Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues.
breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee
All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath
ಬೆಂಗಳೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಮೈತ್ರಿ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ನನಗೆ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ. ನಾನು ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಂಡಿದ್ದೇನೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ನಾನು ಎಂಬುದಾಗಿ ಶಾಸಕ ತನ್ವಿರ್ ಸೇಠ್ ಹೇಳಿದ್ದಾರೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದಂತ ಅವರು, ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೇ ಉತ್ತರ ಕೊಡುತ್ತೇನೆ. ಜೆಡಿಎಸ್ ಜೊತೆಗಿನ ಮೈತ್ರಿ ವಿಷಯವನ್ನು ವಿವರಿಸಿದ್ದೇನೆ. ಮಧು ಯಕ್ಷಿಗೌಡ ಜೊತೆಗೂ ಈಗಾಗಲೇ ಚರ್ಚಿಸಲಾಗಿದೆ ಎಂದರು.
ಮೈಸೂರು ಮಹಾನಗರ ಪಾಲಿಕೆಯಲ್ಲಿನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕೂಡ ಸಮ್ಮತಿಸಿದ್ದರು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಹೇಳಿದಂತೆ ನಡೆದುಕೊಂಡಿದ್ದೇನೆ. ಪಕ್ಷ ಜೊತೆಗೆ ನಿಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಮಂಡ್ಯ : ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರಿನಲ್ಲಿ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಸದಸ್ಯರು ತಮ್ಮ ಕುಟುಂಬದವರೊಂದಿಗೆ ಹಿನ್ನೀರಿಗೆ ಬಂದು ಸಖತ್ ಮೋಜು, ಮಸ್ತಿ, ಪಾರ್ಟಿ ಮಾಡಿರುವ ಘಟನೆ, ಈಗ ಬೆಳಕಿಗೆ ಬಂದಿದೆ. ಇಂತಹ ಘಟನೆಯಿಂದಾಗಿ ಸಾರ್ವಜನಿಕರು ನಮಗಿಲ್ಲದ ಅವಕಾಶ ಅವರಿಗ್ಯಾಕೆ ಎಂಬುದಾಗಿ ಕಿಡಿಕಾರಿದ್ದಾರೆ.
ಕೆಎಆರ್ ಎಸ್ ಡ್ಯಾಂ ನ ಹಿನ್ನೀರಿನಲ್ಲೇ ಶಾಮಿಯಾನ ಹಾಕಿ, ಭರ್ಜರಿ ಭೋಜನ ಕೂಟ, ಸೇರಿದಂತೆ ಅನೇಕ ಮೋಜು ಮಸ್ತಿಯನ್ನು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಸದಸ್ಯರು ತಮ್ಮ ಕುಟುಂಬದವರೊಂದಿಗೆ ಮಾಡಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ಡ್ಯಾಂ ಹಿನ್ನೀರಿನ ಪ್ರದೇಶ ನಿರ್ಬಂಧಿತ ಪ್ರದೇಶವಾಗಿದೆ. ನಡೆದಾಡಕ್ಕೂ ಅವಕಾಶವಿಲ್ಲ. ಇಂತದ್ದರಲ್ಲಿ ಅಲ್ಲಿಯೇ ಶಾಮಿಯಾನ ಹಾಕಿ, ಭೋಜನಕೂಟ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ಹಿಂದೆ ಇಲ್ಲಿ ಪಾರ್ಟಿ ಮಾಡಿದ್ದಕ್ಕೆ ಆಯೋಜಕರು, ಭಾಗವಹಿಸಿದ್ದವರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು. ಈಗ ಪೊಲೀಸರೇ ಮಾಡಿದ್ದಾರೆ. ಅವರವಿರುದ್ಧವೂ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ಮೈಸೂರು : ಹಿರಿಯರು ಅಂದ್ರೇ, ಬುದ್ಧಿ ಮಾತನ್ನು ಹೇಳೋದು ಕಾಮನ್. ಇದೇ ಕಾರಣಕ್ಕಾಗಿ ತಮ್ಮನಿಗೆ ಅಣ್ಣ ಕೂಡ ಬುದ್ಧಿಯ ಮಾತುಗಳನ್ನು ಹೇಳಿದ್ದಾನೆ. ಅಣ್ಣನ ಮಾತುಗಳನ್ನು ಪಾಸಿಟಿವ್ ಆಗಿ ತೆಗೆದುಕೊಳ್ಳಬೇಕಾದಂತ ತಮ್ಮ ಮಾತ್ರ, ನೆಗೆಟಿವ್ ಆಗಿ ತೆಗೆದುಕೊಂಡು, ನಿರ್ಧಾರ ಕೈಗೊಂಡಿದ್ದು ಮಾತ್ರ ಬೇರೆಯೇ ಆಗಿತ್ತು. ತಮ್ಮ ಹೀಗೆ ಮಾಡಿಕೊಳ್ಳೋದಕ್ಕೆ ತಾನೂ ಕಾರಣ ಎಂಬುದಾಗಿ ಅಣ್ಣನೂ ಅದೇ ಹಾದಿ ಹಿಡಿದು ಬಿಟ್ಟಿದ್ದನು. ಹೀಗೆ ಅಣ್ಣ-ತಮ್ಮಂದಿರ ಚಿತೆಗಳು ಅಕ್ಕಪಕ್ಕದಲ್ಲಿಯೇ ಉರಿಯುತ್ತಿದ್ದನ್ನು ಕಂಡ ಕುಟುಂಬಸ್ಥರಲ್ಲದೇ ಇಡೀ ಗ್ರಾಮಸ್ಥರು ಕಣ್ಣೀರು ಹಾಕಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ನಡೆದಿದೆ.
ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ರೈತನಾಗಿದ್ದಂತ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿಯೂ ಕೆಲಸ ಮಾಡ್ತಾ ಇದ್ದ. ಆದ್ರೇ ಟ್ರ್ಯಾಕ್ಟರ್ ಅನ್ನು ಅಜಾಗರೂಕತೆಯಿಂದ ಓಡಿಸ್ತಾ ಇದ್ದ ಕಾರಣ, ತಂದೆಯಲ್ಲದೇ ಅಣ್ಣ ವೆಂಕಟೇಶ್ ಕೂಡ ಬೈದು ಬುದ್ದಿ ಹೇಳಿದ್ದರು. ಹಾಗೆಲ್ಲಾ ಓಡಿಸಬೇಡ. ಏನಾದ್ರೂ ಅನಾಹುತ ಆದ್ರೇ ಗತಿಯೇನು ಎಂಬುದಾಗಿ ಬುದ್ಧಿ ಮಾತು ಹೇಳಿದ್ದರು. ತಂದೆಯಲ್ಲದೇ ಅಣ್ಣ ಕೂಡ ಬೈದು ಬುದ್ಧಿ ಹೇಳಿದ್ದರಿಂದ ಮನನೊಂದು, ಹರೀಶ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು.
ಹರೀಶ್ ಆತ್ಮಹತ್ಯೆ ಮಾಡಿಕೊಂಡಿರುವ ವೀಡಿಯೋವನ್ನು ಆತನ ಅಣ್ಣ ವೆಂಕಟೇಶ್ ಗೆ ಸ್ನೇಹಿತರು ವಾಟ್ಸ್ ಆಪ್ ಮಾಡಿದ್ದರು. ಇಂತಹ ವೀಡಿಯೋ ನೋಡಿದಂತ ವೆಂಕಟೇಶ್, ತಮ್ಮನ ಸಾವಿಗೆ ನಾನೇ ಕಾರಣವಾಗಿಬಿಟ್ಟೆ ಎಂಬುದಾಗಿ ಮನನೊಂದು ಬಿಟ್ಟಿದ್ದನು. ಜೊತೆಗೆ ಮಾನಸಿಕವಾಗಿ ಕುಗ್ಗಿ ಹೋಗಿದ್ದಂತ ಆತ, ರಸ್ತೆ ಬದಿಯ ಮರವೊಂದಕ್ಕೆ ತಾನೂ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು.
ಹೀಗೆ ಅಣ್ಣ ಬೈದ ಅಂತ ತಮ್ಮ ಹರೀಶ್ ಆತ್ಮಹತ್ಯೆಗೆ ಶರಣಾಗಿದ್ದರೇ, ತಮ್ಮ ನನ್ನ ಮಾತಿನಿಂದಲೇ ಹೀಗೆ ಮಾಡಿಕೊಂಡ, ನಾನೇ ಕಾರಣವಾಗಿಬಿಟ್ಟೆ ಆತನ ಸಾವಿಗೆ ಎಂಬುದಾಗಿ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದರು. ಈ ಇಬ್ಬರು ಅಣ್ಣ-ತಮ್ಮಂದಿರ ಮೃತದೇಹಗಳನ್ನು ಅಕ್ಕ ಪಕ್ಕದಲ್ಲಿ ಚಿತೆಯ ಮೇಲಿಟ್ಟು, ಅಂತಿಮ ಸಂಸ್ಕಾರ ನೆರವೇರಿಸಿದ್ಧನ್ನು ಕಂಡ ಕುಟುಂಬಸ್ಥರಲ್ಲದೇ, ಇಡೀ ಊರಿಗೆ ಊರೇ ಕಣ್ಣೀರನ್ನು ಸುರಿಸುತ್ತಿತ್ತು.
ಮೈಸೂರು : ನಿನ್ನೆ ನಡೆದಂತ ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನದ ಆಯ್ಕೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಇದರಿಂದಾಗಿ ಬಿಜೆಪಿಗೆ ಬಿಗ್ ಶಾಕ್ ನೀಡಲಾಗಿತ್ತು. ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ನ ರುಕ್ಮಿಣಿ ಮೇಯರ್ ಆಗಿ ಆಯ್ಕೆಗೊಂಡರೇ, ಜೆಡಿಎಸ್ ಬೆಂಬಲದೊಂದಿಗೆ ಕಾಂಗ್ರೆಸ್ ನ ಅನ್ವರ್ ಬೇಗ್ ಉಪ ಮೇಯರ್ ಆಗಿ ಆಯ್ಕೆಗೊಂಡಿ, ಬಿಜೆಪಿಗೆ ಶಾಕ್ ನೀಡಲಾಗಿತ್ತು. ಹೀಗಾಗಿ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಸಿಗದ ಹಿನ್ನಲೆ, ಇದೀಗ ಪಾಲಿಕೆ ಸದಸ್ಯೆ ಸ್ಥಾನಕ್ಕೆ ಬಿಜೆಪಿ ಸದಸ್ಯೆ ರಾಜೀನಾಮೆಗೆ ಮುಂದಾಗಿದ್ದಾರೆ.
ಈ ಕುರಿತಂತೆ ಮೈಸೂರಿನ ಕುವೆಂಪುನಗರ ವಾರ್ಡ್ ನಂ.59ರ ಸದಸ್ಯೆ ಸುನಂದಾ ಪಾಲನೇತ್ರಾ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಬಿಜೆಪಿಗೆ ಪಾಲಿಕೆ ಮೇಯರ್ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು, ರಾಜೀನಾಮೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಈ ಬಗ್ಗೆ ಮಾರ್ಗದರ್ಶನ ನೀಡುವಂತೆಯೂ ಸಿಎಂಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರು : ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಿತು. ಇಂತಹ ಆಯ್ಕೆ ಪ್ರಕ್ರಿಯೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಅಧಿಕಾರದ ಗದ್ದುಗೆ ಹಿಡಿದರು. ಇಂತಹ ಖುಷಿಯಲ್ಲಿ ಪತ್ನಿ ಮೇಯರ್ ಆಗಿದ್ದಕ್ಕೆ ಪತಿ ಮಾದೇಗೌಡ, ಸಭಾಂಗಣದಲ್ಲೇ ಮುತ್ತಿಟ್ಟರು.
ತೀವ್ರ ಕುತೂಹಲ ಮೂಡಿಸಿದ್ದಂತ ಮೈಸೂರು ಮಹಾನಗರ ಪಾಲಿಕೆ ಗದ್ದುಗೆ ಗುದ್ದಾಟದಲ್ಲಿ ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಯಶಸ್ವಿಯಾಯಿತು. ಮೈಸೂರಿನ 23ನೇ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಆಯ್ಕೆಯಾದ್ರೇ, ಉಪ ಮೇಯರ್ ಆಗಿ ಜೆಡಿಎಸ್ ಬೆಂಬಲದೊಂದಿಗೆ ಅನ್ವರ್ ಬೇಗ್ ಆಯ್ಕೆಯಾದ್ರು.
ಕಾಂಗ್ರೆಸ್ ಬೆಂಬಲದೊಂದಿಗೆ ಮೈಸೂರು ಮೇಯರ್ ಆಗಿ ಪತ್ನಿ ರುಕ್ಮಿಣಿ ಆಯ್ಕೆಯಾಗುತ್ತಿದ್ದಂತೆ, ಅದೇ ಖುಷಿಯಲ್ಲಿ ಮೈಸೂರು ಪಾಲಿಕೆ ಸಭಾಂಗಣದಲ್ಲೇ ಪತ್ನಿ ರುಕ್ಮಿಣಿಗೆ, ಪತಿ ಮಾದೇಗೌಡ ಮುತ್ತಿಟ್ಟು ಖುಷಿ ಹಂಚಿಕೊಂಡರು.
ಮೈಸೂರು : ಅಂತೂ ಇಂತೂ ಕೊನೆಗೂ ಮೈಸೂರು ಮಹಾನಗರ ಪಾಲಿಕೆ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಯಶಸ್ವಿಯಾಗಿದೆ. ಮೈಸೂರು ನೂತನ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದರೇ, ಉಪ ಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.
ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಇಂತಹ ಆಯ್ಕೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಗದ್ದುಗೆ ಏರುವಂತ ಕನಸ್ಸು ಕಾಣುಟ್ಟಿದ್ದಂತ ಬಿಜೆಪಿ ಕನಸು ಭಗ್ನವಾಗಿದೆ.
ಮೇಯರ್, ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಪರಿಣಾಮವಾಗಿ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಆಯ್ಕೆಯಾದ್ರೇ, ಉಪ ಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಮೇಯರ್ ಪಟ್ಟದ ಅಲಂಕರಿಸುವಂತ ಬಿಜೆಪಿಯ ಆಸೆಗೆ ಭಗ್ನವಾಗಿದೆ.
ಮೈಸೂರಿನ ಜಯನಗರದ ನಿವಾಸಿಯಾಗಿರುವಂತ ಸಿ.ಶಶಿ, ತೃತೀಯ ಲಿಂಗಿಯಾಗಿ, ಎಲ್ ಎಲ್ ಬಿ ಮುಗಿಸಿ, ರಾಜ್ಯದಲ್ಲಿ ಮೊದಲ ತೃತೀಯ ಲಿಂಗಿ ಲಾಯರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, 10ನೇ ತರಗತಿ ಓದುತ್ತಿರುವಾಗಲೇ ದೇಹದಲ್ಲಿ ಬದಲಾವಣೆಯಾಗಿ ತೃತೀಯ ಲಿಂಗಿಯಾದೆ. ಆ ಬಳಿಕ ತುಂಬಾ ನೋವು, ಅಪಮಾನ, ನಿಂದನೆ ಕಿರುಕುಳ ಅನುಭವಿಸಿದೆ. ಈಗ ಎಲ್ ಎಲ್ ಬಿ ಮುಗಿಸಿ ವಕೀಲೆಯಾಗಿದ್ದೇನೆ. ನನ್ನ ಕಷ್ಟ ಯಾರಿಗೂ ಬರಬಾರದು ಎಂದು ಭಾವುಕರಾಗಿ ನುಡಿದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು ನನಗೆ ವಿದ್ಯಾವರ್ಧಕ ಕಾಲೇಜಿನಲ್ಲಿ ಎಲ್ ಎಲ್ ಬಿ ಮುಗಿಸಲು ಸಹಾಯ ಮಾಡಿದ ಸ್ನೇಹಿತರಿಗೆ, ಕಾಲೇಜಿನ ಉಪನ್ಯಾಸಕರಿಗೆ ಧನ್ಯವಾದಗಳು. ಆರ್ಥಿಕವಾಗಿ ಕಷ್ಟದಲ್ಲಿದ್ದಂತ ನನಗೆ ಸ್ನೇಹಿತರು ಸಹಾಯ ಮಾಡಿ ಪದವಿ ಮುಗಿಯಲು ಅನುವಾದರು. ನಾನು ಅನುಭವಿಸಿದ ಕಷ್ಟಗಳು ಬೇರಾವುದೇ ತೃತೀಯ ಲಿಂಗಿಗಳು ಅನುಭವಿಸಬಾರದು. ಅವರ ಕಷ್ಟಗಳಿಗೆ ನಾನು ಧ್ವನಿಯಾಗುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.
