Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತೀಯ ಸೇನಾ ಶಾಖೆಯಲ್ಲಿ ಪುರುಷ-ಮಹಿಳಾ ಅಧಿಕಾರಿಗಳಿಗೆ ಮೀಸಲಾತಿ ಇಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

11/08/2025 11:10 AM

BREAKING : ತುಮಕೂರಲ್ಲಿ ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಅಳಿಯನಿಂದಲೇ ಅತ್ತೆಯ ಹತ್ಯೆ.!

11/08/2025 11:05 AM

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

11/08/2025 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆನೇಕಲ್ ತಾಲೂಕಿಗೆ ಕಾವೇರಿ ನೀರು, ಮೆಟ್ರೋ ವಿಸ್ತರಣೆಗೆ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಆನೇಕಲ್ ತಾಲೂಕಿಗೆ ಕಾವೇರಿ ನೀರು, ಮೆಟ್ರೋ ವಿಸ್ತರಣೆಗೆ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0902/05/2025 9:45 PM

ಆನೇಕಲ್: “ಆನೇಕಲ್ ತಾಲೂಕಿಗೆ ಕುಡಿಯಲು ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದ್ದು ಹಾಗೂ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಆನೇಕಲ್ ತಾಲ್ಲೂಕು ಹೆನ್ನಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಶಿವಣ್ಣ, ಮಾಜಿ ಸಂಸದ ಸುರೇಶ್, ರಮೇಶ್ ಅವರು ನಿಮ್ಮನ್ನು ಬೆಂಗಳೂರು ನಗರ ವ್ಯಾಪ್ತಿಗೆ ಸೇರಿಸಬೇಕು ಎಂದು ನನ್ನ ಮೇಲೆ ಒತ್ತಾಯ ಹಾಕುತ್ತಿದ್ದಾರೆ. ಈ ಬಗ್ಗೆ ಮುಂದೆ ಚರ್ಚೆ ಮಾಡುತ್ತೇನೆ. ನಿಮ್ಮನ್ನು ಗ್ರೇಟರ್ ಬೆಂಗಳೂರಿನಲ್ಲಿ ಸೇರಿಸಲು ಚರ್ಚೆಯಾಗುತ್ತಿದೆ. ಎಲ್ಲಾ ಶಾಸಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಇನ್ನು ಈ ಭಾಗಕ್ಕೆ ಕಾವೇರಿ ನೀರನ್ನು ಪೂರೈಸಬೇಕು ಎಂದು ಸುರೇಶ್ ಹಾಗೂ ರಾಮಲಿಂಗಾ ರೆಡ್ಡಿ ಅವರು ಒತ್ತಡ ಹಾಕುತ್ತಿದ್ದಾರೆ. ಆನೇಕಲ್ ತಾಲೂಕಿಗೆ 30 ಎಂಎಲ್ ಡಿ ನೀರನ್ನು ನೀಡಲು ಟೆಂಡರ್ ಕರೆಯಲಾಗಿದೆ. ಈ ಬಗ್ಗೆ ನಾಳೆ ಶಾಸಕ ಶಿವಣ್ಣ ಅವರ ಜತೆ ಚರ್ಚೆ ಮಾಡಲಿದ್ದೇನೆ. ಜಿಗಣಿ, ಆನೇಕಲ್, ಸರ್ಜಾಪುರ, ಬನ್ನೇರುಘಟ್ಟಕ್ಕೆ ಮೆಟ್ರೋ ರೈಲು ಮಾರ್ಗ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ” ಎಂದು ತಿಳಿಸಿದರು.

