು ವರ್ಷದ ಬಾಲಕನನ್ನು ಅಪಹರಿಸಿರುವಂತ ಅಪರಣಕಾರರು, ಆತನನ್ನು ಬಿಡಲು, ಈ ಮೊದಲು 17 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ. ಆನಂತ್ರ ಕಾಂಪ್ರಮೈಸ್ ಆಗಿ ಮತ್ತೆ ಬಾಲಕನ ಬಿಡುಗಡೆಗೆ 10 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ. ಇಂತಹ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ವತಹ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರೇ ತಂಡ ರಚಿಸಿ ತನಿಖೆ ನಡೆಸಿ, ಅಪಹರಣಕಾರರನ್ನು ಪತ್ತೆ ಹಚ್ಚಲಾಗುತ್ತದೆ. ಮಗುವಿನ ಸುರಕ್ಷಿತ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ರಥಬೀದಿಯ ನಿವಾಸಿ ಉದ್ಯಮಿ ಎ.ಕೆ.ಶಿವನ್ ಎಂಬುವವರ ಮೊಮ್ಮಗ ಅನುಭವ್(8) ಮಗುವನ್ನು ಕಳೆದ ಗುರುವಾರ ಸಂಜೆ ಅಪಹರಣ ಮಾಡಲಾಗಿದೆ. ಮನೆಯ ಮುಂಭಾಗದಲ್ಲೇ ಆಟವಾಡುತ್ತಿದ್ದಂತ ಅನುಭವ್ ಅವರನ್ನು ಅಪರಿಚಿತರು ಕಾರಿನಲ್ಲಿ ಅಪಹರಿಸಿದ್ದಾರೆ ಎನ್ನಲಾಗಿದೆ.
ಅಪಹರಣದ ಬಳಿಕ ಮಗುವಿನ ತಾಯಿಗೆ ಕರೆ ಮಾಡಿಸಿ, 100 ಬಿಟ್ ಕಾಯಿನ್ ಅಂದ್ರೇ, 17 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಆನಂತ್ರ ಮಗುವಿನ ತಂದೆಗೂ ಕರೆ ಮಾಡಿ, 60 ಬಿಟ್ ಕಾಯಿನ್ ಅಂದ್ರೇ 10 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದಾಗಿ ವಿಷಯ ತಿಳಿಯುತ್ತಿದ್ದಂತ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮೂಲಕ ಮಗುವನ್ನು ಪತ್ತೆಹಚ್ಚಿ ಕೊಡುವಂತೆ ಮನವಿ ಮಾಡಿದ್ದಾರೆ.
ಈ ವಿಷಯ ಕುರಿತಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, ಮಗುವಿನ ಪತ್ತೆಗೆ ವಿಶೇಷ ತಂಡ ರಚಿಸಲಾಗುತ್ತದೆ. ಅಪಹರಣಕಾರರಿಂದ ಮಗುವನ್ನು ಸುರಕ್ಷಿತ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಹೀಗಾಗಿ ತನಿಖೆ ಚುರುಕುಗೊಂಡಿದೆ.
ಮಂಗಳೂರು : ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ನಂತ್ರ, ಅನ್ ಲಾಕ್ ಆದನಂತ್ರ ಶಾಲೆ ಆರಂಭಗೊಳ್ಳದ ಕಾರಣ, ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ತಮ್ಮ ಮನೆಯ ಬಾವಿಗೆ ಹಾರಿ, ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ.
ಮಂಗಳೂರಿನ ಕುಲಶೇಖರ ನಗರದ ನಿವಾಸಿಯಾಗಿದ್ದಂತ ಖಾಸಗಿ ಶಾಲಾ ಶಿಕ್ಷಕಿ ಗ್ರೆಟ್ಟಾ ಡಿಸೋಜಾ ಎಂಬುವವರು, ನಗರದ ಪ್ರತಿಷ್ಠಿತ ಖಾಸಗೀ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೊರೋನಾ ಸೋಂಕಿನಿಂದಾಗಿ ಲಾಕ್ ಡೌನ್ ಘೋಷಣೆಯಾದ ನಂತ್ರ, ಶಾಲೆ ಆರಂಭಗೊಳ್ಳದ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ.
ಕೊರೋನಾ ಲಾಕ್ ಡೌನ್ ಮುಕ್ತಾಯಗೊಂಡ ನಂತ್ರ, ಅನ್ ಲಾಕ್ ನಂತ್ರವೂ ಶಾಲೆ ಆರಂಭಗೊಳ್ಳದೇ ಮತ್ತಷ್ಟು ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಗ್ರೆಟ್ಟಾ ಡಿಸೋಜಾ, ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ರವಿವಾರ ಬೆಳಗ್ಗೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಹೊಸ ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೊಬ್ಬ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗ್ ಸೇತುವೆಯಲ್ಲಿ ಬಿಟ್ಟು ನೇತ್ರಾವತಿ ನದಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ ವ್ಯಕ್ತಿ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ
ಮಂಗಳೂರು: ಮಂಗಳೂರು ವಿವಿಯ ಪ್ರೊಫೆಸರ್ ಒಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಮಾಹಿತಿ ಗೊತ್ತಿದ್ದರು ಕೂಡ ಮಾಜಿ ಕುಲಸಚಿವರೇ ಮುಚ್ಚಿಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ರಾಜ್ಯ ಮಹಿಳಾ ಆಯೋಗವು ವರದಿ ಕೇಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೂರು ವರ್ಷಗಳ ಹಿಂದೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಗೆ ಅರ್ಥಶಾಸ್ತ್ರದ ಪ್ರಾಧ್ಯಾಪಕ ಪ್ರೊ. ಆರಬಿ ತರಗತಿಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎನ್ನುವ ಆರೋಪವಿದ್ದು. ಈ ಬಗ್ಗೆ ವಿದ್ಯಾರ್ಥಿನಿ ಪ್ರೊ. ಆರಬಿ ವಿರುದ್ದ ವಿಶ್ವವಿದ್ಯಾನಿಲಯಕ್ಕೆ ದೂರು ನೀಡಿದ್ದಳು. ಆದರೆ ಈ ಬಗ್ಗೆ ವಿಚಾರಣೆ ನಡೆಸುವ ಬದಲು ಅಂದಿನ ಕುಲಸಚಿವ ಡಾ. ಎ.ಎಂ. ಖಾನ್ ಮುಚ್ಚಿಟ್ಟಿದ್ದಾರೆ ಎನ್ನಲಾಗಿದೆ.
ಇನ್ನೂ ಈ ಸಂದರ್ಭದಲ್ಲಿ ಸಿಂಡಿಕೇಟ್ ಸಭೆಯಲ್ಲಿ ವರದಿಯನ್ನು ಮುಚ್ಚಿಟ್ಟಿರುವ ಬಗ್ಗೆ ಸದಸ್ಯರಿಂದ ಆಕ್ರೋಶ ವ್ಯಕ್ತವಾಗಿದ್ದು, ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ ಕೇಳಿ ಬಂದಿದೆ. ಇದೀಗ ಪ್ರೊ.ಆರಬಿ ಹಾಗೂ ಕುಲ ಸಚಿವ ಪ್ರೊ.ಎ.ಎಂ.ಖಾನ್ ಅವರ ಯಾವ ಕ್ರಮ ಕೈಗೊಳ್ಳಲಾಗುವುದು ಎನ್ನವುದನ್ನು ಕಾದು ನೋಡಬೇಕಾಗಿದೆ.