ಮೈಸೂರು : ಶ್ರೀರಾಮಮಂದಿರ ನಿಧಿ ಸಂಗ್ರಹಣೆ ವಿಚಾರದಲ್ಲಿ ದೇಶ, ಸಮಾಜವನ್ನು ಒಡೆಯುವಂತ ಕೆಲಸ ಮಾಡಬೇಡಿ ಎಂಬುದಾಗಿ ಮಾಜಿ ಸಚಿವ ಎಸ್ ಎ ರಾಮದಾಸ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ರಾಮ ಮಂದಿರ ನಿಧಿ ಸಂಗ್ರಹಣಾ ಅಭಿಯಾನದಲ್ಲಿ ಹಿಂದೂಗಳು ಮಾತ್ರವಲ್ಲದೇ, ಮುಸಲ್ಮಾನ, ಕ್ರೈಸ್ತರೂ ಸಹ ದೇಣಿಗೆಯನ್ನು ರಾಮನ ಚರಣಕ್ಕೆ ಅರ್ಪಿಸಿದ್ದಾರೆ ,ಇದನ್ನೊಂದು ಬಾರಿ ತಿಳಿಯುವ ಪ್ರಯತ್ನ ಮಾಡಿ. ಯಾರ ಮನಸ್ಸಲ್ಲೂ ಇಲ್ಲದ ವಿಷ ಬೀಜ ಬಿತ್ತುವ ಕೆಲಸ ಮಾಡಬೇಡಿ ಎಂದಿದ್ದಾರೆ.
ಕುಮಾರಸ್ವಾಮಿ ಅವರೇ ನೀವು ಅಂತಃಕರಣದಿಂದ ಮಾತನಾಡಿ, ನೀವು, ನಿಮ್ಮ ಸಹೋದರ ಹಾಗೂ ನಿಮ್ಮ ಪಿತಾಶ್ರೀ ಅವರು ತಿಂಗಳಲ್ಲಿ ಹೆಚ್ಚಿನ ದಿನ ಪೂಜೆ, ಹೋಮಗಳಲ್ಲೇ ತೊಡಗುತ್ತೀರಿ ಎಂಬುದು ಜನತೆಗೆ ಗೊತ್ತಿರುವ ವಿಷಯ ಎಂದು ಹೇಳಿದ್ದಾರೆ.
ಮಹಾತ್ಮಾ ಗಾಂಧೀಜಿ, ನೆಹರೂ, ಅಂಬೇಡ್ಕರ್ ಸಹ RSS ನ ಕಾರ್ಯದ ಬಗ್ಗೆ ಶ್ಲಾಘಿಸಿದ್ದಾರೆ. RSS ಬಗ್ಗೆ ಜನತೆಗೆ ಧೈರ್ಯದ ಭಾವನೆ ಇದೆಯೇ ಹೊರತು ಹೆದರಿಕೆಯ ಭಾವನೆ ಇಲ್ಲ. ಇವನ್ನೆಲ್ಲಾ ತಿಳಿದು ಇನ್ನಾದರೂ ದೇಶವನ್ನು, ಸಮಾಜವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.
ಮೈಸೂರು : ಸಿದ್ದರಾಮಯ್ಯ ಅವರು ಯಾರ ಯಶಸ್ಸನ್ನು ಸಹಿಸೋದಿಲ್ಲ. ಜೊತೆಗೆ ತಮ್ಮ ಸಮುದಾಯದ ಸ್ವಾಮೀಜಿ ಹೋರಾಟ ಕೂಡ ಸಹಿಸೋದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟರೇ ಬೇರೇನೂ ಗೊತ್ತಿಲ್ಲ. ಅವರೊಬ್ಬರು ಕರ್ನಾಟಕದ ಟ್ರಂಪ್ ಇದ್ದಂತೆ ಎಂಬುದಾಗಿ ಎಂ ಎಲ್ ಸಿ ಹೆಚ್ ವಿಶ್ವನಾಥ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಯಾವೇದು ಅಹಿಂದ ಹೋರಾಟವೂ ಇಲ್ಲ. ಏನೂ ಇಲ್ಲ. ಅದು ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರ ಸ್ವಾರ್ಥದ ಹೋರಾಟ ಅಷ್ಟೇ. ಅವರ ಸ್ವಾರ್ಥಕ್ಕಾಗಿ ಹಿಂದ, ಅಹಿಂದ ಎಂದು ಚಡಪಡಿಸುತ್ತಿದ್ದಾರೆ ಅಷ್ಟೇ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಸ್ತಿತ್ವ ಹಾಗೂ ಅಭದ್ರತೆ ಕಾಡುತ್ತಿದೆ. ಇದೇ ಸಂದರ್ಭದಲ್ಲಿ ಕುರುಬರನ್ನು ಎಸ್ ಟಿ ಮೀಸಲಾತಿ ಹೋರಾಟಕ್ಕೆ ಲಕ್ಷಾಂತರ ಜನರು ಸೇರಿಸಿ ಯಶಸ್ಸು ಕಂಡಿದ್ದೇವೆ. ಈಗ ಸಮುದಾಯ ಅವರ ಜೊತೆಗೆ ಇಲ್ಲ ಅನಿಸುತ್ತಿದೆ. ಇದರಿಂದಾಗಿ ರಾಜಕೀಯ ಅಸ್ತಿತ್ವಕ್ಕೆ ಚಡಪಡಿಸುತ್ತಿದ್ದಾರೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತೆ ಆಗಿದ್ದಾರೆ. ಅವರಿಗೆ ರಾಜ್ಯದ ಸಿಎಂ ಯಡಿಯೂರಪ್ಪ ನೋಡಿದಾಗ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಪಡೆಯಬೇಕು ಎಂದು ಚಡಪಡಿಸುತ್ತಿರುವ ಅವರು, ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕರಾಗಿರುವ ಅವರು ಕರ್ನಾಟಕದ ಟ್ರಂಪ್ ಇದ್ದಂತೆ. ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಸುತ್ತಿದ್ದಾರೆ ಎಂದರು.
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ ಹೆಚ್.ಸಿ.ಮಹದೇವಪ್ಪ ಅವರು, ಸಿದ್ದರಾಮಯ್ಯ ಜೊತೆಗಿನ ಆತ್ಮೀಯತೆಯಿಂದ ದೂರಾಗಿದ್ದರು. ಆದ್ರೇ ಇಂದು ದಿಢೀರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಇಂತಹ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು.
ಮೈಸೂರು ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿ ಗುರ್ತಿಸಿಕೊಂಡಿದ್ದವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಸಿ.ಮಹದೇವಪ್ಪ. ಆದ್ರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಂತ ಮಹದೇವಪ್ಪ ಅವರು ಸಿದ್ದರಾಮಯ್ಯ ಅವರಿಂದ ದೂರಾಗಿದ್ದರು. ಇಂತಹ ಹೆಚ್.ಸಿ.ಮಹದೇವಪ್ಪ ಅವರ ನಿವಾಸಕ್ಕೆ ತೆರಳಿದಂತ ಸಿದ್ದರಾಮಯ್ಯ ಅವರು, ಸುದೀರ್ಘ ಸಮಾಲೋಚನೆ ನಡೆಸಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಯಾರೇ ಮೀಸಲಾತಿ ಕೇಳಿದ್ರೂ ನಾನು ವಿರೋಧ ಮಾಡಲ್ಲ. ಯಾರೇ ಬೇಕಾದರೂ ಮೀಸಲಾತಿಗಾಗಿ ಹೋರಾಟ ಮಾಡಬಹುದು ಎಂದು ಹೇಳುವ ಮೂಲಕ ಕುರುಬರ ಮೀಸಲಾತಿಗೆ ಬೆಂಬಲ ವ್ಯಕ್ತ ಪಡಿಸಿದರು.
ಈ ಬಳಿಕ ಮಾತನಾಡಿದಂತ ಮಾಜಿ ಸಚಿವ ಎಚ್ ಸಿ ಮಹಾದೇವಪ್ಪ, ನನ್ನ ಸಿದ್ದರಾಮಯ್ಯ ನಡುವಿನ ಭಾಂಧವ್ಯ ಹೇಗಿತ್ತೋ ಹಾಗೇ ಇದೆ. ಸಂವಿಧಾನದ ಆಶಯಕ್ಕೆ ಧಕ್ಕೆಯಾದಾಗ ಸದಾ ಹೋರಾಟ ಮಾಡ್ತಾ ಬಂದಿದ್ದೇವೆ. ಬರೀ ಅಧಿಕಾರ ಮಾಡ್ತಾ ಇದ್ದವರಲ್ಲ. ನನಗೆ ಆರೋಗ್ಯ ಸಮಸ್ಯೆ ಆಗಿದ್ದರಿಂದ ಕೆಲವು ಕಾಲ ಮನೆಯಿಂದ ಹೊರಗೆ ಬಂದಿಲ್ಲ ಎಂದು ಹೇಳಿದರು.
ಮೈಸೂರು : ನಗರ ಮಹಾರಾಜ ಕಾಲೇಜಿನ ಮೇಲ್ಛಾವಣೆ ದಿಢೀರ್ ಕುಸಿತಗೊಂಡ ಪರಿಣಾಮ, ದ್ವಿತೀಯ ಪಿಯುಸಿ ಇಂಟರ್ನಲ್ ಪರೀಕ್ಷೆ ಬರೆಯುತ್ತಿದ್ದಂತ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವಂತ ಘಟನೆ ಇಂದು ನಡೆದಿದೆ.
ನಗರ ಮಹಾರಾಜ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಟರ್ನಲ್ ಪರೀಕ್ಷೆ ನಡೆಯುತ್ತಿತ್ತು. ಇಂತಹ ಸಂದರ್ಭದಲ್ಲಿ ದಿಢೀರ್ ಮೇಲ್ಛಾವಣಿ ಕುಸಿತಗೊಂಡ ಪರಿಣಾಮ, ವಿದ್ಯಾರ್ಥಿಗಳಾದಂತ ವಿಶಾಲ್, ಯಶವಂತ್, ಸಲೀಂ ಗಾಯಗೊಂಡಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಇದೀಗ ಸ್ಥಳ ಹಿರಿಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು : ಜನವರಿ 22ರಂದು ಕೆ ಎಸ್ ಆರ್ ಟಿ ಸಿ ಚಾಲಕನಿಗೆ ಚಾಕು ಇರಿದು ಪರಾರಿಯಾಗಿದ್ದಂತ ವ್ಯಕ್ತಿಯನ್ನು ಬಂಧಿಸಿ ಕರೆತರುತ್ತಿದ್ದಂತ ವೇಳೆಯಲ್ಲಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಂತ ಆರೋಪಿಯ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕ ಸೈಡ್ ಗೆ ತೆಗೆದುಕೊಂಡಿದ್ದರಿಂದ ಬೈಕ್ ಚಾಲಕನೊಬ್ಬ, ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಜನವರಿ 22ರಂದು ಮೈಸೂರು ರಸ್ತೆಯಲ್ಲಿ ಪರಾರಿಯಾಗಿದ್ದನು. ಇಡೀ ಘಟನೆ ಮೊಬೈಲ್ ದೃಶ್ಯದಲ್ಲಿ ಸೆರೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಇದರಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದರು.
ಇಂತಹ ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಬಿಳಿಕೆರೆ ಠಾಣೆ ಪೊಲೀಸರು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಇಂತಹ ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಳಿಯಲ್ಲಿ ಇರುವ ಖಚಿತ ಮಾಹಿತಿಯನ್ನು ಪಡೆದಿದ್ದಂತ ಪೊಲೀಸರು, ತೆರಳಿ ಜಯಂತ್, ವಿಘ್ನೇಶ್ ಹಾಗೂ ದೀಪಕ್ ಬಂಧಿಸಿ ಕರೆದೊಯ್ಯುತ್ತಿದ್ದರು.
ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿ ಕರೆದೊಯ್ಯುತ್ತಿದ್ದಂತ ವೇಳೆಯಲ್ಲಿ ಆರೋಪಿ ಜಯಂತ್, ಹೆಡ್ ಕಾನ್ಸ್ ಟೇಬಲ್ ರವಿ ಮತ್ತು ಕಾನ್ಸ್ ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ಜಯಪ್ರಕಾಶ್ ಆರೋಪಿ ಜಯಂತ್ ಕಾಲಿಗೆ ಗುಂಡೇಟು ನೀಡಿ ಬಂದಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ಜಯಂತ್ ಹಾಗೂ ಹಲ್ಲೆಯಿಂದ ಗಾಯಗೊಂಡಿರುವ ಪೊಲೀಸರನ್ನು ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಹಿನ್ನಲೆ ; ಮೈಸೂರು ಕಡೆಯಿಂದ ಹಾಸನ ಕಡೆಗೆ ಪಿರಿಯಾಪಟ್ಟಣ ಘಟಕಕ್ಕೆ ಸೇರಿದ KSRTC ಬಸ್ ನಂ KA-45 F 007 ರೂಟ್ ನಂ 59/60 , ಹುಣಸೂರು ತಾಲೂಕು ಹೊಸ ರಾಮೇನಹಳ್ಳಿ ಬಳಿ ಹೋಗುತ್ತಿದ್ದಾಗ ರಸ್ತೆ ಮಧ್ಯಕ್ಕೆ ಹಸುಗಳು ಬಂದಿದ್ದರಿಂದ ಬಸ್ ಅನ್ನು ಸ್ವಲ್ಪ ಬಲಭಾಗಕ್ಕೆ ಚಾಲಕ ವೆಂಕಟೇಶ್ ತಿರಿಗಿಸಿದ್ದು ಕೆಆರ್ ನಗರ ಕಡೆಯಿಂದ ಮೈಸೂರು ಕಡೆಗೆ ಪಲ್ಸರ್ ಬೈಕ್ ನಂಬರ್ KA 09 0939 ರಲ್ಲಿ ಮೂರು ಜನ ಯುವಕರು ಹೋಗುತ್ತಿದ್ದು. ಡಿಕ್ಕಿ ಹೊಡೆಯಲು ಬಂದನೆಂದು ಪಲಗಸರ್ ಬೈಕ್ ನವರು ಬಸ್ಸನ್ನು ಅಡ್ಡಗಟ್ಟಿ ಚಾಲಕ-ನಿರ್ವಾಹಕರ ಜೊತೆ ಜಗಳ ತೆಗೆದ ಗಲಾಟೆ ಮಾಡಿರುತ್ತಾರೆ.
ಮೂವರ ಪೈಕಿ ಒರ್ವ ಒಬ್ಬ ಯುವಕ ತನ್ನ ಬಳಿ ಇರಿಸಿಕೊಂಡಿದ್ದ ಚಾಕುವಿನಿಂದ ಚಾಲಕ ವೆಂಕಟೇಶ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಲಾಟೆ ಕಂಡ ಜನರ ಜನಸಂದಣಿ ಹೆಚ್ಚಾಗುತಗತಿದ್ದಂತೆ ಅಲ್ಲಿಂದ ಮೂರು ಯುವಕರು ತಮ್ಮ ಬೈಕ್ ನಲ್ಲಿ ಮೈಸೂರು ಕಡೆಗೆ ಪರಾರಿಯಾಗಿದ್ದರು. ಈ ಸಂಬಂಧ ಬಸ್ ನಿರ್ವಾಹಕ ಹರೀಶ್ ರವರು ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂತಹ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದಾಗ ಗುಂಡೇಟು ನೀಡಿ ಬಂಧಿಸಿದ್ದಾರೆ.