“ನಮಗೆ ಆನೇಕಲ್ ಬೇರೆಯಲ್ಲ ಕನಕಪುರ ಬೇರೆಯಲ್ಲ. ಈ ಕ್ಷೇತ್ರದ ಅಭಿವೃದ್ಧಿಗೆ ನಾವು ಬದ್ಧವಾಗಿದ್ದೇವೆ. ಈ ಕ್ಷೇತ್ರದಲ್ಲಿ ವಿದ್ಯಾವಂತರು, ಪ್ರಜ್ಞಾವಂತರಿದ್ದೀರಿ. ಒಂದೇ ಗ್ರಾಮ ಪಂಚಾಯ್ತಿಯಲ್ಲಿ ಇಷ್ಟು ದೊಡ್ಡ ಕಾರ್ಯಕ್ರಮ ಮಾಡುತ್ತಿದ್ದು, ನಿಮ್ಮ ಜತೆ ನಮ್ಮ ಸರ್ಕಾರ ಇದೆ ಎಂದು ಹೇಳಲು ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಬಂದಿದ್ದೇವೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ 4 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದು, ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಕಲಬುರ್ಗಿಯಲ್ಲಿ 1100 ಕೋಟಿ ಮೊತ್ತದ ಯೋಜನೆಗೆ ಭೂಮಿ ಪೂಜೆ ಮಾಡಲಾಗಿದೆ” ಎಂದು ಹೇಳಿದರು.

“ಬಿಜೆಪಿಯವರು ಭಾವನೆ ಮೇಲೆ ರಾಜಕೀಯ ಮಾಡಿದರೆ, ಕಾಂಗ್ರೆಸ್ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದೆ. ಈ ತಾಲೂಕಿಗೆ 16 ಕೋಟಿ ನೀಡಲಾಗಿದೆ. 1.22 ಕೋಟಿ ಮಹಿಳೆಯರಿಗ ಗೃಹಲಕ್ಷ್ಮಿ ಹಣ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, 10 ಕೆ.ಜಿ ಅಕ್ಕಿ, ನಿರುದ್ಯೋಗಿಗಳಿಗೆ ಭತ್ಯೆ ನೀಡಲಾಗುತ್ತಿದೆ. ಬಿಜೆಪಿಯವರು ಇಂತಹ ಯಾವುದಾದರೂ ಒಂದು ಯೋಜನೆ ನೀಡಿದ್ದಾರಾ?” ಎಂದು ಪ್ರಶ್ನಿಸಿದರು.

“ಕೋವಿಡ್ ಸಂದರ್ಭದಲ್ಲಿ ರಮೇಶ್ ಅವರ ಮುಖಂಡತ್ವದಲ್ಲಿ ಈ ಪಂಚಾಯ್ತಿಯಲ್ಲಿ ಉತ್ತಮ ಕೆಲಸ ಮಾಡಲಾಗಿದೆ. ಈ ಪಂಚಾಯ್ತಿಯ ಕಾರ್ಯವೈಖರಿಗೆ ಕೇಂದ್ರ ಬಿಜೆಪಿ ಸರ್ಕಾರ ಕೂಡ ಪ್ರಶಸ್ತಿ ನೀಡಿದೆ. ಇಡೀ ರಾಜ್ಯಕ್ಕೆ ಇದು ಮಾದರಿ ಗ್ರಾಮ ಪಂಚಾಯ್ತಿ. ಈ ಪಂಚಾಯ್ತಿಯಲ್ಲಿನ ಕಾರ್ಯವನ್ನು ನಾನು ಎಲ್ಲೆಡೆ ಪ್ರಚಾರ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ನೀವು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಬೇಕು. ನಿಮ್ಮಲ್ಲಿ ಕೆಲವರು ಸುರೇಶ್ ಅವರನ್ನು ಸೋಲಿಸಿದರು. ಆದರೂ ಅವರು ನಿಮ್ಮ ಅಭಿವೃದ್ಧಿ ವಿಚಾರದಲ್ಲಿ ಅಪಾರವಾದ ವಿಶ್ವಾಸವಿಟ್ಟು ಶ್ರಮಿಸುತ್ತಿದ್ದಾರೆ” ಎಂದರು.

“ಈ ಹೆನ್ನಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇಲ್ಲಿನ ಸದಸ್ಯರು ಮಾಡಿರುವ ಕೆಲಸವನ್ನು ನೋಡಿ ಅಭಿನಂದನೆ ಸಲ್ಲಿಸಲು ನಾನಿಲ್ಲಿಗೆ ಬಂದಿದ್ದೇನೆ. ಈ ಪಂಚಾಯ್ತಿಯಲ್ಲಿ 40 ಕೋಟಿ ಸಂಗ್ರಹಿಸುವ ಗುರಿ ಹೊಂದಿದ್ದು, 25 ಕೋಟಿ ಸಂಗ್ರಹಿಸಿದ್ದೀರಿ. ಅನೇಕ ಅಭಿವೃದ್ಧಿ ಕೆಲಸ ಕೈಗೊಂಡು 5.13 ಕೋಟಿ ಮೊತ್ತವನ್ನು 900 ಫಲಾನುಭವಿಗಳಿಗೆ ನೀಡಲಾಗುತ್ತಿದೆ. 78 ಕಾಮಗಾರಿಗಳನ್ನು ಕೈಗೆತ್ತಿಕೊಂಡು ಇಂದು ನಾನು ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ಶಂಕುಸ್ಥಾಪನೆ ಮಾಡಿದ್ದೇವೆ. ನಿಮಗೆ ಪ್ರೋತ್ಸಾಹ ನೀಡಿ ಬೆಳೆಸುವುದು ನಮ್ಮ ಕರ್ತವ್ಯ” ಎಂದರು.

ಸಾವಿರಾರು ಫಲಾನುಭವಿಗಳಿಗೆ ಸಹಾಯ

“ಕಾಂಗ್ರೆಸ್ ಸರ್ಕಾರಕ್ಕೆ ಬೆನ್ನೆಲುಬಾಗಿ ನಿಂತಿರುವುದಕ್ಕೆ ಈ ಪಂಚಾಯ್ತಿ ಮಹಾಜನತೆಗೆ ಕೋಟಿ ನಮನ ಸಲ್ಲಿಸುತ್ತೇನೆ. ನಾನು ಹಾಗೂ ಸುರೇಶ್ ನೇರವಾಗಿ ಮಾತನಾಡುತ್ತೇವೆ. ನೇರವಾಗಿ ಮಾತನಾಡಿದರೆ ಶತ್ರುಗಳು ಜಾಸ್ತಿ, ಸುಳ್ಳು ಹೇಳಿದರೆ ಬಹಳ ಜನ ಸ್ನೇಹಿತರಾಗುತ್ತಾರೆ. ನಮಗೆ ಶತ್ರುಗಳು ಜಾಸ್ತಿಯಾದರೂ ಪರ್ವಾಗಿಲ್ಲ, ಕೆಲಸ ಮಾಡುವುದು ಬಹಳ ಮುಖ್ಯ. ಅನೇಕರು ಟೀಕೆ ಮಾಡಬಹುದು. ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ. ಸುಮಾರು 78 ರೈತರಿಗೆ 85 ಸಾವಿರ ಮೊತ್ತದ ಹಸುಗಳನ್ನು ನೀಡಲು ಪಂಚಾಯ್ತಿ ಮುಂದಾಗಿದೆ. ನೀವು ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಹಸುಗಳನ್ನು ನೀವು ಬೇರೆಯವರಿಗೆ ಮಾರಾಟ ಮಾಡುವಂತಿಲ್ಲ. ನೀವು ಹಸು ಸಾಕದಿದ್ದರೆ ಅದನ್ನು ವಾಪಸ್ ನೀಡಬಹುದು” ಎಂದರು.

“ಇಂದು ಸಂಜೆ ಹಾಲು ಉತ್ಪಾದಕರ ಸಂಘದ ಚುನಾವಣೆ ಸಂಬಂಧ ಶಾಸಕರ ಜತೆ ಚರ್ಚೆ ಮಾಡಲಿದ್ದೇನೆ. ನಾನು ವಿದೇಶಕ್ಕೆ ಹೋಗಿದ್ದಾಗ ನನ್ನ ಮಿತ್ರ ವಿಲಾಸ್ ರಾವ್ ದೇಶಮುಖ್ ಅವರ ಮಗ ಹೇಗೆ ಹಸುವಿನ ಸಗಣಿಯನ್ನು ಸಂಗ್ರಹಿಸಿ ಗೊಬ್ಬರ ಮಾಡಿ ಅದನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ ಎಂದು ವಿವರಿಸಿದರು. ಈ ವಿಚಾರವಾಗಿ ಶಾಸಕರ ಜತೆ ಚರ್ಚೆ ಮಾಡುತ್ತೇನೆ. ರೈತರು ಕೂಡ ಈ ಬಗ್ಗೆ ಆಲೋಚಿಸಬೇಕು” ಎಂದು ಸಲಹೆ ನೀಡಿದರು.