ಮಂಗಳೂರು : ದೇಶದಲ್ಲಿ ಕೊರೊನಾ ವೈರಸ್ ಲಾಕ್ ಡೌನ್ ಬಳಿಕ ಹಂತಹಂತವಾಗಿ ಕೇಂದ್ರ ಸರ್ಕಾರ ಅನ್ ಲಾಕ್ ಮಾಡುತ್ತಿದ್ದು, ಇದೀಗ ಬೆಂಗಳೂರು-ಮಂಗಳೂರು ವಿಮಾನಯಾನ ಆರಂಭವಾಗಿದೆ.
ಇಂದಿನಿಂದ ಬೆಂಗಳೂರು-ಮಂಗಳೂರು ವಿಮಾನಯಾನ ಆರಂಭವಾಗಿದ್ದು, ಎರಡು ನಗರಗಳ ನಡುವೆ ಪ್ರತಿ ಬುಧವಾರ ಹಾಗೂ ಗುರುವಾರದಂದು ವಿಮಾನಯಾನ ಸಾಧ್ಯವಿದೆ ಎಂದು ಸ್ಪೈಸ್ ಜೆಟ್ ಸಂಸ್ಥೆ ತಿಳಿಸಿದೆ.
ಈ ವಿಮಾನವು ಬೆಂಗಳೂರಿನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.45 ಕ್ಕೆ ಹೊರಟು ಮಂಗಳೂರನ್ನು 10.30 ಕ್ಕೆ ತಲುಪಲಿದೆ. ಮಂಗಳೂರಿನಿಂದ 11 ಕ್ಕೆ ಹೊರಟು ಬೆಂಗಳೂರನ್ನು 11.55 ಕ್ಕೆ ತಲುಪಲಿದೆ ಎಂದು ತಿಳಿಸಿದೆ.
ಡಿಜಿಟಲ್ಡೆಸ್ಕ್ : ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸೆ.21ರಂದು ನಡೆಯಬೇಕಿದ್ದ ಯು.ಜಿ./ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮರುನಿಗದಿಯಾದ ದಿನಾಂಕ, ಉಳಿದ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆ ಇಲ್ಲ & ವೇಳಾಪಟ್ಟಿಪ್ರಕಾರ ನಡೆಸಲಾಗುವುದು ಅಂತ ಮಂಗಳೂರು ವಿಶ್ವವಿದ್ಯಾಲಯ. ರಿಜಿಸ್ಟ್ರಾರ್ ಮಾಹಿತಿ ನೀಡಿದ್ದಾರೆ.
Due to heavy rain in Dakshina Kannada, Udupi & Kodagu districts, scheduled UG/PG exams of the University on 21.09 has been postponed. Rescheduled date to be intimated shortly, remaining exam dates are unchanged & will be conducted as per schedule: Registrar, Mangalore University. pic.twitter.com/YUDiZBIulv
ಮಂಗಳೂರು : 2020-21ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವಿಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಆಯ್ಕೆಯಾದ ಆಭ್ಯರ್ಥಿಗೆ ಮಾಸಿಕ ರೂ. 10,000 ಶಿಷ್ಯ ವೇತನ ನೀಡಲಾಗುವುದು. ತರಬೇತಿದಾರರಿಗೆ ಕಚೇರಿ ಸ್ಥಾಪಿಸಲು ಹಾಗೂ ಪುಸ್ತಕ ಖರೀದಿಸಲು ತಾಲೂಕು/ಟಿ.ಎಂ.ಸಿ ಕೇಂದ್ರ ಸ್ಥಾನಗಳಲ್ಲಿ ರೂ 50 ಸಾವಿರ ಮತ್ತು ನಗರ ಸಭೆ/ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರೂ. 1 ಲಕ್ಷ ಅನುದಾನ ನೀಡಲಾಗುವುದು.
