Category: State | #1 Latest News Updates Portal – 24×7 | Kannada News Now
Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada
kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues.
breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee
All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath
ಬೆಂಗಳೂರು : ಖಾಸಗಿ ಆಸ್ಪತ್ರೆಗಳು ಕೋವಿಡ್ ಗೆ 50% ರಷ್ಟು ಹಾಸಿಗೆ ಮೀಸಲಿಡುವ ವಿಚಾರದಲ್ಲಿ ಸಮಾಧಾನ ಆಗಿಲ್ಲ. ರಾಜ್ಯ ಸರ್ಕಾರದ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದರು.
ಸಚಿವರು ಸಕ್ರ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ, ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಕೋವಿಡ್ ಗೆ 50% ಹಾಸಿಗೆ ಮೀಸಲಿಡುವ ಆದೇಶ ಯಾರೆಲ್ಲ ಪಾಲಿಸಿದ್ದಾರೆ ಎಂದು ಪರಿಶೀಲಿಸಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯವರು ಶೇ.50 ಹಾಸಿಗೆ ನೀಡಿಲ್ಲ. ಹೀಗಾಗಿ ಆಸ್ಪತ್ರೆಯವರಿಗೆ ತೀಕ್ಷ್ಣವಾಗಿ ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಸಿಗೆ ನೀಡುವ ವಿಚಾರದಲ್ಲಿ ನನಗೆ ಸಮಾಧಾನ ಆಗಿಲ್ಲ. ಕೆಲ ದೊಡ್ಡ ಆಸ್ಪತ್ರೆಗಳು ಕೂಡ ಹಾಸಿಗೆ ನೀಡಿಲ್ಲ. ಖಾಸಗಿ ಆಸ್ಪತ್ರೆಯವರು ಈ ಆದೇಶ ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಇಂತಹ ಸ್ಥಿತಿ ನಿರ್ಮಿಸುವುದು ಬೇಡ ಎಂದು ಎಚ್ಚರಿಕೆ ನೀಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಕೂಡ ಇರುತ್ತದೆ. ಈ ಎಲ್ಲ ಅಂಶಗಳನ್ನು ನೋಡಿಕೊಂಡು ಖಾಸಗಿ ಆಸ್ಪತ್ರೆಗಳೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಲ ನ್ಯೂನತೆಗಳು ಬರಬಹುದು. ಆಮ್ಲಜನಕ, ರೆಮಿಡಿಸ್ವಿರ್ ಔಷಧ ಪೂರೈಕೆ, ಹಾಸಿಗೆ ಹೆಚ್ಚಳ, ಹೋಟೆಲ್ ಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ವಲಯವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈಗ ಇರುವ 800 ಮೆಟ್ರಿಕ್ ಟನ್ ಆಮ್ಲಜನಕ ಜೊತೆಗೆ 300 ಟನ್ ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅಗತ್ಯವಿರುವಷ್ಟು ಆಮ್ಲಜನಕ ನೀಡಲಾಗುವುದು ಎಂದು ಕೈಗಾರಿಕಾ ವಲಯದವರು ಕೂಡ ಹೇಳಿದ್ದಾರೆ ಎಂದರು.
ಗೃಹಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ಅನೌಪಚಾರಿಕವಾಗಿ ನಾಳೆಯ ಸಭೆಗೆ ಪೂರ್ವಭಾವಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕೋವಿಡ್ ಸ್ಥಿತಿಗತಿ ಬಗ್ಗೆ ವಿವರ ಪಡೆದಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲ ಬಿಗಿ ಕ್ರಮ ಕೈಗೊಳ್ಳುವುದು ಅವಶ್ಯ. ನಾಳೆಯ ಸರ್ವಪಕ್ಷ ಸಭೆ ಬಳಿಕ ಎಲ್ಲವೂ ನಿರ್ಧಾರವಾಗಲಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚರ್ಚೆ ನಡೆದ ಬಳಿಕ ಅಂತಿಮ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ. ಎರಡನೇ ಅಲೆ ವೇಗವಾಗಿದ್ದು, ಜನರು ಮುನ್ನೆಚ್ಚರಿಕೆ ಕ್ರಮ ವಹಿಸಲೇಬೇಕು. ವಾಸ್ತವ ಅರ್ಥ ಮಾಡಿಕೊಳ್ಳಬೇಕು, ನಿರ್ಲಕ್ಷ್ಯ ತೋರಬಾರದು. ಕೊರೊನಾ ಪ್ರಕರಣ ಸಂಖ್ಯೆ ನೋಡಿಕೊಂಡು ಹಾಸಿಗೆ ಎಷ್ಟು ಬೇಕೆಂದು ನಿರ್ಧರಿಸಲಾಗುತ್ತದೆ. ಜನರ ಕಷ್ಟದಲ್ಲಿ, ಸರ್ಕಾರದ ಹೋರಾಟದಲ್ಲಿ ಖಾಸಗಿ ಆಸ್ಪತ್ರೆಗಳು ಭಾಗಿಯಾಗಬೇಕು ಎದರು.
ಬೆಂಗಳೂರು : ಸಾರಿಗೆ ನೌಕರರು ಕಳೆದ 12 ದಿನಗಳಿಂದ ಮುಷ್ಕರ ನಿರತರಾಗಿದ್ದಾರೆ. ಸಾರಿಗೆ ಬಸ್ ಸಂಚಾರ ವಿರಳವಾಗಿದೆ. ಇದರ ಮಧ್ಯೆ ಕೊರೋನಾ 2ನೇ ಅಲೆಯಿಂದಾಗಿ ಸೋಂಕಿನ ಭೀತಿ ಕೂಡ ನಮಗೆ ಎದುರಾಗಿದೆ. ಇದರಿಂದಾಗಿ ವಿಟಿಯು ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳು ಟ್ವಿಟ್ ಮೂಲಕ ವಿಟಿಯುಗೆ ಮನವಿ ಮಾಡಿದ್ದರು. ಆದ್ರೇ.. ಇದರ ಬಗ್ಗೆ ಗಮನಿಸಿ, ಕ್ರಮ ಕೈಗೊಳ್ಳಬೇಕಿದ್ದಂತ ವಿಟಿಯು ಟ್ವಿಟ್ ಮಾಡಿದ ವಿದ್ಯಾರ್ಥಿಗಳಿಗೆ ಕೊಟ್ಟಿದ್ದು ಮಾತ್ರ ಬಿಗ್ ಶಾಕ್. ಅದೇನ್ ಅಂತ ಮುಂದೆ ಓದಿ..
ಒಂದೆಡೆ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಇಲ್ಲ. ಮತ್ತೊಂದೆಡೆ ಕೊರೋನಾ 2ನೇ ಅಲೆಯ ಅಬ್ಬರ. ಇದರ ಮಧ್ಯೆಯೂ ವಿವಿಧ ರಾಜ್ಯದ ವಿಶ್ವವಿದ್ಯಾಲಯಗಳು ಪರೀಕ್ಷೆ ಮುಂದೂಡಿದ್ರು.. ವಿಟಿಯು ಮಾತ್ರ ಪರೀಕ್ಷೆ ಮುಂದೂಡಿರಲಿಲ್ಲ. ಹೀಗಾಗಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸರಿಯಾದ ಸಮಯಕ್ಕೆ ಸಿಗದೇ ಪರೀಕ್ಷೆಗೆ ಹಾಜರಾಗೋಕೆ ಆಗುತ್ತೋ ಇಲ್ವೋ ಎಂಬ ಚಿಂತೆ ಒಂದೆಡೆ ವಿದ್ಯಾರ್ಥಿಗಳಿಗೆ ಆದ್ರೇ.. ಮತ್ತೊಂದೆಡೆ ಕೊರೋನಾ ಸೋಂಕಿನ ಆರ್ಭಟದ ನಡುವೆ ಪರೀಕ್ಷೆಗೆ ಹಾಜರಾದ್ರೇ.. ನಮಗೆ ಎಲ್ಲಿ ಸೋಂಕು ತಗುಲತ್ತೋ ಎಂಬ ಭೀತಿ.
ಈ ಎಲ್ಲಾ ಕಾರಣದಿಂದಾಗಿ ನಾಲ್ವರು ವಿದ್ಯಾರ್ಥಿಗಳು.. ವಿಟಿಯುಗೆ ಟ್ಯಾಗ್ ಮಾಡಿ, ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಇಲ್ಲ. ಮತ್ತೊಂದೆಡೆ ಕೊರೋನಾ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಇದೆ. ಇಂತಹ ಸಂದರ್ಭದಲ್ಲಿ ವಿಟಿಯು ಪರೀಕ್ಷೆ ನಡೆಸುತ್ತೋ ಇರೋದು ನಮಗೆ ಆತಂಕವನ್ನು ಉಂಟು ಮಾಡಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಈ ಮೂಲಕ ತಮ್ಮ ಆತಂಕ, ಚಿಂತೆಯ ಭೀತಿಯನ್ನು ವಿಟಿಯುಗೆ ಟ್ವಿಟ್ ಮೂಲಕ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.
ವಿದ್ಯಾರ್ಥಿಗಳ ಈ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಕೊರೋನಾ ಸೋಂಕಿನ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದ್ದಂತ ವಿಟಿಯು, ಟ್ವಿಟ್ಟರ್ ನಲ್ಲಿ ವಿಟಿಯುಗೆ ಟ್ಯಾಗ್ ಮಾಡಿ, ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ ವಿದ್ಯಾರ್ಥಿಗಳನ್ನೇ ಪರೀಕ್ಷೆಯಿಂದ ಡಿಫಾರ್ ಮಾಡಿದೆ. ಈ ಮೂಲಕ ಮನವಿ ಮಾಡಿದ ವಿದ್ಯಾರ್ಥಿಗಳಿಗೆ ವಿಟಿಯು ಬಿಗ್ ಶಾಕ್ ನೀಡಿದೆ.
ಬೆಂಗಳೂರು : ರಾಜ್ಯಾಧ್ಯಂತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವಂತ ಸಾರಿಗೆ ನೌಕರರ ಮುಷ್ಕರ 12ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸರ್ಕಾರ ಕೈಗೊಂಡ ಮುಷ್ಕರ ನಿರತ ನೌಕರರ ವಜಾ, ಒಂದು ನಿಗಮದಿಂದ ಮತ್ತೊಂದು ನಿಗಮದ ವರ್ಗಾವಣೆ ರದ್ದು ಸೇರಿದಂತೆ ವಿವಿಧ ತಂತ್ರಗಾರಿಕೆಯಿಂದ, ಇದೀಗ ಸಾರಿಗೆ ನೌಕರರ ಮುಷ್ಕರದ ನಡುವೆ ಸಾರಿಗೆ ಬಸ್ ಸಂಚಾರ ಯಥಾಸ್ಥಿತಿಯತ್ತ ದಾಪುಗಾಲಿಡುತ್ತಿದೆ. ಇಂದು 4 ಗಂಟೆಯ ವೇಳೆಗೆ ರಾಜ್ಯಾಧ್ಯಂತ 7,100 ಸಾರಿಗೆ ಬಸ್ ಸಂಚಾರ ಆರಂಭಿಸಿವೆ.
ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಇಂದಿಗೆ 12ನೇ ದಿನಕ್ಕೆ ಕಾಲಿಟ್ಟಿದೆ. ಇಂದು ತಮ್ಮ ಬೇಡಿಕೆ ಈಡೇರಿಕೆ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸದೇ ಇದ್ದರೇ, ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂಬುದಾಗಿ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನಿನ್ನೆ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು. ನಾಳೆ ಸಾರಿಗೆ ನೌಕರರು ಜೈಲ್ ಭರೋ ಚಳುವಳಿ ಕೂಡ ನಡೆಸಲಾಗುತ್ತದೆ ಎಂಬುದಾಗಿಯೂ ತಿಳಿಸಿದ್ದರು.
ಇದೆಲ್ಲದರ ನಡುವೆ, ರಾಜ್ಯ ಸರ್ಕಾರ ಮುಷ್ಕರ ನಿರತರ ಮನವೊಲಿಕೆಯ ಕ್ರಮವನ್ನು ಬಿಟ್ಟು, ಶಿಸ್ತುಕ್ರಮದಂತ ಕಾನೂನು ಕ್ರಮ ಕೈಗೊಂಡಿದೆ. ಈಗಾಗಲೇ ಬಿಎಂಟಿಸಿಯ 2 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾಗೊಳಿಸಲಾಗಿದೆ. ಇದೇ ಹಾದಿಯನ್ನು ಇತರೆ ನಿಗಮಗಳು ಹಿಡಿದು, ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಿರತರಾಗಿದ್ದಂತ ನೌಕರರನ್ನು ಕೆಲಸದಿಂದ ವಜಾಗೊಳಿಸಿದೆ. ಜೊತೆಗೆ ಅಂತರ ನಿಗಮ ವರ್ಗಾವಣೆಯನ್ನು ಕೂಡ ಹಿಂಪಡೆದಿದೆ. ಈ ಎಲ್ಲಾ ತಂತ್ರಗಾರಿಕೆಯಿಂದ ಸಾರಿಗೆ ನೌಕರರು ಮುಷ್ಕರದಿಂದ ನಿಧಾನವಾಗಿ ಹಿಂದೆ ಸರಿದು, ಕೆಲಸಕ್ಕೆ ಹಾಜರಾಗುತ್ತಿರುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.
ಕೊರೋನಾ ನಂತ್ರದ ಸಂದರ್ಭದಲ್ಲಿ ರಾಜ್ಯಾಧ್ಯಂತ ನಾಲ್ಕು ಸಾರಿಗೆ ನಿಗಮಗಳಿಂದ ಒಟ್ಟು 16,000 ಸಾರಿಗೆ ಬಸ್ ಸಂಚಾರ ನಡೆಸುತ್ತಿದ್ದವು ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇಂದು 4 ಗಂಟೆಯ ವೇಳೆಗೆ KSRTC 3225 ಬಸ್, BMTC 1387 ಬಸ್, NEKRTC 1200 ಬಸ್, NWKRTC 1288 ಬಸ್ ಸೇರಿದಂತೆ ಒಟ್ಟು 7,100 ಸಾರಿಗೆ ಬಸ್ ಸಂಚಾರ ಆರಂಭಿಸಿವೆ. ಈ ಸಂಖ್ಯೆ ರಾತ್ರಿಯ ವೇಳೆಗೆ ಮತ್ತಷ್ಟು ಹೆಚ್ಚಾಗಿ 8 ಸಾವಿರ ದಾಟಬಹುದು ಎನ್ನಲಾಗುತ್ತಿದೆ. ಹೀಗಾಗಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರ ಯಥಾಸ್ಥಿತಿಯತ್ತ ಕಾಲಿಡುತ್ತಿದೆ ಎನ್ನಲಾಗುತ್ತಿದೆ.
ಆದ್ರೇ ನಾಳೆಯಿಂದ ಜೈಲ್ ಭರೋ ಚಳುವಳಿಯನ್ನು ಸಾರಿಗೆ ನೌಕರರು ಹಮ್ಮಿಕೊಂಡಿದ್ದು, ನಾಳೆಯಿಂದ ಯಾವ ರೀತಿಯ ಹೊಸ ತಿರುವನ್ನು ಸಾರಿಗೆ ನೌಕರರ ಮುಷ್ಕರ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಕೊರೋನಾ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿದ್ದು, ವೈದ್ಯಕೀಯ ತಜ್ಞರ ಸಲಹೆಯಂತೆ ನಾಡಿನ ಎಲ್ಲಾ ಜನರು ಮಾಸ್ಕ್ ಅನ್ನು ಸಮರ್ಪಕವಾಗಿ ಧರಿಸಿ ಕರ್ನಾಟಕವನ್ನು ಕೊರೋನಾಮುಕ್ತವನ್ನಾಗಿ ಮಾಡಲು ಸಹಕರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ನಾಡಿನ ಜನತೆಯಲ್ಲಿ ಮನವಿ ಮಾಡಿರುತ್ತಾರೆ.
ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಲಹೆಯಂತೆ ‘ಸೇವಾ ಹಿ ಸಂಘಟನ್’ ಚಿಂತನೆಯನ್ನು ಮುಖಂಡರು ಮತ್ತು ಕಾರ್ಯಕರ್ತರು ಅನುಷ್ಟಾನಕ್ಕೆ ತರಬೇಕು. ಅರ್ಹ ನಾಗರಿಕರು, ಅದರಲ್ಲೂ ಪ್ರಮುಖವಾಗಿ ಹಿರಿಯ ನಾಗರಿಕರು ಕೋವಿಡ್ ಲಸಿಕೆ ಪಡೆಯಲು ನೆರವು ನೀಡಬೇಕು. ಮನೆಗಳಲ್ಲ್ಲಿ ಹಿರಿಯರು ವಾಸಿಸುತ್ತಿದ್ದರೆ ಅವರಿಗೆ ಅಗತ್ಯ ನೆರವು ನೀಡಬೇಕು ಎಂದು ತಿಳಿಸಿದ್ದಾರೆ.
