Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದೇ ‘ಕೇಂದ್ರ ಸರ್ಕಾರ’: ವಿ.ಎಸ್ ಉಗ್ರಪ್ಪ ಗಂಭೀರ ಆರೋಪ
KARNATAKA

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದೇ ‘ಕೇಂದ್ರ ಸರ್ಕಾರ’: ವಿ.ಎಸ್ ಉಗ್ರಪ್ಪ ಗಂಭೀರ ಆರೋಪ

By kannadanewsnow0902/05/2024 6:28 PM

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದು ಯಾರು? ವೀಸಾ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ಕೇಂದ್ರ ಸರ್ಕಾರವೇ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದೆ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇತಿಹಾಸದಲ್ಲಿಯೇ ಕಂಡು ಕೇಳರಿಯದಂತಹ ಲೈಂಗಿಕ ಹಗರಣ ಕರ್ನಾಟಕದ ಹಾಸನದಲ್ಲಿ ನಡೆದಿರುವುದು ಇಡೀ ಮನುಕುಲವೇ ತಲೆ ತಗ್ಗಿಸುವ ಘಟನೆ. ಹೊಳೆನರಸಿಪುರದ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರು ಸುಮಾರು ನಾಲ್ಕು ತಿಂಗಳ ಹಿಂದೆ ಮಾಧ್ಯಮ ಗೋಷ್ಠಿ ನಡೆಸಿ ಪ್ರಜ್ವಲ್ ರೇವಣ್ಣ ಅವರ ಸಿಡಿಗಳು ಇವೆ ಎಂದು ಮಾಹಿತಿ ನೀಡಿದ್ದರು. ಈ ವಿಚಾರವಾಗಿ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡುವುದು ಎಂದು ಹೇಳಿದ್ದರು ಎಂದರು.

ಐಪಿಸಿ ಸೆಕ್ಷನ್ 202 ಪ್ರಕಾರ ಕಾನೂನು ವಿರುದ್ದ ನಡೆದುಕೊಂಡಿದ್ದರೆ ಹಾಗೂ ಅದನ್ನು ಸಂಬಂಧಪಟ್ಟ ಪೊಲೀಸರಿಗೆ ಮಾಹಿತಿ ನೀಡದೆ ಇದ್ದರೆ ಅಪರಾಧವಾಗುತ್ತದೆ. ಕಾರು ಚಾಲಕ ಕಾರ್ತಿಕ್ ನಾನೇ ದೇವರಾಜೇಗೌಡ ಅವರಿಗೆ ವಿಡಿಯೋಗಳನ್ನು ನೀಡಿದೆ ಎಂದು ಸ್ವತಃ ಒಪ್ಪಿಕೊಂಡಿದ್ದಾನೆ. ದೇವರಾಜೇಗೌಡ ಅವರಿಗೆ ಮಾಹಿತಿ ಇದ್ದರೂ ಸಹ ಈ ಕೃತ್ಯದ ಬಗ್ಗೆ ಸ್ಥಳೀಯ ಪೊಲೀಸ್ ಸ್ಟೇಷನ್ ಗೆ ಏಕೆ ತಿಳಿಸಿಲ್ಲ. ಇದು ಕಾನೂನಿನ ಉಲ್ಲಂಘನೆ. ಈ ವಿಚಾರದ ಬಗ್ಗೆ ಬಿಜೆಪಿ- ಜೆಡಿಎಸ್ ನಾಯಕರಿಗೆ ಮಾಹಿತಿ ಇದ್ದರೂ ತಿಳಿಸದೇ ಇರುವುದು ಕೂಡ ಕಾನೂನು ಉಲ್ಲಂಘನೆ ಎಂದಿದ್ದಾರೆ.