ಆಯ್ಕೆಯಾದ ಆಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರಕಾರಿ ವಕೀಲರು ಅಥವಾ 15 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ವಕೀಲ ಅಧೀನದಲ್ಲಿ ತರಬೇತಿ ಪಡೆಯಬೇಕು. ಸುಳ್ಳು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ನೀಡಿದ ಅಭ್ಯರ್ಥಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಜಿ ಸಲ್ಲಿಸಲು ಮೇ 30 ಕೊನೆ ದಿನವಾಗಿದೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಅಬ್ಬಕ್ಕನಗರ, ಕೊಟ್ಟಾರ, ಮಂಗಳೂರು-575006 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824-2451269, 2450114ಯನ್ನು ಸಂಪರ್ಕಿಸಬಹುದು ಎಂದು ದ.ಕ ಜಿಲ್ಲೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಯೋಜನಾ ಸಮಸ್ವಯಾಧಿಕಾರಿ ಪ್ರಕಟಣೆ ತಿಳಿಸಿದೆ.
ಮಂಗಳೂರು : ದುಬೈನಿಂದ ಮಂಗಳೂರಿಗೆ ಹಿಂದಿರುಗಿದ್ದಂತ 6 ತಿಂಗಳ ಗರ್ಭಿಣಿಯನ್ನು ಕ್ವಾರಂಟೈನ್ ನಲ್ಲಿ ಜಿಲ್ಲಾಡಳಿತ ಇರಿಸಲಾಗಿತ್ತು. ಆದ್ರೇ.. ಕ್ವಾರಂಟೈನ್ ನಲ್ಲಿದ್ದಂತ ಗರ್ಭಿಣಿ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರನ್ನು ಕರೆಸಿ, ಸೂಕ್ತ ರೀತಿಯಲ್ಲಿ ಚಿಕಿತ್ಸೆ ಕೊಡಿಸಬೇಕಾಗಿದ್ದಂತ ಜಿಲ್ಲಾಢಳಿತ, ಸೂಕ್ತ ಕಾಲದಲ್ಲಿ ಚಿಕಿತ್ಸೆ ಕೊಡಿಸದ ಪರಿಣಾಮ, ತಾಯಿಯ ಹೊಟ್ಟೆಯಲ್ಲಿಯೇ ಕಂದಮ್ಮ ಜೀವ ಬಿಡುವಂತಾಗಿದೆ.
ಮಂಗಳೂರಿನಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಗರ್ಭಿಣಿಯ ಹೊಟ್ಟೆಯಲ್ಲಿದ್ದಂತ 6 ತಿಂಗಳ ಕಂದಮ್ಮನನ್ನು ಬಲಿಯಪಡೆಯುವಂತಾಗಿದೆ. ದುಬೈನಿಂದ ನಗರಕ್ಕೆ ಆಗಮಿಸಿದ್ದಂತ ಮಹಿಳೆಯೊಬ್ಬರನ್ನು ಜಿಲ್ಲಾಡಳಿತ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಆದ್ರೇ ಯಾವುದೇ ಪರೀಕ್ಷೆ ನಡೆದ ವೈದ್ಯರು, ಜಿಲ್ಲಾಡಳಿತ, ಹೊಟ್ಟೆ ನೋವು ಬಂದಂತ ಸಂದರ್ಭದಲ್ಲಿ, ಚಿಕಿತ್ಸೆ ನೀಡಬೇಕಾಗಿತ್ತು. ಆದ್ರೇ ಚಿಕಿತ್ಸೆ ನೀಡಿಲ್ಲ.
ಕೊನೆಗೆ ಗರ್ಭಿಣಿ ಮಹಿಳೆಯ ಸಂಬಂಧಿಕರೇ ಖಾಸಗಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಲೆದಾಡಿದ್ದಾರೆ. ಈ ವೇಳೆ ನೋವು ಜಾಸ್ತಿಯಾಗಿ, ಹೊಟ್ಟೆಯಲ್ಲಿದ್ದಂತ ಪುಟ್ಟ ಕಂದಮ್ಮ, ತಾಯಿಯ ಹೊಟ್ಟೆಯಲ್ಲೇ ಜೀವ ಬಿಡುವಂತಾಗಿದೆ. ಈ ಮೂಲಕ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿಯ ಹೊಟ್ಟೆಯಲ್ಲೇ 6 ತಿಂಗಳ ಕಂದಮ್ಮ ಜೀವ ಬಿಡುವಂತಾಗಿದೆ.