ಮೈಸೂರು : ನನ್ನ ಮತ ಕ್ಷೇತ್ರ ಸುತ್ತೂರು. ಈಗ ನನ್ನ ಮಗ ಎಂ.ಎಲ್.ಎ ಆಗಿದ್ರೂ ಕೂಡ ಇದು ನನ್ನ ಕ್ಷೇತ್ರ.ನನ್ನ ಬಾಲ್ಯದ ದಿನಗಳನ್ನು ಕಳೆದಿದ್ದೂ ಇಲ್ಲ. ನಾನು ವೀರ ಮಕ್ಕಳ ಕುಣಿತದಲ್ಲಿ ನಂಬರ್ ಒನ್. ಸುತ್ತೂರು ಪಕ್ಕದ ಬೆಳಗುಂದ ಗ್ರಾಮದಲ್ಲಿ ವೀರ ಮಕ್ಕಳ ಕುಣಿತ ಕುಣಿಯಲು ಬಂದಿದ್ದೆ ಎಂಬ ಬಾಲ್ಯದ ನೆನಪು ಮಾಡಿಕೊಂಡ್ರು. ಅಲ್ಲದೇ ಅಂದು ಸ್ವಾಮೀಜಿ ಕೊಟ್ಟ 5 ರೂನಿಂದ ಕುರಿ ಕೊಂಡು ಸಾಕಷ್ಟು ಲಾಭ ಗಳಿಸಿದ್ದನ್ನು ಮೆಲುಕು ಹಾಕಿದ್ರು.
ಇಂದು ಸುತ್ತೂರು ಮಠದಲ್ಲಿನ ಮಾಸಿಕ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತಿ ವರ್ಷ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತೇನೆ. ಈ ಬಾರಿ ಕೊರೋನಾ ಹಿನ್ನಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಜನರ ಆರೋಗ್ಯದ ದೃಷ್ಠಿಯಿಂದ ಶ್ರೀಗಳು ಸರಳವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ ಎಂದರು.
ಸುತ್ತೂರು ಮಠ ನನಗೆ ಆತ್ಮೀಯವಾದ ಮಠಗಳಲ್ಲಿ ಒಂದು. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಪಾಂಡಿತ್ಯ ಹೊಂದಿರುವವರು, ಅಪಾರ ಜ್ಞಾನಿಗಳು. ಅವರೂ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರ ಹಿತವಚನ ಕೇಳಲು ನಾನೂ ಕೂಡ ಬಂದಿದ್ದೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಮ್ಮ ಹಳೆಯ ಬಾಲ್ಯದ ನೆನಪು ಮೆಲುಕು ಹಾಕಿದಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ನಾನು ಚಿಕ್ಕ ವಯಸ್ಸಿನಲ್ಲಿ ವೀರ ಮಕ್ಕಳ ಕುಣಿತ ಕುಣಿಯುತ್ತಿದ್ದೆ. ನಾನು ವೀರ ಮಕ್ಕಳ ಕುಣಿತದಲ್ಲಿ ನಂಬರ್ ಒನ್ ಎಂದರು.
ಮುಂದುವರೆದು ಮಾತನಾಡಿದ ಅವರು, ಸುತ್ತೂರು ಪಕ್ಕದ ಬೆಳಗುಂದ ಗ್ರಾಮದಲ್ಲಿ ವೀರ ಮಕ್ಕಳ ಕುಣಿತ ಕುಣಿಯಲು ಬಂದಿದ್ದೆ. ವಾಪಸ್ ಬರುವಾಗ ಸುತ್ತೂರಿನ ಕಡೆಯಿಂದ ಹೊಗುತ್ತಿದ್ದೆವು. ಆಗ ರಾಜೇಂದ್ರ ಸ್ವಾಮಿಗಳ ಭೇಟಿ ಮಾಡಿದ್ದೆವು. ಮೊದಲ ಭೇಟಿಯಲ್ಲಿ ಅವರ ಮುಂದೆ ವೀರ ಮಕ್ಕಳ ಕುಣಿತ ಕುಣಿದೆವು. ಅದಕ್ಕೆ ಮೆಚ್ಚಿ ಅವರು ನನಗೆ 5 ರೂಪಾಯಿ ಹಣ ಕೊಟ್ಟಿದ್ದರು, ಅದರಲ್ಲಿ ನಾನು ಒಂದು ಕುರಿ ಕೊಂಡು ಸಾಕಿದ್ದೆ. ಅದರಲ್ಲಿ ಸಾಕಷ್ಟು ಲಾಭ ಗಳಿಸಿದ್ದೆ ಎಂದರು.
ಮೈಸೂರು : ವೇಗವಾಗಿ ತೆರಳುತ್ತಿದ್ದಂತ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಅಲತ್ತೂರು ಗ್ರಾಮದ ಶಿವ ಹಾಗೂ ಬೋಗಾದಿ ನಿವಾಸಿ ನಂದನ್, ಕೆಲಸ ಮುಗಿಸಿಕೊಂಡು ಊರಿನತ್ತ ತೆರಳುತ್ತಿದ್ದರು. ಈ ವೇಳೆ ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿಯಾಗಿದೆ. ಇದರಿಂದಾಗಿ ಕಾರಿನಲ್ಲಿದ್ದಂತ ಶಿವ, ಬೋಗಾದಿ ನಿವಾಸಿ ನಂದನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರು ರಾಜವಂಶಸ್ಥ ಯದುವೀರ್ ಒಡೆಯಲ್ ಹೆಸರಿನಲ್ಲಿ ನಕಲಿ ಟ್ವಿಟ್ ಖಾತೆಯನ್ನು ತೆರೆದಿರುವಂತ ಸೈಬರ್ ಕಳ್ಳರು, ಇಂತಹ ಖಾತೆಯ ಮೂಲಕ ರೈತರ ಪ್ರತಿಭಟನೆಗೆ ಬೆಂಬಲಿಸಿ ಟ್ವಿಟ್ ಮಾಡಲಾಗಿದೆ. ಇಂತಹ ಟ್ವಿಟ್ ನಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾದ ಹಿನ್ನಲೆಯಲ್ಲಿ, ಇದು ನಕಲಿ ಖಾತೆ, ಇಂತಹ ಖಾತೆ ಅಮಾನತಿಗೆ ದೂರು ಸಲ್ಲಿಸಲಾಗಿದೆ ಎಂಬುದಾಗಿ ರಾಜವಂಶಸ್ಥ ಯದುವೀರ್ ಒಡೆಯರ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ನಾನು ದೂರು ದಾಖಲಿಸಿದ್ದೇನೆ. ಹೀಗೆ ಪದೇ ಪದೇ ನಕಲಿ ಖಾತೆ ಸೃಷ್ಟಿಸಲಾಗುತ್ತಿದೆ. ಇದನ್ನು ಯಾರೂ ನಂಬಬೇಡಿ ಎಂಬುದಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮೈಸೂರು : 2016ರಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೋಚಿಂಗ್ ನಡೆಸುತ್ತಿದ್ದಂತ ಶಿಕ್ಷಕರೊಬ್ಬರು, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಡ ನೀಡಿದ್ದ ಪ್ರಕರಣ ಸಂಬಂಧ, ಶಿಕ್ಷಕನಿಗೆ ಮೈಸೂರಿನ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮೈಸೂರು ನಗರದ ಹುಲ್ಲಿನ ಬೀದಿಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೋಚಿಂಗ್ ನೀಡಲು ಕೋಚಿಂಗ್ ಸೆಂಟರ್ ಅನ್ನು ಶಿಕ್ಷಕರೊಬ್ಬರು ತೆರದಿದ್ದರು. ಇಂತಹ ಕೋಚಿಂಗ್ ಸೆಂಟರ್ ಗೆ ಪರೀಕ್ಷಾ ತರಬೇತಿಗೆ ಆಗಮಿಸಿದ್ದಂತ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದನು.
ಎಸ್ ಎಸ್ ಎಲ್ ಸಿಯಲ್ಲಿ ಟಾಪರ್ ಮಾಡುವುದಾಗಿ ನಂಬಿಸಿದ್ದಂತ ಶಿಕ್ಷಕ, ಮನೆಗೆ ಕರೆಸಿಕೊಂಡು, 14 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ 2016ರ ನವೆಂಬರ್ ನಲ್ಲಿ ಶಿಕ್ಷಕನ ವಿರುದ್ಧ ಪೋಷಕರು ಕೆಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಇಂತಹ ಪ್ರಕರಣ ಸಂಬಂಧ ವಿಚಾರಣೆ ನಡೆಸಿದಂತ ಮೈಸೂರಿನ 1ನೇ ಅಧಿಕ ಮತ್ತು ಸತ್ರ ನ್ಯಾಯಾಲಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದಂತ ಶಿಕ್ಷಕನಿಗೆ 10 ವರ್ಷ ಜೈಲು ಹಾಗೂ 50 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಮೈಸೂರು : ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ, ಮನೆಯ ಫ್ರಿಡ್ಜ್ ಗೂ ತಗುಲಿದ ಪರಿಣಾಮ, ಫ್ರಿಡ್ಜ್ ಸ್ಪೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ಮೈಸೂರಿನ ಲಾಲ್ ಬಂದ್ ಬೀದಿಯೊಂದರ ಮನೆಯಲ್ಲಿ ನಡೆದಿದೆ.
ಮೈಸೂರಿನ ಲಾಲ್ ಬಂದ್ ಬೀದಿಯಲ್ಲಿ ವಾಸಿಸುತ್ತಿದ್ದಂತ ಚಂದ್ರು ಆಟೋ ಚಾಲಕರಾಗಿ ಕೆಲಸ ಮಾಡ್ತಾ ಇದ್ದರು. ಇವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಗಮನಿಸಿದಂತ ನೆರೆಹೊರೆಯವರು ಸೇರಿದಂತೆ ಎಲ್ಲರೂ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು.
ಬೆಂಕಿ ಫ್ರಿಡ್ಜ್ ಗೂ ಹೊತ್ತಿಕೊಂಡಿದ್ದರಿಂದ ಅದರಲ್ಲಿದ್ದಂತ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ನಂದಿಸಲು ಬಂದಿದ್ದಂತ ಪಕ್ಕದ ಮನೆಯ ಮೊಹಮ್ಮದ್ ಉರ್ ಸೇರಿದಂತೆ ಮೂವರು ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಹೊತ್ತಿಕೊಂಡ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ಮೈಸೂರು : ಜಿಲ್ಲೆಯಲ್ಲಿ ಇಂದು ಹೊಸದಾಗಿ 27 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 53,256ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಸೋಂಕಿತರಾದಂತ 28 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಜಿಲ್ಲೆಯಲ್ಲಿ 27 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 53,256 ಕ್ಕೇರಿಕೆ ಎಂದು ತಿಳಿಸಿದೆ.
ಇನ್ನೂ ಇಂದು 28 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ಇದುವರೆಗೂ 52,002 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆದಂತೆ ಆಗಿದೆ. ಹೀಗಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 230 ಕ್ಕೆ ಇಳಿಕೆಯಾಗಿದೆ.
ಅಂದಹಾಗೇ ಇಂದು ಮೈಸೂರಿನಲ್ಲಿ ಓರ್ವ ಕೊರೊನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,024ಕ್ಕೆ ಏರಿಕೆಯಾಗಿದೆ.
ಅರಣ್ಯ ಇಲಾಖೆ ವತಿಯಿಂದ ನಗರದ ಅಶೋಕಪುರಂನಲ್ಲಿರುವಂತ ಅರಣ್ಯ ಭವನದ ಶ್ರೀಗಂಧ ಕೋಠಿಯಲ್ಲಿ ಈ ಮ್ಯೂಸಿಯಂ ಸ್ಥಾಪಿಸಲಾಗುತ್ತೆದ. ಇಂತಹ ಶ್ರೀಗಂಧ ಮ್ಯೂಸಿಯಂಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಇಂದು ಉದ್ಘಾಟಿಸಲಿದ್ದಾರೆ.
ಅಂದಹಾಗೇ ಇಂದು ಉದ್ಘಾಟನೆಗೊಳ್ಳಲಿರುವಂತ ಶ್ರೀಗಂಧ ಮ್ಯೂಸಿಯಂ, ರೈತರು ಬೆಳೆದ ಶ್ರೀಗಂಧದ ಮರವನ್ನು ಮಾರಾಟ ಮಾಡಲು ಅನುಕೂಲ ಕಲ್ಪಿಸಲು ಹಾಗೂ ಶ್ರೀಗಂಧವನ್ನು ಹೊಸದಾಗಿ ಬೆಳೆಯಲು ಉದ್ದೇಶಿಸಿರುವಂತ ರೈತರಿಗೆ ಮಾಹಿತಿ ನೀಡೋದಕ್ಕಾಗಿ ಸ್ಥಾಪಿಸಲಾಗುತ್ತಿದೆ.
ಮೈಸೂರು : ಜಿಲ್ಲೆಯಲ್ಲಿ ಇಂದು ಹೊಸದಾಗಿ 14 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53,004ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಜಿಲ್ಲೆಯಲ್ಲಿ 14 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಪ್ರಕರಣಗಳ ಸಂಖ್ಯೆ 53,004 ಕ್ಕೇರಿಕೆ ಆಗಿದೆ. ಇಂದು 44 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ತಿಳಿಸಿದೆ.
ಇದುವರೆಗೆ 51,740 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 242 ಕ್ಕೆ ಇಳಿಕೆ ಆಗಿದೆ. ಇಂದು ಕೊರೋನಾ ಸೋಂಕಿತರಾದಂತ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕಿಲ್ಲರ್ ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 1,022ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಮೈಸೂರು : ಜಿಲ್ಲೆಯಲ್ಲಿ ಇಂದು ಹೊಸದಾಗಿ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 52,772ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ 42 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 52,772 ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು 43 ಸೋಂಕಿತರು ಸೇರಿದಂತೆ ಇದುವರೆಗೆ, 51,443 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ 311 ಜನ ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಇನ್ನೂ ಇಂದು ಕೂಡ ಕಿಲ್ಲರ್ ಕೊರೋನಾಗೆ ಸೋಂಕಿತರೋರ್ವರು ಮೃತಪಟ್ಟಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಇಂದುವರೆಗೆ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 1,018ಕ್ಕೆ ಏರಿಕೆಯಾಗಿದೆ.
ಮೈಸೂರು : ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡಿಸಿ, ಅನುಮೋದನೆಗೊಂಡಿದೆ. ವಿಧಾನ ಪರಿಷತ್ ನಲ್ಲಿ ಮಂಡನೆಯಾಗಿ, ಅನುಮೋದಿಸಬೇಕಿದೆ. ಇದರ ಮಧ್ಯೆ ನಮ್ಮ ದೇಶದಲ್ಲಿ ಗೋ ಮಾಂಸ ರಪ್ತು ಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಎಂಬುದಾಗಿ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗೋಮಾಂಸದ ರಪ್ತು ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧಕ್ಕೆ ಮುಂದಾಗಿದೆ. ರೈತರು ಅನುಪಯುಕ್ತ ದನ, ಎಮ್ಮೆ, ಇತರೆ ಜಾನುವಾರಗಳನ್ನು ಇಟ್ಟಿಕೊಂಡು ಏನ್ ಮಾಡಬೇಕು.? ಇಂತಹ ಜಾನುವಾರಗಳನ್ನು ಸಾಕುವುದು ಕಷ್ಟವಾಗಿರುತ್ತದೆ. ಇದನ್ನು ರಾಜ್ಯ ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ನಮ್ಮ ದೇಶದಿಂದ ಗೋಮಾಂಸ ರಪ್ತು ಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಇದ್ದಾರೆ ಎಂಬುದಾಗಿ ಪತ್ರಿಕೆಯಗಳಲ್ಲಿ ಓದಿದ್ದೇನೆ. ಇಲ್ಲಿ ಗೋ ಹತ್ಯೆ ನಿಲ್ಲಿಸಿ, ಹೊರ ದೇಶಗಳಿಗೆ ರಪ್ತು ಮಾಡುವ ಪ್ರಮಾಣ ಹೆಚ್ಚಿಸುವ ಹುನ್ನಾರ ರಾಜ್ಯ ಸರ್ಕಾರದ ಈ ನಿರ್ಧಾರದ ಹಿಂದೆ ಅಡಗಿದೆ. ಇದು ಸರಿಯಾದ ಕ್ರಮವಲ್ಲ ಎಂದರು.