ಕೋವಿಡ್ ಇನ್ನಷ್ಟು ಹರಡದಂತೆ ತಡೆಯುವ ಕಾರ್ಯದಲ್ಲಿ ಕಳೆದ ವರ್ಷ ಬಿಜೆಪಿಯ ಎಲ್ಲರೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಈಗ ಮತ್ತೊಮ್ಮೆ ಅಂಥ ಜನಜಾಗೃತಿಯ ಪ್ರಯತ್ನ ಮತ್ತು ಸೇವಾಪರ ಚಟುವಟಿಕೆಗಳನ್ನು ನಾವು ಕೈಗೊಳ್ಳುವ ಅನಿವಾರ್ಯತೆ ಇದೆ. ಇದನ್ನು ಮನಗಂಡು ಈ ನಿಟ್ಟಿನಲ್ಲಿ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಅವರು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಕೋವಿಡ್ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಅವುಗಳನ್ನು ಸರಿಯಾಗಿ ಪಾಲಿಸುವ ಮೂಲಕ ನಾವೆಲ್ಲರೂ ನಾಡಿನ ಹೆಮ್ಮೆಯ ನಾಗರಿಕರಾಗುವ ಅಗತ್ಯವಿದೆ. ಇದು ಕೋವಿಡ್ ಮುಕ್ತ ಕರ್ನಾಟಕದ ಆಶಯಕ್ಕೆ ಪೂರಕ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ರಾಮನಗರ: ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಫುಡ್ ಇಲ್ಲ, ಬೆಡ್ ಇಲ್ಲ, ಮನಿನೂ ಇಲ್ಲ ಎಂದು ಬಿಲ್ ಬರುವ ಮೇಳೆ ಎಲ್ಲವೂ ಮಾಡಿ ಕೊಡ್ತಾರೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವ್ರು, ” ಕೊರೊನಾ ಸೋಂಕಿನ ಕುರಿತು ಸರ್ಕಾರ ಸೂಕ್ತ ಮಂಜಾಗ್ರತೆ ತೆಗೆದುಕೊಂಡಿಲ್ಲ. ಬಿಜೆಪಿ ಮಂತ್ರಿಗಳು ಹೇಳೋದು ಬರೀ ಸುಳ್ಳು. ಅವ್ರ ಮೇಲೆ ನನಗೆ ನಂಬಿಕೆ ಇಲ್ಲ” ಎಂದರು.
ಕ್ವಾರೆಂಟೈನ್ ವ್ಯವಸ್ಥೆ ಅವ್ಯವಸ್ಥೆಯಿಂದ ಗಮನ ಸೆಳೆಯುತ್ತೀವೆ. ಇನ್ನು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಫುಡ್ ಇಲ್ಲ, ಬೆಡ್ ಇಲ್ಲ, ಮನಿನೂ ಇಲ್ಲ ಎಂದು ಬಿಲ್ ಬರುವ ಮೇಳೆ ಎಲ್ಲವೂ ಮಾಡಿ ಕೊಡ್ತಾರೆ ಎಂದು ಕಿಡಿಕಾರಿದ್ರು.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಭವಾಗ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸಾರ್ವಜನಿಕ ಪ್ರವೇಶವನ್ನ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಈ ಕುರಿತು ಸುತ್ತೋಲೆ ಗೊರಡಿಸಿರುವ ಸರ್ಕಾರ, ʼವಿಧಾನಸೌಧದಲ್ಲಿನ ಮುಖ್ಯಮಂತ್ರಿಯವರ ಸಚಿವಾಲಯ, ಸಚಿವ ಮತ್ತು ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಿದ ಭೇಟಿ ಹೊರತುಪಡಿಸಿ ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದೆʼ ಎಂದಿದೆ.
ಸಚಿವಾಲಯದ ಸಿಬ್ಬಂದಿ, ಅಧಿಕಾರಿ ಮತ್ತು ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಭೇಟಿಗೆ ಪೂರ್ವಾನುಮತಿ ಪತ್ರವನ್ನ ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಇನ್ನು ಮಧ್ಯಾಹ್ನ 3.30ರ ಬಳಿಕವೇ ಈ ಭೇಟಿಗೆ ಅವಕಾಶ ನೀಡಬೇಕು ಎಂದು ಸರ್ಕಾರ ತಿಳಿಸಿದೆ.
ಧಾರವಾಡ : ಕೊರೋನಾ 2ನೇ ಅಲೆ ರಾಜ್ಯಾಧ್ಯಂತ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಗುಂಪು ಸೇರೋದಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಹೀಗಿದ್ದೂ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಪರೀಕ್ಷೆ ನಡೆಸಲು ಮುಂದಾಗಿ, ಪೊಲೀಸರ ದಾಳಿಯ ಮೂಲಕ ಸ್ಥಗಿತಗೊಂಡಿರುವ ಘಟನೆ ಧಾರವಾಡದ ಉಪ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಧಾರವಾಡ ನಗರದ ಶ್ರೀನಗರ ವೃತ್ತದಲ್ಲಿರುವಂತ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಎಂಬ ಖಾಸಗಿ ಶಿಕ್ಷಣ ಸಂಸ್ಥೆಯೊಂದು, ಕೊರೋನಾ ಮಾರ್ಗಸೂಚಿಯನ್ನು ಗಾಳಿಗೆ ತೂರಿ, ಇಂದು ಪರೀಕ್ಷೆ ಬರೆದು Rank ಬಂದ್ರೇ.. ಬಹುಮಾನ ನೀಡಲಾಗುವುದು ಎಂಬುದಾಗಿ ಪ್ರಚಾರ ನಡೆಸಿತ್ತು. ಇದರಿಂದಾಗಿ ಕೊರೋನಾ ನಿಯಮವನ್ನು ಮೀರಿ ನೂರಾರು ವಿದ್ಯಾರ್ಥಿಗಳು ಪರೀಕ್ಷೆಗಾಗಿ ಆಗಮಿಸಿದ್ದರು.
ಇಂತಹ ವಿಷಯ ತಿಳಿದು ಖಾಸಗಿ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ಮಾಡಿದಂತ ಪೊಲೀಸರು, ಕೊರೋನಾ ನಿಯಮ ಉಲ್ಲಂಘಿಸಿ ಪರೀಕ್ಷೆ ನಡೆಸುತ್ತಿದ್ದಂತ ಸಂಬಂಧ ಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಪರೀಕ್ಷೆಗೆ ಹಾಜರಾಗಿದ್ದಂತ ವಿದ್ಯಾರ್ಥಿಗಳನ್ನು ದಾಳಿಯ ಮೂಲಕ ಪರೀಕ್ಷೆ ಸ್ಥಗಿತಗೊಳಿಸಿ, ವಿದ್ಯಾಕಾಶಿ ಕರಿಯರ್ ಅಕಾಡೆಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿನ 2ನೇ ಅಲೆ ಅಬ್ಬರಿಸುತ್ತಿದೆ. ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸಾಲಗುತ್ತಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ.. ಕಂದಾಯ ಸಚಿವ ಆರ್ ಅಶೋಕ್ ಅವರು ಹೇಳಿದ್ದೆ ಬೇರೆ.. ಅದೇನ್ ಅಂತ ಮುಂದೆ ಓದಿ..
ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಕುರಿತಂತೆ ಇಂದು ಕಂದಾಯ ಸಚಿವ ಆರ್ ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಸಚಿವರು, ಅಧಿಕಾರಿಗಳನ್ನು ಒಳಗೊಂಡು ಸಿಎಂ ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಮಾರ್ಗವಲ್ಲ. ಇದರ ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಕೊರೋನಾ ನಿಯಂತ್ರಕ್ಕೂ ಕ್ರಮ ಕೈಗೊಳ್ಳುವಂತ ನಿರ್ಣಯಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡೋ ಪ್ರಶ್ನೆಯೇ ಇಲ್ಲ. ಇದರ ಬದಲಾಗಿ ಕೊರೋನಾ ನಿಯಂತ್ರಣಗಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗುತ್ತಿದೆ. ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮವನ್ನು ತರಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದು, ಸದ್ಯದಲ್ಲೇ ಕಠಿಣ ನಿಯಮವನ್ನು ಜಾರಿಗೊಳಿಸಲಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಟಫ್ ರೂಲ್ಸ್ ಮಾತ್ರವೇ ಜಾರಿಗೆ ತರಗಲಾಗುತ್ತಿದೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿನ 2ನೇ ಅಲೆ ಅಬ್ಬರಿಸುತ್ತಿದೆ. ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸಾಲಗುತ್ತಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ.. ಕಂದಾಯ ಸಚಿವ ಆರ್ ಅಶೋಕ್ ಅವರು ಹೇಳಿದ್ದೆ ಬೇರೆ.. ಅದೇನ್ ಅಂತ ಮುಂದೆ ಓದಿ..
ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಕುರಿತಂತೆ ಇಂದು ಕಂದಾಯ ಸಚಿವ ಆರ್ ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಸಚಿವರು, ಅಧಿಕಾರಿಗಳನ್ನು ಒಳಗೊಂಡು ಸಿಎಂ ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಮಾರ್ಗವಲ್ಲ. ಇದರ ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಕೊರೋನಾ ನಿಯಂತ್ರಕ್ಕೂ ಕ್ರಮ ಕೈಗೊಳ್ಳುವಂತ ನಿರ್ಣಯಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡೋ ಪ್ರಶ್ನೆಯೇ ಇಲ್ಲ. ಇದರ ಬದಲಾಗಿ ಕೊರೋನಾ ನಿಯಂತ್ರಣಗಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗುತ್ತಿದೆ. ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮವನ್ನು ತರಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದು, ಸದ್ಯದಲ್ಲೇ ಕಠಿಣ ನಿಯಮವನ್ನು ಜಾರಿಗೊಳಿಸಲಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಟಫ್ ರೂಲ್ಸ್ ಮಾತ್ರವೇ ಜಾರಿಗೆ ತರಗಲಾಗುತ್ತಿದೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು : ಕೊಡಗಿನ ಏಕೈಕ ಅಂತರಾಷ್ಟ್ರೀಯ ಮಹಿಳಾ ಹಾಕಿ ಎಂಪೈರ್ ಆಗಿದ್ದ, ಅತ್ಯುತ್ತಮ ಹಾಕಿಪಟು ಮುಂಡಂಡ ಅನುಪಮ(ತಾಮನೆ: ಪುಚ್ಚಿಮಂಡ) ವಿಧಿವಶರಾಗಿದ್ದಾರೆ.
ಕಳೆದ ಒಂದು ವಾರದಿಂದ ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಇಂದು ಬೆಳಿಗ್ಗೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಮಹಾಮಾರಿ ಕೊರೋನಾ ಇವರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.
ಇವರು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ದಿ.ಪುಚ್ಚಿಮಂಡ ಶಿವಪ್ಪ ಅವರ ಪುತ್ರಿಯಾಗಿದ್ದಾರೆ.
ಹಾಸನ:ಕರ್ನಾಟಕದ ಹಾಸನದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದಕ್ಕಾಗಿ ಮಹಿಳಾ ಪೋಲೀಸ್ ಅವರನ್ನು ಅಮಾನತುಗೊಳಿಸಲಾಗಿದೆ.
ಆರೋಪಿ ಪೋಲಿಸ್ ಶ್ರೀಲತಾ ಮಂಗಳೂರಿನ ಆರ್ಥಿಕ ಅಪರಾಧ ಮತ್ತು ಮಾದಕವಸ್ತು ಪೊಲೀಸ್ ಠಾಣೆಯಲ್ಲಿದ್ದರು. ಏಪ್ರಿಲ್ 10 ರಂದು ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹೊರವಲಯದಲ್ಲಿರುವ ಎಸ್ಟೇಟ್ನಲ್ಲಿ ಆಯೋಜಿಸಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದಕ್ಕಾಗಿ ಆಕೆಯನ್ನು ಈಗ ಅಮಾನತುಗೊಳಿಸಲಾಗಿದೆ.
“ಅವರು, ತನ್ನ ಮಗನೊಂದಿಗೆ ರೇವ್ ಪಾರ್ಟಿಗೆ ಹೋಗಿದ್ದರು. ದಾಳಿ ನಡೆದಾಗ, ಅವರು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡರು. ನಗರ ಅಪರಾಧ ಶಾಖೆ ಇಲಾಖೆಯಿಂದ ಬಂದವರು ಎಂದು ಅವರು ಹೇಳಿಕೊಂಡಿದ್ದರು” ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ಹೇಳಿದ್ದಾರೆ.
ಆಲೂರು ಪೊಲೀಸರು ಸುಳಿವು ನೀಡಿದ ನಂತರ ರೇವ್ ಪಾರ್ಟಿಯನ್ನು ಭೇದಿಸಿ ನಂತರ 130 ಕ್ಕೂ ಹೆಚ್ಚು ಯುವಕರನ್ನು ರೆಸಾರ್ಟ್ನಿಂದ ವಶಕ್ಕೆ ಪಡೆದಿದ್ದರು.ಬಂಧಿತ ಹಲವರು ಬೆಂಗಳೂರು, ಮಂಗಳೂರು, ಗೋವಾ ಮತ್ತು ಇತರ ಸ್ಥಳಗಳಿಂದ ಬಂದವರು. ಆವರಣದಿಂದ 50 ದ್ವಿಚಕ್ರ ಮತ್ತು 20 ಕಾರುಗಳ ಜೊತೆಗೆ ಪೊಲೀಸರು ಮದ್ಯ, ಗಾಂಜಾ ಮತ್ತು ಇತರ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಲವು ಆರೋಪಿಗಳು ತುರ್ತು ಕರ್ತವ್ಯದ ಸ್ಟಿಕ್ಕರ್ಗಳನ್ನು ಅಂಟಿಸಿದ ವಾಹನಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ರೇವ್ ಪಾರ್ಟಿಯಲ್ಲಿ ಭಾಗವಹಿಸುವವರು ಆನ್ಲೈನ್ ಅರ್ಜಿಯ ಮೂಲಕ ತಮ್ಮ ಹಾಜರಾತಿಯನ್ನು ದೃಢಡಿಸಿದರು.ಗಗನ್ ಎಂದು ಗುರುತಿಸಲಾಗಿರುವ ರೆಸಾರ್ಟ್ನ ಮಾಲೀಕರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಮೇಲೆ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ದಾಳಿ ಮತ್ತು ಆರೋಪಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿದ ನಂತರ ವಶಕ್ಕೆ ಪಡೆದ ಎಲ್ಲರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಕಲೇಶಪುರದ ಉಪ ಅಧೀಕ್ಷಕ ಬಿ.ಆರ್.ಗೋಪಿ ಹೇಳಿದ್ದಾರೆ.
ಮಂಗಳೂರು : ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಏಪ್ರಿಲ್ 30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವಂತ ತಾಯಂದಿರಿಗೆ, ಆರೋಗ್ಯದ ಹಿತದೃಷ್ಠಿಯಿಂದ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸಲಾಗಿದೆ.
ಈ ಹಿಂದೆ ಮೊದಲ ಕೊರೋನಾ ಅಲೆಯ ಸಂದರ್ಭದಲ್ಲಿ 300ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿತ್ತು. ಹೀಗೆ ಕೊರೋನಾ 2ನೇ ಅಲೆಯ ಸಂದರ್ಭದಲ್ಲಿ ಆಗಬಾರದು ಎನ್ನುವ ಕಾರಣದಿಂದಾಗಿ, ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಯಾದಗಿರಿ : ಕೊರೋನಾ ಸೋಂಕಿನ ಕಾರಣದಿಂದಾಗಿ ಜಾತ್ರೆ, ಧಾರ್ಮಿಕ ಆಚರಣೆಗಳಂತ ಗುಂಪು ಸೇರುವ ಕಾರ್ಯಕ್ರಮ ನಿಷೇಧವಿದೆ. ಹೀಗಿದ್ದೂ ಜಿಲ್ಲೆಯಲ್ಲಿ ಆತ್ಮಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ನಡೆದಿದೆ. ರಥದ ಮೇಲ್ಬಾಗ ಮುರಿದು ಬಿದ್ದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳಿಚಕ್ರದಲ್ಲಿ ನಡೆದಿದೆ.
ಇಂದು ಕೊರೋನಾ ಸೋಂಕಿನ ಕಾರಣದಿಂದಾಗಿ ಜಾತ್ರಾ ಮಹೋತ್ಸವಕ್ಕೆ ನಿಷೇಧವಿದ್ದರೂ, ನಿಷೇಧದ ನಡುವೆಯೂ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ಆತ್ಮಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ನಡೆದಿದೆ.
