ವಿಜಯಪುರ : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಶ್ರೀಗಳನ್ನು ನೋಡಲು ಆಶ್ರಮಕ್ಕೆ ಭಕ್ತರ ದಂಡೇ ಹರಿದು ಬರಿದು ಬಂದಿದೆ.

ಈ ಹಿನ್ನೆಲೆ ಪೊಲೀಸರು ಅಲರ್ಟ್ ಆಗಿದ್ದು, ಆಶ್ರಮದ ಆವರಣದಿಂದ ಭಕ್ತರನ್ನು ಹೊರಕ್ಕೆ ಕಳುಹಿಸುತ್ತಿದ್ದಾರೆ. ಹಾಗೂ ಆಶ್ರಮದ ಸುತ್ತಮುತ್ತಾ ಭಾರೀ ಭದ್ರತೆ ಒದಗಿಸಿದ್ದಾರೆ. ಆಶ್ರಮಕ್ಕೆ ವಿಐಪಿ, ಮಠಾಧೀಶರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಆಶ್ರಮದ ಮೊದಲ ಮಹಡಿಯಲ್ಲಿ ಶ್ರೀಗಳು ವಿಶ್ರಾಂತಿ ಪಡೆಯುತ್ತಿದ್ದಾರೆ.

ಸಿದ್ದೇಶ್ವರ ಶ್ರೀಗಳ ನಾಡಿಮಿಡಿತದಲ್ಲಿ ಸ್ವಲ್ಪ ಏರುಪೇರು ಆಗಿದೆ. ಉಸಿರಾಟದಲ್ಲಿ ಸ್ವಲ್ಪ ಸಮಸ್ಯೆ ಆಗುತ್ತಿದೆ. ಹೀಗಾಗಿ ಆಕ್ಸಿಜನ್ ಕೊಡಲಾಗುತ್ತಿದೆ. ಸಿದ್ದೇಶ್ವರ ಸ್ವಾಮೀಜಿಯವರ ಪಲ್ಸ್, ಬಿಪಿ, ಸ್ವಲ್ಪ ಕಡಿಮೆಯಾಗಿದೆ. ಅವರು ಬೆಳಗ್ಗೆಯಿಂದಲೂ ಆಹಾರವನ್ನು ಸೇವಿಸಿಲ್ಲ ಎಂದು ಹೇಳಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಸಿದ್ದೇಶ್ವರ ಶ್ರೀಗಳು ಬೇಗನೇ ಗುಣಮುಖರಾಗಲಿ ಎಂದು ಭಕ್ತರು ಹಲವು ಕಡೆ ಪೂಜೆ, ವಿವಿಧ ಹರಕೆ ಸಲ್ಲಿಸುತ್ತಿದ್ದಾರೆ.

ಬೂತ್ ವಿಜಯ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ: ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಲು ಕರೆ

ವಂಚನೆ , ಸಾವು ಕಾರ್ಯಕರ್ತರಿಗೆ ಬಿಜೆಪಿ ಕೊಡುತ್ತಿರುವ ಕೊಡುಗೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

Share.
Exit mobile version