ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ನೀಡಿದ್ದ ದೂರಿನ ಅನ್ವಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರು ಸೇರಿ 15 ಮಂದಿ ವಿರುದ್ದ ಭಾನುವಾರ ಪ್ರಕರಣ ದಾಖಲಾಗಿದೆ.
ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ಕಮಲಮ್ಮ ಎಂಬುವರು, ಅರಣ್ಯ ಇಲಾಖೆಯವರು ತನ್ನ ಕೈ ಹಿಡಿದು ಎಳೆದಾಡಿ, ಕಪಾಳಕ್ಕೆ ಹೊಡೆದು, ತಳ್ಳಿ ಬೀಳಿಸಿದ್ದಾರೆ. ಅಲ್ಲದೆ, ನನ್ನ ಮಗ ಗಂಗಾಧರ ಸ್ವಾಮಿ ಮತ್ತು ನಮ್ಮ ಜಮೀನಿನ ಬಾಜುದಾರರಾದ ರಘು, ಪ್ರದೀಪ್, ರೇವಣ್ಣ ಅವರುಗಳಿಗೆ ಕೈನಿಂದ ಹೊಡೆದು ನನ್ನ ಮಗನನ್ನು ಕೊಲೆ ಮಾಡುವ ಉದ್ದೇಶದಿಂದ ಕತ್ತು ಹಿಡಿದು ಹಿಸುಕಲು ಯತ್ನಿಸಿದ್ದಾರೆ. ಪ್ರಸಾದ್ ಮೇಲೆ ಜೀಪ್ ಹತ್ತಿಸಿ ಹತ್ಯೆಗಯ್ಯಲು ಯತ್ನ ಮಾಡಲಾಗಿದೆ ಎಂದು ಆರೋಪಿಸಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ್ದರು.
ಅರಣ್ಯ ಇಲಾಖೆ ಡಿಆರ್ಎಫ್ಒ ಜ್ಞಾನಶೇಖರ್, ಡಿಆರ್ಎಫ್ಒ ಕಾರ್ತಿಕ್ ಯಾದವ್, ಎಸಿಎಫ್ ಸುರೇಶ್, ಡಿಆರ್ಎಫ್ಒ ಶಿವಕುಮಾರ್ ಇತರ ನೌಕರರಾದ ಶಿವಣ್ಣ, ಸುಚಿತ್ರ, ಸುಬ್ರಹ್ಮಣ್ಯ, ನಾಗೇಶ್, ಸೋಮು, ಪ್ರವೀಣ್, ಮಣಿಕಂಠ, ವಿನಯ್ ಕುಮಾರ್, ಸಂತೋಷ್, ರಾಜಪ್ಪ ಹಾಗೂ ಬಸವೇಗೌಡ ಎಂಬುವರ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ.