ಚಾಮರಾಜನಗರ : ಮನೆ ಮಂದಿಯಲ್ಲ ಮಂತ್ರಾಲಯದ ರಾಯರ ದರ್ಶನಕ್ಕೆ ತೆರಳಿದ್ದರು. ಆದರೆ ರಾಯರ ದರ್ಶನ ಮುಗಿಸಿಕೊಂಡು ವಾಪಸ್ಸು ಬಂದು ನೋಡಿದರೆ, ಕಳ್ಳರು ಮನೆಯ ಬೀಗ ಮುರಿದು ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಚಾಮರಾಜನಗರದ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ.

ಹೌದು ರಾಯರ ದರ್ಶನ ಪಡೆದು ಮನೆಗೆ ವಾಪಸ್ಸಾದವರಿಗೆ ಬಿಗ್ ಶಾಕ್ ಎದುರಾಗಿದ್ದು, ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಆಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಹೋಗಿದ್ದರು. ಮಂತ್ರಾಲಯದಿಂದ ಬರುವಷ್ಟರಲ್ಲಿ ಮನೆ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

ಬೀಗ ಒಡೆದು ಕಳ್ಳತನ ಮಾಡಿದ್ದಾರೆ. ಚಿನ್ನದ ಜೊತೆಗೆ 20 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

Share.
Exit mobile version