“ಪಶುಸಂಗೋಪನೆ ಮಾಡುತ್ತಿರುವ ರೈತರಿಗೆ ಇಂಡಿ, ಬೂಸ ಬೆಲೆ ಏರಿಕೆ ಹೊರೆಯಾಗುತ್ತಿದೆ. ಹೀಗಾಗಿ ರೈತರಿಗೆ ಅನುಕೂಲ ಮಾಡಿಕೊಡಲು ನಮ್ಮ ಸರ್ಕಾರ ಹಾಲಿನ ದರವನ್ನು 4 ರೂ.ನಷ್ಟು ಏರಿಕೆ ಮಾಡಲಾಗಿದೆ. ಅದಕ್ಕೆ ಬಿಜೆಪಿಯವರು ಜನಾಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಪಂಚಾಯ್ತಿಯಿಂದ ರೈತರಿಗೆ ಸರ್ಕಾರಕ್ಕೆ ಸರಿಸಮನಾಗಿ ಪ್ರತಿ ಲೀಟರ್ ಗೆ 5 ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ” ಎಂದು ಪ್ರಶಂಸಿಸಿದರು.

“ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಸಹಜವಾಗಿ ಏರಿಕೆಯಾಗುತ್ತದೆ. ಹೀಗಾಗಿ ಬೆಲೆ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ. ನಾವು ಬಡವರಿಗಾಗಿ ಮನೆ ನಿರ್ಮಾಣ ಮಾಡಿದರೆ ಕೇಂದ್ರ ಸರ್ಕಾರಕ್ಕೆ 18% ಜಿಎಸ್ ಟಿ ಕಟ್ಟಬೇಕಿದೆ. ಜಿಎಸ್ ಟಿ ಹಾಗೂ ಬೆಲೆ ಏರಿಕೆಯಿಂದ ಕೇಂದ್ರ ಬಿಜೆಪಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ. ಈಗ ಚಿನ್ನದ ಬೆಲೆ 1 ಲಕ್ಷ ದಾಟಿದ್ದು, ಬಡವರು ಮಾಂಗಲ್ಯ ಕೊಳ್ಳುವುದು ಅಸಾಧ್ಯವಾಗಿದೆ. ಕೇಂದ್ರ ಸರ್ಕಾರದ ಈ ಬೆಲೆ ಏರಿಕೆ ವಿರುದ್ಧ ಜನರು ಧ್ವನಿ ಎತ್ತಬೇಕು” ಎಂದರು.

“ನನ್ನ ಮಿತ್ರ ವಿಲಾಸ್ ರಾವ್ ದೇಶಮುಖ್ ಅವರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದು ನಂತರ ಮುಖ್ಯಮಂತ್ರಿಗಳಾದರು. ಬಿ.ಡಿ ಜತ್ತಿ ಅವರು ಕೂಡ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದು, ನಂತರ ರಾಷ್ಟ್ರಪತಿಯಾಗಿದ್ದರು. ನೆಹರೂ ಅವರು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಹಾಗೂ ಕೆಂಗಲ್ ಹನುಮಂತಯ್ಯ ಅವರು ಬೆಂಗಳೂರು ಮುನ್ಸಿಪಲ್ ಕಾರ್ಪೊರೇಷನ್ ಅಧ್ಯಕ್ಷರಾಗಿದ್ದರು. ರಾಜಗೋಪಾಲಚಾರಿ ಅವರು ಪಂಚಾಯ್ತಿ ಸದಸ್ಯರಾಗಿದ್ದರು. ರಾಜಕೀಯದಲ್ಲಿ ಪಂಚಾಯ್ತಿ ಸದಸ್ಯ ಕೂಡ ಯಾವುದೇ ಮಟ್ಟಕ್ಕೆ ಬೇಕಾದರೂ ಬೆಳೆಯಬಹುದು” ಎಂದು ತಿಳಿಸಿದರು.

