ಬೆಂಗಳೂರು: ನವೆಂಬರ್ 21ರವರೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ( Congress Party ) ಅರ್ಜಿ ಸಲ್ಲಿಕೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ( Farmer CM HD Kumaraswamy ) ವಿರುದ್ಧ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಕ್ಕೆ ಡಿ.ಕೆ ಶಿವಕುಮಾರ್ ಅವರ ಬಾವ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ

ಇಂದು ಕೆಪಿಸಿಸಿ ಕಚೇರಿಗೆ ತೆರಳಿದಂತ ಡಿ.ಕೆ ಶಿವಕುಮಾರ್ ( DK Shivakumar ) ಅವರ ಬಾವ ಶರತ್ ಚಂದ್ರ ಅವರು, ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಹೀಗಾಗಿ ಮುಂಬರುವಂತ ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಚುನಾವಣೆ ತೀವ್ರ ಕುತೂಹಲವನ್ನು ಮೂಡಿಸಲಿದೆ.

BREAKING NEWS: ದೆಹಲಿಯ ಶ್ರದ್ಧಾ ಕೊಲೆ ಪ್ರಕರಣ: ವೀಡಿಯೋ ಕಾನ್ಫೆರೆನ್ಸ್ ಮೂಲಕ ಅಫ್ತಾಬ್ ಹಾಜರುಪಡಿಸಲು ಕೋರ್ಟ್ ಅನುಮತಿ | Shraddha Walkar murder case

ಅಂದಹಾಗೆ 2018ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ನಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಿದ್ದರೇ, ಬಿಜೆಪಿಯಿಂದ ಸಿ.ಪಿ ಯೋಗೇಶ್ವರ್, ಕಾಂಗ್ರೆಸ್ ನಿಂದ ಹೆಚ್ ಎಂ ರೇವಣ್ಣ ಸ್ಪರ್ಧೆಗಿಳಿದಿದ್ದರು. ಈ ತೀವ್ರ ಪೈಪೋಟಿಯ ಕದನದಲ್ಲಿ ಕುಮಾರಸ್ವಾಮಿ ಗೆಲುವು ಕಂಡಿದ್ದರು.

BREAKING NEWS: ಮೆಟಾ ಇಂಡಿಯಾದ ಮುಖ್ಯಸ್ಥರಾಗಿ ‘ಸಂಧ್ಯಾ ದೇವನಾಥನ್’ ನೇಮಕ | Meta appoints Sandhya Devanathan as India head

Share.
Exit mobile version