Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್‌ ಬಾರಿಸಿದ ಮೊದಲ ಆಟಗಾರ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

11/01/2026 8:50 PM

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK
KARNATAKA

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು: HDK

By kannadanewsnow0926/11/2025 3:54 PM

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP- National Industrial Corridor Development Programme)) ಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು; ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿದ್ದು, ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

2025 ನವೆಂಬರ್ 13ರಂದು ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ ಅವರು; ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.

ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್ ಅವರು, ಈ ಬಗ್ಗೆ ಉತ್ತರವನ್ನು ಬರೆದಿದ್ದಾರೆ. ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ. ಇಂಥ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ಸಚಿವ ಗೋಯೆಲ್ ಅವರು ತಿಳಿಸಿದ್ದಾರೆ.

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಗೋಯೆಲ್ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರ ಜತೆ ಕುಮಾರಸ್ವಾಮಿ ಅವರು ಚರ್ಚಿಸಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ.

ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ:

ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ.

ಸಚಿವ ಗೋಯಲ್‌ ಅವರೊಂದಿಗೆ ಚರ್ಚೆ ಉತ್ತಮವಾಗಿತ್ತು. ಅವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಾಕಾರಕ್ಕೆ ಈ ಯೋಜನೆ ಪೂರಕವಾಗಿದೆ. ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂಬುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

SHOCKING: ರಾಜ್ಯದಲ್ಲೊಂದು ಶಾಕಿಂಗ್ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ‘SSLC ವಿದ್ಯಾರ್ಥಿನಿ’

BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ

Share. Facebook Twitter LinkedIn WhatsApp Email

Related Posts

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM1 Min Read

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM4 Mins Read

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM1 Min Read
Recent News

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್‌ ಬಾರಿಸಿದ ಮೊದಲ ಆಟಗಾರ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

11/01/2026 8:50 PM

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM
State News
KARNATAKA

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

By kannadanewsnow0511/01/2026 9:08 PM KARNATAKA 1 Min Read

ಉತ್ತರಕನ್ನಡ : ಪಾಗಲ್ ಪ್ರೇಮಿ ಒಬ್ಬ ಪ್ರೀತ್ಸೆ ಎಂದು ಯುವತಿಯ ಹಿಂದೆ ಬಿದ್ದಿದ್ದಾನೆ ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ…

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM

ಮಂಗಳೂರಿನಲ್ಲಿ ಘೋರ ಘಟನೆ : ಚುರುಮುರಿ ಸ್ಟಾಲ್ ಗೆ ಬಂದ ಹಸುವಿಗೆ ಚೂರಿ ಇರಿದ ಪಾಪಿ!

11/01/2026 7:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.