Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

21/03/2026 4:05 PM

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM

SHOCKING : ಒಂದೇ ದೇಹಕ್ಕೆ ಅಂಟಿಕೊಂಡಂತೆ ಜನಿಸಿದ ಅವಳಿ ಮಕ್ಕಳು, ಆಘಾತದಿಂದ ತಾಯಿ ಸಾವು

21/03/2026 3:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ
KARNATAKA

ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

By kannadanewsnow0926/08/2025 8:25 PM

ಬೆಂಗಳೂರು: ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ ನಡೆದಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಮುಖ್ಯ ಕಾರ್ಯದರ್ಶಿಯವರಿಗೆ ದೂರು ನೀಡಿದ ನಂತರ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಡಿಐಜಿಗೂ ಮನವಿ ನೀಡುತ್ತಿರುವುದಾಗಿ ತಿಳಿಸಿದರು. ಪರಿಶಿಷ್ಟ ಜಾತಿ, ವರ್ಗಗಳ ವಿಜಿಲೆನ್ಸ್ ಸಮಿತಿ ಸಭೆಯಲ್ಲಿ ದಿಣ್ಣೂರು ಗ್ರಾಮದ ದಲಿತರ ಜಮೀನುಗಳನ್ನು ಅರಣ್ಯಾಧಿಕಾರಿಗಳು ಅಕ್ರಮವಾಗಿ, ಮನೆಗಳನ್ನು ಒಡೆದುಹಾಕಿ ಜಮೀನು ಕಬ್ಜಾ ಮಾಡಿದ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೆ. ಇದು ಕೋರ್ಟ್ ಆದೇಶ ಇರುವುದೇ ಬೇರೆ ಎಂದು ಆಕ್ಷೇಪಿಸಿದರು.

711 ಎಕರೆ ಜಮೀನು ಅರಣ್ಯ ಇಲಾಖೆಗೆ ಸೇರಿದೆ ಎಂದು ಅವರು ಹೇಳಿಕೊಂಡಿದ್ದಾರೆ. 250-300 ಎಕರೆ ಕೆಐಡಿಬಿ ವಶದಲ್ಲಿದೆ. ಈಗಾಗಲೇ ಕಾರ್ಖಾನೆಗಳನ್ನು ನಿರ್ಮಿಸಿದ್ದಾರೆ. 250 ಎಕರೆ ರೈಲ್ವೆಗೆ ಸೇರಿದೆ. ಕೆಲವರು ಖಾಸಗಿಯಾಗಿ ಜಾಗ ಪಡೆದು ಕಾರ್ಖಾನೆಗಳನ್ನು ನಿರ್ಮಿಸಿದ್ದಾರೆ. ಅಲ್ಲಿ ಅಪಾರ್ಟ್‍ಮೆಂಟ್‍ಗಳೂ ಬಂದಿವೆ ಎಂದು ವಿವರಿಸಿದರು.

ಮೆಟ್ರೋಗೆ 45 ಎಕರೆ ಕೊಟ್ಟಿದೆ. ಉಳಿದಿರುವುದು ಕೇವಲ 120 ಎಕರೆ. ಇದು ಪಕ್ಕಾ ಆ ಊರಿನ ದಲಿತರ ಜಮೀನುಗಳು. ಅಲ್ಲಿ ದಿಣ್ಣೂರು ಎಂಬ ಗ್ರಾಮವೇ ಇರಲಿಲ್ಲ. ಜೀತ ಮಾಡುತ್ತಿದ್ದವರಿಗೆ ಪರಿಹಾರ ಕೊಡಲು 1950ರಲ್ಲಿ ಸರಕಾರ ಆ ಕಾಲದಲ್ಲಿ ಈ ಜಮೀನನ್ನು 4 ಎಕರೆ, 5 ಎಕರೆ ಆಗಿ ಹಂಚಿದೆ. ಮನೆಯನ್ನೂ ಕೊಟ್ಟಿದೆ ಎಂದು ತಿಳಿಸಿದರು.