ಮೈಸೂರು : ವೇಗವಾಗಿ ಬಂದಂತ ಕಾರೊಂದು, ಬೈಕ್ ಗೆ ಢಿಕ್ಕಿಹೊಡೆದ ಪರಿಣಾಮ, ಬೈಕ್ ನಲ್ಲಿ ತೆರಳುತ್ತಿದ್ದಂತ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು – ಮೈಸೂರು ರಸ್ತೆಯ ದಂಡಿ ಮಾರಮ್ಮನ ಗುಡಿ ಸಮೀಪ ನಡೆದಿದೆ.
ಕಳೆದ ರಾತ್ರಿ ಬೆಂಗಳೂರು – ಮೈಸೂರು ರಸ್ತೆಯ ದಂಡಿಮಾರಮ್ಮ ದೇವಸ್ಥಾನದ ಬಳಿಯಲ್ಲಿ ಬೈಕ್ ನಲ್ಲಿ ಟಿಕೆ ಲೇಔಟ್ ನಿವಾಸಿ ರಮೇಶ್, ಅವರ ಪತ್ನಿ ಉಷಾ, ಪುತ್ರಿ ಮೋನಿಷಾ ಹಾಗೂ ಪುತ್ರ ಸಿದ್ಧಾರ್ಥ್ ಸೇರಿ ನಾಲ್ವರು ಸಿದ್ದಲಿಂಗಪುರ ಕಡೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದಂತ ಕಾರೊಂದು ಬೈಕ್ ಗೆ ಢಿಕ್ಕಿಹೊಡೆದ ಪರಿಣಾಮ, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಪುತ್ರ ಸಿದ್ಧಾರ್ಥ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ಡಿಸಿಪಿ ಗೀತಾ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರು : ಒಂದೇ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಬ್ ಇನ್ಸ್ ಪೆಕ್ಟರ್ ಹಾಗೂ ಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದಂತ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಪ್ರೇಮಾಂಕುರದ ನಂತ್ರ, ದೈಹಿಕ ಸಂಪರ್ಕವೂ ಬೆಳೆದಿತ್ತಂತೆ. ಆದ್ರೇ ಇತ್ತೀಚಿಗೆ ಲೇಡಿ ಪೋಲೀಸ್ ವಿರುದ್ಧವೇ ಎಸಐ ಆಗಿದ್ದಂತ ಪ್ರಿಯಕರ ತಿರುಗಿಬಿದ್ದು, ಬೇರೊಂದು ವಿವಾಹಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸಿಡಿದೆದ್ದ ಲೇಡಿ ಪೊಲೀಸ್, ಎಸ್ಐ ಪ್ರಿಯಕರನ ವಿರುದ್ಧ ನಂಬಿಸಿ ಮೋಸ ಮಾಡಿರುವುದಾಗಿ ದೂರು ನೀಡಿದ್ದಾಳೆ.
ಹೌದು.. ಹೀಗೊಂದು ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ನರಸಿಂಹರಾಜ ಠಾಣೆಯಲ್ಲಿ ಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದಂತ ಆನಂದ್ ಹಾಗೂ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದೇ ವಿಚಾರ ಇಡೀ ಇಲಾಖೆಗೂ ಗೊತ್ತಿತ್ತಂತೆ.
ಪ್ರೀತಿ ಸಲುಗೆಗೆ ತಿರುಗಿ, ಮದುವೆಯಾಗುವ ಸುದ್ದಿ ಎಲ್ಲರಿಗೂ ತಿಳಿದಿತ್ತು. ಹೇಗೂ ಮದುವೆಯಾಗೋದು ಖುಲ್ಲಂ ಖುಲ್ಲಂ ಎನ್ನುವ ಕಾರಣಕ್ಕಾಗಿ ದೈಹಿಕ ಸಂಪರ್ಕ ಕೂಡ ಇಬ್ಬರೊಂದಿಗೆ ನಡೆದಿತ್ತಂತೆ.
ಇದೀಗ ಇಬ್ಬರ ನಡುವೆ ಮನಸ್ಥಾಪ ಉಂಟಾಗಿ, ಎಸ್ಐ ಆನಂದ್ ಬೇರೊಂದು ಹುಡುಗಿಯ ಜೊತೆಗೆ ವಿವಾಹ ಆಗಲು ಮುಂದಾದಾಗ, ಮಹಿಳಾ ಸಬ್ ಇನ್ಸ್ ಪೆಕ್ಟರ್, ಎಸ್ಐ ಆನಂದ್ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಪಾತ ಮಾಡಿಸಿದ್ದಾನೆ ಎಂಬುದಾಗಿ ಆರೋಪಿಸಿ, ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವಂತ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
ಮೈಸೂರು : ತೋಟಗಾರಿಕೆ ಇಲಾಖೆ ಅಂಗಸಂಸ್ಥೆಯಾದ ಜಿಲ್ಲಾ ಹಾಪ್ಕಾಮ್ಸ್ ನಗರ ವ್ಯಾಪ್ತಿಯ ಬಡಾವಣೆಗಳ ನಿವಾಸಿಗಳಿಗೆ ಆನ್ಲೈನ್ ಮೂಲಕ ರೈತರಿಂದ ಖರೀದಿಸಿದ ಹಣ್ಣು ತರಕಾರಿಗಳನ್ನು ನಗರದ ನಿವಾಸಿಗಳ ಮನೆಬಾಗಿಲಿಗೆ ಹಾಗೂ ಶುಭ ಸಮಾರಂಭ ನಡೆಯುವ ಸ್ಥಳಗಳಿಗೆ ನಿಗಧಿತ ದರ ಹಾಗೂ ನಿಖರವಾದ ತೂಕದಲ್ಲಿ ಸರಬರಾಜು ಮಾಡಲಾಗುತ್ತದೆ.
ಆನ್ಲೈನ್ನಿಂದ ಗ್ರಾಹಕರು ಹೆಸರನ್ನು ನೊಂದಾಯಿಸಿಕೊಂಡು ಈ ಸೇವೆಯನ್ನು ಪಡೆದುಕೊಳ್ಳಬಹುದು. ಈ ಸೇವೆಯನ್ನು ಪಡೆಯಲು ಸಾರ್ವಜನಿಕರು ಮುಂಗಡವಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಇದಕ್ಕಾಗಿ Hopcoms online ಆ್ಯಪ್ ಮೂಲಕ ಸಾರ್ವಜನಿಕರು ಹೆಸರನ್ನು ಪಡೆದುಕೊಂಡು ಇದರ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 8277814143ಗೆ ಸಂಪರ್ಕಿಸಬಹುದು ಎಂದು ಪದನಿಮಿತ್ತ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ನಾರ್ತ್ ಈಸ್ಟ್ ಆಫ್ ಎನ್.ಆರ್.ಮೊಹಲ್ಲಾದ ಹಳೇ ಬಡಾವಣೆಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಅಂದಾಜು 1 ಕೋಟಿ ರೂ. ಮೌಲ್ಯದ ನಿವೇಶನಗಳನ್ನು ಮಂಗಳವಾರ ಪ್ರಾಧಿಕಾರವು ತೆರವುಗೊಳಿಸಿತು.
ಎನ್.ಆರ್.ಮೊಹಲ್ಲಾ ಹಳೇ ಬಡಾವಣೆಯಲ್ಲಿ ನಿ.ಸಂಖ್ಯೆ-537/ಕೆ ಮತ್ತು 537/ಎಲ್, 30×40 ಅಳತೆಯ ನಿವೇಶನಗಳನ್ನು ಮೋಸಿನ್ತಾಜ್ ಎಂಬುವವರು ನಕಲಿ ದಾಖಲೆ ಸೃಷ್ಠಿಸಿ ಮೈಸೂರು ಮಹಾನಗರಪಾಲಿಕೆಯಿಂದ ಖಾತೆ ಮಾಡಿಸಿಕೊಂಡು ನಿವೇಶನದ ಸುತ್ತಾ ಗೋಡೆ ನಿರ್ಮಿಸಿಕೊಂಡಿದ್ದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ನಿರ್ದೇಶನದ ಮೇರೆಗೆ ಮಂಗಳವಾರ ನರಸಿಂಹರಾಜ ಪೊಲೀಸ್ ಠಾಣೆಯ ಆರಕ್ಷಕ ಸಿಬ್ಬಂದಿಗಳ ಭದ್ರತೆಯೊಂದಿಗೆ ತೆರವುಗೊಳಿಸಲಾಯಿತು.
ಈ ಸಂದರ್ಭದಲ್ಲಿ ವಲಯ ಅಧಿಕಾರಿಗಳಾದ ಜಿ.ಮೋಹನ್, ಹೆಚ್.ಎನ್.ರವೀಂದ್ರಕುಮಾರ್, ಸರ್ವೇಯರ್ಗಳು ಹಾಗೂ ಸಂಬಂಧಪಟ್ಟ ಸಹಾಯಕ, ಕಿರಿಯ ಅಭಿಯಂತರುಗಳು ಹಾಜರಿದ್ದರು ಎಂದು ಮುಡಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ರವಿವಾರ ಬೆಳಗ್ಗೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಹೊಸ ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೊಬ್ಬ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಬ್ಯಾಗ್ ಸೇತುವೆಯಲ್ಲಿ ಬಿಟ್ಟು ನೇತ್ರಾವತಿ ನದಿಗೆ ಹಾರಿದ್ದಾನೆ ಎಂದು ಹೇಳಲಾಗುತ್ತಿದೆ ವ್ಯಕ್ತಿ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ
ಮೈಸೂರು : ಅರಮನೆ ಆವರಣದಲ್ಲಿ ನಂದಿಧ್ವಜಕ್ಕೆ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೂಜೆ ಸಲ್ಲಿಸಿದರು. ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಬಳಿಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ಆನಂತ್ರ ಅಭಿಮನ್ಯು ಹೊತ್ತಿದ್ದಂತ ಅಂಬಾರಿಯಲ್ಲಿನ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
ಇಂದು ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ಮೈಸೂರು ದಸರಾ -2020 ಸರಳವಾಗಿ ಆಚರಿಸಲಾಗುತ್ತಿದೆ. ಇಂದು ಜಂಬೂಸವಾರಿ ಕೂಡ ನಡೆದಿದ್ದು, ಮಧ್ಯಾಹ್ನ 2.59ರಿಂದ 3.20ರ ಅವಧಿಯಲ್ಲಿ ನಂದಿಧ್ವಜಕ್ಕೆ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪೂಜೆ ಸಲ್ಲಿಸಲಿದರು.
ಅಂಬಾರಿ ಕಟ್ಟುವ ಕಾರ್ಯ ಪೂರ್ಣಗೊಂಡ ನಂತ್ರ, ಅಭಿಮನ್ಯುವಿನ ಮೇಲೆ ಚಾಮುಂಡೇಶ್ವರಿ ವಿರಾಜಮಾನವಾಗಿ ಕಂಗೊಳಿಸುತ್ತಿತ್ತು. ಇದೇ ಮೊದಲ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿ ಹೊತ್ತು ಸಾಗಲು ರೆಡಿಯಾಗಿತ್ತು. ಚಿನ್ನದ ಅಂಬಾರಿ ಹೊತ್ತು ರಾಜಗಾಂಬೀರ್ಯದಲ್ಲಿ ವೇದಿಕೆಯತ್ತ ದಸರಾ ಗಜಪಡೆ ತೆರಳಿತು. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ನಂತ್ರ, ಸಿಎಂ ಯಡಿಯೂರಪ್ಪ ಅವರು, ಅರಮನೆ ಆವರಣಕ್ಕೆ ವಿಶೇಷ ಬಸ್ ಮೂಲಕವೇ ಆಗಮಿಸಿದರು. ಇವರೊಂದಿಗೆ ಸಚಿವರು, ಶಾಸಕರು ಹಾಗೂ ಆಹ್ವಾನಿತರಿದ್ದರು.
ಮಕರ ಲಗ್ನದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, 5ನೇ ಬಾರಿಗೆ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು. ಈ ಮೂಲಕ ಜಾಲನೆಗೊಂಡಂತ ಜಂಬೂಸವಾರಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಹೊತ್ತ ಅಭಿಮನ್ಯು ಅರಮನೆಯ ಆವರಣದಲ್ಲಿ ಸಾಗಿತು. ಇದಕ್ಕೆ ಸರಳ ಹಾಗೂ ಕಾವೇರಿ ಸಾಥ್ ನೀಡಿದವು. ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸಾಗಿದಂತ ಜಂಬೂ ಸವಾರಿಯ ಸರಳ ಮೆರವಣಿಗೆ, ಕೇವಲ 30 ರಿಂದ 40 ನಿಮಿಷಗಳಲ್ಲಿಯೇ ಮುಕ್ತಾಯಗೊಳ್ಳಲಿದೆ.
ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್ಬುಕ್ ಪೇಜ್ ಲಿಂಕ್ https://www.facebook.com/mysorevarthe/ ಹಾಗೂ ಯೂಟೂಬ್ ಲಿಂಕ್ https://www.youtube.com/playlist?list=PLvhg-sbsHV_ybFvK6Iu7HLoaOmh3yCcVC ನಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಮನೆಯಲ್ಲೆ ಕುಳಿತು ವೀಕ್ಷಿಸಬಹುದು.
ಮೈಸೂರು : ಸರ್ಕಾರ ಅತಿ ಸರಳವಾಗಿ ದಸರಾ ಆಚರಣೆ ನಡೆಸುತ್ತಿರುವುದನ್ನು ವಿರೋಧಿಸಿ, ಮೈಸೂರಿನಲ್ಲಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಯಾರಿ ನಡೆಸಿದ್ದರು. ಬ್ಯಾಂಡ್ ಸೆಟ್ ಜೋಡಿ ಸಾರೋಟಿನಲ್ಲಿ ಮೈಸೂರು ಅರಮನೆ ಮುಂದೆ ದಸರಾ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಇಂತಹ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಶ್ರೀ ವಾಟಾಳ್ ನಾಗರಾಜ್ ರವರು ದಸರಾ ಹಬ್ಬವನ್ನ ಹಾಗು ಚಾಮುಂಡೇಶ್ವರಿ ತಾಯಿ ಭಾವಚಿತ್ರ ಇಟ್ಟು ಬ್ಯಾಂಡ್ ಸೆಟ್ ಜೋಡಿ ಸಾರೋಟಿನಲ್ಲಿ ಮೈಸೂರು ಅರಮನೆ ಮುಂದೆ ದಸರ ಮೆರವಣಿಗೆ ನಡೆಸಲು ಉದ್ದೇಶಿಸಿದ್ದ ವಾಟಾಳ್ ನಾಗರಾಜ್ ಹಾಗು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೋಲೀಸರು. ಬ್ಯಾಂಡ್ ಸೆಟ್ ಸಾರೋಟು ವಶಕ್ಕೆ ಪಡೆದರು. ಇದರಿಂದ ತೀವ್ರ ಕೆರಳಿದ ವಾಟಾಳ್ ನಾಗರಾಜ್ ರವರು ಸರ್ಕಾರದ ಕ್ರಮವನ್ನ ಖಂಡಿಸಿ ಮುಖ್ಯಮಂತ್ರಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಮೈಸೂರು : ಈ ಬಾರಿಯ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ತಂಡ ಸಿದ್ದಗೊಂಡಿದೆ. ನಾಳೆ 750 ಕೆ. ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ, ವಿಜಯ ಮತ್ತು ಕಾವೇರಿ ಕುಮ್ಕಿ ಆನೆಗಳು ಸಾಥ್ ನೀಡಲಿವೆ. ಗೋಪಿ ಮತ್ತು ವಿಕ್ರಮ ನೌಪತ್ ಹಾಗೂ ನಿಶಾನೆ ಆನೆಗಳಾಗಿ ನಾಳಿನ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲಿವೆ.
ಈ ಕುರಿತು ಪಶು ವೈದ್ಯಾಧಿಕಾರಿ ಡಾ. ನಾಗರಾಜ್, ಮಾಹಿತಿ ನೀಡಿದ್ದು ನಾಳಿನ ಮೈಸೂರು ಅರಮನೆಯ ಆವರಣದಲ್ಲಿ ನಡೆಯಲಿರುವಂತ ದಸರಾ ಜಂಬೂಸವಾರಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ತಂಡ ನಿಯೋಜಿಸಲಾಗಿದೆ. 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತು ಸಾಗಲಿದೆ. ಇದರ ಜೊತೆಗೆ ವಿಜಯ ಮತ್ತು ಕಾವೇರಿ ಕುಮ್ಕಿ ಆನೆಗಳು ಸಾಥ್ ನೀಡಲಿವೆ ಎಂಬುದಾಗಿ ತಿಳಿಸಿದರು.
ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ.
ಕೊರೊನಾ ಭೀತಿಯಿಂದಾಗಿ ಈ ಬಾರಿ ಮೈಸೂರು ಅರಮನೆ ಆವರಣಕ್ಕೆ ಮಾತ್ರವೇ ಜಂಬೂಸವಾರಿ ಮೆರವಣಿಗೆ ಸೀಮಿತವಾಗಿದೆ. ಅಲ್ಲದೇ ಪ್ರತಿ ವರ್ಷ 5.5 ಕಿ. ಮೀ ಸಾಗುತ್ತಿದ್ದ ಜಂಬೂಸವಾರಿ ಮೆರವಣಿಗೆ ಈ ಬಾರಿ ಕೇವಲ 400 ಮೀಟರ್ ಅಂತರದಲ್ಲೇ ಅಂತ್ಯಗೊಳ್ಳಲಿದೆ. ಈ ಬಾರಿ 30 ರಿಂದ 40 ನಿಮಿಷಗಳಲ್ಲೇ ಜಂಬೂಸವಾರಿ ಮೆರವಣಿಗೆ ಪೂರ್ಣಗೊಳ್ಳಲಿದೆ.
ನಾಳೆ ಮಧ್ಯಾಹ್ನ 2:59 ರಿಂದ 3:20 ರೊಳಗಿನ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ನಂದಿಧ್ವಜಕ್ಕೆ ಸಂಪ್ರದಾಯಬದ್ದವಾಗಿ ಪೂಜೆ ನೆರವೇರಿಕೆ ಮಾಡಲಿದ್ದಾರೆ. ಬಳಿಕ 3:40 ರಿಂದ 4:15 ರೊಳಗಿನ ಶುಭ ಕುಂಭ ಲಗ್ನದಲ್ಲಿ ಅಭಿಮನ್ಯುವಿನ ಮೆಲೆ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ.
ನಾಳಿನ ಜಂಬೂಸವಾರಿಯಲ್ಲಿ 4 ಕಲಾತಂಡ, ಅಶ್ವಾರೋಹಿ ದಳದ 2 ತುಕಡಿ, 1 ಸ್ತಬ್ದ ಚಿತ್ರ, ಕರ್ನಾಟಕ ಪೊಲೀಸ್ ವಾದನದ ಆನೆಗಾಡಿ ಸಾಗಲಿವೆ. ಇದಕ್ಕಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರತಿ ವರ್ಷ ಲಕ್ಷಾಂತರ ಜನರ ವೀಕ್ಷಣೆಗೆ ಸಾಕ್ಷಿಯಾಗುತ್ತಿದ್ದ ಜಂಬೂಸವಾರಿ ಮೆರವಣಿಗೆ, ಈ ಬಾರಿ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿ ಕೇವಲ 300 ಜನರು ಮಾತ್ರ ಅರಮನೆ ಅಂಗಳ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಈ ಎಲ್ಲಾ ಕಾರಣದಿಂದಾಗಿ ಮೈಸೂರು ಅರಮನೆಯ ಆಸುಪಾಸಿನಲ್ಲಿ ಜನಜಂಗುಳಿ ಉಂಟಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮೈಸೂರು: ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 04 ರಂದು ಭಾನುವಾರ ಮೈಸೂರು ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕಾ ಕ್ರೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಆದೇಶ ಹೊರಡಿಸಿರುತ್ತಾರೆ.
ಮೈಸೂರು ನಗರದ ವಿ.ವಿ.ಮೊಹಲ್ಲಾದಲ್ಲಿರುವ ನಿರ್ಮಲ ಪ್ರೌಢಶಾಲೆ, ಕೃಷ್ಣಮೂರ್ತಿಪುರಂನಲ್ಲಿರುವ ಎಂ.ಎಂ.ಕೆ ಅಂಡ್ ಎಸ್.ಡಿ.ಎಂ ಬಾಲಕಿಯರ ಪಿ.ಯು ಕಾಲೇಜು, ಸೀತಾವಿಲಾಸ ರಸ್ತೆಯಲ್ಲಿರುವ ಮರಿಮಲ್ಲಪ್ಪ ಪಿ.ಯು ಕಾಲೇಜು, ಜೆ.ಎಲ್.ಬಿ ರಸ್ತೆಯಲ್ಲಿರುವ ಮಹಾರಾಜ ಸರ್ಕಾರಿ ಪಿ.ಯು ಕಾಲೇಜು, ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯ, ಸರಸ್ವತಿಪುರಂನಲ್ಲಿರುವ ಟಿ.ಟಿ.ಎಲ್ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್, ಲಕ್ಷ್ಮೀಪುರಂನಲ್ಲಿರುವ ಕ್ರಿಸ್ಟ್ ದಿ ಕಿಂಗ್ಸ್ ಕಾನ್ವೆಂಟ್, ನ್ಯೂ ಸಯ್ಯಾಜಿ ರಸ್ತೆಯಲ್ಲಿರುವ ಡಿ.ಬನುಮಯ್ಯ ಸ್ವತಂತ್ರ ಪಿ.ಯು ಕಾಲೇಜು, ಸರಸ್ವತಿಪುರಂನಲ್ಲಿರುವ ವಿಜಯ ವಿಠಲ ಸಂಯುಕ್ತ ಪಿ.ಯು ಕಾಲೇಜು, ಜಯಲಕ್ಷ್ಮಿಪುರಂನಲ್ಲಿರುವ ಎಸ್.ಬಿ.ಬಿ.ಆರ್ ಮಹಾಜನ ಪಿ.ಯು ಕಾಲೇಜು, ಒಂಟಿಕೊಪ್ಪಲಿನಲ್ಲಿರುವ ಸರ್ಕಾರಿ ಪಿ.ಯು ಕಾಲೇಜು, ನಜರ್ಬಾದ್ನಲ್ಲಿರುವ ಸರ್ಕಾರಿ ವಿಭಜಿತ ಮಹಾರಾಜ ಪಿ.ಯು ಕಾಲೇಜು, ಜಯಲಕ್ಷ್ಮಿಪುರಂನಲ್ಲಿರುವ ಮಹಾಜನ ಪಬ್ಲಿಕ್ ಸ್ಕೂಲ್ ಮತ್ತು ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಪಿ.ಯು ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷರಾದ ಸುಧಾಮೂರ್ತಿ ಅವರು ಮೈಸೂರು ಮೃಗಾಲಯದ ಪ್ರಾಣಿ-ಪಕ್ಷಿಗಳ ಪಾಲನೆ ಪೋಷಣೆಗಾಗಿ ಮತ್ತೊಮ್ಮೆ 20 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಮೃಗಾಲಯದ ಪ್ರಾಣಿಗಳ ಆರೋಗ್ಯ ಮತ್ತು ನಿರ್ವಹಣೆಗಾಗಿ ಉದಾತ್ತವಾಗಿ ದೇಣಿಗೆ ನೀಡುತ್ತಾ ಬಂದಿರುವ ಸುಧಾಮೂರ್ತಿ ಅವರು ಈ ಹಿಂದೆ ಕೋವಿಡ್-19 ಹಿನ್ನೆಲೆ ಮೇ 11 ರಂದು 20 ಲಕ್ಷ ರೂ. ದೇಣಿಗೆ ನೀಡಿದ್ದರು. ಈಗ ಮತ್ತೊಮ್ಮೆ ಸೆಪ್ಟೆಂಬರ್ 25 ರಂದು ಮೃಗಾಲಯ ಪ್ರಾಣಿಗಳ ಕಲ್ಯಾಣಕ್ಕಾಗಿ 20 ಲಕ್ಷ ರೂ. ನೀಡಿದ್ದಾರೆ. ಮೃಗಾಲಯದ ಬಗ್ಗೆ ಅವರಿಗಿರುವ ಅಭಿಮಾನ, ಕಾಳಜಿಗೆ ಮೃಗಾಲಯವು ಅಭಿನಂದಿಸುತ್ತದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೃಗಾಲಯ ಪ್ರಾಣಿಗಳ ದತ್ತು ಸ್ವೀಕಾರ
ಮೈಸೂರು ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ ಅಡಿಯಲ್ಲಿ ಬೆಂಗಳೂರಿನ ಯಶ್ಮಿಕ ಎಂಬುವವರು 1,75,000 ರೂ. ಗಳನ್ನು ಪಾವತಿಸಿ ‘ಏಷ್ಯಾಟಿಕ್ ಆನೆ’ ಅನ್ನು 26-09-2020 ರಿಂದ 25-09-2021 ರವರೆಗೆ ದತ್ತು ಸ್ವೀಕರಿಸಿರುತ್ತಾರೆ.
ಬೆಂಗಳೂರಿನ ಚಂದ್ರಶೇಖರ್ ಎಂ.ಪಿ ಎಂಬುವವರು 1 ಸಾವಿರ ರೂ. ಪಾವತಿಸಿ ಲವ್ಬರ್ಡ್ ದಿನೇಶ್ ಕುಂಬ್ಳೆ ಎಂಬುವವರು 2 ಸಾವಿರ ರೂ. ಪಾವತಿಸಿ ರೇನ್ಬೋ ಲೋರಿಕೀಟ್ ಮತ್ತು ಹರೀಶ್ ಎಸ್. ಕೋಲಾರ್ ಎಂಬುವವರು 7,500 ರೂ. ಪಾವತಿಸಿ ಸ್ಮೆಂಡರ್ ಲೋರಿಸ್ ಅನ್ನು 1 ವರ್ಷದ ಅವಧಿಗೆ ದತ್ತು ಸ್ವೀಕರಿಸಿರುತ್ತಾರೆ.
ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಪ್ರಾಣಿಗಳ ಸಂರಕ್ಷಣೆ ಹಾಗೂ ಮೃಗಾಲಯ ನಿರ್ವಹಣೆಗೆ ಕೈಜೋಡಿಸಿದ ಎಲ್ಲರಿಗೂ ಮೃಗಾಲಯವು ಅಭಿನಂದಿಸುತ್ತದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಮೈಸೂರು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2020-21ನೇ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ರಾಜ್ಯ ಸರ್ಕಾರ ಒದಗಿಸಿರುವ ಸಹಾಯಧನ ಮತ್ತು ಬ್ಯಾಂಕುಗಳಿಂದ ಸಾಲವನ್ನು ಒದಗಿಸುವುದು ಅರ್ಜಿ ಆಹ್ವಾನಿಸಿದೆ.
ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿ 1 ಲಕ್ಷ ರೂ.ಗಳಿಂದ 3.00 ಲಕ್ಷ ರೂ.ಗಳಿಗೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ.50 ರಷ್ಟಕ್ಕೆ ಅದರಂತೆ ವಿಶೇಷ ವರ್ಗ ಮತ್ತು ಸಾಮಾನ್ಯ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿ 1 ಲಕ್ಷ ರೂ. ಗಳಿಂದ 3 ಲಕ್ಷ ರೂ.ಗಳಿಗೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ.30ರಷ್ಟಕ್ಕೆ ನಿಗದಿಪಡಿಸಲಾಗಿರುತ್ತದೆ.
18 ರಿಂದ 55 ವರ್ಷದ ಮಹಿಳೆಯರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅಕ್ಟೋಬರ್ 10 ರೊಳಗೆ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 20 ರೊಳಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮೈಸೂರು ನಗರ (0821-2491962), ಮೈಸೂರು ಗ್ರಾಮಾಂತರ (0821-2567940), ತಿ.ನರಸೀಪುರ (08227-261267), ಬಿಳಿಗೆರೆ ಯೋಜನೆ (8221297171), ನಂಜನಗೂಡು (08221-226168), ಹುಣಸೂರು(08222-252254), ಹೆಚ್.ಡಿ ಕೋಟೆ(08228-255320), ಕೃಷ್ಣರಾಜನಗರ(08223-262714), ಪಿರಿಯಾಪಟ್ಟಣ(08223-27474)ಗಳಿಗೆ 3 ಪ್ರತಿಗಳನ್ನು ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ತಾಲ್ಲೂಕು ಕಛೇರಿಗಳಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರು ಹಾಗೂ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು : ಆಗಸ್ಟ್ 29ಕ್ಕೆ ಮೈಸೂರು ಜಿಲ್ಲಾಧಿಕಾರಿಯಾಗಿ ಬಿ.ಶರತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಕೇವಲ ಒಂದೇ ಒಂದು ತಿಂಗಳಿನಲ್ಲಿಯೇ ಇದೀಗ ಅವರನ್ನು ವರ್ಗಾವಣೆ ಮಾಡಿರುವಂತ ರಾಜ್ಯ ಸರ್ಕಾರ, ಅವರ ಸ್ಥಾನಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ವರ್ಗಾವಣೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಧಾರ್ಮಿಕ ಮತ್ತು ಚಾರಿಟಬಲ್ ಎಂಡೋಮೆಂಟ್ ನ ಕಮೀಷನರ್ ಆಗಿದ್ದಂತ ರೋಹಿಣಿ ಸಿಂಧೂರಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದ್ದಾರೆ. ಇದುವರೆಗೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದಂತ ಬಿ.ಶರತ್ ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಿದ್ದಾರೆ.
ಮೈಸೂರು : ರಣದೊಳಗೆ ನಡೆಯುವ ದಸರಾ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಅವಕಾಶಗಳು ಸಿಗುವಂತೆ ಕಾರ್ಯಕ್ರಮ ರೂಪಿಸಬೇಕೆಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು. ಭಾನುವಾರ ದಸರಾ ಸಿದ್ಧತೆಗಳ ಪ್ರಗತಿ ಪರಿಶೀಲನೆ ನಡಸಿದ ಸಚಿವರು, ಸ್ಥಳೀಯ ಕಲಾವಿದರೂ ಅವಕಾಶ ಕೋರಿ ಮನವಿ ಪತ್ರ ನೀಡಿದ್ದಾರೆ. ಅವರಿಗೂ ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಬಾರಿ ಸ್ತಬ್ದ ಚಿತ್ರಗಳಿಗೆ ಅವಕಾಶ ನೀಡಲಾಗುತ್ತಿದೆ. ಕೋವಿಡ್ ಜಾಗೃತಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳನ್ನು ಬಿಂಬಿಸುವ ಸ್ತಬ್ದಚಿತ್ರಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
ಗಾನಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯ ಅವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಒಂದು ಕಾರ್ಯಕ್ರಮವನ್ನು ದಸರಾ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸೇರಿಸಬೇಕೆಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.
ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ 250 ಜನರಿಗೆ, ದಸರಾ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ 1 ಸಾವಿರ ಜನರಿಗೆ ಹಾಗೂ ಜಂಬೂ ಸವಾರಿಗೆ 2 ಸಾವಿರ ಜನರಿಗೆ ಅವಕಾಶ ಕಲ್ಪಿಸಲು ಅನುಮತಿ ಕೋರಲಾಗಿದೆ ಎಂದು ಸಚಿವರು ತಿಳಿಸಿದರು. ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಶರತ್ ಬಿ. ನಗರ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಡಿ. ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು : 11 ವಾರದ ಬಳಿಕ ಮೈಸೂರು ಮೃಗಾಲಯ ಪುನಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾವೇ ನಮ್ಮ ಜೊತೆಗೆ ಬಂದ 50 ಮಂದಿಗೆ ಟಿಕೆಟ್ ಪಡೆಯುವ ಮೂಲಕ ಪ್ರವೇಶಕ್ಕೆ ಚಾಲನೆ ನೀಡಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಇದೇವೇಳೆ ತಿಳಿಸಿದರು.