ಮಂಗಳೂರು : ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದಾಗಿ ಬಲಿಯಾದವರ ಸಂಖ್ಯೆ ಏರಿಕೆಯಾಗಿದೆ. ಇಂದು ಕೂಡ ಕಿಲ್ಲರ್ ಕೊರೋನಾ ಸಾವಿನ ಸರಣಿ ಮುಂದುವರೆದಿದ್ದು, 58 ವರ್ಷದ ಕೊರೋನಾ ಸೋಂಕಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದ್ದರೇ, ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಬೋಳೂರು ನಿವಾಸಿಯಾಗಿದ್ದಂತ 58 ವರ್ಷದ ಮಹಿಳೆಗೂ ಕೊರೋನಾ ಸೋಂಕು ತಗುಲಿತ್ತು. ಇಂತಹ ಮಹಿಳೆಯನ್ನು ಫಸ್ಟ್ ನ್ಯಾರೋ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಇಂದು ಒಂದೇ ದಿನ ಕಲಬುರ್ಗಿಯಲ್ಲಿ ಒಬ್ಬರು, ಇದೀಗ ಮಂಗಳೂರಿನಲ್ಲಿ ಒಬ್ಬರು ಸಾವನ್ನಪ್ಪುವ ಮೂಲಕ ಬಲಿಯಾದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಅಂದಹಾಗೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಹೊಸದಾಗಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿತ್ತು. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 28ಕ್ಕೆ ಏರಿಕೆಯಾಗಿತ್ತು. ಅಲ್ಲದೇ 7 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದರು. ಕಿಲ್ಲರ್ ಕೊರೋನಾಗೆ 3 ಈಗಾಗಲೇ ಬಲಿಯಾಗಿದ್ದರು. ಇದೀಗ ಮತ್ತೊಂದು ಬಲಿಯನ್ನು ಪಡೆಯುವ ಮೂಲಕ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾದ್ರೇ, ಕರ್ನಾಟಕದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಮಂಗಳೂರು : ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12 ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐ.ಎ.ಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.
ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಾ, ವಿದೇಶದಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.
ಯು.ಎ.ಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್ಗಳು ಹಾಗೂ 12 ಹಾಸ್ಟೆಲ್ ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ನೇಮಿಸಿರುವ ಅಧಿಕಾರಿಯು ಪ್ರಯಾಣಿಕರಿಂದ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯುವರು ಎಂದು ತಿಳಿಸಿದರು.
ಪ್ರಯಾಣಿಕರನ್ನು ಸ್ವೀಕರಿಸುವಲ್ಲಿ, ಹೋಟೆಲ್ ಬುಕ್ಕಿಂಗ್ ವ್ಯವಸ್ಥೆ, ವಾಹನ ವ್ಯವಸ್ಥೆ, ಹೋಟೆಲ್ ಕ್ವಾರಂಟೈನ್ ವ್ಯವಸ್ಥೆ ಪ್ರತಿಯೊಂದು ವಿಭಾಗಕ್ಕೂ ಒಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಅಧಿಕಾರಿಗಳು ಎಲ್ಲಾ ಕಡೆ ಭೇಟಿ ನೀಡಿ ಮಾಹಿತಿ ನೀಡಬೇಕು ಎಂದು ರಾಹುಲ್ ಸೂಚಿಸಿದರು.
