Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

07/08/2025 10:01 AM

SCO ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾಕ್ಕೆ ತೆರಳಲಿರುವ ಪ್ರಧಾನಿ, 7 ವರ್ಷಗಳಲ್ಲಿ ಮೊದಲ ಭೇಟಿ

07/08/2025 9:58 AM

ಅಮೇರಿಕಾದ ಡಾಲರ್ ಎದುರು ರೂಪಾಯಿ ಮೌಲ್ಯ 15 ಪೈಸೆ ಜಿಗಿತ | Rupee

07/08/2025 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿಲ್ಲ- ಬಸವರಾಜ ಬೊಮ್ಮಾಯಿ
KARNATAKA

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿಲ್ಲ- ಬಸವರಾಜ ಬೊಮ್ಮಾಯಿ

By kannadanewsnow0921/02/2024 5:32 PM

ಬೆಂಗಳೂರು: ಕೇಂದ್ರಿದಿಂದ ಅನುದಾನ ಹಾಗೂ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಮೂಲಕವೂ ರಾಜ್ಯಕ್ಕೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಣಕಾಸಿನ ವಿಚಾರದಲ್ಲಿ ಕೇಂದ್ರ ಸರ್‌ಚಾರ್ಜ್, ಸೆಸ್ ತೆಗೆದುಕೊಳ್ಳುತ್ತದೆ. ಅದರಲ್ಲೂ ರಾಜ್ಯಕ್ಕೆ ಪಾಲು ಕೊಡಬೇಕು ಎಂದು ಹೇಳುತ್ತಾರೆ. ಸರ್‌ಚಾರ್ಜ್ ಮತ್ತು ಸೆಸ್ಸು 1958 ನಿಂದಲೇ ಇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್‌ಚಾರ್ಜ್ ಸೆಸ್ ಹಾಕಬಹುದು. ರಾಜ್ಯ ಸರ್ಕಾರ ಬೆಂಗಳೂರಿನ ಮೂಲ ಸೌಕರ್ಯ ಕಲ್ಪಿಸಲು ಸರ್‌ಚಾರ್ಜ್ ಸೆಸ್ ಹಾಕುತ್ತಿದ್ದಾರೆ. ಅದು ಬಂಡವಾಳವಾಗಿ ಪರಿವರ್ತನೆಯಾಗಿರುವುದರಿಂದ ರಾಜ್ಯದ ಅಭಿವೃದ್ಧಿಗೆ ಹಣ ಬಳಕೆಯಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಕಳೆದ ಆರೇಳು ವರ್ಷದಿಂದ ತಂಬಾಕು, ಸಿಗರೇಟ್, ದುಬಾರಿ ಕಾರು, ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಸೆಸ್ ಹಾಕಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡುತ್ತದೆ. ಕೇಂದ್ರ ಸರ್ಕಾರ ಹಾಕಿರುವ ಸೆಸ್‌ನಲ್ಲಿ ಕರ್ನಾಟಕಕ್ಕೆ ೪೫ ಸಾವಿರ ಕೋಟಿ ಬರಬೇಕು ಎಂದು ಮಾಡುತ್ತಿರುವ ವಾದ ಸರಿಯಲ್ಲ. ಐದು ವರ್ಷದಲ್ಲಿ 1,06,228 ಕೋಟಿ ರೂ. ರಾಜ್ಯಕ್ಕೆ ಜೆಎಸ್‌ಟಿ ಪರಿಹಾರದ ಮೂಲಕ ಬಂದಿದೆ. ಹೀಗಾಗಿ ರಾಜ್ಯಕ್ಕೆ ನಷ್ಟ ಆಗಿದೆ ಎನ್ನುವ ವಾದ ಸರಿಯಲ್ಲ ಎಂದು ವಾದ ಮಾಡಿದರು.

ಕೊವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಾಲ ಕೊಟ್ಟಿದೆ. ಅದರ ಸಾಲ ಮತ್ತು ಬಡ್ಡಿಯನ್ನು ಕೇಂದ್ರ ಸರ್ಕಾರ ತೀರಿಸುತ್ತದೆ. 15ನೇ ಹಣಕಾಸಿನಲ್ಲಿ ಜನಸಂಖ್ಯಾ ಮಾನದಂಡವನ್ನು 1971 ಬದಲು 2012ರ ಜನಸಂಖ್ಯಾ ಆಧಾರ ಇಟ್ಟುಕೊಂಡಿದ್ದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಹೇಳಿದ್ದಾರೆ. ಯಾವುದೇ ಸರ್ಕಾರವಾದರೂ ಹತ್ತಿರದ ಜನಸಂಖ್ಯೆಯನ್ನು ಮಾನದಂಡ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.

15ನೇ ಹಣಕಾಸು ಆಯೋಗ ಕೊವಿಡ್ ಕಾರಣದಿಂದ ಒಂದು ವರ್ಷ ತಡವಾಗಿ ಬಂದಿದೆ. ಫೆರಿಪೆರಲ್ ರಿಂಗ್ ರಸ್ತೆಗೆ ಈಗಲೂ ಕೇಂದ್ರದಿಂದ ಅನುದಾನ ಬರುತ್ತದೆ. ಆದರೆ, ರಿಂಗ್ ರೋಡ್ ಯೋಜನೆಗೆ ಭೂಸ್ವಾಧೀನ ಮಾಡಲಾಗಿಲ್ಲ. ಯೋಜನೆ ಆರಂಭ ಮಾಡಿಲ್ಲ. ಆರಂಭ ಮಾಡಿದರೆ ಖಂಡಿತವಾಗಿಯೂ ಕೇಂದ್ರದ ಅನುದಾನ ಬರುತ್ತದೆ. ಕೇಂದ್ರದ ಅನುದಾನ ಬರಬೇಕಾದರೆ ನ್ಯಾಯ ಸಮ್ಮತವಾದ ರೀತಿಯಲ್ಲಿ ಪ್ರಸ್ತಾವನೆ ಸಲ್ಲಿಸಿದರೆ ಬರುತ್ತದೆ ಎಂದರು.

ಬೆAಗಳೂರಿನಲ್ಲಿ ಶೇ 60 ರಷ್ಟು ಆದಾಯ ಬರುತ್ತದೆ. ಅದನ್ನು ರಾಜ್ಯದ ಎಲ್ಲ ಜಿಲ್ಲೆಗಳೂ, ಹಳ್ಳಿಗಳಿಗೂ ತೆಗೆದುಕೊಂಡು ಹೋಗುತ್ತೇವೆ. ಆದಾಯ ಹಂಚಿಕೆ ಬಡವರಿಗೆಯಾಗಬೇಕು. ಆದಾಯ ಹೆಚ್ಚಿಸುವುದು ಮತ್ತು ಹಂಚಿಕೆ ಮಾಡುವುದನ್ನು ಸರಿಯಾಗಿ ಮಾಡಿದರೆ ಮಾತ್ರ ಆರ್ಥಿಕತೆ ಸರಿಯಾಗಿ ನಡೆಯುತ್ತದೆ. ಮುಖ್ಯಮಂತ್ರಿಗಳು ರಾಜ್ಯದಿಂದ 4 ಲಕ್ಷ ಕೋಟಿ ರೂ. ಕೇಂದ್ರಕ್ಕೆ ಹೋಗುತ್ತದೆ ಎಂದು ಹೇಳಿದ್ದಾರೆ. ದೇಶದ ಎಲ್ಲ ಭಾಗದಿಂದಲೂ ಸರ್‌ಚಾರ್ಜ್ ಕಟ್ಟುತ್ತಾರೆ. ರಕ್ಷಣಾ ಇಲಾಖೆ ಇದೆ. ರೈಲ್ವೆ ಇದೆ. ಆ ಇಲಾಖೆಗಳಿಗೂ ಯೋಜನೆಗಳಿವೆ. ಅಲ್ಲಿಗೂ ಅನುದಾನ ನೀಡಬೇಕು ಎಂದರು.