ಪ್ರತಿ ದಿನಕ್ಕೆ 10 ಸಾವಿರ ಪ್ರವಾಸಿಗರು ಭೇಟಿ ಕೊಡಲು ಸದ್ಯದ ಪರಿಸ್ಥಿತಿಯಲ್ಲಿ ಆಗಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಎಲ್ಲರಿಗೂ ವೀಕ್ಷಣೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಖಾಸಗಿಕರಣ ಮಾಡುತ್ತಿರುವುದು ಸದುದ್ದೇಶದಿಂದಲೇ ವಿನಹ ಬೇರೆ ಯಾವುದೇ ಕಾರಣವೂ ಇಲ್ಲಿಲ್ಲ. ಸಕ್ಕರೆ ಕಾರ್ಖಾನೆಗಳು ಉಳಿದು, ಬೆಳೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ಹೇಳಿದರು.
ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಹರ್ಷವರ್ಧನ್, ಡಿಸಿಪಿ ಪ್ರಕಾಶ್ಗೌಡ, ಮೇಯರ್ ತಸ್ನಿಂ, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕೀಲಾರ ಸೇರಿ ಇತರರು ಇದ್ದರು.
ಮೈಸೂರು : ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ಜೂನ್ 08 ರಿಂದ ಷರತ್ತಿಗೆ ಒಳಪಟ್ಟು ತೆರೆಯಲು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಅನುಮತಿ ನೀಡಿದ್ದಾರೆ.
ಮೈಸೂರು ಜಿಲ್ಲಾಧಿಕಾರಿಗಳು ಕರ್ನಾಟಕ ಸಾಂಕ್ರಾಮಿಕ ರೋಗಗಳು ಕೋವಿಡ್-19 ರೆಗ್ಯೂಲೇಷನ್-2020ರ ನಿಯಮ 12 ರಲ್ಲಿ ಹಾಗೂ disaster management act 2005 ಕಲಂ 30(2) ಮತ್ತು 34 ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಆದೇಶ ಹೊರಡಿಸಿದ್ದಾರೆ.
ಈ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರಿಂದ ಆಗಬಹುದಾದ ಸೋಂಕು ಹರಡುವುದನ್ನು ತಡೆಗಟ್ಟಲು ಹಲವಾರು ಷರತ್ತುಗಳನ್ನು ಅವರು ವಿಧಿಸಿದ್ದಾರೆ. ಕಂಟೈನ್ಮೆಂಟ್ ವಲಯಗಳಲ್ಲಿ ಕಂಡುಬರುವ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ತೆರೆಯುವಂತಿಲ್ಲ. ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ ಅಂತಹ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಂಡು ಮುಖಗವಸನ್ನು ತಪ್ಪದೇ ಧರಿಸಬೇಕು ಹಾಗೂ ದೇವಾಲಯಗಳಲ್ಲಿ ಸೋಪ್ನಿಂದ ಕೈತೊಳೆಯಲು ಹಾಗೂ ಆಲ್ಕೊಹಾಲ್ ಇರುವ ಹ್ಯಾಂಡ್ ಸ್ಯಾನಿಟೈಸರ್ ಉಪಯೋಗಿಸಲು ವ್ಯವಸ್ಥೆ ಮಾಡಬೇಕು. ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಕಡ್ಡಾಯವಾಗಿ ಹ್ಯಾಂಡ್ ಕರ್ಚಿಪ್ ಅಥವಾ ಮೊಣಕೈಯಿಂದ ಮುಚ್ಚಿಕೊಳ್ಳಬೇಕು.
ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳ ಪ್ರವೇಶದ್ವಾರದಲ್ಲಿ ಸ್ಯಾನಿಟೈಸರ್ ನೀಡಲು ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು ಹಾಗೂ ಸ್ಮಾರ್ಟ್ಫೋನ್ ಹೊಂದಿರುವವರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಅನ್ನು ಹೊಂದಿರಬೇಕು. ದೇವಾಲಯಗಳಲ್ಲಿ ಕೋವಿಡ್-19 ವೈರಾಣು ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಶ್ವತ ಫಲಕ ಅಳವಡಿಸುವುದು ಹಾಗೂ ವಿಡಿಯೋ-ಆಡಿಯೋ ಕ್ಲಿಪ್ಗಳ ಮೂಲಕ ಪ್ರಚಾರ ಮಾಡಬೇಕು.
ಭಕ್ತಾಧಿಗಳು ತಮ್ಮ ಶೂ, ಚಪ್ಪಲಿಗಳನ್ನು ಅವರು ಬಂದಿರುವ ವಾಹನದಲ್ಲೇ ಬಿಡಬೇಕು. ಕುಟುಂಬದವರು ಚಪ್ಪಲಿಗಳನ್ನು ಅವರೇ ಪ್ರತ್ಯೇಕವಾಗಿ ಇಡುವ ವ್ಯವಸ್ಥೆ ಮಾಡಬೇಕು. ಪಾರ್ಕಿಂಗ್ ಸ್ಥಳ ಹಾಗೂ ಹೊರಗೆ ಗುಂಪು ಗೂಡದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಕ್ಯೂ ಲೈನ್ನಲ್ಲಿ ಆರು ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕ್ರಮ ವಹಿಸಬೇಕು. ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು.
ದೇವಾಲಯ ಪ್ರವೇಶಕ್ಕೂ ಮುಂಚೆ ಸಾರ್ವಜನಿಕರಿಗೆ ಸೋಪಿನಿಂದ ಕೈ ಹಾಗೂ ಕಾಲು ತೊಳೆಯಲು ವ್ಯವಸ್ಥೆ ಮಾಡಬೇಕು. ವಿಗ್ರಹಗಳು ಹಾಗೂ ಪವಿತ್ರ ಗ್ರಂಥಗಳನ್ನು ಮುಟ್ಟುವುದನ್ನು ನಿಷೇಧಿಸಲಾಗಿದೆ. ಧಾರ್ಮಿಕ ಸಭೆ, ಸಮಾರಂಭಗಳು, ಜಾತ್ರೆಗಳು, ಉತ್ಸವಗಳನ್ನು ಆಯೋಜಿಸುವುದನ್ನು ಹಾಗೂ ಪರಸ್ಪರ ಸಂಪರ್ಕಿಸುವುದನ್ನು ನಿಷೇಧಿಸಿದೆ. ದೇವಾಲಯದಲ್ಲಿ ಸಾಮೂಹಿಕವಾಗಿ ಹಾಡಲು ಅವಕಾಶವಿರುವುದಿಲ್ಲ. ಸಾಮೂಹಿಕವಾಗಿ ಕೂರಲು ನೆಲಹಾಸು ಬಳಸಬಾರದು. ಭಕ್ತಾದಿಗಳು ಅವರ ಸ್ವಂತ ನೆಲಹಾಸು ಬಟ್ಟೆಯನ್ನು ತಂದು ಹೋಗುವಾಗು ವಾಪಸ್ ಕೊಂಡೊಯ್ಯಬೇಕು.
ಧಾರ್ಮಿಕ ಸ್ಥಳಗಳನ್ನು ಕ್ರಿಮಿನಾಶಕ ಬಳಸಿ ಆಗಾಗ್ಗೆ ಶುಚಿಗೊಳಿಸಬೇಕು. ಭಕ್ತಾದಿಗಳು ಹಾಗೂ ನೌಕರರು ಬಳಸಿ ಬಿಟ್ಟು ಹೋಗುವ ಮಾಸ್ಕ್ ಹಾಗೂ ಗ್ಲೌಸ್ಗಳನ್ನು ಕ್ರಮಬದ್ಧವಾಗಿ ನಾಶಗೊಳಿಸುವುದು. ಉಸಿರಾಟದ ತೊಂದರೆ, ಜ್ವರ, ಕೆಮ್ಮು, ನೆಗಡಿಗಳಂತಹ ರೋಗ ಲಕ್ಷಣಗಳು ಕಂಡುಬಂದರೇ ಅಂತಹ ವ್ಯಕ್ತಿಗಳಿಗೆ ದೇವಾಲಯದ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ಅವಕಾಶವಿರುವುದಿಲ್ಲ. ದರ್ಶನಕ್ಕೆ ಬರುವವರು ಹೂ, ಹಣ್ಣು, ಕಾಯಿ ಮುಂತಾದ ಪೂಜಾ ಸಾಮಗ್ರಿಗಳನ್ನು ತರಲು ಅವಕಾಶವಿರುವುದಿಲ್ಲ. ಹಾಗೂ ಪ್ರಸಾದ, ತೀರ್ಥ ನೀಡಲು ಹಾಗೂ ಪ್ರೋಕ್ಷಿಸಲು ಅವಕಾಶವಿರುವುದಿಲ್ಲ.
65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ 10 ವರ್ಷ ಕೆಳಗಿನ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಪ್ರವೇಶ ನಿಷೇಧಿಸಲಾಗಿದೆ. ದೇವಾಲಯದ ವಸತಿಗೃಹದಲ್ಲಿ ತಂಗಲು ಅವಕಾಶವಿರುವುದಿಲ್ಲ. ಅಲ್ಲದೆ ಸದ್ಯದ ಮಟ್ಟಿಗೆ ದಾಸೋಹ ನಡೆಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ತಿಳಿಸಿದ್ದಾರೆ.
ಮೈಸೂರು : ಜಿಲ್ಲೆಯ ಮೈಸೂರು ಮಹಾರಾಜರ ಜೊತೆಯಲ್ಲಿ ವೇದಿಕೆ ಹಂಚಿಕೊಂಡು ಹಸಿರು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನ್ನ ಪುಣ್ಯ. ಅವರೂ ಪರಿಸರದ ಬಗ್ಗೆ ಕಾಳಜಿಯನ್ನು ಹೊಂದಿದ್ದಾರೆ. ಮೈಸೂರು ಜಿಲ್ಲೆಯನ್ನು ಹಸಿರೀಕರಣಗೊಳಿಸುವುದರ ಜೊತೆಗೆ ಸ್ವಚ್ಛನಗರಿಯನ್ನಾಗಿ ಮಾಡೋಣ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಮೈಸೂರು ಜಿಲ್ಲಾಡಾಳಿತ ಹಾಗೂ ಅರಣ್ಯ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಜೆ.ಪಿ.ನಗರದ ಮಕ್ಕಗಣಪತಿ ದೇವಸ್ಥಾನ ಸಮೀಪದ ಎ ಬ್ಲಾಕ್ ನಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾಡಳಿತ ವತಿಯಿಂದ ಸುಮಾರು 27 ಲಕ್ಷ ಸಸಿಗಳನ್ನು ಜಿಲ್ಲೆಯಲ್ಲಿ ನೆಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಪ್ರತಿ ಹಳ್ಳಿಯಲ್ಲಿ 5 ಲಕ್ಷ ಗಿಡಗಳನ್ನು ರಾಜ್ಯಾದ್ಯಂತ ನೆಡುವ ಕೆಲಸಕ್ಕೆ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಮುಂದಾಗಿದ್ದಾರೆ. ಜಿಲ್ಲೆಯಲ್ಲೂ ನೆಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವರು ಹೇಳಿದರು.
ನಾವು ಈಗಾಗಲೇ ಜಿಲ್ಲಾಧಿಕಾರಿಗಳು, ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ಕಾರ್ಪೋರೇಶನ್ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳ ಸಹಿತ ವಿವಿಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಅಲ್ಲಿ ಗಿಡ ನೆಡುವಾಗ ಹಾಗೂ ನೆಟ್ಟ ಮೇಲೆ ಯಾವ ರೀತಿ ಸಮಸ್ಯೆಯಾಗುತ್ತದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಅಭಿವೃದ್ಧಿ ಕಾರ್ಯಗಳಿಗೋಸ್ಕರ ನೆಟ್ಟಿರುವ ಗಿಡಗಳನ್ನು ಕಡಿಯಲಾಗುತ್ತದೆ. ಜೊತೆಗೆ ವಿದ್ಯುತ್ ಕಂಬಗಳಡಿ, ರಸ್ತೆ ಅಗಲೀಕರಣಗಳಂತಹ ಸಂದರ್ಭದಲ್ಲಿ ತೊಂದರೆಯಾಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.
ಲೆಕ್ಕ ಕೇಳಿದರೆ ಬದ್ಧತೆ ಇರುತ್ತೆ
ಮೈಸೂರು ಹಸಿರೀಕರಣ ಮಾಡುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ 27 ಲಕ್ಷ ಗಿಡಗಳನ್ನು ನೆಡುವ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಅನೇಕ ಇಲಾಖೆಗಳು ಸೇರೆದಂತೆ ಸಂಘ-ಸಂಸ್ಥೆಗಳು ಗಿಡವನ್ನು ಪಡೆಯಲು ಮುಂದೆ ಬಂದವು. ಹೀಗಾಗಿ ಪಡೆದ ಗಿಡಗಳ ನಿರ್ವಹಣೆ ಹೇಗಾಗುತ್ತದೆ ಎಂಬುದು ಮುಖ್ಯ. ಆ ನಿಟ್ಟಿನಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುವುದು. ಇದರಿಂದ ಬೆಳೆಸುವವರಿಗೂ ಬದ್ಧತೆ ಇರುತ್ತದೆ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟದಲ್ಲಿ ಗಿಡ ನೆಡುವ ಸಂದರ್ಭದಲ್ಲಿ ಯಾವುದಾದರೂ ಒತ್ತುವರಿಗಳು ಆಗಿದ್ದರೆ ಅದನ್ನು ಬಿಡಿಸಿಕೊಡುವ ಹಾಗೂ ಫೆನ್ಸಿಂಗ್ ಮಾಡುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಚಿವರನ್ನು ಆಹ್ವಾನಿಸಿದ್ದೇನೆ. ಅವರ ಜೊತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಸ್ಯಾನಿಟರಿ ಸಮಸ್ಯೆಗೆ ಶೀಘ್ರ ಮುಕ್ತಿ
ಸ್ಯಾನಿಟರಿ ನೀರು ರಸ್ತೆಗಳಿಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅದನ್ನು ನಗರಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ಶೀಘ್ರವಾಗಿ ಪರಿಹಾರ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮುಖ್ಯ ಅತಿಥಿಗಳಾದ ಮಹಾರಾಜ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಅರಣ್ಯ ಸಂರಕ್ಷಣೆ ನಮಗೆ ಬಹುದೊಡ್ಡ ಸವಾಲಾಗಿದೆ. ನಾವು ಕಾಡು, ಪ್ರಾಣಿಪಕ್ಷಿಗಳ ಜೊತೆ ಯಾವ ರೀತಿ ಬದುಕಬೇಕೆಂಬುದನ್ನು ಅರ್ಥ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಾವು ಮೈಸೂರು ಚಾಮುಂಡಿ ಬೆಟ್ಟಕ್ಕೆ ತಾಯಿ ಪೂಜೆಗೆಂದು ಹೋಗಿ ಬರುತ್ತೇವೆ. ಆದರೆ, ಅಲ್ಲಿಗೆ ಹೋಗಿರುವವರು ಬರುವಾಗ ರಸ್ತೆ ತುಂಬೆಲ್ಲ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಿಸಾಡಿರುವುದನ್ನು ನಾನು ಕಂಡಿದ್ದೇನೆ. ಆದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದಲ್ಲದೆ, ಅಲ್ಲಿ ಯಾವುದನ್ನೂ ಬಿಸಾಡದೆ ನಗರಕ್ಕೆ ವಾಪಸಾದ ಬಳಿಕ ನಿಗದಿತ ತ್ಯಾಜ್ಯ ಜಾಗದಲ್ಲಿ ಹಾಕೋಣ ಎಂದು ತಿಳಿಸಿದರು.
ಶಾಸಕರಾದ ಎಸ್.ಎ.ರಾಮದಾಸ್ ಮಾತನಾಡಿ, ಪ್ರತಿಯಿಂದಕ್ಕೂ ಮಾಲೀಕತ್ವ ಇರಬೇಕು. ಆ ನಿಟ್ಟಿನಲ್ಲಿ ಮುಂದಿನ ಭವಿಷ್ಯವನ್ನು ಬರೆಯಬಹುದಾಗಿದ್ದು, ಹೀಗಾಗಿ ಜುಲೈ 1 ನೇ ತಾರೀಖಿನಿಂದ ಕೃಷ್ಣರಾಜ ಕ್ಷೇತ್ರದ 80 ಸಾವಿರ ಮನೆಗೆ ತಲಾ 2 ಗಿಡಗಳನ್ನು ನೀಡುವ ಸಂಕಲ್ಪ ಮಾಂದಿದ್ದೇವೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ನಮಗೆ ನೀರು, ಆಹಾರ ಸಿಗುವುದು ಪರಿಸರದ ಚೈನ್ ಮೂಲಕವೇ ಆಗಿದೆ. ಹೀಗಾಗಿ ಇದನ್ನು ಉಳಿಸಿ-ಬೆಳೆಸಿಕೊಂಡು ಹೋಗುವ ಕರ್ತವ್ಯ ನಮ್ಮದಾಗಿದೆ ಎಂದರು.
