ಹುಬ್ಬಳ್ಳಿ: ಇಂದು ನಗರದ ಖಾಸಗಿ ಹೋಟೆಲ್ ಬಳಿಯಲ್ಲಿ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಂತ ಹಂತಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೊಲೆಯಾದಂತ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಬಂಧಿತರ ಬಗ್ಗೆ ಪೊಲೀಸರು ಖಚಿತ ಮಾಹಿತಿಯನ್ನು ನೀಡಬೇಕಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಎಸಿಬಿ ದಾಳಿ ನಿರಂತರ ಪ್ರಕ್ರಿಯೆ – CM ಬಸವರಾಜ ಬೊಮ್ಮಾಯಿ

ಸರಳವಾಸ್ತು ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ಆಕೆಯ ಹೆಸರಿನಲ್ಲಿದ್ದ ಬೇನಾಮಿ ಆಸ್ತಿಯೇ ಹತ್ಯೆಯ ಶಂಕೆ.!

ಹುಬ್ಬಳ್ಳಿ: ಸರಳವಾಸ್ತು ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಮನೆ ಮನೆ ಮಾತಾಗಿದ್ದಂತ ಚಂದ್ರಶೇಖರ್ ಗುರೂಜಿಯನ್ನು ಇಂದು ಹುಬ್ಬಳ್ಳಿಯಲ್ಲಿ ಭೀಕರವಾಗಿ ಚಾಕುವಿನಿಂದ ಇರಿದು ಇಬ್ಬರು ಆರೋಪಿಗಳು ಹತ್ಯೆಗೈದಿದ್ದಾರೆ. ಈ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಕೊಲೆಯ ಹಿಂದೆ ಬೇನಾಮಿ ಆಸ್ತಿಯೇ ಕಾರಣ ಎನ್ನಲಾಗುತ್ತಿದೆ. ಅದರಲ್ಲೂ ಆಕೆಯೊಬ್ಬಳ ಹೆಸರಿನಲ್ಲಿ ಸಂಪಾದಿಸಿದ್ದಂತ ಆಸ್ತಿಯ ಮೂಲಕ ಹುಟ್ಟಿಕೊಂಡ ಜಗಳವೇ ಕಾರಣ ಎನ್ನಲಾಗುತ್ತಿದೆ.

ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಹತ್ಯೆಗೀಡಾದಂತ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರು, ಹುಬ್ಬಳ್ಳಿಯ ಆಪ್ತನಾಗಿದ್ದಂತ ಮಹಾಂತೇಶ್ ಶಿರೋಳ್ ಎಂಬಾತನ ಪತ್ನಿ ವನಜಾಕ್ಷಿಯ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದರು ಎನ್ನಲಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಬಳಿಯಲ್ಲಿರುವಂತ ಅಪಾರ್ಮೆಂಟ್ ಸಹ ಆಕೆಯ ಹೆಸರಿಗೆ ನೋಂದಣಿ ಮಾಡಿಸಿದ್ದರು ಎನ್ನಲಾಗಿದೆ.

ಗೃಹ ಸಚಿವರ ರಾಜಿನಾಮೆ ಕೇಳಲು ಕಾಂಗ್ರೆಸ್‍ಗೆ ನೈತಿಕ ಹಕ್ಕಿಲ್ಲ – CM ಬಸವರಾಜ ಬೊಮ್ಮಾಯಿ

ಇದಷ್ಟೇ ಅಲ್ಲದೇ ಹಲವು ಆಸ್ತಿ ನೋಂದಣಿ, ಹಣಕಾಸಿನ ವ್ಯವಹಾರವನ್ನು ತನ್ನ ಆಪ್ತ ಮಹಾಂತೇಶ್ ಪತ್ನಿ ವನಜಾಕ್ಷಿ ಹೆಸರಿನಲ್ಲಿ ಮಾಡಿದ್ದರು ಎನ್ನಲಾಗಿದೆ. ಇದೇ ಸಂಬಂಧ ಗಲಾಟೆ ನಡೆದಾಗ 2019ರಲ್ಲಿ ಸರಳವಾಸ್ತು ಸಂಸ್ಥೆಯ ಉದ್ಯೋಗಿಯಾಗಿದ್ದಂತ ವನಜಾಕ್ಷಿಯನ್ನು ಕೆಲಸ ಬಿಚ್ಚಿದ್ದರು ಎನ್ನಲಾಗಿದೆ. ಈ ಬಳಿಕ ತಾನು ಮಾಡಿಸಿಕೊಟ್ಟಿದ್ದಂತ ಆಸ್ತಿಯನ್ನು ವಾಪಾಸ್ ಕೊಡುವಂತೆ ಕೇಳಿದಾಗ ಚಂದ್ರಶೇಖರ್ ಗೂರೂಜಿ ಹಾಗೂ ವನಜಾಕ್ಷಿ, ಆಕೆಯ ಪತಿ ಮಹಾಂತೇಶ್ ನಡುವೆ ಗಲಾಟೆ ಆಗಿತ್ತು ಎನ್ನಲಾಗಿದೆ.

ಈ ಹಿನ್ನಲೆಯಲ್ಲಿಯೇ ಇಂದು ಚಂದ್ರಶೇಖರ್ ಗುರೂಜಿಯನ್ನು ಆಪ್ತ ಮಹಾಂತೇಶ್ ಹಾಗೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದುಮ್ಮವಾಡದ ಮಂಜುನಾಥ್ ಎಂಬುವರು ಸೇರಿ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೇ ಚಂದ್ರಶೇಖರ್ ಗುರೂಜಿ ಕೊಲೆ ನಂತ್ರ ಮಹಾಂತೇಶ್ ನಾಪತ್ತೆಯಾಗಿರೋದು ಇದಕ್ಕೆ ಪುಷ್ಟಿಯನ್ನು ನೀಡುವಂತಿದೆ. ಈ ಎಲ್ಲಾ ನಿಟ್ಟಿನಲ್ಲಿಯೂ ಇದೀಗ ಐವರು ಎಸಿಪಿಗಳ ನೇತೃತ್ವದ ಪೊಲೀಸರ ತಂಡ ತನಿಖೆಗೆ ಇಳಿದಿದೆ.

HEALTH TIPS: ಮಧುಮೇಹ ನಿಯಂತ್ರಣಕ್ಕೆ ಗಿಡಮೂಲಿಕೆಗಳೇ ಮದ್ದು; ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ಗೊತ್ತಾ? |Diabetes

Share.
Exit mobile version