ಇಂತಹ ಜಾತ್ರಾ ಮಹೋತ್ಸವದಲ್ಲಿ ಭಕ್ತರು ರಭಸವಾಗಿ ರಥವನ್ನು ಎಳೆಯುವಂತ ಸಂದರ್ಭದಲ್ಲಿ ರಥದ ಮೇಲ್ಬಾಗ ಮುರಿದು, ರಥ ಎಳೆಯುತ್ತಿದ್ದವರ ಮೇಲೆ ಬಿದ್ದ ಪರಿಣಾಮ, ಐವರು ತೀವ್ರವಾಗಿ ಗಾಯಗೊಂಡಿದ್ದರೇ, ಇನ್ನೂ ಅನೇಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ರಥೋತ್ಸವದ ವೇಳೆ ಉಂಟಾಗ ಅವಘಡದಿಂದಾಗಿ ಗಂಭೀರವಾಗಿ ಗಾಯಗೊಂಡವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಸೈದಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವಂತ ಅನಿರ್ಧಿಷ್ಟಾವಧಿಯ ಮುಷ್ಕರ 12ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ ಮಾತ್ರ ಬೇಡಿಕೆ ಈಡೇರಿಸುವಂತ ಯಾವುದೇ ಮಾತನಾಡದೇ, 6ನೇ ವೇತನ ಆಯೋಗದಂತೆ ವೇತನ ಜಾರಿ ಬಿಲ್ ಖುಲ್ ಇಲ್ಲ ಅಂದಿದೆ. ಇದರ ನಡುವೆ ಮುಷ್ಕರ ಮುಂದುವರೆದಿದ್ದು, ಇಂದು ಮುಷ್ಕರದ ನಡುವೆ ಮಧ್ಯಾಹ್ನ 1 ಗಂಟೆಯ ವೇಳೆ ರಾಜ್ಯಾಧ್ಯಂತ 6,110 ಸಾರಿಗೆ ಬಸ್ ಸಂಚಾರ ಆರಂಭಿಸಿವೆ.
ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯ ವೇಳೆಗೆ ರಾಜ್ಯಾಧ್ಯಂತ KSRTC 2746 ಬಸ್, BMTC 1191 ಬಸ್ ಗಳು, NEKRTC 1086 ಬಸ್, NWKRTC 1087 ಸೇರಿದಂತೆ ಒಟ್ಟು 6110 ಬಸ್ ಗಳು ಸಂಚಾರ ಆರಂಭಿಸಿರುವುದಾಗಿ ತಿಳಿಸಿದೆ.
ಅಂದಹಾಗೇ ಸಾರಿಗೆ ನೌಕರರ ಮುಷ್ಕರ ಈಡೇರಿಸೋ ಬಗ್ಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಇಂದು ಡೆಡ್ ಲೈನ್ ನೀಡಿದ್ದರು. ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ತೀರ್ವಗೊಳಿಸುವುದಾಗಿ ತಿಳಿಸಿದ್ದರು. ನಾಳೆಯಿಂದ ಸಾರಿಗೆ ನೌಕರರು ಜೈಲ್ ಭರೋ ಚಳುವಳಿ ಕೂಡ ನಡೆಸಲಿದ್ದಾರೆ ಎಂಬುದಾಗಿ ತಿಳಿಸಿದ್ದರು.
ಕೆಎನ್ಎನ್ ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದೆ. ದಿನವೊಂದಕ್ಕೆ 14 ಸಾವಿರಕ್ಕೂ ಹೆಚ್ಚು ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬರುತ್ತಿದೆ. ಈ ಮೊದಲು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಹೋಂ ಐಸೋಲೇಷನ್ ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ತೀರಾ ತುರ್ತು ಸಂದರ್ಭದಲ್ಲಿ ಮಾತ್ರವೇ ಸೋಂಕಿತರಿಗೆ ಮಾತ್ರವೇ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸೋಂಕಿತರಾಗಿದ್ದು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಇಲ್ಲವೇ ಕೊರೋನಾ ರೋಗದ ಲಕ್ಷಣಗಳಾಗಲಿ, ಸೋಂಕಿತರ ಸಂಪರ್ಕಿತರಾಗಿದ್ದರೇ, ನೀವು ಯಾವ ಔಷಧಿ ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಮುಂದೆ ಓದಿ..
ದಿನೇ ದಿನೇ ಕೊರೋನಾ ಸೋಂಕಿನ 2ನೇ ಅಲೆ ರಾಜ್ಯದಲ್ಲಿ ಆರ್ಭಟಿಸುತ್ತಿದೆ. ಸೋಂಕಿನ ನಿಯಂತ್ರಮಕ್ಕಾಗಿ ರಾಜ್ಯ ಸರ್ಕಾರ ಕೊರೋನಾ ಕರ್ಪ್ಯೂನಂತಹ ನಿಯಂತ್ರಣ ಕ್ರಮ ಕೈಗೊಂಡರು, ನಿಯಂತ್ರಣ ಮೀರಿ, ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇದರ ಮಧ್ಯೆ ಮದುವೆ ಸಮಾರಂಭಕ್ಕೆ ಜನ ಸೇರೋದಕ್ಕೆ ಮಿತಿಯನ್ನು ರಾಜ್ಯ ಸರ್ಕಾರ ಏರಿದೆ. ಒಂದು ವೇಳೆ ಈ ನಿಮಯ ಮೀರಿದ್ರೆ ಮದುವೆ ಮನೆಯವರ ವಿರುದ್ಧ ಎಫ್ಐಆರ್ ಕೂಡ ದಾಖಲಿಸೋದಾಗಿ ಖಡಕ್ ಎಚ್ಚರಿಕೆ ನೀಡಿದೆ. ಅಲ್ಲದೇ ಕಲ್ಯಾಣಮಂಟಪ ಬುಕ್ ಮಾಡೋದಕ್ಕೆ ಜಿಲ್ಲಾಧಿಕಾರಿಗಳ ಅನುಮತಿಯನ್ನು ಕಡ್ಡಾಯಗೊಳಿಸಿದೆ.
ಈ ಎಲ್ಲಾ ನಿಯಂತ್ರಣ ಕ್ರಮಗಳ ಮಧ್ಯೆಯೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ. ಹೊಸದಾಗಿ ದಿನವೊಂದಕ್ಕೆ 14 ಸಾವಿರಕ್ಕೂ ಹೆಚ್ಚು ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲುತ್ತಿದೆ. ಹೀಗೆ ಕೊರೋನಾ ಸೋಂಕಿತರಾದಂತವರಿಗೆ ಹೋಂ ಐಸೋಲೇಷನ್ ನಲ್ಲಿಯೇ ಚಿಕಿತ್ಸೆ ನೀಡುತ್ತಿದ್ದರೇ, ಮತ್ತೆ ಕೆಲವರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಹೀಗೆ ಹೋಂ ಐಸೋಲೇಷನ್ ನಲ್ಲಿ ಸೋಂಕಿತರಾದವರು, ಸೋಂಕಿತರ ಸಂಪರ್ಕದಿಂದಾಗಿ ಮನೆಯಲ್ಲೇ ಹೋಂ ಕ್ವಾರಂಟೈನ್ ಆಗಿರೋರು ಯಾವ ಯಾವ ಔಷಧಿಯನ್ನು ತೆಗೆದುಕೊಳ್ಳಬೇಕು ಎನ್ನುವ ಪಟ್ಟಿಯನ್ನು ಬಿಬಿಎಂಪಿಯು ಹೋಂ ಐಸೋಲೇಷನ್ ಮೆಡಿಕಲ್ ಕಿಟ್ ನಲ್ಲಿ ತಿಳಿಸಿದೆ. ಹಾಗಾದ್ರೇ ರೋಗದ ಲಕ್ಷಣಗಳಿದ್ದರೇ, ಇಲ್ಲದಿದ್ದಲೇ ಯಾವ ಔಷಧಿ ತೆಗೆದುಕೊಳ್ಳಬೇಕು ಎನ್ನುವ ಪಟ್ಟಿ ಈ ಕೆಳಗಿದೆ ನೋಡಿ..
ರೋಗ ಲಕ್ಷಣಗಳು ಇರದವರು, ಸೋಂಕಿತರ ಸಂಪರ್ಕಿತರು/For Asymptomatic ( No Symptoms )
10 ದಿನಗಳ ಕಾಲ – ವಿಟಮಿನ್ ಸಿ ಮಾತ್ರೆ (ಚೀಪುವುದು) 1-0-0 ತೆಗೆದುಕೊಳ್ಳುವುದು
10 ದಿನಗಳ ಕಾಲ – ಬಿ ಕಾಂಪ್ಲೆಕ್ಸ್ ಮಾತ್ರೆ ( ನುಂಗುವುದು) 1-0-0
ರೋಗ ಲಕ್ಷಣಗಳು ಸೌಮ್ಯ ಸ್ವರೂಪದಲ್ಲಿದ್ದರೇ / For Mild Symptoms
ಮಂಡ್ಯ : ಮದ್ದೂರು ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಿರುವುದರಿಂದ ಮಳೆ ನೀರು ಸಮರ್ಪಕವಾಗಿ ಹರಿದು ಹೋಗದೆ ಜಮೀನುಗಳಲ್ಲಿ ನಿಂತು ಕೊಳ್ಳುವ ಮೂಲಕ ಬೆಳೆಗಳು ನಾಶವಾಗಿವೆ ಎಂದು ಆರೋಪಿಸಿ ಕೋಡಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ನೀರು ತುಂಬಿದ ಜಮೀನಿಗಿಳಿದು ರೈತರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ಮಾಣ ಮಾಡದ ಕಾರಣ ಮಳೆ ನೀರು ಜಮೀನಿನಲ್ಲಿ ನಿಂತುಕೊಂಡು ರೈತರು ಕಷ್ಟ ಪಟ್ಟು ಬೆಳೆದ ಬೆಳೆಗಳು ನಾಶವಾಗುತ್ತಿವೆ ಎಂದು ಬೆಂ – ಮೈ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ಅಪ್ಪೇಗೌಡ ಮಾತನಾಡಿ ಹೆದ್ದಾರಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ಮಾಡದ ಕಾರಣ ಕೆ.ಕೋಡಿಹಳ್ಳಿ ಹಾಗೂ ಅಗರಲಿಂಗನದೊಡ್ಡಿ ಗ್ರಾಮಗಳ ಮಳೆ ನೀರು ಹಾಗೂ ಚರಂಡಿ ನೀರು ಸಮರ್ಪಕವಾಗಿ ಮುಂದಕ್ಕೆ ಹೋಗದೆ ಜಮೀನುಗಳಲ್ಲಿ ಎರಡು ಅಡಿ ನೀರು ಸಂಗ್ರಹವಾಗಿ ಬೆಳೆಗಳು ನಾಶವಾಗುವ ಸ್ಥಿತಿಗೆ ಬಂದಿದೆ ಹೆದ್ದಾರಿ ಕಾಮಗಾರಿಯನ್ನು ಮಾಡುವ ಮುನ್ನ ಮಳೆ ನೀರು ನಾಲೆಗಳ ಮೂಲಕ ವ್ಯವಸ್ಥಿತವಾಗಿ ಮುಂದಕ್ಕೆ ಹೋಗುತ್ತಿತ್ತು ಹೆದ್ದಾರಿ ಕಾಮಗಾರಿ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಈ ಸಂಬಂಧ ಯಾವುದೇ ಮುಂಜಾಗ್ರತೆ ವಹಿಸದೆ ಹೆದ್ದಾರಿ ಕಾಮಗಾರಿ ಮಾಡಿರುವುದರಿಂದ ಈ ಸಮಸ್ಯೆ ತಲೆದೋರಿದೆ ಶೀಘ್ರವಾಗಿ ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಕೊಡಬೇಕು ಹಾಗೂ ಪರಿಹಾರ ವಿತರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೈಪಾಸ್ ರಸ್ತೆ ಕಾಮಗಾರಿಯನ್ನು ತಡೆದು ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯುವ ರೈತ ಮಹದೇವು ಮಾತನಾಡಿ ನಾನು ಬೆಂಗಳೂರಿನಲ್ಲಿ ವಾಹನ ಚಾಲಕನಾಗಿ ಜೀವನ ಮಾಡುತ್ತಿದ್ದೆ ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದ ವೇಳೆ ಜೀವನ ನಿರ್ವಹಣೆ ಮಾಡಲು ಕಷ್ಟವಾದ ಕಾರಣ ಸ್ವಗ್ರಾಮಕ್ಕೆ ಬಂದು ಬೇಸಾಯ ಮಾಡಲು ನಿರ್ಧರಿಸಿ ಒಂದುವರೆ ಎಕರೆಯನ್ನು ಬೇರೆಯವರ ಜಮೀನನ್ನು ಪಾಲಿಗೆ ಪಡೆದು ಸಾವಿರಾರು ರೂಪಾಯಿ ಸಾಲ ಮಾಡಿ ರಾಗಿ ಬೆಳೆಯನ್ನು ಬೆಳೆದಿದ್ದೆ ಇನ್ನು ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಿದ್ದ ರಾಗಿ ಫಸಲು ಮಳೆ ನೀರಿನಿಂದ ಸಂಪೂರ್ಣವಾಗಿ ರಾಗಿ ಬೆಳೆ ನಾಶವಾಗಿದ್ದು ಇದರಿಂದ ಮತ್ತಷ್ಟು ಸಾಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಬೆಂಗಳೂರು : ರಾಜ್ಯ ಸರ್ಕಾರ ಈಗಾಗಲೇ ನೌಕರರ ಸಂಘಗಗಳನ್ನು ಬೇಡಿಕೆ ಈಡೇರಿಕೆ ಕುರಿತಂತೆ ಚರ್ಚಿಸಲು ಆಹ್ವಾನಿಸಿದೆ. ವೇತನ ಹೆಚ್ಚಳ ಮಾಡುವ ಭರವಸೆಯನ್ನು ನೀಡಿದೆ. ಸಿಎಂ ಹಾಗೂ ಸಾರಿಗೆ ಸಚಿವರು ಕೂಡ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಮುಷ್ಕರ ನಿರತ ನೌಕರರು ಸಂಧಾನದ ಮುಖಾಂತರ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಸಹಕರಿಸುವಂತೆ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಅಧ್ಯಕ್ಷ ಡಿ.ಎಸ್.ವೀರಯ್ಯ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ 30 ವರ್ಷಗಳಿಂದ ನಾನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷನಾಗಿ ಸಂಘವನ್ನು ಪ್ರತಿನಿಧಿಸುತ್ತಿದ್ದೇನೆ. 1992ರಲ್ಲಿ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ನಿಗಮಗಳಲ್ಲಿ ಕೆಲಸ ಮಾಡುತ್ತಿದ್ದ 996 ಚಾಲಕರು ಮತ್ತು ನಿರ್ವಾಹಕರುಗಳನ್ನು ವಿವಿಧ ಕಾರಣಗಳಿಂದ ವಜಾ ಮಾಡಲಾಗಿತ್ತು. ವಜಾ ಮಾಡಿದ್ದ ಎಲ್ಲಾ 996 ನೌಕರರನ್ನು ಪುನರ್ ನೇಮಕಗೊಳಿಸುವಲ್ಲಿ ಯಶಸ್ವಿಯಾಗಿದ್ದೆನು.
ಇದೀಗ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರದಲ್ಲಿ ಸಿಂಹಪಾಲು ನೌಕರರು ಪರಿಶಿಷ್ಟ ಜಾತಿ, ಪಂಗಡದವೇ ಭಾಗವಹಿಸಿ, ಮುಂಚೂಣಿಯಲ್ಲಿ ನಿಂತಿದ್ದಾರೆ. ಈ ಮುಷ್ಕರ ಕಾನೂನು ಬಾಹಿರ, ಕಾರ್ಮಿಕ ಕಾನೂನಿನ ವಿರುದ್ಧ ನಡೆಯುತ್ತಿದೆ. ನೌಕರರು ಸರ್ಕಾರದ ಭರವಸೆಗಳಿಗೆ ಓಗೊಟ್ಟು ಮುಷ್ಕರ ಮುಂದೂಡಬೇಕಾಗಿತ್ತು. ಸಂಖ್ಯಾಬಲ ಇದೆ ಎಂದು ನೌಕರರನ್ನು ಅಪಾಯಕ್ಕೆ ದೂಡುವುದು ಯಾವುದೇ ನಾಯಕತ್ವದ ಗುಣವಲ್ಲ ಮುಗ್ದ ನೌಕರರಿಗೆ ಇದರಿಂದ ತೊಂದರೆಗಳು ನಿಶ್ಚಿತ ಎಂದಿದ್ದಾರೆ.
ಆದುದ್ದರಿಂದ ಮುಷ್ಕರ ನಿರತ ಸಾರಿಗೆ ನೌಕರರು ಸಂಧಾನದ ಮುಖಾಂತರ ಸಂಘಟನೆಗೆ ಮತ್ತು ಆಡಳಿತ ಮಂಡಳಿಯ ಜೊತೆಗೆ ಚರ್ಚಿಸುವ ಮುಖಾಂತರ ಪರಿಹಾರ ಕಂಡುಕೊಳ್ಳಬೇಕು. ಮುಷ್ಕರದಲ್ಲಿ ಭಾಗವಹಿಸೋದನ್ನು ಬಿಟ್ಟು, ಕರ್ತವ್ಯಕ್ಕೆ ಹಾಜರಾಗಿ, ಮುಂದಾಗುವ ಅನಾಹುತಗಳಿಗೆ ಎಡೆಮಾಡಿಕೊಡದೆ ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರು : ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ರಾಗಿದ್ದ ಪ್ರೊ.ಎಂ ಎ ಹೆಗ್ಡೆ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದಂತ ಪ್ರೊ.ಎಂ.ಎ.ಹೆಗಡೆ ಅವರಿಗೆ ಏಪ್ರಿಲ್ 13ರಂದು ಕೊರೋನಾ ಸೋಂಕು ತಗುಲಿತ್ತು. ಇಂತಹ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೇ ಇಂದು ತೀವ್ರ ಉಸಿರಾಟದ ತೊಂದರೆ ಅನುಭವಿಸಿದಂತ ಅವರು, ಚಿಕಿತ್ಸೆಗೆ ಪ್ರತಿಸ್ಪಂದಿಸದೇ, ಕೊರೋನಾ ಸೋಂಕಿನಿಂದ ಬಲಿಯಾಗಿದ್ದಾರೆ.
