ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಕೆರೂರು ಚಲೋ ಪ್ರತಿಭಟನೆ ಇಂದು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಖಾಕಿ ಸರ್ಪಗಾವಲು ಹಾಕಿದೆ.

BIGG NEWS : ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರ ಹಣ ಜಮೆ

 

ಸೆ. 6ರಂದು ಗಣೇಶ ವಿಸರ್ಜನೆ ವೇಳೆ ಪೊಲೀಸರ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಸಿಪಿಐ ಪಿಐ ಕರೆಪ್ಪ ಬನ್ನೆ ಬೇಗ ಮುಂದೆ ಸಾಗಿ ಅಂದಿದಕ್ಕೆ ಗಲಾಟಡೆ ನಡೆದಿತ್ತು. ಸುರೇಶ ಮತ್ತು ರಮೇಶ್‌ ಇಬ್ಬರು ಪೇದೆಗಳ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಈ ವೇಳೆ ಸಿಪಿಐ ಮೂಗಿಗೆ ಪೆಟ್ಟು ಬಿದ್ದು ರಕ್ತಸ್ರಾವ ಆಗಿತ್ತು. ಈ ಹಿನ್ನೆಲೆಯಲ್ಲಿ ಶರಣು ಸಜ್ಜನ, ಮಹಾಂತೇಶ ಪಟ್ಟಣ ಶೆಟ್ಟಿ , ಸಿದ್ದೇಶ್‌, ಸಚಿನ್‌ , ಗಂಗಾಧರ್‌ ಸೇರಿ 11 ಜನರನ್ನು ಪೊಲೀಸರು ಬಂಧಿಸಿದ್ದರು.

BIGG NEWS : ರೈತರಿಗೆ ಗುಡ್ ನ್ಯೂಸ್ : ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರ ಹಣ ಜಮೆ

ಮೇಲಿನ ಹಲ್ಲೆ ಖಂಡಿಸಿ ಕಾರ್ಯಕರ್ತರು ಪ್ರತಿಭಟನೆ ಕರೆ ನೀಡಿದ್ದಾರೆ. ಸುಳ್ಳು ಕೇಸ್‌ ದಾಖಲಿಸಿ, ದೌರ್ಜನ್ಯ ನಡೆಸಿರುವುದಾಗಿ ಹಿಂದೂ ಸಂಘಟನೆ ಆರೋಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೆರೂರು ಪಟ್ಟಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Share.
Exit mobile version