ಪ್ರಯಾಣಿಕರಲ್ಲಿ ಎ ಮತ್ತು ಬಿ ಎಂದು 2 ವಿಭಾಗ ಮಾಡಲಾಗುವುದು. ಕೆಮ್ಮು, ಜ್ವರ, ನೆಗಡಿ ಇರುವವರು ಎ ವಿಭಾಗದ ಪ್ರಯಾಣಿಕರು. ಇವರಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 14 ದಿನಗಳವರೆಗೆ ಕ್ವಾರಂಟೈನ್ ಮಾಡಿ ಬೇಕಾಗುವ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದರು. ಬಿ ವಿಭಾಗ ಎಂದರೆ ಯಾವುದೇ ರೋಗ ಲಕ್ಷಣ ಇಲ್ಲದವರು ಅಂತವರನ್ನು ಹೋಟೆಲ್/ಹಾಸ್ಟೆಲ್ ಕ್ವಾರೆಂಟೈನ್ನಲ್ಲಿ ಇರಿಸಲಾಗುವುದು. ವಿಮಾನ ನಿಲ್ದಾಣದಲ್ಲೇ ಹೋಟೆಲ್ಗಳನ್ನು ಗುರುತಿಸಲು ಏರ್ ಪೋರ್ಟ್ ನಲ್ಲೇ ಆನ್ಲೈನ್ ಬುಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಪ್ರಯಾಣಿಕರು ಗುರುತಿಸಿರುವ ಹೋಟೆಲ್ಗಳಿಗೆ ತಲುಪಿಸಲು ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ಮಂಗಳೂರು ಮಹಾನಗರಪಾಲಿಕೆ ಪರಿಸರ ಅಭಿಯಂತರ ಮಧು ಮನೋಹರ್ ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತವು ಫೆಬ್ರವರಿ 2020 ರಿಂದಲೇ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೋವಿಡ್-19 ರ ನಿಯಂತ್ರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ವಿದೇಶೀ ಪ್ರಯಾಣದ ಇತಿಹಾಸ ಹೊಂದಿರುವ ಪ್ರತಿಯೊಂದು ಮನೆಯ ಮಾಹಿತಿಯನ್ನು ಕಲೆ ಹಾಕಿ ಗೃಹ ನಿಗಾವಣೆಯಲ್ಲಿರುವವರನ್ನು ಸಂಪರ್ಕಿಸಿ, ಅವರ ಆರೋಗ್ಯ ವಿಷಯದ ಬಗ್ಗೆ ಹೆಚ್ಚಿನ ಗಮನವನ್ನು ವಹಿಸಲಾಗುತ್ತಿದೆ. ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ತಿಳಿಸಲಾಗಿದೆ.
ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು ಅಧಿಕಾರಿಗಳೊಂದಿಗೆ ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.
ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ, ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.
ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ. ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಂಗಳೂರು : ರಾಜ್ಯದಲ್ಲಿ ಇಂದು ಮತ್ತೆ 12 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿದೆ. ಸರ್ಕಾರ ಸೋಂಕು ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಜನತೆ ಕೊಂಚ ನಿರಾಳರಾಗಿದ್ದಾರೆ. ಏತನ್ಮಧ್ಯೆ, ಮಂಗಳೂರಿನಲ್ಲಿ ವಿದೇಶಿ ಮೂಲದ ಇಬ್ಬರು ಲಿಫ್ಟ್ ನಲ್ಲಿ ಉಗುಳುವ ಮೂಲಕ ದುಷ್ಕೃತ್ಯ ಎಸಗಿದ್ದಾರೆ.