ಈ ಬಗ್ಗ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಡಾ.ಸಿ.ಸೋಮಶೇಖರ್ ಸಂತಾಪ ಸೂಚಿಸಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ರಾಗಿದ್ದ ಶ್ರೀ ಎಂ ಎ ಹೆಗ್ಡೆ ಅವರ ನಿಧನದಿಂದಾಗಿ ಯಕ್ಷಗಾನ ಕ್ಷೇತ್ರಕ್ಕೆ ದೊಡ್ಡ ಅಘಾತವಾಗಿದೆ. ಉತ್ತಮ ವಾಗ್ಮಿ ಹಾಗೂ ನಿರ್ಭೀತ ಅಭಿವ್ಯಕ್ತಿ ಗೆ ಹೆಸರಾಗಿದ್ದ ಅವರು ಒಳ್ಳೆಯ ಸ್ನೇಹ ಜೀವಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ಇನ್ನೂ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರೂ, ಹಿರಿಯ ವಿದ್ವಾಂಸರೂ ಆದ ಪ್ರೊಫೆಸರ್
ಎಂ.ಎ.ಹೆಗಡೆ ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ಆಘಾತವಾಗಿದೆ. ಸಂಸ್ಕೃತ ವಿದ್ವಾಂಸರಾಗಿದ್ದ ಎಂ.ಎ.ಹೆಗಡೆ ಅವರು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಸುಮಾರು ಮೂರು ವರ್ಷಗಳಿಂದ ಅತ್ಯುತ್ತಮ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಯಕ್ಷಗಾನದ ಬಗ್ಗೆ ಅಪಾರ ಒಲವು ಹೊಂದಿದ್ದ ಶ್ರೀ ಎಂ.ಎ.ಹೆಗಡೆ ಅವರು ಯಕ್ಷಗಾನ ಬಗೆಗಿನ ಹಾಗೂ ಯಕ್ಷಗಾನ ಪ್ರಸಂಗದ ಬಗ್ಗೆ ಒಟ್ಟು ಸುಮಾರು ಇಪ್ಪತ್ತು ಪುಸ್ತಕಗಳನ್ನು ರಚಿಸಿದ್ದರು. ಅವರ ಅಕಾಲಿಕ ನಿಧನದಿಂದ ನಿಜಕ್ಕೂ ಸಾಂಸ್ಕೃತಿಕ ಲೋಕದ ದಿಗ್ಗಜ, ಸರಳ, ನೇರ, ದಿಟ್ಟ ಹಾಗೂ ಸಜ್ಜನ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಸಂತಾಪ ಸೂಚಿಸಿದ್ದಾರೆ.
ನವದೆಹಲಿ : ದೇಶದಲ್ಲಿ ಚಿನ್ನಾಭರಣಗಳ ಬೆಲೆ ಕೊಂಚ ಕೊಂಚ ನಿರಂತರವಾಗಿ ಏರಿಕೆಯಾಗುತ್ತಿದೆ, ಇಂದು ಭಾನುವಾರ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹4,600 ದಾಖಲಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹44,150 ರೂ ಮತ್ತು 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹48,160 ರೂಪಾಯಿ ದಾಖಲಾಗಿದೆ. ದೇಶದಲ್ಲಿ ಬೆಳ್ಳಿ ಬೆಲೆ ಕೆಜಿಗೆ ₹68,600 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹68,600 ಇದೆ.
ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:
ಬೆಂಗಳೂರು: ₹44,150(22 ಕ್ಯಾರಟ್) ₹48,160 (24 ಕ್ಯಾರಟ್), ಚೆನ್ನೈ: ₹44,520 (22 ಕ್ಯಾರಟ್) ₹48,560 (24 ಕ್ಯಾರಟ್) ಮತ್ತು ದೆಹಲಿಯಲ್ಲಿ : ₹46,260 (22 ಕ್ಯಾರಟ್), ₹50,410 (24 ಕ್ಯಾರಟ್) ದಾಖಲಾಗಿದೆ.
ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅಲ್ಲದೇ ನಾಳೆ ನಡೆಸಲು ಉದ್ದೇಶಿಸಲಾಗಿದ್ದಂತ ಸರ್ವಪಕ್ಷಗಳ ಸಭೆ ನಡೆಸುವ ಕುರಿತಂತೆಯೂ ಚರ್ಚಿಸಿದರು. ರಾಜ್ಯದಲ್ಲಿ ಸಮುದಾಯಕ್ಕೆ ಕೊರೋನಾ ಹರಡಿರೋ ಕಾರಣದಿಂದಾಗಿ ಶೇ.10ರಷ್ಟು ಪ್ರಮಾಣದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಕುರಿತಂತೆಯೂ ನಡೆಸಲಾಗುತ್ತಿದೆ ಎನ್ನಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕೊರೋನಾ 2ನೇ ಅಲೆಯ ಅಬ್ಬರವು ಸಮುದಾಯಕ್ಕೂ ಹರಡಿದೆ ಎನ್ನಲಾಗುತ್ತಿದೆ. ಹೀಗಾಗಿಯೇ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಕೂಡ ಕೈ ಮೀರಿ ಹೋಗಿದೆ ಎಂದೇ ಆರೋಗ್ಯ ಸಚಿವರು ತಿಳಿಸಿದ್ದರು. ಈ ಎಲ್ಲಾ ಕಾರಣದಿಂದಾಗಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಲಾಕ್ ಡೌನ್ ಒಂದೇ ಪರ್ಯಾಯ ಮಾರ್ಗ ಎನ್ನಲಾಗುತ್ತಿದೆ.
ಇಂದು ಕೊರೋನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವಂತ ಸಿಎಂ ಯಡಿಯೂರಪ್ಪ ಅವರನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ ಮಾಡಿದರು. ಈ ಬಳಿಕ ಮಾತನಾಡಿದಂತ ಅವರು, ತಜ್ಞರ ವರದಿಯನ್ನು ಸಿಎಂ ಭೇಟಿ ಮಾಡಿದಾಗ ನೀಡಿದ್ದೇನೆ. ಸಮುದಾಯಕ್ಕೆ ಕೊರೋನಾ ಹರಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ಕೂಡ ತಿಳಿಸಿದೆ. ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಬೆಂಗಳೂರು ಕೊರೋನಾ ಎರಡನೇ ಅಲೆಯ ಎಫಿಸೋಡ್ ಸೆಂಟರ್ ಆಗಿದೆ. ಇದರಿಂದಾಗಿ ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಗೊಳಿಸೋ ಅಗತ್ಯವಿದೆ. ಸಮುದಾಯಕ್ಕೆ ಕೊರೋನಾ ಹರಡಿರೋದ್ರಿಂದ ಶೇ.10ಕ್ಕೂ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ಕೊರೋನಾ ನಿಯಂತ್ರಣಕ್ಕಾಗಿ ಖಂಡಿತವಾಗಿ ಬೆಂಗಳೂರಿಗೆ ಪ್ರತ್ಯೇಕ ನಿಯಮ ಜಾರಿಗೊಳಿಸಲಾಗುತ್ತದೆ. ಕಠಿಣ ನಿಮಯ ಜಾರಿಗೊಳಿಸೋದು ಕಂಡಿತವಾಗಿದೆ ಎನ್ನುವ ಮೂಲಕ ನಾಳೆ ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆಯ ಸುಳಿವನ್ನು ನೀಡಿದ್ದಾರೆ.
ಕೊರೋನಾ 2ನೇ ಅಲೆಯ ಅಬ್ಬರ ಇಡೀ ದೇಶದಲ್ಲಿ ವೇಗವಾಗಿ ಹರಡುತ್ತಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಸಮುದಾಯಕ್ಕೆ ಹರಡಿದೆ. ಕೊರೋನಾ 2ನೇ ಅಲೆಯ ಗುಣವೇ ಹೀಗೆ, ವೇಗವಾಗಿ ಹರಡುತ್ತಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಶೇ.10ಕ್ಕಿಂತ ಹೆಚ್ಚಿನ ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ. ಇದರ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಯ ತುರ್ತು ಅಗತ್ಯವಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಲಾಗುತ್ತದೆ. ಇಂದು ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಆ ಬಳಿಕ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.
ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅಲ್ಲದೇ ನಾಳೆ ನಡೆಸಲು ಉದ್ದೇಶಿಸಲಾಗಿದ್ದಂತ ಸರ್ವಪಕ್ಷಗಳ ಸಭೆ ನಡೆಸುವ ಕುರಿತಂತೆಯೂ ಚರ್ಚಿಸಿದರು. ಅಲ್ಲದೇ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಕುರಿತಂತೆಯೂ ನಡೆಸಲಾಗುತ್ತಿದೆ ಎನ್ನಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕೊರೋನಾ 2ನೇ ಅಲೆಯ ಅಬ್ಬರವು ಸಮುದಾಯಕ್ಕೂ ಹರಡಿದೆ ಎನ್ನಲಾಗುತ್ತಿದೆ. ಹೀಗಾಗಿಯೇ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಕೂಡ ಕೈ ಮೀರಿ ಹೋಗಿದೆ ಎಂದೇ ಆರೋಗ್ಯ ಸಚಿವರು ತಿಳಿಸಿದ್ದರು. ಈ ಎಲ್ಲಾ ಕಾರಣದಿಂದಾಗಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಲಾಕ್ ಡೌನ್ ಒಂದೇ ಪರ್ಯಾಯ ಮಾರ್ಗ ಎನ್ನಲಾಗುತ್ತಿದೆ.
ಇಂದು ಕೊರೋನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವಂತ ಸಿಎಂ ಯಡಿಯೂರಪ್ಪ ಅವರನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ ಮಾಡಿದರು. ಈ ಬಳಿಕ ಮಾತನಾಡಿದಂತ ಅವರು, ತಜ್ಞರ ವರದಿಯನ್ನು ಸಿಎಂ ಭೇಟಿ ಮಾಡಿದಾಗ ನೀಡಿದ್ದೇನೆ. ಸಮುದಾಯಕ್ಕೆ ಕೊರೋನಾ ಹರಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ಕೂಡ ತಿಳಿಸಿದೆ. ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಬೆಂಗಳೂರು ಕೊರೋನಾ ಎರಡನೇ ಅಲೆಯ ಎಫಿಸೋಡ್ ಸೆಂಟರ್ ಆಗಿದೆ. ಇದರಿಂದಾಗಿ ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಗೊಳಿಸೋ ಅಗತ್ಯವಿದೆ. ಸಮುದಾಯಕ್ಕೆ ಕೊರೋನಾ ಹರಡಿರೋದ್ರಿಂದ ಶೇ.10ಕ್ಕೂ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ಕೊರೋನಾ ನಿಯಂತ್ರಣಕ್ಕಾಗಿ ಖಂಡಿತವಾಗಿ ಬೆಂಗಳೂರಿಗೆ ಪ್ರತ್ಯೇಕ ನಿಯಮ ಜಾರಿಗೊಳಿಸಲಾಗುತ್ತದೆ. ಕಠಿಣ ನಿಮಯ ಜಾರಿಗೊಳಿಸೋದು ಕಂಡಿತವಾಗಿದೆ ಎನ್ನುವ ಮೂಲಕ ನಾಳೆ ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆಯ ಸುಳಿವನ್ನು ನೀಡಿದ್ದಾರೆ.
ಬೆಂಗಳೂರು : ಕೇಂದ್ರದ ಸೂಚನೆಯ ವಿರುದ್ಧ ರಾಜ್ಯ ಕೃಷಿ ಇಲಾಖೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕಹೇಳಿರುವ ಹಳೆಯ ದಾಸ್ತಾನಿನ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಗೆ ತದ್ವಿರುದ್ಧವಾಗಿ ರಾಜ್ಯ ಕೃಷಿ ಇಲಾಖೆ ಆದೇಶ ಹೊರಡಿಸಿದೆ ಎಂಬುದು ಶುದ್ಧ ಸುಳ್ಳಾಗಿದ್ದು,ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡರ ಹೇಳಿಕೆ ವಿರುದ್ಧ ಯಾವುದೇ ಆದೇಶ ರಾಜ್ಯ ಕೃಷಿ ಇಲಾಖೆ ಹೊರಡಿಸಿಲ್ಲ ಎಂದಿದ್ದಾರೆ.
ಹಳೆಯ ರಸಗೊಬ್ಬರ ದಾಸ್ತಾನನ್ನು ಹಳೆಯ ದರದಲ್ಲೇ ಮಾರಾಟ ಮಾಡಬೇಕೆಂದು ರಸಗೊಬ್ಬರ ಮಾರಾಟಗಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಈ ಬಗ್ಗೆ ವ್ಯಾಪಕ ಪ್ರಚಾರ ಸಹ ಮಾಡಲಾಗುತ್ತಿದೆ.ಆದರೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಸಿದ್ದರಾಮಯ್ಯ ರಾಜ್ಯದ ರೈತರ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಎಪ್ರಿಲ್ ತಿಂಗಳಲ್ಲಿ ಡಿ.ಎ.ಪಿ. ರಸಗೊಬ್ಬರಕ್ಕೆ ಬೇಡಿಕೆ 77920 ಮೆ.ಟನ್ ಇದ್ದು, ಈಗಾಗಲೇ 125860 ಮೆ.ಟನ್ ದಾಸ್ತಾನಿರುತ್ತದೆ. ಮುಂಗಾರು ಹಂಗಾಮಿನ (ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ) ಕಾಂಪ್ಲೆಕ್ಸ್ (NPK fertilizer) ರಸಗೊಬ್ಬರಗಳ ಒಟ್ಟು ಬೇಡಿಕೆ 10.03 ಲಕ್ಷ ಮೆ.ಟನ್ ಇದ್ದು ಏಪ್ರಿಲ್ ತಿಂಗಳ ಬೇಡಿಕೆ 1.68 ಲಕ್ಷ ಮೆ.ಟನ್ ಇರುತ್ತದೆ. ಈಗಾಗಲೇ 5.19 ಲಕ್ಷ ಮೆ.ಟನ್ ದಾಸ್ತಾನಿರುತ್ತದೆ ಎಂದಿದ್ದಾರೆ.
ರಸಗೊಬ್ಬರ ಮಾರಾಟಗಾರರು ಯಾವುದೇ ಕಾರಣಕ್ಕೂ ದಾಸ್ತಾನು ಇರುವ ಹಳೆಯ ರಸಗೊಬ್ಬರವನ್ನು ಹೊಸದರದಲ್ಲಿ ವಿತರಿಸದೇ ಹಳೆಯ ದಾಸ್ತಾನನ್ನು ಹಳೆಯ ದರದಲ್ಲಿಯೇ ಮಾರಾಟ ಮಾಡಬೇಕೆಂದು ಕೃಷಿ ಸಚಿವರು ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ 2021ರ ಜೆಇಇ ಮುಖ್ಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಸರ್ರಾಕ ಮಾಹಿತಿ ನೀಡಿದ್ದು, ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲಿಂದಾಗಿ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗುತ್ತಿದೆ. ಜೆಇಇ ಮುಖ್ಯ ಪರೀಕ್ಷೆಯ ಮುಂದಿನ ದಿನಾಂಕವನ್ನು 15 ದಿನಗಳ ನಂತ್ರ ಪ್ರಕಟಿಸುವುದಾಗಿ ತಿಳಿಸಿದೆ.
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕೊರೊನಾ ಸ್ಥಿತಿ ಕೈ ಮೀರಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕಠಿಣ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ. ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂಬ ವಿಚಾರವನ್ನು ಕೇಂದ್ರ ಸರ್ಕಾರವೇ ಹೇಳಿದ್ದು, ಈ ವಿಚಾರ ನಮ್ಮ ಗಮನಕ್ಕೂ ಬಂದಿದೆ ಎಂದು ಹೇಳಿದ್ದಾರೆ.
ನಾಳೆ ಕಂದಾಯ ಸಚಿವ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಜಯಪುರ : ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಏ.19 ರಂದು ನಡೆಯಬೇಕಿದ್ದ ಅಕ್ಕಮಹಾದೇವಿ ಮಹಿಳಾ ವಿವಿಯ ಯುಜಿ, ಪಿಜಿ ಪರೀಕ್ಷೆ ಮುಂದೂಡಿಕೆಯಾಗಿದೆ.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ವಿವಿ ಈ ಸಂಬಂಧ ಪ್ರಕಟಣೆ ಹೊರಡಿಸಿದೆ.ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿಬರಲು ಸಮಸ್ಯೆ ಆದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ವಿವಿ ಮಾಹಿತಿ ನೀಡಿದೆ.
ಏಪ್ರಿಲ್ 19ರಂದು ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಪರೀಕ್ಷೆ ಕುರಿತ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ವಿವಿಯ ಕುಲಸಚಿವರು (ಮೌಲ್ಯಮಾಪನ) ಸುತ್ತೋಲೆ ಹೊರಡಿಸಿದ್ದಾರೆ.
ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ಏಪ್ರಿಲ್ 19, 20 ಮತ್ತು 21 ರಿಂದ ನಡೆಯಬೇಕಿದ್ದ ಪದವಿಪೂರ್ವ ಮತ್ತು ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಶನಿವಾರ ಮುಂದೂಡಿದೆ. ವಿಶ್ವವಿದ್ಯಾನಿಲಯವು ಪದವಿಪೂರ್ವ ಕೋರ್ಸ್ಗಳ ಮೊದಲ ಮತ್ತು ಮೂರನೇ ಸೆಮಿಸ್ಟರ್ ಮತ್ತು ಮೂರನೇ ಮತ್ತು ಐದನೇ ಸೆಮಿಸ್ಟರ್ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ಮುಂದೂಡಿದೆ.
ಕಲಬುರಗಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಆಳಂಗಾ ಗ್ರಾಮದ 60 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ಆಳಂಗಾ ಗ್ರಾಮ ಒಂದರಲ್ಲೇ ಏಕಾಏಕಿ 60 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಗ್ರಾಮದ ಜನರಿಗೆ ಮತ್ತಷ್ಟು ಆತಂಕ ಹುಟ್ಟಿಸಿದೆ. ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಿಂದ ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಮನೆಗೆ ಭಾಗವತ ಪುರಾಣ ಓದಲು ಬಂದಿದ್ದರು. ಅವರ ಬಂದು ಹೋದ ನಂತರ 60 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಗ್ರಾಮದಲ್ಲಿ ಇದೀಗ ಮತ್ತಷ್ಟು ಆತಂಕ ಶುರುವಾಗಿದೆ.
ರಾಜ್ಯದಲ್ಲಿ ನಿನ್ನೆ ಒಂದೇ ದಿನ 17,489 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,41,998 ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ 80 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 13270 ಕ್ಕೆ ಏರಿಕೆಯಾಗಿದೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿಗೆ ತರುವ ಸಂಬಂಧ ನಾಳೆ ರಾಜ್ಯ ಸರ್ಕಾರದಿಂದ ಮಹತ್ವದ ಸಭೆ ನಡೆಯಲಿದೆ.
ಈ ಕುರಿತು ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್, ಕೋವಿಡ್-19 ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ದೇಶನದಂತೆ ಸಭೆ ನಡೆಯುತ್ತಿದೆ. ಕರ್ನಾಟಕದ ಸಕ್ರಿಯ ಕೋವಿಡ್-19 ಪ್ರಕರಣಗಳಲ್ಲಿ ಶೇ.75ರಷ್ಟು ಇರುವ ಬೆಂಗಳೂರಿನಲ್ಲಿ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ತೆಗೆದುಕೊಳ್ಳುವ ಕ್ರಮಗಳನ್ನು ನಿರ್ಧರಿಸಲು ಈ ಸಭೆಯ ಫಲಿತಾಂಶ ನಿರ್ಣಾಯಕವಾಗಲಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಹೆಚ್ಚಿರುವ ಸ್ಥಳಗಳಲ್ಲಿ, ಜನರು ಸೇರುವ ಸಾರ್ವಜನಿಕ ಸ್ಥಳಗಳನ್ನು ಮುಚ್ಚುವುದು ಸೇರಿದಂತೆ ಇನ್ನೂ ಕೆಲವು ನಿರ್ಬಂಧಗಳನ್ನು ವಿಧಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಕೊರೊನಾ ವೈರಸ್ ಕುರಿತಂತೆ ಕಠಿಣ ನಿಯಮಗಳ ಜಾರಿ ಮಾಡುವ ಸಂಬಂದ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಆದರೆ ಸಿಎಂ ಬಿಎಸ್ ವೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.
ಬೆಂಗಳೂರು:ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ಏಪ್ರಿಲ್ 19, 20 ಮತ್ತು 21 ರಿಂದ ನಡೆಯಬೇಕಿದ್ದ ಪದವಿಪೂರ್ವ ಮತ್ತು ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಶನಿವಾರ ಮುಂದೂಡಿದೆ. ವಿಶ್ವವಿದ್ಯಾನಿಲಯವು ಪದವಿಪೂರ್ವ ಕೋರ್ಸ್ಗಳ ಮೊದಲ ಮತ್ತು ಮೂರನೇ ಸೆಮಿಸ್ಟರ್ ಮತ್ತು ಮೂರನೇ ಮತ್ತು ಐದನೇ ಸೆಮಿಸ್ಟರ್ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ಮುಂದೂಡಿದೆ.
ಬೆಂಗಳೂರು ವಿಶ್ವವಿದ್ಯಾಲಯವು ಏಪ್ರಿಲ್ 19 ರಿಂದ ಪ್ರಾರಂಭವಾಗುವ ವಿಶ್ವವಿದ್ಯಾಲಯ ವಿಶ್ವೇಶ್ವರಯ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ, ದ್ವಿತೀಯ ಮತ್ತು ಮೂರನೇ ಸೆಮಿಸ್ಟರ್ ಬಿಆರ್ಚ್ / ಬಿಟೆಕ್ (ಸಿಬಿಸಿಎಸ್ ಯೋಜನೆ) ಅನ್ನು ಮುಂದೂಡಿದೆ. ಅಲ್ಲದೆ, ಮೂರನೇ ಸೆಮಿಸ್ಟರ್ ಎಂಬಿಎ / ಎಂಸಿಎ / ಎಂ.ಎಡ್ / ಎಂಎಸ್ಸಿ (ಅಂಕಿಅಂಶ) ಪರೀಕ್ಷೆಯನ್ನು ಏಪ್ರಿಲ್ 20 ರಿಂದ ನಡೆಯುವುದಿತ್ತು. .
ಎಂಎ, ಎಂಎಸ್ಸಿ ಮತ್ತು ಎಂಕಾಮ್ ಸೇರಿದಂತೆ ಕಾರ್ಯಕ್ರಮಗಳ ಮೂರನೇ ಸೆಮಿಸ್ಟರ್ ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ವಿಶ್ವವಿದ್ಯಾಲಯವು ಮುಂದೂಡಿದೆ.
ಎಂಸಿಎ ಮತ್ತು ಬಿಎಸ್ಸಿ-ಎಂಎಸ್ಸಿ ಜೈವಿಕ ವಿಜ್ಞಾನ ಮತ್ತು ಎಂಟಿಎ ಐದು ವರ್ಷಗಳ ಸಂಯೋಜಿತ ಕೋರ್ಸ್ ಸೇರಿದಂತೆ ಕಾರ್ಯಕ್ರಮಗಳ ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಏಪ್ರಿಲ್ 20 ರಿಂದ ನಡೆಸಲು ನಿರ್ಧರಿಸಲಾಗಿತ್ತು.
ವಿಶ್ವವಿದ್ಯಾಲಯವು ಹೊಸ ಪರೀಕ್ಷೆಯ ದಿನಾಂಕಗಳನ್ನು ನಂತರ ಪ್ರಕಟಿಸುತ್ತದೆ.
ಶುಕ್ರವಾರ, ವಾರ್ಸಿಟಿ ಪರೀಕ್ಷೆಯನ್ನು ಮುಂದೂಡುವುದಾಗಿ ಘೋಷಿಸಿತು. ಬಿಡುಗಡೆಯೊಂದರಲ್ಲಿ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ವೇಣುಗೋಪಾಲ್ ಕೆ.ಆರ್ ಅವರು ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಮತ್ತು ಕರ್ಫ್ಯೂಗಳು ಮತ್ತು ನಡೆಯುತ್ತಿರುವ ಬಸ್ ಮುಷ್ಕರದಿಂದಾಗಿ ಸಾರಿಗೆ ವ್ಯವಸ್ಥೆ ಯ ಸಮಸ್ಯೆಗಳಿವೆ ಎಂದರು.
ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಿರತ ಬಿಎಂಟಿಸಿ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಶನಿವಾರವೊಂದೇ ದಿನ 2,443 ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ, ಗಾಂಧಿನಗರ, ಬೆಂಗಳೂರು ರವರು ನಡೆಸುತ್ತಿರುವ ಕಾನೂನು ಬಾಹಿರ ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಹಾಗೂ ಕರ್ತವ್ಯಕ್ಕೆ ಹಾಜರಾಗದಂತೆ ಸಹ ನೌಕರರನ್ನು ಸಹ ಪ್ರಚೋದಿಸಿರುತ್ತಾರೆ, ಆದ್ದರಿಂದ ಸದರಿ ಸಿಬ್ಬಂದಿ ಸಂಸ್ಥೆಯ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹಾಗೂ ಸಂಸ್ಥೆಯು ಅಳವಡಿಸಿಕೊಂಡಿರುವ ಕ.ರಾ.ರ.ಸಂಸ್ಥೆಯ ನೌಕರರ ( ನಡತೆ ಮತ್ತು ಶಿಸ್ತು) ನಿಯಮಾವಳಿ 1971 ರ ನಿಯಮ -23 ರ ಅಡಿಯಲ್ಲಿ ಆರೋಪಣಾ ಪತ್ರವನ್ನು ಜಾರಿಗೊಳಿಸಲಾಗಿದೆ ಎಂದು ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸಾರಿಗೆ ನೌಕರರು ಆರನೆ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಷ್ಕರ ನಿರತ ನೌಕರರಿಗೆ ಅಮಾನತು ಮಾಡಿದೆ.
ಬೆಂಗಳೂರು:ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಕಾರ್ಡ್ ಅನೇಕ ಹಣಕಾಸಿನ ಕಾರ್ಯಗಳಿಗೆ ಅಗತ್ಯವಾದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ನೀವು 50,000 ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿರುವಾಗ ಪ್ಯಾನ್ ಕಾರ್ಡ್ ತೋರಿಸುವುದು ಅಗತ್ಯವಾಗಿರುತ್ತದೆ. ಪ್ಯಾನ್ ಕಾರ್ಡ್ ಇಲ್ಲದ ಜನರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಕೆಲವೇ ನಿಮಿಷಗಳಲ್ಲಿ ತಮ್ಮ ಇ-ಪ್ಯಾನ್ ಕಾರ್ಡ್ ಪಡೆಯಬಹುದು. ಇ-ಪ್ಯಾನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಲು, ಗ್ರಾಹಕರು ತಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಸಲ್ಲಿಸಬೇಕು ಮತ್ತು ಅಪ್ಲಿಕೇಶನ್ಗೆ ಯಾವುದೇ ಶುಲ್ಕ ಅಗತ್ಯವಿಲ್ಲ.
ಆಧಾರ್ ಕಾರ್ಡ್ ಮೂಲಕ ಪ್ಯಾನ್ ಕಾರ್ಡ್ ತಯಾರಿಸುವ ಹಂತ ಹಂತದ ಪ್ರಕ್ರಿಯೆಯನ್ನು ತಿಳಿಯಿರಿ.
ಹಂತ 1: ಆದಾಯ ತೆರಿಗೆ ಇಲಾಖೆಯ www.incometaxindiaefiling.gov.in ನ ಇ-ಫೈಲಿಂಗ್ ವೆಬ್ಸೈಟ್ಗೆ ಹೋಗಿ.
ಹಂತ 2: ಈಗ ಮುಖಪುಟದಲ್ಲಿರುವ ‘ಕ್ವಿಕ್ ಲಿಂಕ್ಸ್’ ವಿಭಾಗಕ್ಕೆ ಹೋಗಿ ಮತ್ತು ‘ತ್ವರಿತ ಪ್ಯಾನ್ ಮೂಲಕ ಆಧಾರ್’ .
ಹಂತ 3: ನಂತರ ‘ಹೊಸ ಪ್ಯಾನ್ ಪಡೆಯಿರಿ’ ಲಿಂಕ್ ಅನ್ನು . ಇದು ನಿಮ್ಮನ್ನು ತ್ವರಿತ ಪ್ಯಾನ್ ವಿನಂತಿ ವೆಬ್ಪುಟಕ್ಕೆ ಕರೆದೊಯ್ಯುತ್ತದೆ.
ಹಂತ 4: ಈಗ ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ನಮೂದಿಸುವ ಮೂಲಕ ದೃಢೀಕರಿಸಿ.
ಹಂತ 5: ಈಗ ಜನರೇಟ್ ಆಧಾರ್ ಒಟಿಪಿ . ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ನೀವು ಒಟಿಪಿ ಸ್ವೀಕರಿಸುತ್ತೀರಿ.
ಹಂತ 6: ಪಠ್ಯ ಪೆಟ್ಟಿಗೆಯಲ್ಲಿ ಒಟಿಪಿ ನಮೂದಿಸಿ ಮತ್ತು ‘ಮೌಲ್ಯೀಕರಿಸಿ ಆಧಾರ್ ಒಟಿಪಿ’ . ಇದರ ನಂತರ, ಮುಂದುವರಿಸಿ ಬಟನ್ .
ಹಂತ 7: ಈಗ ನಿಮ್ಮನ್ನು ಪ್ಯಾನ್ ವಿನಂತಿ ಸಲ್ಲಿಕೆ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ, ಇಲ್ಲಿ ನೀವು ನಿಮ್ಮ ಆಧಾರ್ ವಿವರಗಳನ್ನು ದೃಢೀಕರಿಸಬೇಕು ಮತ್ತು ನಿಯಮಗಳು ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳಬೇಕು.
ಹಂತ 8: ಇದರ ನಂತರ, ‘ಸಲ್ಲಿಕೆ ಪ್ಯಾನ್ ವಿನಂತಿ’ .
ಹಂತ 9: ಈಗ ಇದರ ನಂತರ, ದಾಖಲಾತಿ ಸಂಖ್ಯೆಯನ್ನು ರಚಿಸಲಾಗುತ್ತದೆ.
ಡೌನ್ಲೋಡ್ ಪ್ರಕ್ರಿಯೆ
ನೀವು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್ಸೈಟ್ನ ಮುಖಪುಟದಲ್ಲಿರುವ ‘ಕ್ವಿಕ್ ಲಿಂಕ್ಸ್’ ವಿಭಾಗಕ್ಕೆ ಹೋಗಿ ‘ತ್ವರಿತ ಪ್ಯಾನ್ ಮೂಲಕ ಆಧಾರ್’ . ಇದರ ನಂತರ ನೀವು ಇಲ್ಲಿ ‘ಚೆಕ್ ಸ್ಟೇಟಸ್ / ಡೌನ್ಲೋಡ್ ಪ್ಯಾನ್’ ಬಟನ್ . ಇಲ್ಲಿ ನೀವು ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸುವ ಮೂಲಕ ನಿಮ್ಮ ಪ್ಯಾನ್ ಕಾರ್ಡ್ನ ಸ್ಥಿತಿಯನ್ನು ಪರಿಶೀಲಿಸಬಹುದು. ನಿಮ್ಮ ಪ್ಯಾನ್ ಕಾರ್ಡ್ ಅನ್ನು ನೀವು ಇಲ್ಲಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಒನ್ ನೇಶನ್ ಒನ್ ರೇಷನ್ ಕಾರ್ಡ್ ಆ್ಯಪ್ ನಲ್ಲಿ ಕನ್ನಡ ಭಾಷೆಯನ್ನೂ ಅಳವಡಿಸಲಾಗಿದೆ.
ಹೌದು, ಒನ್ ನೇಶನ್ ಒನ್ ರೇಶನ್ ಕಾರ್ಡ್ ಆ್ಯಪ್ ನಲ್ಲಿ ಈ ಮೊದಲು ಇಂಗ್ಲಿಷ್ ಮತ್ತು ಹಿಂದಿ ಭಾಷೆ ಮಾತ್ರ ಇತ್ತು. ಇದೀಗ ಕನ್ನಡ ಭಾಷೆಯನ್ನು ಅಳವಡಿಸಲಾಗಿದೆ. ಫಲಾನುಭವಿಗಳಿಗೆ ಆಹಾರ ಭದ್ರತೆ ಒದಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಒನ್ ನೇಶನ್ ಒನ್ ರೇಶನ್ ಕಾರ್ಡ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ಈಗ ಕೇಂದ್ರ ಸರ್ಕಾರ ಈ ಆ್ಯಪ್ ನಲ್ಲಿ ಕನ್ನಡ, ತಮಿಳು, ಮಲಯಾಳಂ, ಪಂಜಾಬಿ ಹಾಗೂ ಒರಿಯಾ ಭಾಷೆಯನ್ನೂ ಸೇರಿಸಿದೆ.