ಮಹಿಳಾ ದೌರ್ಜನ್ಯ ಕುರಿತು ಎರಡು ವರದಿಗಳಿವೆ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮಾಡಿದ ಜಸ್ಟೀಸ್ ವರ್ಮಾ ಸಮಿತಿ ಹಾಗೂ ನಾನು ಅಧ್ಯಕ್ಷನಾಗಿದ್ದಾಗ ನೀಡಿದ ವರದಿಗಳು ಈ ದೇಶದಲ್ಲಿ ಇವೆ. ನಿರ್ಭಯಾ ಪ್ರಕರಣದಲ್ಲಿ ಬಿಜೆಪಿಯವರು ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಅಪವಾದ ಮಾಡಿದರು. ಈ ರೀತಿಯ ಶೋಷಣೆಗೆ ಒಳಗಾದ ಮಹಿಳೆಯರಿಗೆ ಪರಿಹಾರ ನೀಡಬೇಕು ಹಾಗೂ ಈ ರೀತಿಯ ಘಟನೆಗಳನ್ನು ತಡೆಯಲು ಇಡಿ ದೇಶದಾದ್ಯಂತ ಜಾಗೃತಿ ಕಾರ್ಯಕ್ರಮಗಳ ನಡೆಸಬೇಕು ಎಂದು ವರ್ಮಾ ಸಮಿತಿ ಶಿಫಾರಸ್ಸು ಮಾಡಿತ್ತು ಎಂದರು.

ಬಿಜೆಪಿ ಮತ್ತು ಜೆಡಿಎಸ್ ಅವರು ಈ ಪ್ರಕರಣವನ್ನು ಮುಚ್ಚಿಹಾಕುವ ವ್ಯವಸ್ಥಿತವಾದ ಸಂಚು ನಡೆಯುತ್ತಿದೆ. ನಡೆಸಿದೆ. ತೂಗುವ ಕತ್ತಿಯಿಂದ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಎನ್ನುವಂತೆ. ಈ ಪ್ರಕರಣದ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಕೆಸರು ಎರಚುವಂತಹ ಕೆಲಸ ಮಾಡಲಾಗುತ್ತಿದ ಬಿಜೆಪಿಯವರು ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಓದಿ ಆನಂತರ ಕಾಂಗ್ರೆಸ್ ವಿಚಾರ ಮಾತನಾಡಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿಯವರೇ ದೇಶದ ಆಡಳಿತ ನಿಮ್ಮ ಕೈಯಲ್ಲಿ ಇರುವಾಗ ನೀವು ತೆಗೆದುಕೊಂಡಿರುವ ಕ್ರಮವೇನು? ಎಂದು ಪ್ರಶ್ನಿಸಿದ್ದಾರೆ.

ದೇವರಾಜೇಗೌಡ ಹಲವಾರು ಬಾರಿ ವಿಡಿಯೋ ಇದೆ ಎಂದಾಗಲೂ ಬಿಜೆಪಿ- ಜೆಡಿಎಸ್ ಅವರು ಏನು ಮಾಡಿದರು. ಈ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಪಟ್ಟ ಬಿಜೆಪಿ ವಿರುದ್ದವೂ ಎಸ್ ಐಟಿ ತನಿಖೆಯಾಗಬೇಕು. ಸಂತ್ರಸ್ತ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕು. ವಿಕೃತಿ ಮೆರೆದಿರುವ ತಪ್ಪಿತಸ್ಥನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಯಾದಗಿರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ನಾಲ್ಕು ಗುಡಿಸಲು ಸುಟ್ಟು ಭಸ್ಮ

BREAKING: ಕರ್ನಾಟದ 6 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3ರಂದು ಮತದಾನ, ಜೂ.6ಕ್ಕೆ ಫಲಿತಾಂಶ ಪ್ರಕಟ

Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM1 Min Read

ಬೀದರ್ : ತಂಗಿಯ ಮದುವೆಗೆಂದು ರಜೆಗೆ ಊರಿಗೆ ಬಂದಿದ್ದ ಯೋಧ ಸೇವೆಗೆ ವಾಪಸ್

11/05/2025 2:11 PM1 Min Read
Recent News

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM
State News
KARNATAKA

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

By kannadanewsnow0511/05/2025 2:28 PM KARNATAKA 1 Min Read

ಬಾಗಲಕೋಟೆ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ, ಓವರ್ ಟೇಕ್ ಮಾಡಲು ಹೋಗಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು…

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

ಬೀದರ್ : ತಂಗಿಯ ಮದುವೆಗೆಂದು ರಜೆಗೆ ಊರಿಗೆ ಬಂದಿದ್ದ ಯೋಧ ಸೇವೆಗೆ ವಾಪಸ್

11/05/2025 2:11 PM

ALERT : ಪೋಷಕರೇ ನಿಮ್ಮ ಮಕ್ಕಳ ಮೊಬೈಲ್ ಚಟ ಬಿಡಿಸಲು ಇಲ್ಲಿದೆ ಸುಲಭ ವಿಧಾನ.!

11/05/2025 1:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.