ಯೋಜನೆಗಳ ಮೂಲಕ ಕೇಂದ್ರದಿಂದ ಹಣ

ಕೇಂದ್ರ ಸರ್ಕಾರದಿಂದ ಬರುವ ಹಣವನ್ನು ನಾವು ಕೇವಲ ತೆರಿಗೆ ಹಾಗೂ ಅನುದಾನದ ಬಗ್ಗೆ ಮಾತ್ರ ಮಾತನಾಡುತ್ತೇವೆ. ಕೇಂದ್ರದಿಂದ ಅನೇಕ ಯೋಜನೆಗಳಿಗೆ ಅನುದಾನ ಬರುತ್ತದೆ. ಅಮೃತ ಯೋಜನೆಯಡಿ ನಗರ ನೀರು ಸರಬರಾಜು, ಜಲಜೀವನ್ ಮಿಷನ್‌ನಲ್ಲಿ ಕೇಂದ್ರ ಸರ್ಕಾರ ಶೇ 50 ರಷ್ಟು ಅನುದಾ ನೀಡುತ್ತದೆ. ಸ್ವಚ್ಚ ಭಾರತ, ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ 60 ಲಕ್ಷ ರೈತರಿಗೆ 14000 ಕೋಟಿ ರೈತರಿಗೆ ಹಣ ನೀಡಿದ್ದಾರೆ. ರಾಷ್ಡ್ರೀಯ ಹೆದ್ದಾರಿ ಯೋಜನೆ ಅಡಿ ರಾಜ್ಯಕ್ಕೆ ಅನುದಾನ ನೀಡಿದೆ. ರೈಲ್ವೆ ಯೋಜನೆಗಳಿಗೆ ಕೇಂದ್ರ 7 ಸಾವಿರ ಕೋಟಿ ಕೊಟ್ಟಿದೆ. ರೈಲ್ವೆ ಎಲೆಕ್ಟ್ರಿಫಿಕೇಶನ್ ಕೇಂದ್ರ ಸರ್ಕಾರ ಮಾಡುತ್ತದೆ. ಸಾಗರ ಮಾಲಾ ಯೋಜನೆಗೂ ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ. ಎಲ್ಲ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಶೇ 50ರಷ್ಟು ಅನುದಾನ ನೀಡುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಗೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ ಎಂದು ಹೇಳಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ ಗುಡ್ ನ್ಯೂಸ್

ಬೆಂಗಳೂರಲ್ಲಿ ಫೆ.26, 27ರಂದು ‘ಬೃಹತ್ ಉದ್ಯೋಗ ಮೇಳ’: ‘ಉಚಿತ ಬಸ್’ ವ್ಯವಸ್ಥೆ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

07/08/2025 10:01 AM1 Min Read

BREAKING : ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದ ನೌಕರರಿಗೆ ಬಿಗ್ ಶಾಕ್ : 30,000 ಸಿಬ್ಬಂದಿಗಳ 1 ದಿನದ ಸಂಬಳ ಕಟ್!

07/08/2025 9:53 AM1 Min Read

BREAKING : ದಾವಣಗೆರೆಯಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತ ಯುವಕ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

07/08/2025 9:49 AM1 Min Read
Recent News

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

07/08/2025 10:01 AM

SCO ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾಕ್ಕೆ ತೆರಳಲಿರುವ ಪ್ರಧಾನಿ, 7 ವರ್ಷಗಳಲ್ಲಿ ಮೊದಲ ಭೇಟಿ

07/08/2025 9:58 AM

ಅಮೇರಿಕಾದ ಡಾಲರ್ ಎದುರು ರೂಪಾಯಿ ಮೌಲ್ಯ 15 ಪೈಸೆ ಜಿಗಿತ | Rupee

07/08/2025 9:55 AM

BREAKING : ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದ ನೌಕರರಿಗೆ ಬಿಗ್ ಶಾಕ್ : 30,000 ಸಿಬ್ಬಂದಿಗಳ 1 ದಿನದ ಸಂಬಳ ಕಟ್!

07/08/2025 9:53 AM
State News
KARNATAKA

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

By kannadanewsnow0507/08/2025 10:01 AM KARNATAKA 1 Min Read

ಉತ್ತರಕನ್ನಡ : ಈ ಬಡತನ, ಹಸಿವು ಅನ್ನೋದು ಬಹಳ ಕ್ರೂರಿ ಆಗಿರುತ್ತದೆ. ಕೆಲವೊಂದು ಬಾರಿ ನಮ್ಮ ಶತ್ರುಗಳಿಗೂ ಇಂತಹ ಪರಿಸ್ಥಿತಿ…

BREAKING : ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದ ನೌಕರರಿಗೆ ಬಿಗ್ ಶಾಕ್ : 30,000 ಸಿಬ್ಬಂದಿಗಳ 1 ದಿನದ ಸಂಬಳ ಕಟ್!

07/08/2025 9:53 AM

BREAKING : ದಾವಣಗೆರೆಯಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತ ಯುವಕ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

07/08/2025 9:49 AM

BREAKING : ಧರ್ಮಸ್ಥಳ ಕೇಸ್ : ಇಂದು 13ನೇ ಪಾಯಿಂಟ್ ನಲ್ಲಿ ‘GPR’ ಮೂಲಕ ಅಸ್ಥಿಪಂಜರ ಪತ್ತೆಗೆ ‘SIT’ ಸಿದ್ದತೆ.!

07/08/2025 9:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.