ಒನ್ ನೇಶನ್ ಒನ್ ರೇಶನ್ ಕಾರ್ಡ್ ಆ್ಯಪ್ ನಲ್ಲಿ ಕೇವಲ ಆಧಾರ್ ನಂಬರ್ ಸಹಾಯದಿಂದ ಪಡಿತರ ವ್ಯವಹಾರ, ಪಡಿತ ಲಭ್ಯತೆ ಹಾಗೂ ಜಿಪಿಎಸ್ ಮೂಲಕ ಹತ್ತಿರದ ಪಡಿತರ ಅಂಗಡಿ ಕುರಿತು ಮಾಹಿತಿ ಲಭ್ಯವಾಗಲಿದೆ. ವಲಸಿಗರಿಗೆ ದೇಶದ ಯಾವುದೇ ಭಾಗದಲ್ಲೂ ಸುಲಭವಾಗಿ ಪಡಿತರ ಆಹಾರ ಧಾನ್ಯ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ಒನ್ ನೇಶನ್ ಒನ್ ರೇಶನ್ ಕಾರ್ಡ್ ಆ್ಯಪ್ ಜಾರಿಗೆ ತಂದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಲಯಮಟ್ಟದಲ್ಲಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೋವಿಡ್ 19 ನಿರ್ವಹಣೆ ಮಾಡಲು ಅವಶ್ಯವಿರುವ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ 6 ತಿಂಗಳ ಅವಧಿಗೆ ತುರ್ತಾಗಿ ನೇಮಕ ಮಾಡಿಕೊಳ್ಳುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಎಲ್ಲಾ ಹಂತಗಳಲ್ಲಿ ನಿರ್ವಹಣೆ ಮಾಡಲು ಮಾನಸ ಸಂಪನ್ಮೂಲ ಅವಶ್ಯಕತೆ ಇರುವುದಿರಂದ ವಲಯ ಮಟ್ಟದಲ್ಲಿ ಅವಶ್ಯಕತೆಗೆ ಅನುಗುಣವಾಗಿ 6 ತಿಂಗಳ ಅವಧಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ತಮ್ಮ ವಲಯ ಮಟ್ಟದಲ್ಲಿ ನೇಮಕ ಮಾಡಿಕೊಳ್ಳುವಂತೆ ಬಿಬಿಎಂಪಿ ಸೂಚಿಸಿದೆ.
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 22 ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಏಪ್ರಿಲ್ 20 ರವರೆಗೆ ಸಾಧಾರಣೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ನಿನ್ನೆ ಸರಾಸರಿ 40.25 ಮಿ.ಮೀ ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಸರಾಸರಿ 16.07 ಮಿ.ಮೀ, ವಿರಾಜಪೇಟೆಯಲ್ಲಿ ಸರಾಸರಿ 12.75 ಮಿ.ಮೀ ಮಳೆಯಾಗಿದ್ದು, ಇಂದಿನಿಂದ 5 ದಿನ ಮತ್ತೆ ಸಾಧಾರಣೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಂದಿಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಇನ್ಮುಂದೆ ನಡೆಯುವ ಮದುವೆಗಳಿಗೆ ಪಾಸ್ ಕಡ್ಡಾಯಗೊಳಿಸುವ ಜೊತೆಗೆ ನಿಷೇಧಿತ ಜಾತ್ರೆಗಳು ನಡೆದಲ್ಲಿ ಅದಕ್ಕೆ ಆಯಾ ಜಿಲ್ಲಾಧಿಕಾರಿಗಳು, ಎಸ್ಪಿಗಳನ್ನೇ ಹೊಣೆಗಾರರನ್ನಾಗಿ ಮಾಡುವ ತೀರ್ಮಾನಕ್ಕೆ ಬಂದಿದೆ.
ಸಚಿವರಾದ ಆರ್. ಅಶೋ,ಕ್ ಬಸವರಾಜ ಬೊಮ್ಮಾಯಿ ಹಾಗೂ ಡಾ.ಕೆ. ಸುಧಾಕರ್ ಅವರು ಶನಿವಾರ ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ಕೊರೊನಾ ಸೋಂಕು ಹೆಚ್ಚಳದ ಹಿನ್ನಲೆ ಇನ್ಮುಂದೆ ರಾಜ್ಯದಲ್ಲಿ ಯಾವುದೇ ಜಾತ್ರೆ ನಡೆಯಬಾರದು. ಜಾತ್ರೆಗಳು ನಡೆದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಮದುವೆ ಸಮಾರಂಭಗಳಿಗೆ ಪಾಸ್ ಕಡ್ಡಾಯವಾಗಿದೆ. ಒಳಾಂಗಣದಲ್ಲಿ 100 ಜನರಿಗೆ ಅವಕಾಶವಿದ್ದು, ಹೊರಾಂಗಣದಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಮದುವೆಗೆ ಮುನ್ನ ಸಮೀಪದ ಠಾಣೆಯಲ್ಲಿ ಪಾಸ್ ಪಡೆಯಬೇಕು ಎಂದು ಹೇಳಿದರು. ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ಪಾಸ್ ನಿಯಮ ಅನ್ವಯವಿಲ್ಲ, ಹೊಸದಾಗಿ ನಡೆಯುವುದಕ್ಕೆ ಪಾಸ್ ಅಗತ್ಯ ಎಂದು ಸ್ಪಷ್ಟಪಡಿಸಿದ್ದಾರೆ. ರಾಜಕೀಯ ಸಭೆ,ಸಮಾರಂಭಗಳಿಗೂ ಇದು ಅನ್ವಯವಾಗುತ್ತದೆ ಎಂದಿದ್ದಾರೆ.
ಸಚಿವ ಆರ್ ಅಶೋಕ್ ಅವರು ಜಿಲ್ಲಾ ಡಿಸಿಗಳೊಂದಿಗೆ ಇಂದು ಚರ್ಚೆ ನಡೆಸಿದ್ದು, ಬೆಂಗಳೂರಿಗೆ ಸಂಬಂಧಿಸಿದಂತೆ ಸೋಮವಾರ ಸಭೆ ನಡೆಸಲಾಗುವುದು. ರಾಜಧಾನಿಯಲ್ಲಿ ಸೋಂಕು ಹೆಚ್ಚಳ ಸಂಬಂಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಳಗಾವಿ : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಇಂದು ಸಂಜೆ 7 ಗಂಟೆಗೆ ಮುಕ್ತಾಯಗೊಂಡಿದೆ.
ಮತದಾನದ ಬಳಿಕ ಇವಿಎಂ, ವಿವಿ ಪ್ಯಾಟ್ ಗಳನ್ನು ಸಿಬ್ಬಂದಿ ಸ್ಟ್ರಾಂಗ್ ರೂಂಗೆ ಶಿಫ್ಟ್ ಮಾಡಿದರು. ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶೇ.70.30 ರಷ್ಟು ಮತದಾನವಾಗಿದೆ. ಬೆಳಗಾವಿಯಲ್ಲಿ ಶೇ.54,73 ರಷ್ಟು ಮತದಾನವಾಗಿದೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನಕ್ಕೆ ಸಮಯ ನಿಗದಿಮಾಡಲಾಗಿತ್ತು. ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ಸುರೇಶ್ ಅಂಗಡಿ ಪತ್ನಿ ಮಂಗಲಾ ಅಂಗಡಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ನಿಂದ ಶಾಸಕ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ದಾರೆ. ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್ ನಿಂದ ಬಿ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಬಿ. ನಾರಾಯಣರಾವ್ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಸ್ಪರ್ಧಿಸಿದ್ದಾರೆ. ಮಸ್ಕಿ ವಿಧಾನಸಭೆ ಉಪಚುನಾವಣೆ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಗೌಡ ಪಾಟೀಲ್ , ಕಾಂಗ್ರೆಸ್ ಪಕ್ಷದಿಂದ ಬಸನಗೌಡ ತುರವಿಹಾಳ ಸ್ಪರ್ಧಿಸಿದ್ದಾರೆ. ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಮೇ. 2 ರಂದು ಪ್ರಕಟವಾಗಲಿದೆ.
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ 11 ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಗೈರು ಹಾಜರಾದ 469 ಬಿಎಂಟಿಸಿ ಉದ್ಯೋಗಿಗಳನ್ನು ವಜಾ ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ.
ಹೌದು, ಪ್ರತಿಭಟನಾ ನಿರತ ಸಾರಿಗೆ ನೌಕರರ ವಿರುದ್ಧ ಬಿಎಂಟಿಸಿ ಕಠಿಣ ನಿಲುವು ತಾಳಿದ್ದು, ಇಂದು 469 ಸಿಬ್ಬಂದಿಯನ್ನು ಅಮಾನತು ಮಾಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ, ಗಾಂಧಿನಗರ, ಬೆಂಗಳೂರು ರವರು ನಡೆಸುತ್ತಿರುವ ಕಾನೂನು ಬಾಹಿರ ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಹಾಗೂ ಕರ್ತವ್ಯಕ್ಕೆ ಹಾಜರಾಗದಂತೆ ಸಹ ನೌಕರರನ್ನು ಸಹ ಪ್ರಚೋದಿಸಿರುತ್ತಾರೆ, ಆದ್ದರಿಂದ ಸದರಿ ಸಿಬ್ಬಂದಿ ಸಂಸ್ಥೆಯ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹಾಗೂ ಸಂಸ್ಥೆಯು ಅಳವಡಿಸಿಕೊಂಡಿರುವ ಕ.ರಾ.ರ.ಸಂಸ್ಥೆಯ ನೌಕರರ ( ನಡತೆ ಮತ್ತು ಶಿಸ್ತು) ನಿಯಮಾವಳಿ 1971 ರ ನಿಯಮ -23 ರ ಅಡಿಯಲ್ಲಿ ಆರೋಪಣಾ ಪತ್ರವನ್ನು ಜಾರಿಗೊಳಿಸಲಾಗಿದೆ ಎಂದು ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಕೇಂದ್ರ ಸರ್ಕಾರದ ಮಧ್ಯ ಪ್ರವೇಶದಿಂದ ಕೊರೊನಾ ಚಿಕಿತ್ಸೆಯಲ್ಲಿ ಸಾಮಾನ್ಯವಾಗಿ ಬಳಸಲಾಗುವ ರೆಮ್ಡೆಸಿವಿರ್ ಚುಚ್ಚುಮದ್ದು ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂಪಾಯಿಂದ 899 ರೂಪಾಯಿಗೆ ಇಳಿಸಿದೆ. ಬೇರೆ ಬೇರೆ ಕಂಪನಿಗಳ ವಿವಿಧ ಬ್ರಾಂಡಿನ ರೆಮ್ಡೆಸಿವಿರ್ ಬೆಲೆ ಈ ಮುಂದಿನಂತಿದೆ. ಡಾ ರೆಡ್ಡೀಸ್ ಕಂಪನಿಯ ರೆಡಿಕ್ಸ್ – ರೂ 2700 (ಈ ಮುಂಚಿನ ಬೆಲೆ ರೂ 5400); ಸಿಂಜಿನ್ (ಬಯೊಕಾನ್) ಕಂಪನಿಯ ರೆಮ್ವಿನ್ ರೂ 2450 (ರೂ 3950); ಸಿಪ್ಲಾ ಕಂಪನಿಯ ಸಿಪ್ರೆಮಿ ರೂ 3000 (ರೂ 4000); ಮಿಲನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಡೆಸ್ರೆಮ್ ರೂ 3400 (ರೂ 4800); ಜ್ಯುಬಿಲೆಂಟ್ ಜೆನರಿಕ್ಸ್ ಕಂಪನಿಯ ಜ್ಯುಬಿ-ಆರ್ ರೂ 3400 (ರೂ 4700) ಹಾಗೂ ಹೆಥೆರೋ ಹೆಲ್ತ್ಕೇರ್ ಕಂಪನಿಯ ಕೊವಿಫೊರ್ ರೂ 3490 (ರೂ 5400).
ಇಂದು ಸುದ್ದಿಗಾರರ ಜೊತೆ ಮಾತನಾಡಿದ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಬೆಲೆ ಇಳಿಸಿರುವ ಫಾರ್ಮಾ ಕಂಪನಿಗಳಿಗೆ ಧನ್ಯವಾದ ಅರ್ಪಿಸಿದರು. ರೆಮ್ಡೆಸಿವಿರ್ ಬೆಲೆ ಇಳಿಕೆಯಿಂದ ಬಳಕೆದಾರರಿಗೆ ಕನಿಷ್ಠವೆಂದರೂ 750 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದರು.
ಅದೇ ರೀತಿ ರೆಮ್ಡೆಸಿವಿರ್ ಮಾಸಿಕ ಉತ್ಪಾದನೆ ಸಾಮರ್ಥ್ಯವನ್ನು ಹೆಚ್ಚಿಸಲು ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ. ಅಮೆರಿಕದ ಗಿಲೀಡ್ ಸೈಯನ್ಸಸ್ (Gilead Sciences) ಕಂಪನಿಯು ರೆಮ್ಡೆಸಿವಿರ್ ಚುಚ್ಚುಮದ್ದಿನ ಪೆಟೆಂಟ್ ಹೊಂದಿದ್ದು ಭಾರತದ ಏಳು ಫಾರ್ಮಾ ಕಂಪನಿಗಳು ಉತ್ಪಾದನಾ ಲೈಸನ್ಸ್ ಪಡೆದಿವೆ. ಅವುಗಳ ಈಗಿನ ಸ್ಥಾಪಿತ ಉತ್ಪಾದನಾ ಸಾಮರ್ಥ್ಯ 38.8 ಲಕ್ಷ ವೈಯಲ್ಸ್ (ಬಾಟಲಿ). ಹೆಚ್ಚುವರಿಯಾಗಿ 35.3 ಲಕ್ಷ ವೈಯಲ್ಸ್ ಉತ್ಪಾದಿಸಲು ಅನುಮತಿ ನೀಡಲಾಗಿದೆ. ಇದರಿಂದ ಮಾಸಿಕ ರೆಮ್ಡೆಸಿವಿರ್ ಉತ್ಪಾದನೆ 74.1 ಲಕ್ಷ ವೈಯಲ್ಸಿಗೆ ಏರಿಕೆಯಾಗಲಿದೆ. ಸದ್ಯ ಪ್ರತಿದಿನ ಅಂದಾಜು 1.35 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಉತ್ಪಾದನೆಯಾಗುತ್ತಿದೆ. ರೆಮ್ಡೆಸಿವಿರ್ ರಫ್ತು ನಿಷೇಧಿಸಿರುವುದರಿಂದ ಹೆಚ್ಚುವರಿಯಾಗಿ ಸುಮಾರು 4 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಆಂತರಿಕ ಬಳಕೆಗೆ ಲಭ್ಯವಿದೆ. ಇನ್ನೊಂದು ವಾರೊಪ್ಪತ್ತಿನಲ್ಲಿಯೇ ಬೇಡಿಕೆ ಹಾಗೂ ಪೂರೈಕೆಯಲ್ಲಿ ಸಮತೋಲನ ಕಂಡುಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವ್ರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ನಿವಾಸದಲ್ಲಿಯೇ ಕ್ವಾರಂಟೈನ್ ಆಗಿದ್ರು. ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗದ ಕಾರಣ ಮಾಜಿ ಸಿಎಂ ಮನೆಯಲ್ಲಿಯೇ ಪ್ರತ್ಯೇಕವಾದ್ದಾರೆ ಅನ್ನೋ ಸುದ್ದಿಗಳು ಓಡಾದ್ವು. ಆದ್ರೆ, ಇದಕ್ಕೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಡಾ. ಸುಧಾಕರ್, ಮಣಿಪಾಲ್ ಹಾಗೂ ಅಪೋಲೋ ಆಸ್ಪತ್ರೆಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ದಾಖಲಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನಾನೇ ಖುದ್ದಾಗಿ ಅವರೊಂದಿಗೆ ಮಾತನಾಡಿರುವೆ, ನಿರಂತರ ಸಂಪರ್ಕದಲ್ಲಿರುವೆ. ಸುಳ್ಳು ಸುದ್ದಿ ಹಬ್ಬಿಸ್ಬೇಡಿ ಎಂದು ಸ್ಪಷ್ಟಪಡಿಸಿದರು.
ಅಂದ್ಹಾಗೆ, ಕುಮಾರಸ್ವಾಮಿಯವ್ರು ಸಧ್ಯ ಬನ್ನೇರುಘಟ್ಟ ರಸ್ತೆ ಬಳಿಯಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂತ್ರ ಆರೋಗ್ಯ ಸಚಿವ ಡಾ. ಸುಧಾಕರ್ ಅವ್ರಿಗೆ ಧನ್ಯವಾದ ತಿಳಿಸಿದ್ದಾರೆ. ಇಷ್ಟಕ್ಕೂ ಮಾಜಿ ಸಿಎಂ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾದ ನಂತ್ರ ಆರೋಗ್ಯ ಸಚಿವರಿಗೆ ಥ್ಯಾಂಕ್ಸ್ ಹೇಳಿದ್ಯಾಕೆ? ಇದಕ್ಕೂ ಕಾರಣವಿದೆ. ಅದನ್ನ ಸ್ವತಃ ಕುಮಾಸ್ವಾಮಿಯವ್ರೇ ಸರಣಿ ಟ್ವೀಟ್ʼಗಳ ಮೂಲಕ ಸ್ಪಷ್ಟ ಪಡಿಸಿದ್ದಾರೆ.
