Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

15/09/2025 4:43 PM

ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

15/09/2025 4:40 PM

ಬೀದರ್ : ರಸ್ತೆ ಪಕ್ಕ ನಿಂತು ಗಾಂಜಾ ಮಾರಾಟ : 43.47ರೂ.ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓರ್ವ ಮಹಿಳೆ ಅರೆಸ್ಟ್!

15/09/2025 4:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರವನ್ನು ‘ಗ್ಯಾರಂಟಿ ಸ್ಕೀಂ’ಗಳಿಗೆ ಬಳಸಬಾರದು: ಆರ್.ಅಶೋಕ್ ಆಗ್ರಹ
KARNATAKA

ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರವನ್ನು ‘ಗ್ಯಾರಂಟಿ ಸ್ಕೀಂ’ಗಳಿಗೆ ಬಳಸಬಾರದು: ಆರ್.ಅಶೋಕ್ ಆಗ್ರಹ

By kannadanewsnow0907/05/2024 2:52 PM

ಬೆಂಗಳೂರು: ಬಿಡಿಎ ಕಾಂಪ್ಲೆಕ್ಸ್‍ಗಳನ್ನು ಲೀಸ್‍ಗೆ ಕೊಡುವ ಮೂಲಕ ಪರೋಕ್ಷ ಮಾರಾಟಕ್ಕೆ ದಿವಾಳಿಯತ್ತ ಮುನ್ನಡೆಯುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರ ಮುಂದಾಗಿದೆ. ಇದರ ವಿರುದ್ಧ ಬಿಜೆಪಿಯು ಜನರ ಜೊತೆಗೂಡಿ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಎಚ್ಚರಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್‍ಎಸ್‍ಆರ್ ಲೇ ಔಟ್, ಆಸ್ಟಿನ್ ಟೌನ್, ಕೋರಮಂಗಲ, ವಿಜಯನಗರ, ಆರ್.ಟಿ.ನಗರ, ಸದಾಶಿವನಗರದ ಬಿಡಿಎ ಸ್ವತ್ತುಗಳನ್ನು ನುಂಗಣ್ಣಗಳು ನುಂಗಲು ಹೊರಟಿದ್ದಾರೆ. 2013-18ರಲ್ಲಿ ಇದೇ ಮಾದರಿಯ ಯೋಜನೆ ಜಾರಿಗೊಳಿಸಲು ಕಾಂಗ್ರೆಸ್ ಸರಕಾರ ಮುಂದಾಗಿತ್ತು. ಇದರ ವಿರುದ್ಧ ಬೆಂಗಳೂರಿನ ಜನರು ಪ್ರತಿಭಟನೆ ಮಾಡಿದ್ದರು ಎಂದು ನೆನಪಿಸಿದರು.

ಆಗ ಅದು ನಿಂತು ಹೋಗಿತ್ತು. ಮಡಿವಾಳದ ಆಸ್ತಿ ಕಾಂಗ್ರೆಸ್ ನಾಯಕರ ಪಾಲಾದಂತೆ ಇದು ಕೂಡ ಆಗಬಾರದೆಂದು ಜನರು ಹೋರಾಟ ಆರಂಭಿಸಿದ್ದಾರೆ. 3 ಸಾವಿರ ಕೋಟಿ ಬೆಲೆಬಾಳುವ ಆಸ್ತಿ ಇದು. ಇದರ ಹಿಂದೆ 200 ಕೋಟಿಗೂ ಮೇಲ್ಪಟ್ಟು ಕಿಕ್ ಬ್ಯಾಕ್ ಇದೆ ಎಂದು ಆರೋಪಿಸಿದರು.