ಶಾಸಕರಾದ ಎಸ್.ಎ. ರಾಮದಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಎಸ್. ಶ್ರೀವತ್ಸ, ಮುಖಂಡರಾದ ರಾಜೀವ್, ಪೊಲೀಸ್ ಆಯುಕ್ತರಾದ ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿದಂತೆ ಇತರರು ಇದ್ದರು.
ಮೈಸೂರು : ನಾಳೆ ರಂಜಾನ್ ಪವಿತ್ರ ಹಬ್ಬ. ಇಂತಹ ಹಬ್ಬದಂದು ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೊಡಿ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪ್ರಾರ್ಥನೆಯಲ್ಲಿ ಭಾಗವಹಿಸುತ್ತೇವೆ. ಈ ಮೂಲಕ ರಂಜಾನ್ ಪ್ರಾರ್ಥನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡಗಳು ಹೆಚ್ಚುತ್ತಿವೆ.
ಇದೀಗ ಇದೇ ಒತ್ತಯವನ್ನು ಹಾಕಿರುವ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ತನ್ನೀಂ, ಮೈಸೂರಿನ ಈದ್ಗಾ ಮೈದಾನದಲ್ಲಿ ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನಗೆ ಅವಕಾಶ ಮಾಡಿಕೊಡಿ. ಇಲ್ಲವಾದಲ್ಲಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾದರು ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ದೆಹಲಿ: ಕಸ ಮುಕ್ತನಗರಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟ ಮಾಡಿದ್ದು, ಕರ್ನಾಟಕದ ಮೈಸೂರು ಕೂಡ ಸ್ಥಾನವನ್ನು ಪಡೆದುಕೊಂಡಿದೆ. ಈ ಪಟ್ಟಿಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಟಿಸಿದ್ದು, ಛಅಂಬಿಕಾಪುರ, ಗುಜರಾತ್ನ ರಾಜ್ಕೋಟ್, ಕರ್ನಾಟಕದ ಮೈಸೂರು, ಸಂಸದದಲ್ಲಿ ಇಂದೋರ್ ಮತ್ತು ಮಹಾರಾಷ್ಟ್ರದ ನವೀ ಮುಂಬಯಿಗೆ 5 ಸ್ಟಾರ್ ರೇಟಿಂಗ್ ನೀಡಲಾಗಿದೆ. ಇದಲ್ಲದೆ, ಹರಿಯಾಣ, ನವದೆಹಲಿಯ ಕರ್ನಾಲ್, ಆಂಧ್ರಪ್ರದೇಶದ ತಿರುಪತಿ ಮತ್ತು ವಿಜಯವಾಡ, ಚಂಡೀಗಡ ತ್ತೀಸ್ಗಡ್ನ ಭಿಲಾಯ್ ನಗರ, ಗುಜರಾತ್ನ ಅಹಮದಾಬಾದ್ಗೆ ಮೂರು ಸ್ಟಾರ್ ರೇಟಿಂಗ್ ಸಿಕ್ಕಿದೆ. ದೆಹಲಿ ಕ್ಯಾಂಟ್, ವಡೋದರಾ, ರೋಹ್ಟಕ್ ನಗರಗಳಲ್ಲಿ ಸ್ಟಾರ್ ರೇಟಿಂಗ್ ಪಡೆದುಕೊಂಢಿದೆ.
Delhi: Union Housing and Urban Affairs Minister Hardeep Singh Puri announces the results of Garbage Free Star Rating- Ambikapur in Chhattisgarh, Rajkot in Gujarat, Mysore in Karnataka, Indore in MP and Navi Mumbai in Maharashtra get 5-star rating pic.twitter.com/3YvQWNeyAf
ಮೈಸೂರು : ಜಿಲ್ಲೆಯ ಭೋಗಾದಿಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳಾದ ಸೋಮೇಶ್ವರನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಮೈಸೂರು ಕೊರೋನಾ ಮುಕ್ತವಾಗುವತ್ತ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾಡಾಳಿತ ಮತ್ತು ಜನಪ್ರತಿನಿಧಿಗಳ ಶ್ರಮ ಅಧಿಕವಾಗಿದೆ. ಈ ವೇಳೆ ಎಲ್ಲರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸ್ವಚ್ಛತೆಗೆ ಆದ್ಯತೆ, ಜನಮಾನಸದಲ್ಲಿ ಜಾಗೃತಿ ಉಂಟುಮಾಡಬೇಕೆಂಬ ಆಶಯ ವ್ಯಕ್ತಪಡಿಸಿದರು.
ಹೊರ ಜಿಲ್ಲೆಗಳು, ದೇಶಗಳಿಂದ ಬರುತ್ತಿರುವವರನ್ನು ಹೋಂ ಕ್ವಾರಂಟೇನ್ ಮಾಡಿಸಲಾಗುತ್ತಿದ್ದು, ಇದು ಉತ್ತಮ ಕ್ರಮ. ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗಲಿ, ಮುಂದೂ ಸಹ ಕೊರೋನಾ ಹೀಗೇ ಇರುವುದರಿಂದ ಸುರಕ್ಷತಾ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ. ಮತ್ತೊಮ್ಮೆ ಮೈಸೂರು ಹಸಿರಲಾಗಲಿ, ಸಾಂಸ್ಕೃತಿಕ ಜಿಲ್ಲೆಯತನವನ್ನು ಮತ್ತೆ ಗಳಿಸಿಕೊಳ್ಳಲಿ ಎಂದು ಸ್ವಾಮೀಜಿ ತಿಳಿಸಿದರು.
ಇನ್ನು ಶಾಲೆಗಳ ಪ್ರಾರಂಭಕ್ಕೆ ಸಂಬಂಧಿಸಿದಂತೆ ಆಧುನಿಕ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಹಲವು ಕಡೆ ಆನ್ಲೈನ್ ತರಗತಿಗಳು ಆರಂಭವಾಗಿವೆ. ಆದರೆ, ಪ್ರಾಕ್ಟಿಕಲ್ ತರಗತಿಗಳು ಸದ್ಯಕ್ಕೆ ಕಷ್ಟ. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ತರಗತಿಗಳನ್ನು ನಡೆಸಬಹುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಹಣ ದುರುಪಯೋಗದ ವಿರುದ್ಧ ಕ್ರಮ
ಸಹಕಾರ ಸಂಘಗಳಲ್ಲಿ ಅಕ್ರಮ ಇದ್ದರೆ ಸಹಿಸುವುದಿಲ್ಲ. ಯಾವುದಾದರೂ ಸಂಘ ಸಂಸ್ಥೆಗಳಲ್ಲಿ ದುಡ್ಡು ಕಟ್ಟಿಸಿಕೊಂಡು ಮೋಸ ಮಾಡಿದ್ದರೆ ಕ್ರಮ ಅನಿವಾರ್ಯ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಎಪಿಎಂಸಿಗೆ ಯಾವುದೇ ತೊಂದರೆಯಾಗದು. ಉದಾಹರಣೆಗೆ ಗುಂಡ್ಲುಪೇಟೆಯಲ್ಲಿ ಬೆಳೆದ ರೈತ ರಾಜ್ಯದ ಯಾವ ಎಪಿಎಂಸಿ ಇಲ್ಲವೇ ಯಾವುದೇ ಭಾಗದಲ್ಲಿ ಮಾರಾಟ ಮಾಡಬಹುದು. ಎಪಿಎಂಸಿ ಕಮಿಟಿಗೆ ಇರುವ ಅಧಿಕಾರ ತುಸು ತಗ್ಗಲಿದೆ ಅಷ್ಟೇ. ಶೇಕಡಾ ಒಂದೂವರೆಯಷ್ಟು ಬರುತ್ತಿದ್ದ ಸೆಸ್ ಈಗ ಒಂದೂ ಕಾಲು ಪರ್ಸೆಂಟ್ ಸಿಗಬಹುದಷ್ಟೆ. ಎಸ್ಸಿಎಸ್ಟಿಗಳಿಗೆ ಕೃಷಿ ಸಾಲ ಸರಿಯಾದ ಪ್ರಮಾಣದಲ್ಲಿ ಲಭಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಣೆಯಾಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದರು.
ಮೈಸೂರು : ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಿಂದ ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬಿದ್ದು, ಈ ಕುರಿತಂತೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿ ಹರ್ಷಗುಪ್ತಾ ಅವರಿಂದ ತನಿಖೆ ನಡೆಯುತ್ತಿದೆ. ಏತನ್ಮಧ್ಯೆ, ಜ್ಯೂಬಿಲಿಯೆಂಟ್ ಕಾರ್ಖಾನೆ ತನಿಖೆ ವಿಚಾರದಲ್ಲಿ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಈ ಕುರಿತು ಮಾತನಾಡಿದ ಅವರು, ತನಿಖೆ ಹಾಗೂ ಹೋರಾಟದ ವಿಚಾರದಲ್ಲಿ ಸರ್ಕಾರದಿಂದ ನನಗೆ ಬೆಂಬಲ ಸಿಕ್ಕಿಲ್ಲ. ಜ್ಯೂಬಿಲಿಯೆಂಟ್ ವಿಚಾರದಲ್ಲಿ ಸತ್ಯ ಎಲ್ಲರಿಗೂ ಗೊತ್ತಿದೆ. ಆದರೆ ಹೇಳಲು ಯಾರಿಗೂ ಧೈರ್ಯವಿಲ್ಲ. ಕಂಪನಿಯದ್ದು ತಪ್ಪೇ ಇಲ್ಲ ಎಂಬಂತೆ ಬಿಂಬಿಸಿ ನನ್ನನ್ನು ತಪ್ಪಿತಸ್ಥನಂತೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಹರ್ಷಗುಪ್ತ ಅವರಿಂದ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದೆ. ನೇಮಕ ಪ್ರಕ್ರಿಯೆ ವಿಳಂಬವಾಗಿದ್ದಕ್ಕೆ ತನಿಖೆ ಹಾದಿ ತಪ್ಪಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಇಲಾಖೆಗಳು ಹರ್ಷಗುಪ್ತಾ ಅವರಿಗೆ ಸಹಕಾರ ನೀಡಿಲ್ಲ. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಹರ್ಷಗುಪ್ತಾ ಅವರಂಥ ಅಧಿಕಾರಿಯೇ ಏನೂ ಮಾಡಲು ಸಾಧ್ಯವಾಗಿಲ್ಲ ಎಂದರೆ ಏನು ಹೇಳೋಕಾಗುತ್ತೆ. ತನಿಖೆಗೆ ಸಹಕರಿಸದಿರುವುದು ಎಲ್ಲೋ ಒಂದು ಕಡೆ ನಿರಾಸೆಯಾಗಿದೆ ಎಂದರು….
ಮೈಸೂರು : ಒಬ್ಬ ಸಚಿವರಾದವರು ಮನಸ್ಸು ಮಾಡಿದರೆ ಏನನ್ನೂ ಸಾಧಿಸಬಹುದು ಎಂಬುದನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತೋರಿಸಿಕೊಟ್ಟಿದ್ದಾರೆ. ಮೊದಲು ರಾಜಕೀಯ ಪಟುಗಳಿಗೆ ಇಚ್ಛಾಶಕ್ತಿ ಇರಬೇಕಷ್ಟೆ ಎಂಬುದು ಮುಖ್ಯವಾಗುತ್ತದೆ. ಈಗ ಆ ಇಚ್ಛಾಶಕ್ತಿಯ ಪರಿಣಾಮವೇ ಮೈಸೂರು ಮೃಗಾಲಯಕ್ಕೆ ಹೊಸ ದಿಕ್ಕನ್ನು ನೀಡಲು ಹೊರಟಿದೆ. ಇದೀಗ ಪ್ರಾಣಿಸಂಗ್ರಹಾಲಯಕ್ಕೆ 73.16 ಲಕ್ಷ ಆರ್ಥಿಕ ನೆರವು ಹರಿದುಬಂದಿದೆ.
ಹೌದು. ಕೊರೋನಾ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರ ಬಿಸಿ ಮೃಗಾಲಯಗಳಿಗೂ ತಟ್ಟಿದೆ. ಯಾರೂ ಎಲ್ಲಿಯೂ ಸಂಚರಿಸದಿರುವುದರಿಂದ ಪ್ರವಾಸಿಗರ ಆಗಮನ ಶೂನ್ಯಕ್ಕೆ ಇಳಿದಿದೆ. ಒಂದು ವೇಳೆ ಪ್ರವಾಸಿಗರು ಆಗಮಿಸುತ್ತಿದ್ದರೆ ಪ್ರವೇಶ ಶುಲ್ಕದಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಅಲ್ಪ ಮಟ್ಟಿಗೆ ಸಹಾಯವಾಗುತ್ತಿತ್ತು. ಈಗ ಅದೂ ಇಲ್ಲವಾಗಿದೆ.
ಈ ವಿಷಯ ಏ.ಪ್ರಿಲ್ 22 ರಂದು ಮೈಸೂರಿನ ಪ್ರಾಣಿ ಸಂಗ್ರಹಾಲಯಕ್ಕೆ ಸಚಿವರು ಭೇಟಿ ಕೊಟ್ಟಾಗ ಗಮನಕ್ಕೆ ಬಂದಿತ್ತು. ಆಗಲೇ ಅಲ್ಲಿನ ಪರಿಸ್ಥಿತಿಯನ್ನು ಮನಗಂಡ ಸಚಿವರು ತಕ್ಷಣ 1.75 ಲಕ್ಷ ರೂಪಾಯಿ ಹಣವನ್ನು ವೈಯಕ್ತಿಕವಾಗಿ ನೆರವನ್ನು ನೀಡುವ ಮೂಲಕ 5 ವರ್ಷದ ಚಾಮುಂಡಿ ಎಂಬ ಹೆಣ್ಣಾನೆಯನ್ನು 1 ವರ್ಷದ ಅವಧಿಗೆ ದತ್ತು ಪಡೆದರು. ಅಲ್ಲದೆ, ಅಲ್ಲಿರುವ 16 ಹುಲಿಗಳ ಒಂದು ದಿನದ ಮಾಂಸದ ಊಟದ ಖರ್ಚಾದ 25 ಸಾವಿರ ರೂಪಾಯಿಯ ನೆರವನ್ನೂ ನೀಡಿ ಮಾನವೀಯತೆ ಮೆರೆದರು.
ಇಷ್ಟಕ್ಕೇ ಸುಮ್ಮನಾಗದ ಸಚಿವರು ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಮೈಸೂರು ಮೃಗಾಲಯಕ್ಕೆ ದಾನಿಗಳಿಂದ ದೇಣಿಗೆ ನೀಡುವಂತೆ ವೈಯಕ್ತಿಕವಾಗಿ ಮಾಡಿಕೊಂಡ ಒಂದು ಮನವಿಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಯಿತು. ಈಗ 73 ಲಕ್ಷ 16 ಸಾವಿರ ರೂಪಾಯಿ ಸಂಗ್ರಹವಾಗಿದ್ದು, ಅದನ್ನು ಮೃಗಾಲಯಕ್ಕೆ ಸ್ವತಃ ಸಚಿವರು ಹಸ್ತಾಂತರ ಮಾಡಿದರು. ಸರ್ಕಾರದ ಯೋಜನೆಗಳ ಜೊತೆಗೆ ಸಾರ್ವಜನಿಕರ ಸಹಕಾರವನ್ನು ಪಡೆದರೆ ಹೀಗೆಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಎಂಬುದನ್ನು ಈ ಮೂಲಕ ಸಚಿವ ಸೋಮಶೇಖರ್ ತೋರಿಸಿಕೊಟ್ಟಿದ್ದಾರೆ.