“ನನಗೆ ಇಂದು ಬೆಳಿಗ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾಕ್ಟರ್ ಮಂಜುನಾಥ್ ಹಾಗೂ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಕಾಯ್ದಿರಿಸಿದ್ದರು” ಎಂದಿದ್ದಾರೆ.
ನನಗೆ ಇಂದು ಬೆಳಿಗ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾಕ್ಟರ್ ಮಂಜುನಾಥ್ ಹಾಗೂ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾಕ್ಟರ್ ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಕಾಯ್ದಿರಿಸಿದ್ದರು… 1/4
“ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಗಿ ಆಗಬೇಕಾಗಿದ್ದರಿಂದ ಮಧ್ಯಾಹ್ನ ನಂತರ ಅಪೋಲೋ ಆಸ್ಪತ್ರೆಗೆ ದಾಖಲಾದೆ” ಎಂದು ಹೆಚ್ಡಿಕೆ ಹೇಳಿದ್ದಾರೆ.
ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. 2/4
ನಂತ್ರ “ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲೇ ಕೊರೊನಾ ಚಿಕಿತ್ಸೆ ಪಡೆಯಲು ತೀರ್ಮಾನಿಸಿ, ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಎಲ್ಲರಿಗೂ ನನ್ನ ಪ್ರಣಾಮಗಳು” ಎಂದು ಟ್ವೀಟ್ ಮಾಡಿದ್ದಾರೆ.
ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಗಿ ಆಗಬೇಕಾಗಿದ್ದರಿಂದ ಮಧ್ಯಾಹ್ನ ನಂತರ ಅಪೋಲೋ ಆಸ್ಪತ್ರೆಗೆ ದಾಖಲಾದೆ. 3/4
ವಿಜಯಪುರ : ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಏ.19 ರಂದು ನಡೆಯಬೇಕಿದ್ದ ಅಕ್ಕಮಹಾದೇವಿ ಮಹಿಳಾ ವಿವಿಯ ಯುಜಿ, ಪಿಜಿ ಪರೀಕ್ಷೆ ಮುಂದೂಡಿಕೆಯಾಗಿದೆ.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ವಿವಿ ಈ ಸಂಬಂಧ ಪ್ರಕಟಣೆ ಹೊರಡಿಸಿದೆ.ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿಬರಲು ಸಮಸ್ಯೆ ಆದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ವಿವಿ ಮಾಹಿತಿ ನೀಡಿದೆ.
ಏಪ್ರಿಲ್ 19ರಂದು ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಪರೀಕ್ಷೆ ಕುರಿತ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ವಿವಿಯ ಕುಲಸಚಿವರು (ಮೌಲ್ಯಮಾಪನ) ಸುತ್ತೋಲೆ ಹೊರಡಿಸಿದ್ದಾರೆ.
ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ಏಪ್ರಿಲ್ 19, 20 ಮತ್ತು 21 ರಿಂದ ನಡೆಯಬೇಕಿದ್ದ ಪದವಿಪೂರ್ವ ಮತ್ತು ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಶನಿವಾರ ಮುಂದೂಡಿದೆ. ವಿಶ್ವವಿದ್ಯಾನಿಲಯವು ಪದವಿಪೂರ್ವ ಕೋರ್ಸ್ಗಳ ಮೊದಲ ಮತ್ತು ಮೂರನೇ ಸೆಮಿಸ್ಟರ್ ಮತ್ತು ಮೂರನೇ ಮತ್ತು ಐದನೇ ಸೆಮಿಸ್ಟರ್ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ಮುಂದೂಡಿದೆ.
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 2ನೇ ಬಾರಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ನಡುವೆ ಸಮಯ ಕಳೆಯಲು ಸಿಎಂ ಆಸ್ಪತ್ರೆಯಲ್ಲಿ ಪುಸ್ತಕದ ಮೊರೆ ಹೋಗಿದ್ದಾರೆ.ಈ ಬಾರಿ ಸಿಎಂ ಯಡಿಯೂರಪ್ಪ ವಿಶೇಷ ಪುಸ್ತಕಗಳನ್ನು ಓದುತ್ತಿದ್ದಾರೆ.
ಮಹಾತ್ಮ ಗಾಂಧೀಜಿಯವರ ಆತ್ಮಕತೆ ಮೈ ಎಕ್ಸಪರಿಮೆಂಟ್ಸ್ ವಿತ್ ಟ್ರೂಥ್ ಕೃತಿ ಕನ್ನಡ ಅನುವಾದ ನನ್ನ ಸತ್ಯ ಶೋಧನೆಯ ಕತೆ ಹಾಗೂ ರವಿ ಬೆಳಗೆರೆಯ ಹಿಮಾಲಯನ್ ಬ್ಲಂಡರ್ , ಕುಂಟಿಕಾಕನಮಠ ಬಾಲಕೃಷ್ಣ ಭಟ್ ಬರೆದಿರುವ ಶ್ರೀ ಕೃಷ್ಣ ಕಥಾಮಂಜರಿ ಪುಸ್ತಕಗಳನ್ನು ಓದುತ್ತಿದ್ದಾರೆ. ಸದ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವ್ರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ. ಮೊದಲನೇ ಬಾರಿ ಕೋವಿಡ್ ಧೃಡವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿಡುವಿನ ಸಮಯದಲ್ಲಿ ಪುಸ್ತಕಗಳನ್ನು ಓದಿದ್ದರು.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕಂದಾಯ ಸಚಿವ ಆರ್ ಅಶೋಕ್ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅವರು ಇಂದು ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಳದ ಹಿನ್ನಲೆ ಇನ್ಮುಂದೆ ರಾಜ್ಯದಲ್ಲಿ ಯಾವುದೇ ಜಾತ್ರೆ ನಡೆಯಬಾರದು. ಜಾತ್ರೆಗಳು ನಡೆದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಮದುವೆ ಸಮಾರಂಭಗಳಿಗೆ ಪಾಸ್ ಕಡ್ಡಾಯವಾಗಿದೆ. ಒಳಾಂಗಣದಲ್ಲಿ 100 ಜನರಿಗೆ ಅವಕಾಶವಿದ್ದು, ಹೊರಾಂಗಣದಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಮದುವೆಗೆ ಮುನ್ನ ಸಮೀಪದ ಠಾಣೆಯಲ್ಲಿ ಪಾಸ್ ಪಡೆಯಬೇಕು ಎಂದು ಹೇಳಿದರು. ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ಪಾಸ್ ನಿಯಮ ಅನ್ವಯವಿಲ್ಲ, ಹೊಸದಾಗಿ ನಡೆಯುವುದಕ್ಕೆ ಪಾಸ್ ಅಗತ್ಯ ಎಂದು ಸ್ಪಷ್ಟಪಡಿಸಿದ್ದಾರೆ. ರಾಜಕೀಯ ಸಭೆ,ಸಮಾರಂಭಗಳಿಗೂ ಇದು ಅನ್ವಯವಾಗುತ್ತದೆ ಎಂದಿದ್ದಾರೆ.
ಸಚಿವ ಆರ್ ಅಶೋಕ್ ಅವರು ಜಿಲ್ಲಾ ಡಿಸಿಗಳೊಂದಿಗೆ ಇಂದು ಚರ್ಚೆ ನಡೆಸಿದ್ದು, ಬೆಂಗಳೂರಿಗೆ ಸಂಬಂಧಿಸಿದಂತೆ ಸೋಮವಾರ ಸಭೆ ನಡೆಸಲಾಗುವುದು. ರಾಜಧಾನಿಯಲ್ಲಿ ಸೋಂಕು ಹೆಚ್ಚಳ ಸಂಬಂಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಂಗಳೂರು:ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ಏಪ್ರಿಲ್ 19, 20 ಮತ್ತು 21 ರಿಂದ ನಡೆಯಬೇಕಿದ್ದ ಪದವಿಪೂರ್ವ ಮತ್ತು ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಶನಿವಾರ ಮುಂದೂಡಿದೆ. ವಿಶ್ವವಿದ್ಯಾನಿಲಯವು ಪದವಿಪೂರ್ವ ಕೋರ್ಸ್ಗಳ ಮೊದಲ ಮತ್ತು ಮೂರನೇ ಸೆಮಿಸ್ಟರ್ ಮತ್ತು ಮೂರನೇ ಮತ್ತು ಐದನೇ ಸೆಮಿಸ್ಟರ್ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ಮುಂದೂಡಿದೆ.
ಬೆಂಗಳೂರು ವಿಶ್ವವಿದ್ಯಾಲಯವು ಏಪ್ರಿಲ್ 19 ರಿಂದ ಪ್ರಾರಂಭವಾಗುವ ವಿಶ್ವವಿದ್ಯಾಲಯ ವಿಶ್ವೇಶ್ವರಯ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ, ದ್ವಿತೀಯ ಮತ್ತು ಮೂರನೇ ಸೆಮಿಸ್ಟರ್ ಬಿಆರ್ಚ್ / ಬಿಟೆಕ್ (ಸಿಬಿಸಿಎಸ್ ಯೋಜನೆ) ಅನ್ನು ಮುಂದೂಡಿದೆ. ಅಲ್ಲದೆ, ಮೂರನೇ ಸೆಮಿಸ್ಟರ್ ಎಂಬಿಎ / ಎಂಸಿಎ / ಎಂ.ಎಡ್ / ಎಂಎಸ್ಸಿ (ಅಂಕಿಅಂಶ) ಪರೀಕ್ಷೆಯನ್ನು ಏಪ್ರಿಲ್ 20 ರಿಂದ ನಡೆಯುವುದಿತ್ತು. .
ಎಂಎ, ಎಂಎಸ್ಸಿ ಮತ್ತು ಎಂಕಾಮ್ ಸೇರಿದಂತೆ ಕಾರ್ಯಕ್ರಮಗಳ ಮೂರನೇ ಸೆಮಿಸ್ಟರ್ ಸ್ನಾತಕೋತ್ತರ ಸೆಮಿಸ್ಟರ್ ಪರೀಕ್ಷೆಗಳನ್ನು ವಿಶ್ವವಿದ್ಯಾಲಯವು ಮುಂದೂಡಿದೆ.
ಎಂಸಿಎ ಮತ್ತು ಬಿಎಸ್ಸಿ-ಎಂಎಸ್ಸಿ ಜೈವಿಕ ವಿಜ್ಞಾನ ಮತ್ತು ಎಂಟಿಎ ಐದು ವರ್ಷಗಳ ಸಂಯೋಜಿತ ಕೋರ್ಸ್ ಸೇರಿದಂತೆ ಕಾರ್ಯಕ್ರಮಗಳ ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಏಪ್ರಿಲ್ 20 ರಿಂದ ನಡೆಸಲು ನಿರ್ಧರಿಸಲಾಗಿತ್ತು.
ವಿಶ್ವವಿದ್ಯಾಲಯವು ಹೊಸ ಪರೀಕ್ಷೆಯ ದಿನಾಂಕಗಳನ್ನು ನಂತರ ಪ್ರಕಟಿಸುತ್ತದೆ.
ಶುಕ್ರವಾರ, ವಾರ್ಸಿಟಿ ಪರೀಕ್ಷೆಯನ್ನು ಮುಂದೂಡುವುದಾಗಿ ಘೋಷಿಸಿತು. ಬಿಡುಗಡೆಯೊಂದರಲ್ಲಿ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ವೇಣುಗೋಪಾಲ್ ಕೆ.ಆರ್ ಅವರು ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಮತ್ತು ಕರ್ಫ್ಯೂಗಳು ಮತ್ತು ನಡೆಯುತ್ತಿರುವ ಬಸ್ ಮುಷ್ಕರದಿಂದಾಗಿ ಸಾರಿಗೆ ವ್ಯವಸ್ಥೆ ಯ ಸಮಸ್ಯೆಗಳಿವೆ ಎಂದರು.
ಚಿಕ್ಕಮಗಳೂರು : ಕೊರೋನಾ ಸೋಂಕಿನ ಪ್ರಕರಣಗಳ ಹಿನ್ನಲೆಯಲ್ಲಿ ಈಗಾಗಲೇ ಅನೇಕ ರಾಜ್ಯಗಳು ವಿವಿಧ ಪರೀಕ್ಷೆಗಳನ್ನು ರದ್ದು ಪಡಿಸಿವೆ. ಜೊತೆಗೆ ಕೆಲ ಪರೀಕ್ಷೆಗಳನ್ನು ಮುಂದೂಡಿಕೆ ಸಹ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇನ್ನೆರಡು ದಿನದಲ್ಲಿ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇನೆ, ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆದು ಚರ್ಚಿಸಿದ್ದೇವೆ, ನಾವು ಒಂದು ಹಂತಕ್ಕೆ ಬಂದಿದ್ದೇವೆ. ಇನ್ನೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು, ಇನ್ನೆರಡು ದಿನದಲ್ಲೇ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. 1 ರಿಂದ 9ನೇ ತರಗತಿ ಪರೀಕ್ಷೆ ನಡೆಸೋ ವಿಚಾರ ಕುರಿತಂತೆ ಇನ್ನೆರಡು ದಿನಗಳಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಪರೀಕ್ಷೆ ನಡೆಸ ಬೇಕೇ, ಬೇಡವೇ ಎನ್ನುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಬೆಂಗಳೂರು:ಶುಲ್ಕ ರಹಿತ ಆದಾಯವನ್ನು ಹೆಚ್ಚಿಸಲು, ಬೆಂಗಳೂರು ರೈಲ್ವೆ ವಿಭಾಗವು ಶೀಘ್ರದಲ್ಲೇ ತನ್ನ ರೈಲುಗಳೊಳಗಿನ ಎಲ್ಲಾ ಕನ್ನಡಿಗಳ ಜಾಹೀರಾತುಗಳನ್ನು ಮೊದಲ ಬಾರಿಗೆ ಸ್ವೀಕರಿಸಲಿದೆ. ಒಂದು ವಾರದ ಅವಧಿಯಲ್ಲಿ ತೆಗೆದುಕೊಳ್ಳಲಾಗುವ ಮತ್ತೊಂದು ಪ್ರಮುಖ ಹೆಜ್ಜೆ ಅದರ 23 ಎಲೆಕ್ಟ್ರಿಕ್ ಲೋಕೋಮೋಟಿವ್ಗಳನ್ನು ಜಾಹೀರಾತುಗಳಿಗಾಗಿ ತೆರೆಯುವುದು.
ಈ ಕ್ರಮಗಳನ್ನು ವಿವರಿಸುತ್ತಾ, ಬೆಂಗಳೂರು ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ (ಎಸ್ಡಿಸಿಎಂ) ಎ ಎನ್ ಕೃಷ್ಣ ರೆಡ್ಡಿ, ಪ್ರತಿ ರೈಲಿಗೆ ಒದಗಿಸಲಾದ ಕನ್ನಡಿಗಳ ಸಂಖ್ಯೆ 225 ಮತ್ತು 300 ರ ನಡುವೆ ಇರುತ್ತದೆ ಎಂದು ಅವರು ಹೇಳಿದರು, “ಜಾಹೀರಾತು ಸ್ಟಿಕ್ಕರ್ಗಳಿಗೆ ಪ್ರತಿ ಕನ್ನಡಿಗೆ ಸುಮಾರು 200 ಚದರ ಸೆಂ.ಮೀ.ವಿಭಾಗವು ತನ್ನ ಒಡೆತನದ 65 ರೈಲುಗಳಲ್ಲಿ ಜಾಹೀರಾತು ಹಕ್ಕುಗಳಿಗಾಗಿ ಟೆಂಡರ್ಗಳನ್ನು ತೇಲುವಂತೆ ಯೋಜಿಸಿದೆ. “
ಒಂದು ವಾರದ ಅವಧಿಯಲ್ಲಿ, ವಿದ್ಯುತ್ ಲೋಕೋಗಳ (ಎಂಜಿನ್ ವಿಭಾಗ) ಬದಿಗಳಲ್ಲಿ ಜಾಹೀರಾತನ್ನು ಅನುಮತಿಸಲು ಸಹ ಇದು ಯೋಜಿಸಿದೆ. “ಚಿತ್ರಕಲೆ ಅಥವಾ ವಿನೈಲ್ ಸುತ್ತುವಿಕೆಯನ್ನು ಲಾಕ್ಗಳ ಬದಿಗಳಲ್ಲಿ ಬಳಸಲಾಗುತ್ತದೆ. ಅಗತ್ಯ ಗುರುತುಗಳನ್ನು ಪುನಃ ಬಣ್ಣ ಬಳಿಯಲಾಗುತ್ತದೆ ಮತ್ತು ಉಳಿದ ಪ್ರದೇಶವನ್ನು ಜಾಹೀರಾತಿಗಾಗಿ ಬಳಸಲಾಗುತ್ತದೆ. 23 ಎಲೆಕ್ಟ್ರಿಕ್ ಲೊಕೊಗಳನ್ನು 9 ಜೊತೆಗೆ ಸೇರಿಸಲು ಹೊಂದಿಸಲಾಗಿದೆ, “ಅವರು ಹೇಳಿದರು.
ರೈಲುಗಳು ಹೊರಾಂಗಣ ಜಾಹೀರಾತು ಉದ್ಯಮಕ್ಕೆ ಜನಪ್ರಿಯ ಜಾಹೀರಾತು ವಿಧಾನವಾಗಿದೆ.