ಕೇಂದ್ರ ಸರ್ಕಾರವೇ ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ಕಠಿಣ ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ. ಆದರೆ, ಮಂಗಳೂರಿನ ಕೋಡಿಬೈಲ್ ಪ್ರದೇಶದ ಅಪಾರ್ಟ್ ಮೆಂಟ್ ವೊಂದರಲ್ಲಿ ಹೋಂ ಕ್ವಾರೆಂಟೈನ್ ನಲ್ಲಿರುವ ಇಬ್ಬರು ವಿದೇಶಿಗರು ಲಿಫ್ಟ್ ನಲ್ಲಿ ಉಗುಳುವ ಮೂಲಕ ದುಷ್ಕೃತ್ಯ ಎಸಗಿದ್ದಾರೆ. ಈ ದೃಶ್ಯ ಲಿಫ್ಟ್ ನ ಸಿಸಿಟಿವಿಯಲ್ಲಿ ದಾಖಲಾಗಿದೆ. ಘಟನಾ ಹಿನ್ನೆಲೆಯಲ್ಲಿ ಇಬ್ಬರು ವಿದೇಶಿಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಬಳಿಕ ದುಷ್ಕೃತ್ಯ ಮೆರೆದ ಇಬ್ಬರು ವಿದೇಶಿಗರು ಹಾಗೂ ಅವರ ಜೊತೆಗಿದ್ದ ಮೂವರು ರೂಂಮೇಟ್ ಗಳನ್ನು ಕ್ವಾರೆಂಟೈನ್ ಘಟಕಕ್ಕೆ ಸ್ಥಳಾಂತರಿಸಲಾಗಿದೆ….
Mangaluru: Case registered against 2 foreign nationals who were under home quarantine in Kodailbail, for allegedly spitting in the lift in their apartment building yesterday. The 2 foreign nationals and their 3 room mates have been sent to a quarantine facility. #Karnatakapic.twitter.com/3IkgFuSgt0
ಮಂಗಳೂರು : ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸೋಂಕಿತರು, ಇಂದು ಗಣಮುಖರಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ, ಕೊರೊನಾ ಪೀಡಿತರಾಗಿ ದಾಖಲಾಗಿದ್ದಂತ 63 ವರ್ಷದ ವೃದ್ಧ ಮಹಿಳೆ, 52 ವರ್ಷದ ವ್ಯಕ್ತಿ ಮತ್ತು 43 ವರ್ಷದ ವ್ಯಕ್ತಿಗಳು ಇಂದು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ಮೂಲಕ ಇಂದು ಮೂವರು ಕೊರೋನಾ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
ಅಂದಹಾಗೇ, ದೆಹಲಿಯ ನಿಜಾಮುದ್ದೀನ್ ನಿಂದ ಆಗಮಿಸಿದ್ದ ಇಬ್ಬರು ವ್ಯಕ್ತಿಗಳಾಗಿದ್ದರು. ದುಬೈನಿಂದ ಬಂದಿದ್ದ ಕಾರ್ಕಳದ ವೃದ್ಧ ಮಹಿಳೆ ಡಿಸ್ಚಾರ್ಜ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಿಯ 13 ಪ್ರಕರಣಗಳಲ್ಲಿ ಈವರೆಗೆ 12 ಮಂದಿ ಡಿಸ್ಚಾರ್ಜ್. ಉಳಿದ ಓರ್ವ ರೋಗಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಸದ್ಯ ಮಂಗಳೂರಿನಲ್ಲಿ ಏಕೈಕ ಕೊರೋನಾ ಪಾಸಿಟಿವ್ ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳೂರು: ಮೈಕಲ್ತೋ ಬಿಸಯಾ ಎನ್ನುವ ಫೇಸ್ಬುಕ್ ಖಾತೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷಾ ಅವರ ಫೋಟೋ ಬಳಸಿ, ”ಕೊರೊನಾಗಿಂದತಲೂ ಭಯಾನಕ ವೈರಸ್ ಮಂಗಳೂರು ಪೊಲೀಸರು. ಭಾರೀ ಸುದ್ದಿ ಮಾಡುತ್ತಿರುವ ಪೋಲೀ__ ವೈರಸ್” ಎಂದು ಪೋಸ್ಟ್ ಮಾಡಲಾಗಿದೆ. ಈ ಸಂಬಂಧ ವಿರುದ್ಧ ಮಂಗಳೂರಿನ ಪ್ರದೀಪ್ ಎಂಬವರು ಕಂಕನಾಡಿ ನಗರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಎಫ್ಐಆರ್ ದಾಖಲಿಸಿ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.