ಬೆಂಗಳೂರಿನ ‘ನ್ಯಾಷನಲ್ ಹೈಸ್ಕೂಲ್’ನ ಪ್ರಣವಿ ಎನ್ ರಾಜ್ SSLC ಪರೀಕ್ಷೆಯಲ್ಲಿ 2ನೇ ಶ್ರೇಯಾಂಕದಲ್ಲಿ ತೇರ್ಗಡೆ

BREAKING : ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಕೇಸ್ : ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿ ವಜಾ

Share. Facebook Twitter LinkedIn WhatsApp Email

Related Posts

BREAKING : ತುಮಕೂರಲ್ಲಿ ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಅಳಿಯನಿಂದಲೇ ಅತ್ತೆಯ ಹತ್ಯೆ.!

11/08/2025 11:05 AM1 Min Read

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

11/08/2025 11:03 AM1 Min Read

SHOCKING : ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ `ಕಾಡಾನೆ’ : ವೀಡಿಯೋ ವೈರಲ್ |WATCH VIDEO

11/08/2025 10:49 AM1 Min Read
Recent News

BREAKING : ಭಾರತೀಯ ಸೇನಾ ಶಾಖೆಯಲ್ಲಿ ಪುರುಷ-ಮಹಿಳಾ ಅಧಿಕಾರಿಗಳಿಗೆ ಮೀಸಲಾತಿ ಇಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

11/08/2025 11:10 AM

BREAKING : ತುಮಕೂರಲ್ಲಿ ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಅಳಿಯನಿಂದಲೇ ಅತ್ತೆಯ ಹತ್ಯೆ.!

11/08/2025 11:05 AM

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

11/08/2025 11:03 AM

ಪರಿಷ್ಕೃತ ಹೊಸ ಆದಾಯ ತೆರಿಗೆ ಮಸೂದೆ 2025: ಇಂದು ಮಂಡನೆಯಾಗಲಿರುವ ಮಸೂದೆಯಲ್ಲಿ 10 ಪ್ರಮುಖ ಬದಲಾವಣೆಗಳು

11/08/2025 10:58 AM
State News
KARNATAKA

BREAKING : ತುಮಕೂರಲ್ಲಿ ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಅಳಿಯನಿಂದಲೇ ಅತ್ತೆಯ ಹತ್ಯೆ.!

By kannadanewsnow5711/08/2025 11:05 AM KARNATAKA 1 Min Read

ತುಮಕೂರು : ತುಮಕೂರು ಜಿಲ್ಲೆಯ ಗೃಹ ಸಚಿವ ಜಿ ಪರಮೇಶ್ವರ್ ಅವರ ಮತಕ್ಷೇತ್ರ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ…

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ : ಪ್ರಕರಣದ ಬಗ್ಗೆ ಮಧ್ಯಂತರ ವರದಿಗೆ ಬಿಜೆಪಿ ಒತ್ತಡ : ಗೃಹ ಸಚಿವ ಜಿ.ಪರಮೇಶ್ವರ್

11/08/2025 11:03 AM

SHOCKING : ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ `ಕಾಡಾನೆ’ : ವೀಡಿಯೋ ವೈರಲ್ |WATCH VIDEO

11/08/2025 10:49 AM

ಬಿಜೆಪಿಯವರು ಬೆಂಗಳೂರಿಗೆ ಏನು ತಂದಿಲ್ಲ, ಅದಕ್ಕೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡಿದ್ದೇನೆ : ಡಿಸಿಎಂ ಡಿಕೆ ಶಿವಕುಮಾರ್

11/08/2025 10:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.