ಅಲ್ಲಿಂದ ಇಲ್ಲಿನವರೆಗೆ ಅವರು ವ್ಯವಸಾಯ ಮಾಡುತ್ತ ಬಂದಿದ್ದಾರೆ. ಅಂಥ ಜಮೀನನ್ನು ಅರಣ್ಯದ ಹೆಸರಿನಲ್ಲಿ ಕೆಲವು ಅಧಿಕಾರಿಗಳು ಮುಖ್ಯ ಕಾರ್ಯದರ್ಶಿಗೂ ಗೊತ್ತಿಲ್ಲದೇ, ಡಿಐಜಿಗೂ ತಿಳಿಯದಂತೆ, ಅವರ ಆದೇಶ ಇಲ್ಲದೇ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೂಲಕ ಕಬ್ಜಾ ಮಾಡಿದ್ದಾರೆ. ಈಗ ಗಿಡ ನೆಡಲಾಗುತ್ತಿದೆ ಎಂದು ಹೇಳಿದರು.

ಇದನ್ನು ಸದನದಲ್ಲಿ ಪ್ರಸ್ತಾಪಿಸಿದ್ದೆ. ಆಗ ಹಾರಿಕೆಯ ಉತ್ತರವನ್ನು ಸಚಿವರು ನೀಡಿದ್ದರು. ಈಗ ಕೂಲಂಕಷ ಪರಿಶೀಲಿಸಿ, ಅರಣ್ಯ ಇಲಾಖೆ ಈ ಜಮೀನು ವಶಕ್ಕೆ ಪಡೆಯಲಾಗದು ಎಂದು ಗೊತ್ತಾಗಿದೆ. ಕಬ್ಜಾ ಮಾಡಲು ಮುಂದಾದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲು ನಿನ್ನೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಕ್ರಮ ಜರುಗಿಸಲು ಮುಖ್ಯಮಂತ್ರಿಗಳು ಡಿಐಜಿ, ಮುಖ್ಯ ಕಾರ್ಯದರ್ಶಿಗೂ ತಿಳಿಸಿದ್ದಾರೆ ಎಂದರು. ಇದರಲ್ಲಿ ಒಳಗೊಂಡ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲು ಹಾಗೂ ಜಮೀನು ವಾಪಸ್ ಕೊಡಿಸಬೇಕೆಂದು ಮನವಿ ಮಾಡಿದ್ದೇನೆ. ಅದಕ್ಕೆ ಪೂರಕವಾಗಿ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಕೊಕ್ಕರೆ ಬೆಳ್ಳೂರು ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ

Share. Facebook Twitter LinkedIn WhatsApp Email

Related Posts

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

21/03/2026 4:05 PM1 Min Read

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM1 Min Read

ದಾವಣಗೆರೆಯಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

21/03/2026 3:25 PM1 Min Read
Recent News

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

21/03/2026 4:05 PM

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM

SHOCKING : ಒಂದೇ ದೇಹಕ್ಕೆ ಅಂಟಿಕೊಂಡಂತೆ ಜನಿಸಿದ ಅವಳಿ ಮಕ್ಕಳು, ಆಘಾತದಿಂದ ತಾಯಿ ಸಾವು

21/03/2026 3:41 PM

ದಾವಣಗೆರೆಯಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

21/03/2026 3:25 PM
State News
KARNATAKA

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

By kannadanewsnow0521/03/2026 4:05 PM KARNATAKA 1 Min Read

ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ, ಈಗಾಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್…

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM

ದಾವಣಗೆರೆಯಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

21/03/2026 3:25 PM

ಚಾರ್ಮಾಡಿ ಘಾಟನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ ವಾಹನ : ಓರ್ವ ಸಾವು, 9 ಜನರಿಗೆ ಗಾಯ!

21/03/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.