ಇದೇನೂ ಕಾಂಗ್ರೆಸ್ಸಿಗರ ಅಪ್ಪನ ಆಸ್ತಿ ಅಲ್ಲ. ಬಿಡಿಎ ಹಿಂದಿನ ಅಧ್ಯಕ್ಷರು ಆಸ್ತಿಗಳನ್ನು ಉಳಿಸಿ ಬೆಳೆಸಿದ್ದಾರೆ. ‘ದಿನವೂ ಕೋಳಿ ಮೊಟ್ಟೆ ತಿನ್ನೋದ್ಯಾಕೆ? ಕೋಳಿಯನ್ನೇ ತಿಂದರೆ ಹೇಗೆ’ ಎಂದು ಇವರು ಹೊರಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಕಾಂಗ್ರೆಸ್ ನುಂಗಣ್ಣಗಳ ಪಾಲಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಎಚ್‍ಎಸ್‍ಆರ್‍ನಲ್ಲಿ ಸತೀಶ್ ರೆಡ್ಡಿಯವರ ನೇತೃತ್ವದಲ್ಲಿ ಪ್ರತಿಭಟನೆಗೆ ಜನರು ಮುಂದಾಗಿದ್ದಾರೆ. ಸರಕಾರವು ಪಾಪರ್ ಆಗಿದ್ದರೆ ಬೇರೆ ಆದಾಯ ಮೂಲಗಳನ್ನು ಹುಡುಕಬೇಕು. ಸರಕಾರಿ ಆಸ್ತಿ ನುಂಗಿ ನೀರು ಕುಡಿಯಲು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಟೆಂಡರ್ ಪ್ರಸ್ತಾಪವವನ್ನು ರದ್ದು ಮಾಡಬೇಕು. ಇಲ್ಲವಾದರೆ ವಿಧಾನಸಭೆ ಒಳಗೆ ಮತ್ತು ಹೊರಗಡೆ ಹೋರಾಟ ನಡೆಸುತ್ತೇವೆ ಎಂದು ಆರ್. ಅಶೋಕ್ ಅವರು ತಿಳಿಸಿದರು.

ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಾಗ ಈ ಕಡತ ಬಂದಿತ್ತು. ನಾನು ಸಚಿವನಾಗಿದ್ದೆ. ಇದು ಲೂಟಿ ಹೊಡೆಯುವ ಸ್ಕೀಂ ಎಂದು ತಿಳಿಸಿ ರದ್ದು ಮಾಡಿಸಿದ್ದೆ. ಮತ್ತೆ ಈ ಮಾಫಿಯಾವು ಬಸವರಾಜ ಬೊಮ್ಮಾಯಿಯವರ ಮುಂದೆ ಈ ಕಡತವನ್ನು ತಂದಿತ್ತು. ಆದರೆ, ಬೊಮ್ಮಾಯಿಯವರು ಲೀಸ್‍ಗೆ ಅವಕಾಶ ಕೊಡಲಿಲ್ಲ. ಈಗ ಮತ್ತೆ ಬಿಡಿಎ ಕಾಂಗ್ರೆಸ್ ಅಧಿಕಾರದಲ್ಲಿ ಹರಾಜಿಗೆ ಬರುತ್ತಿದೆ ಎಂದು ಅವರು ತಿಳಿಸಿದರು.

ಕೇಂದ್ರದಲ್ಲಿರುವ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರಿಗೆ ಕಪ್ಪ ಕೊಡಲು ಈ ಹಣವನ್ನು ಲೂಟಿ ಮಾಡಲು ಹೊರಟಿದ್ದಾರೆ ಎಂದು ಅವರು ಆರೋಪಿಸಿದರು. ಸರಕಾರಿ ಆಸ್ತಿ ಉಳಿಸಿಕೊಳ್ಳಲು ಬೆಂಗಳೂರಿನ ಜನರು ಬೆಂಬಲವಾಗಿ ನಿಲ್ಲಬೇಕಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರ ಬಿಡುಗಡೆ ಮಾಡಿದ ಬರ ಪರಿಹಾರ ಮೊತ್ತಕ್ಕೆ ಮ್ಯಾಚಿಂಗ್ ಗ್ರಾಂಟ್ ಸೇರಿಸಿ ರೈತರಿಗೆ ನೀಡಬೇಕು. ಇದನ್ನು ಯಾವುದೇ ಕಾರಣಕ್ಕೂ ಗ್ಯಾರಂಟಿ ಸ್ಕೀಂಗಳಿಗೆ ಬಳಸಬಾರದು ಎಂದು ಅವರು ಆಗ್ರಹಿಸಿದರು.