ಮೈಸೂರು : ಮಾರಕ ಕೊರೊನಾ ವೈರಸ್ ನಿಂದಾಗಿ ತೀವ್ರ ತತ್ತರಿಸಿರುವ ಜಿಲ್ಲೆಗಳ ಪೈಕಿ ಬೆಂಗಳೂರಿನ ನಂತರ ಮೈಸೂರು ಎರಡನೇ ಸ್ಥಾನದಲ್ಲಿದೆ. ಕೊರೊನಾ ಸೋಂಕಿತ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿ ಎಂದು ಹೇಳಲಾಗಿದ್ದು, ಮೈಸೂರಿನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ 43 ಮಂದಿ ಈಗ ಪ್ಲಾಸ್ಮಾ ದಾನ ಮಾಡಲು ಸಮ್ಮತಿ ನೀಡಿದ್ದಾರೆ.
ದೆಹಲಿ ತಬ್ಲೀಘಿ ಜಮಾತ್ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿ ಬಂದು ಸೋಂಕಿಗೊಳಗಾಗಿದ್ದವರೂ ಸೇರಿ, ವಿವಿಧ ಸೋಂಕಿತರು ಇದೀಗ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಪೈಕಿ ಎಲ್ಲರೂ ಬರವಣಿಗೆ ಮೂಲಕ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ. ಇದೀಗ ಆಸ್ಪತ್ರೆಗಳು ಈ ಎಲ್ಲರ ರಕ್ತದ ಮಾದರಿಯನ್ನು ಸಂಗ್ರಹಿಸಿದ್ದು, ಪರೀಕ್ಷೆ ನಡೆಸುತ್ತಿವೆ. ಈ ಕುರಿತು ಕೆ.ಆರ್.ಆಸ್ಪತ್ರೆಯ ಆಡಳಿತ ಮಂಡಳಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಪ್ಲಾಸ್ಮಾ ಮತ್ತು ರಕ್ತದ ಇತರೆ ಅಂಶಗಳನ್ನು ಪ್ರತ್ಯೇಕಿಸಲು ಬಳಸುವ ಯತ್ನ ನಮ್ಮಲ್ಲಿದೆ. ಆದರೆ, ಘಟಕ ಹಳೆಯದಾಗಿದ್ದು, ಅದನ್ನು ನವೀಕರಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಇನ್ನು ಪ್ಲಾಸ್ಮಾ ಚಿಕಿತ್ಸೆಗೆ ಯಂತ್ರ ಬಳಕೆ ಮಾಡುವ ಬಗ್ಗೆ ಈಗಾಗಲೇ ಅನುಮತಿ ಕೋರಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಿಂದ ಏಪ್ರಿಲ್ 15ರಂದೇ ಐಸಿಎಂಆರ್’ಗೆ ಪತ್ರ ಬರೆಯಲಾಗಿದೆ….
ಮೈಸೂರು : ಮಾರಕ ಕೊರೊನಾ ವೈರಸ್ ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದು, ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಹಲವೆಡೆ ಲಾಕ್ ಡೌನ್ ನಿಯಮ ಉಲ್ಲಂಘಿಸಲಾಗುತ್ತಿದ್ದು, ಹಾಟ್ ಸ್ಪಾಟ್ ಗಳಲ್ಲಿ ಈ ನಿಯಮ ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ. ಮೈಸೂರಿನಲ್ಲೂ ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮಹಾನಗರ ಪಾಲಿಕೆ ಮುಂದಾಗಿದ್ದು, ಮಾಸ್ಕ್ ಧರಿಸದೇ ಮನೆಯಿಂದ ಹೊರಬಂದರೆ ಅಂತಹವರಿಗೆ ದಂಡ ವಿಧಿಸಲು ನಿರ್ಧರಿಸಿದೆ.
ರಾಜ್ಯದಲ್ಲಿ ಬೆಂಗಳೂರು ಬಳಿಕ ಮೈಸೂರು ಕೊರೊನಾ ಹಾಟ್ ಸ್ಪಾಟ್ ಆಗಿದ್ದು, ಲಾಕ್ ಡೌನ್ ಕಠಿಣ ಲಾಕ್ ಡೌನ್ ನಿಯಮ ಜಾರಿಗೆ ತಂದಿದ್ದರೂ ಕೆಲವೆಡೆ ಜನತೆ ಮಾತ್ರ ಇದಕ್ಕೆ ಕ್ಯಾರೆ ಅನ್ನುತ್ತಿಲ್ಲ. ತರಕಾರಿ ಖರೀದಿ ಸೇರಿದಂತೆ ಇತರೇ ಕಾರಣಗಳಿಗಾಗಿ ಜನತೆ ಮುಗಿಬೀಳುತ್ತಿದ್ದಾರೆ. ಏತನ್ಮಧ್ಯೆ, ಮಾಸ್ಕ್ ಧರಿಸದೇ ಮನೆಗಳಿಂದ ಹೊರಬರುವವರ ವಿರುದ್ಧ ಕಠಿಣ ಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಧರಿಸಿದ್ದು, ಏ.30ರ ಬಳಿಕ ಒಂದು ವೇಳೆ ಮಾಸ್ಕ್ ಧರಿಸದೇ ನಾಗರಿಕರು ಮನೆಗಳಿಂದ ಹೊರಬಂದರೆ ಅಂತಹವರಿಗೆ 100 ರೂ. ದಂಡ ವಿಧಿಸಲು ನಿರ್ಧರಿಸಿದ್ದಾರೆ…
ಮೈಸೂರು : ರೇಷ್ಮೆ ಮತ್ತು ತೋಟಗಾರಿಕೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಸಿ.ನಾರಾಯಣಗೌಡ ಅವರು ಶ್ರೀರಂಗಪಟ್ಟಣ ಮೂಲದ ಆಶಾಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿ, ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಆಶಾಕಾರ್ಯಕರ್ತೆಯ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.
ಆಶಾಕಾರ್ಯಕರ್ತೆಯ ಜೊತೆ ಮಾತನಾಡಿ, ನಿಮಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುವುದರ ಜೊತೆಗೆ ಭದ್ರತೆ ಒದಗಿಸಲಾಗುವುದು. ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಸರ್ಕಾರದ ವತಿಯಿಂದ ದೊರಕಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧಿಸಿದಂತೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು. ಈಗಾಗಲೇ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್ ಆಸ್ಪತ್ರಗೆ ಬಂದು ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ ಎಂದರು.
ಮಂಡ್ಯದಲ್ಲಿ ಮಾಧ್ಯಮದವರ ಮೇಲೆನ ಹಲ್ಲೆ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಮಾಧ್ಯಮದವರು ಕೂಡ ಜೀವದ ಹಂಗು ತೊರೆದು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಹಲ್ಲೆಗೆ ಮುಂದಾಗಿರುವುದು ತಪ್ಪು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಬೆಂಗಳೂರು ನಂತರದ ಸ್ಥಾನದಲ್ಲಿ ಮೈಸೂರಿನಲ್ಲಿ ಹೆಚ್ಚಿನ ಸೋಂಕಿತರಿದ್ದಾರೆ. ಮೈಸೂರಿಗೆ ನಂಜನಗೂಡು ಬಳಿಯ ಜುಬಿಲೆಂಟ್ಸ್ ಕಾರ್ಖಾನೆ ಕೊರೊನಾ ಹಾಟ್ ಸ್ಪಾಟ್ ಆಗಿದ್ದು, ಈ ಕಾರ್ಖಾನೆಗೆ ಸೋಂಕು ತಗುಲಿದ್ದು ಹೇಗೆ ಎಂಬ ಕುರಿತಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಮೈಸೂರು ಜಿಲ್ಲೆಯ ಕಾರ್ಖಾನೆಗೆ ಸೋಂಕು ಹರಡಿದ್ದು ಹೇಗೆ, ಸೋಂಕು ಹರಡುವಿಕೆಗೆ ಕಾರಣವೇನೆಂದು ಪತ್ತೆ ಹಚ್ಚಲು ಜಿಲ್ಲೆಯ ಕೋವಿಡ್-19 ವಿಶೇಷಾಧಿಕಾರಿ ಹರ್ಷಗುಪ್ತಾ ನೇತ್ವದಲ್ಲಿ ತನಿಖೆಗೆ ಆದೇಶಿಸಿದ್ದು, ಒಂದು ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧಿೃಕೃತವಾಗಿ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಜುಬಿಲೆಂಟ್ಸ್ ಕಾರ್ಮಿಕರು ಹಾಗೂ ಸಂಪರ್ಕ ಹೊಂದಿದ್ದವರ ಸ್ಯಾಂಪಲ್ ಟೆಸ್ಟ್ನಿಂದಾಗಿ ಈ ವಾರದಿಂದ ನಂಜನಗೂಡು ಕೊರೋನಾ ನಂಜು ತಗ್ಗುವ ಸಾಧ್ಯತೆ ಇದೆ. ಶೇಖಡ 99% ಸ್ಯಾಂಪಲ್ ಟೆಸ್ಟ್ ಮುಗಿಸಿರುವ ಜಿಲ್ಲಾಡಳಿತ, ಜುಬಿಲೆಂಟ್ಸ್ ಸಂಬಂಧ 2098 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. 473 ಮಂದಿ ಪ್ರೈಮರಿ ಸಂಪರ್ಕದಲ್ಲಿದ್ದರೆ, 1625 ಸೆಕೆಂಡರಿ ಸಂಪರ್ಕದಲ್ಲಿದ್ದಾರೆ. ಇದರಲ್ಲಿ ಕಾರ್ಖಾನೆಯ ನೌಕರರು 1483 ಮಂದಿ ಇದ್ದಾರೆ. ಜುಬಿಲೆಂಟ್ಸ್ ಕಾರ್ಖಾನೆ ಎರಡಂಕಿಯ ಸ್ಯಾಂಪಲ್ ಟೆಸ್ಟ್ ಬಾಕಿ ಇದ್ದು, ಉಳಿದಂತೆ ಜುಬಿಲೆಂಟ್ಸ್ ಸಂಪರ್ಕದ ಎಲ್ಲ ಟೆಸ್ಟ್ ಮುಗಿದಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕಳೆದ ಮೂರು ದಿನದಿಂದ ಮೈಸೂರಿನಲ್ಲಿ ಒಂದೆ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ. ಮೈಸೂರಿನಲ್ಲಿ ಕೊರೋನಾ ಸೋಂಕು ಹರಡುವಿಕೆ ಕಡಿಮೆಯಾಗಿರುವ ಮುನ್ಸೂಚನೆ ಸಿಕ್ಕಂತಾಗಿದೆ ಎಂದು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಹೀಗಿದ್ದರೂ ಜಿಲ್ಲೆಯಲ್ಲಿ ಇನ್ನು ಲಾಕ್ ಡೌನ್ ಸಡಿಲಿಕೆ ಆಗಿಲ್ಲ….
ಬೆಂಗಳೂರು : ರಾಜದ ಸಾಂಸ್ಕೃತಿಕ ನಗರಿ ಮೈಸೂರಿಗೆ ಕೊರೋನಾ ಸೋಂಕಿನ ಪ್ರಕರಣ ಹುಟ್ಟಿಕೊಂಡಿದ್ದೇ ಜಿಲ್ಲೆಯ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆ ಕಾರ್ಮಿಕರೊಬ್ಬರಿಗೆ ಕೊರೋನಾ ಸೋಂಕಿತನ ಸಂಪರ್ಕದಿಂದಾಗಿದೆ. ಈ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ನಡೆಸಲು ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್, ಕರ್ನಾಟಕ ರಾಜ್ಯಾದ್ಯಂತ ಕೋವಿಡ್-19 ಸೋಂಕನ್ನು ತಡೆಗಟ್ಟಲು ಸರ್ಕಾರವು ಕಾಲಕಾಲಕ್ಕೆ ಕಟ್ಟು ನಿಟ್ಟಿನ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲು ಆದೇಶಿಸಿದೆ.
ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದರೂ ಸಹ, ಮೈಸೂರು ಜಿಲ್ಲೆಯು ಒಂದು ಹಾಟ್ ಸ್ಪಾಟ್ ವನ್ನಾಗಿ ಹೊರ ಹೊಮ್ಮಿಸಿರುವುದಕ್ಕೆ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯೇ ಪ್ರಮುಖ ಕಾರಣವಾಗಿರುತ್ತದೆ. ಇದರಿಂದ ಅನೇಕ ಸಾರ್ವಜನಿಕರಿಗೆ ಕೋವಿಡ್-19 ಸೋಂಕು ಹರಡಿರುವುದು ಕಂಡು ಬಂದಿರುತ್ತದೆ.
ಆದ್ದರಿಂದ, ಸೋಂಕು ಎಲ್ಲಿಂದ..? ಯಾರಿಂದ..? ಹೇಗೆ ಪ್ರಥಮವಾಗಿ ನಂಜನಗೂಡಿನಲ್ಲಿ ಹರಡಿತು.? ಸೋಂಕು ಹರಡುವಿಕೆಗೆ ಕಾರಣಗಳೇನು.? ಇದರ ಹರಡುವಿಕೆಗೆ ಕಾರ್ಖಾನೆಯ ಹಾಗೂ ಇತರರ ಜವಾಬ್ದಾರಿ ಏನು.? ಎಂಬುದರ ಬಗ್ಗೆ ವಿಚಾರಣೆ ನಡೆಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಶ್ರೀಹರ್ಷಗುಪ್ತ, ಐಎಎಸ್, ನೋಡಲ್ ಅಧಿಕಾರಿ, ಕೋವಿಡ್-19 ನಿಯಂತ್ರಣಾ ಕಾರ್ಯಚರಣೆ ಮೈಸೂರು ಜಿಲ್ಲೆ ರವರಿಗೆ ಆದೇಶಿಸಿದ್ದಾರೆ.
ಅಂದಹಾಗೇ ಮೈಸೂರಿನ ಜ್ಯುಬಿಲಿಯಂಟ್ ಕಾರ್ಖಾನೆಯ ಒಬ್ಬ ಕೊರೋನಾ ಸೋಂಕಿತನ ಸಂಪರ್ಕದಿಂದಾಗಿ, ಇಂದಿನವರೆಗೆ(24-04-2020) 88 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಕೊರೋನಾ ಸೋಂಕಿತರಲ್ಲಿ 33 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಆದ್ರೇ ಇನ್ನೂ 55 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಗುಣಮುಖರಾಗಬೇಕಿದೆ.
ಮೈಸೂರು: ಮೈಸೂರಿನಲ್ಲಿ ಮಾರಕ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ರೆಡ್ ಝೋನ್ ಇದ್ದು, ಜಿಲ್ಲೆಯಲ್ಲಿ ಸಡಿಲಿಕೆ ಇಲ್ಲ. ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದ್ದು, ಪರಿಸ್ಥಿತಿ ನೋಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು. ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಇಲ್ಲವೇ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ. ಇನ್ನು ಕಬ್ಬಿಣ ಹಾರ್ಡ್ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3ನೇ ತಾರೀಖಿನವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಆಮೇಲೆ ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದರು.
ಮೈಸೂರಲ್ಲಿ ಇಷ್ಟು ಪ್ರಮಾಣದಲ್ಲಿ ಸೋಂಕು ಹರಡಲು ಜ್ಯೂಬ್ಲಿಯೆಂಟ್ ಹಾಗೂ ತಬ್ಲಿಘಿ ಜಮಾತ್ ನಿಂದ ವಾಪಾಸ್ ಬಂದವರು ಕಾರಣರಾಗಿದ್ದಾರೆ. ರೈತರು ತಮ್ಮ ಹಳೇ ಸಾಲವನ್ನು ತೀರಿಸುವ ಸಲುವಾಗಿ ಸುಸ್ತಿ ಮನ್ನಾ ಮಾಡಲಾಗುವುದು. ಇದಕ್ಕೆ ಮಾರ್ಚ್ 31ರ ವರೆಗೆ ಗಡುವು ನೀಡಲಾಗಿತ್ತು. ಈ ಗಡುವನ್ನು ಮತ್ತೆ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗುವುದು. ಅವಧಿ ವಿಸ್ತರಣೆಯಿಂದ 14 ಕೋಟಿ ರೂ. ಬಡ್ಡಿ ಹೊರೆ ಬರುತ್ತದೆ. ಅದನ್ನು ನಾವೇ ಭರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರು. ಇನ್ನು ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲಿ, ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಮನೆಯಿಂದ ಹೊರಬರದಂತೆ ತಿಳಿಸಿದರು…