“ರೈಲು ತರಬೇತುದಾರರು ಮತ್ತು ಲೋಕೋಮೋಟಿವ್ಗಳು ನೀಡುವ ಗೋಚರತೆಯು ದೇಶದ ದೂರದ ಪ್ರದೇಶಗಳಲ್ಲಿ ಬ್ರಾಂಡ್ ಗೋಚರತೆಯನ್ನು ನೀಡುತ್ತದೆ. ಒಪ್ಪಂದವು ಐದು ವರ್ಷಗಳ ಅವಧಿಗೆ ಸಾಗುವುದರಿಂದ ವಾಣಿಜ್ಯ ವಿಭಾಗವು ಪ್ರತಿ ರೈಲಿಗೆ ಕೋಟಿ ಗಳಿಸುವುದನ್ನು ನೋಡುತ್ತದೆ” ಎಂದು ವಿವರಿಸಿದರು.
ಬೆಂಗಳೂರು ವಿಭಾಗವು ಪ್ರಸ್ತುತ 11 ರೈಲುಗಳಲ್ಲಿ ಶತಾಬ್ಡಿ, ಲಾಲ್ಬಾಗ್ ಎಕ್ಸ್ಪ್ರೆಸ್, ಜನ ಶತಾಬ್ದಿ ಎಕ್ಸ್ಪ್ರೆಸ್, ಚೆನ್ನೈ ಎಕ್ಸ್ಪ್ರೆಸ್ ಮತ್ತು ಎಂಟು ಡೆಮು / ಮೆಮು ರೇಕ್ಗಳನ್ನು ಒಳಗೊಂಡಿದೆ. “ಇವುಗಳಲ್ಲಿ ತರಬೇತುದಾರರ ಹೊರ ಮತ್ತು ಒಳಭಾಗದಲ್ಲಿ ಜಾಹೀರಾತುಗಳು ಸೇರಿವೆ ಮತ್ತು ವಾರ್ಷಿಕ 1.73 ಕೋಟಿ ಆದಾಯವನ್ನು ಪಡೆಯುತ್ತವೆ” ಎಂದು ಅವರು ಹೇಳಿದರು.
ಬೆಂಗಳೂರು : ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ 80 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 13270 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 43 ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5063 ಕ್ಕೆ ಏರಿಕೆಯಾಗಿದೆ. ಇನ್ನೂ, ರಾಜ್ಯದಲ್ಲಿ ಇಂದು 17,489 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,41,998 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 11404 ಜನರು ಸೇರಿದಂತೆ ರಾಜ್ಯಾಧ್ಯಂತ 17,489 ನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.. ಇಂದು 5565 ಸೋಂಕಿತರು ಸೇರಿದಂತೆ ಇದುವರೆಗೆ 10,09,549 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 11,9160 ಸಕ್ರೀಯ ಸೋಂಕಿತರು ಇರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಬೆಂಗಳೂರು : ರಾಜ್ಯದಲ್ಲಿ ಇಂದು 17,489 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,41,998 ಕ್ಕೆ ಏರಿಕೆಯಾಗಿದೆ.
ಇಂದು ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ 80 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 13270 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಕಳೆದ 24 ಗಂಟೆಯಲ್ಲಿ 80 ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದು, ಹೀಗಾಗಿ ಕೊರೋನಾ ಸೋಂಕಿನಿಂದ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 13270 ಕ್ಕೆ ಏರಿಕೆಯಾಗಿದೆ . ಬೆಂಗಳೂರಿನಲ್ಲಿ 43 ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5063 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 11404 ಜನರು ಸೇರಿದಂತೆ ರಾಜ್ಯಾಧ್ಯಂತ 17,489 ನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.. ಇಂದು 5565 ಸೋಂಕಿತರು ಸೇರಿದಂತೆ ಇದುವರೆಗೆ 10,09,549 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 11,9160 ಸಕ್ರೀಯ ಸೋಂಕಿತರು ಇರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಹರಿದ್ವಾರ: ಕೊರೊನಾ ತೀವ್ರತೆಯ ಹಿನ್ನೆಲೆಯಲ್ಲಿ ಸಮಯ ಮುಗಿಯುವ ಮೊದಲೇ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳವನ್ನ ಮುಕ್ತಾಯಗೊಳಿಸಲಾಗಿದೆ ಎಂದು ಜುನಾ ಅಖಾರ ಮುಖ್ಯಸ್ಥ ಅವಾಧೇಶಾನಂದ್ ಅವ್ರು ಘೋಷಿಸಿದ್ದಾರೆ.
ಪ್ರಧಾನಿ ಮೋದಿಯವ್ರ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕುಂಭದಲ್ಲಿ ಇರುವ 13 ಅಖಾರಗಳಲ್ಲಿ ಕರೋನಾ ಶೀಘ್ರವಾಗಿ ಹರಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹೌದು, ಹೆಚ್ಚುತ್ತಿರುವ ಕೊರೊನಾದ ಸ್ಥಿತ್ಯಂತರವನ್ನ ಗಮನದಲ್ಲಿಟ್ಟುಕೊಂಡು ಕುಂಭವನ್ನು ರದ್ದುಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕಣದಲ್ಲಿ ಮನವಿ ಮಾಡಿದರು. ಇದರ ನಂತರ, ಜುನಾ ಅಖಾರ ಮುಖ್ಯಸ್ಥ ಅವಾಧೇಶಾನಂದ್ ಅವರು ಅತಿದೊಡ್ಡ ತೀರ್ಮಾನವನ್ನು ಪ್ರಕಟಿಸಿದ್ದಾರೆ.
ಕೆಎನ್ಎನ್ ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದೆ. ದಿನವೊಂದಕ್ಕೆ 14 ಸಾವಿರಕ್ಕೂ ಹೆಚ್ಚು ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬರುತ್ತಿದೆ. ಈ ಮೊದಲು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಹೋಂ ಐಸೋಲೇಷನ್ ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ತೀರಾ ತುರ್ತು ಸಂದರ್ಭದಲ್ಲಿ ಮಾತ್ರವೇ ಸೋಂಕಿತರಿಗೆ ಮಾತ್ರವೇ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕೊರೋನಾ ಸೋಂಕಿತರಾಗಿದ್ದು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಇಲ್ಲವೇ ಕೊರೋನಾ ರೋಗದ ಲಕ್ಷಣಗಳಾಗಲಿ, ಸೋಂಕಿತರ ಸಂಪರ್ಕಿತರಾಗಿದ್ದರೇ, ನೀವು ಯಾವ ಔಷಧಿ ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಮುಂದೆ ಓದಿ..
ದಿನೇ ದಿನೇ ಕೊರೋನಾ ಸೋಂಕಿನ 2ನೇ ಅಲೆ ರಾಜ್ಯದಲ್ಲಿ ಆರ್ಭಟಿಸುತ್ತಿದೆ. ಸೋಂಕಿನ ನಿಯಂತ್ರಮಕ್ಕಾಗಿ ರಾಜ್ಯ ಸರ್ಕಾರ ಕೊರೋನಾ ಕರ್ಪ್ಯೂನಂತಹ ನಿಯಂತ್ರಣ ಕ್ರಮ ಕೈಗೊಂಡರು, ನಿಯಂತ್ರಣ ಮೀರಿ, ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇದರ ಮಧ್ಯೆ ಮದುವೆ ಸಮಾರಂಭಕ್ಕೆ ಜನ ಸೇರೋದಕ್ಕೆ ಮಿತಿಯನ್ನು ರಾಜ್ಯ ಸರ್ಕಾರ ಏರಿದೆ. ಒಂದು ವೇಳೆ ಈ ನಿಮಯ ಮೀರಿದ್ರೆ ಮದುವೆ ಮನೆಯವರ ವಿರುದ್ಧ ಎಫ್ಐಆರ್ ಕೂಡ ದಾಖಲಿಸೋದಾಗಿ ಖಡಕ್ ಎಚ್ಚರಿಕೆ ನೀಡಿದೆ. ಅಲ್ಲದೇ ಕಲ್ಯಾಣಮಂಟಪ ಬುಕ್ ಮಾಡೋದಕ್ಕೆ ಜಿಲ್ಲಾಧಿಕಾರಿಗಳ ಅನುಮತಿಯನ್ನು ಕಡ್ಡಾಯಗೊಳಿಸಿದೆ.
ಈ ಎಲ್ಲಾ ನಿಯಂತ್ರಣ ಕ್ರಮಗಳ ಮಧ್ಯೆಯೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ. ಹೊಸದಾಗಿ ದಿನವೊಂದಕ್ಕೆ 14 ಸಾವಿರಕ್ಕೂ ಹೆಚ್ಚು ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲುತ್ತಿದೆ. ಹೀಗೆ ಕೊರೋನಾ ಸೋಂಕಿತರಾದಂತವರಿಗೆ ಹೋಂ ಐಸೋಲೇಷನ್ ನಲ್ಲಿಯೇ ಚಿಕಿತ್ಸೆ ನೀಡುತ್ತಿದ್ದರೇ, ಮತ್ತೆ ಕೆಲವರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಹೀಗೆ ಹೋಂ ಐಸೋಲೇಷನ್ ನಲ್ಲಿ ಸೋಂಕಿತರಾದವರು, ಸೋಂಕಿತರ ಸಂಪರ್ಕದಿಂದಾಗಿ ಮನೆಯಲ್ಲೇ ಹೋಂ ಕ್ವಾರಂಟೈನ್ ಆಗಿರೋರು ಯಾವ ಯಾವ ಔಷಧಿಯನ್ನು ತೆಗೆದುಕೊಳ್ಳಬೇಕು ಎನ್ನುವ ಪಟ್ಟಿಯನ್ನು ಬಿಬಿಎಂಪಿಯು ಹೋಂ ಐಸೋಲೇಷನ್ ಮೆಡಿಕಲ್ ಕಿಟ್ ನಲ್ಲಿ ತಿಳಿಸಿದೆ. ಹಾಗಾದ್ರೇ ರೋಗದ ಲಕ್ಷಣಗಳಿದ್ದರೇ, ಇಲ್ಲದಿದ್ದಲೇ ಯಾವ ಔಷಧಿ ತೆಗೆದುಕೊಳ್ಳಬೇಕು ಎನ್ನುವ ಪಟ್ಟಿ ಈ ಕೆಳಗಿದೆ ನೋಡಿ..
ರೋಗ ಲಕ್ಷಣಗಳು ಇರದವರು, ಸೋಂಕಿತರ ಸಂಪರ್ಕಿತರು/For Asymptomatic ( No Symptoms )
10 ದಿನಗಳ ಕಾಲ – ವಿಟಮಿನ್ ಸಿ ಮಾತ್ರೆ (ಚೀಪುವುದು) 1-0-0 ತೆಗೆದುಕೊಳ್ಳುವುದು
10 ದಿನಗಳ ಕಾಲ – ಬಿ ಕಾಂಪ್ಲೆಕ್ಸ್ ಮಾತ್ರೆ ( ನುಂಗುವುದು) 1-0-0
ರೋಗ ಲಕ್ಷಣಗಳು ಸೌಮ್ಯ ಸ್ವರೂಪದಲ್ಲಿದ್ದರೇ / For Mild Symptoms
ಡಿಜಿಟಲ್ ಡೆಸ್ಕ್: ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಉಲ್ಭಣವಾಗ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೊರೊನಾ ಮತ್ತು ಲಸಿಕೆ ಕುರಿತು ಚರ್ಚೆ ನಡೆಸಲಾಗುತ್ತೆ ಎಂದು ಮೂಲಗಳು ತಿಳಿಸಿವೆ.
ಕೊರೊನಾ ವೈರಸ್ ಕಾಯಿಲೆಯಿಂದ (ಕೋವಿಡ್-19) ಜಾಗತಿಕ ಸಾವು ನೋವುಗಳು 3 ಮಿಲಿಯನ್ ದಾಟಿವೆ. ಯಾಕಂದ್ರೆ, ಲಸಿಕೆ ಪ್ರಯತ್ನಗಳ ಹೊರತಾಗಿಯೂ ಸಾವಿನ ಅವಿರತ ವೇಗವು ಅವಿಚ್ಛಿನ್ನವಾಗಿ ಮುಂದುವರೆದಿದೆ. ಆದ್ರೆ, ವಿಶ್ವಾದ್ಯಂತ ಒಟ್ಟು ಸೋಂಕಿನ ಸಂಖ್ಯೆ 139.5 ದಶಲಕ್ಷಕ್ಕಿಂತ ಹೆಚ್ಚಾಗಿದೆ. ಲಸಿಕೆಯ ವಿಷಯದಲ್ಲಿ ವಿಶ್ವದಾದ್ಯಂತದ ದೇಶಗಳು 869 ದಶಲಕ್ಷಕ್ಕೂ ಹೆಚ್ಚು ಡೋಸ್ಗಳನ್ನು ನೀಡಿವೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.
ಬೆಂಗಳೂರು: ಏಪ್ರಿಲ್ 19ರಿಂದ ಏಪ್ರಿಲ್ 24ರವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಹೌದು, ಮುಂದಿನ ವಾರ ಖೋಡೇಸ್, ಸಾರಕ್ಕಿ, ಎಲಿಟಾ, ಆರ್ಬಿಐ ಸಬ್ ಸ್ಟೇಷನ್ ಅಡಿಯಲ್ಲಿ ಬರುವ ಪ್ರದೇಶಗಳಾದ ಕೋಣನಕುಂಟೆ, ಪುಟ್ಟೇನಹಳ್ಳಿ, ಜೆಪಿ ನಗರ ವ್ಯಾಪ್ತಿಯಲ್ಲಿ ಕೇಬಲ್ ಹಾಗೂ ಮೂಲಸೌಲಭ್ಯ ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೂ ಮುಂದಿನ ವಾರವಿಡೀ ವಿದ್ಯುತ್ ವ್ಯತ್ಯಯವಾಗುವುದಾಗಿ ತಿಳಿಸಿದೆ.
ಅದ್ರಂತೆ, ಏಪ್ರಿಲ್ 19ರಿಂದ ಏಪ್ರಿಲ್ 22ರವರೆಗೆ ಆರ್ಬಿಐ ಲೇಔಟ್, ಶ್ರೀನಿಧಿ ಲೇಔಟ್, ಜೆಪಿ ನಗರ ಆರನೇ ಹಂತ, ಸಾರಕ್ಕಿ ತೋಟ, ರೋಸ್ ಗಾರ್ಡನ್ ಸಿಂಧೂರ್ ಕಲ್ಯಾಣ ಮಂಟಪದ ಸಮೀಪ ಹಾಗೂ ಸಿದ್ದೇಶ್ವರ ಥಿಯೇಟರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅದ್ರಂತೆ, ಏಪ್ರಿಲ್ 21 ಹಾಗೂ ಏಪ್ರಿಲ್ 23ರಂದು ಸಾರಕ್ಕಿ ಕೆರೆ, ಆಂಥೋನಿ ಕೈಗಾರಿಕಾ ಪ್ರದೇಶ, ಸಿಎಸ್ ಶಾಲೆ ರಸ್ತೆ, ರಾಜೀವ್ ಗಾಂಧಿ ರಸ್ತೆ, ಚುಂಚಘಟ್ಟ ಮುಖ್ಯ ರಸ್ತೆ ಹಾಗೂ ಗಣಪತಿಪುರದಲ್ಲಿ ಏಪ್ರಿಲ್ 20ರವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ. ತಿಪ್ಪಸಂದ್ರ, ಆರ್ಬಿಎಲ್ ಲೇಔಟ್, ಬಿಸಿಎಂಸಿ ಲೇಔಟ್, ಚನ್ನಮ್ಮ ಗಾರ್ಡನ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದಲ್ಲದೇ ಜೆಪಿ ನಗರ ಐದನೇ ಹಂತ, ವಿನಾಯಕ ನಗರ, ನಂಜುಂಡೇಶ್ವರ ಲೇಔಟ್ನಲ್ಲಿ ಕೇಬಲ್ ಕಾಮಗಾರಿ ಕಾರಣ ಏಪ್ರಿಲ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 6.30ರವರೆಗೆ ಕರೆಂಟ್ ಇರೋದಿಲ್ಲ. ಇನ್ನು ಏಪ್ರಿಲ್ 22ರಂದು ಪಾಂಡುರಂಗ ನಗರದ ಸುತ್ತಮುತ್ತ ಹಾಗೂ ಬಿಜೆ ರಸ್ತೆಯಲ್ಲಿ, ಏಪ್ರಿಲ್ 23 ಹಾಗೂ ಏಪ್ರಿಲ್ 24ರಂದು ಜೆಪಿ ನಗರ 5ನೇ ಹಂತ, ವಿನಾಯಕ ನಗರ, ನಂಜುಂಡೇಶ್ವರ ಲೇಔಟ್ ಹಾಗೂ ಎಸ್ಟೀಮ್ ಪಾರ್ಕ್ ರೋಡ್ನಲ್ಲಿ ಕರೆಂಟ್ ಕಣ್ಣಮುಚ್ಚಾಲೆಯಾಡಲಿದೆ.