ಜನರು ಇಂದು ನಡೆಯುವ ರಾಜ್ಯದ ಎರಡನೇ ಹಂತದ ಮತದಾನದಲ್ಲಿ ಗರಿಷ್ಠ ಪ್ರಮಾಣದಲ್ಲಿ ಮತದಾನ ಮಾಡಬೇಕು. ಈ ಮೂಲಕ ಸುಭದ್ರ ಸರಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ವಿನಂತಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥÀನಾರಾಯಣ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಭಾರತೀಯ ಸೇನೆಯಿಂದ ಭರ್ಜರಿ ಭೇಟೆ : ಜಮ್ಮುಕಾಶ್ಮೀರದ ಕುಲ್ಗಾಮದಲ್ಲಿ ಮೂವರು ಉಗ್ರರು ಫಿನಿಶ್!

‘ಪೊಲೀಸರು ಪೆನ್ ಡ್ರೈವ್ ವಿತರಿಸಿದ್ರೂ, ಚುನಾವಣಾ ಆಯೋಗ ಕ್ರಮ ಕೈಗೊಂಡಿಲ್ಲ’ : ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ

Share. Facebook Twitter LinkedIn WhatsApp Email

Related Posts

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

15/09/2025 4:43 PM2 Mins Read

ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

15/09/2025 4:40 PM2 Mins Read

ಬೀದರ್ : ರಸ್ತೆ ಪಕ್ಕ ನಿಂತು ಗಾಂಜಾ ಮಾರಾಟ : 43.47ರೂ.ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓರ್ವ ಮಹಿಳೆ ಅರೆಸ್ಟ್!

15/09/2025 4:39 PM1 Min Read
Recent News

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

15/09/2025 4:43 PM

ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

15/09/2025 4:40 PM

ಬೀದರ್ : ರಸ್ತೆ ಪಕ್ಕ ನಿಂತು ಗಾಂಜಾ ಮಾರಾಟ : 43.47ರೂ.ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓರ್ವ ಮಹಿಳೆ ಅರೆಸ್ಟ್!

15/09/2025 4:39 PM

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ: ಕೆರೆ ಸಂರಕ್ಷಣೆ, ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ರಾಜ್ಯಪಾಲರು ವಾಪಾಸ್

15/09/2025 4:28 PM
State News
KARNATAKA

ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ ಇಂಡಿಯಾ ಸಮಾವೇಶ ಯಶಸ್ವಿ

By kannadanewsnow0915/09/2025 4:43 PM KARNATAKA 2 Mins Read

ಬೆಂಗಳೂರು: ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಎಂಜಿನಿಯರ್ಸ್ (ASME) ಮೊದಲ ಬಾರಿಗೆ ಆಯೋಜಿಸಿದ್ದ ವಿಶ್ವದ ಅತಿದೊಡ್ಡ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್,…

ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

15/09/2025 4:40 PM

ಬೀದರ್ : ರಸ್ತೆ ಪಕ್ಕ ನಿಂತು ಗಾಂಜಾ ಮಾರಾಟ : 43.47ರೂ.ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಓರ್ವ ಮಹಿಳೆ ಅರೆಸ್ಟ್!

15/09/2025 4:39 PM

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ: ಕೆರೆ ಸಂರಕ್ಷಣೆ, ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ರಾಜ್ಯಪಾಲರು ವಾಪಾಸ್

15/09/2025 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.