ಮುಂಬೈ (ಮಹಾರಾಷ್ಟ್ರ): ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವುತ್(Sanjay Raut) ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 5 ರವರೆಗೆ ಇಂದು ವಿಸ್ತರಿಸಲಾಗಿದೆ.
ಮಾಹಿತಿಯ ಪ್ರಕಾರ, ನ್ಯಾಯಾಲಯವು ರಾವುತ್ ಅವರನ್ನು ಆಗಸ್ಟ್ 22(ಇಂದು)ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆದ್ರೆ, ಇಂದು ವಿಶೇಷ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್ಎ) ನ್ಯಾಯಾಲಯದಲ್ಲಿ ನಡೆದ ಆರಂಭಿಕ ವಿಚಾರಣೆಯ ನಂತರ, ನ್ಯಾಯಾಲಯವು ಸೆಪ್ಟೆಂಬರ್ 5 ರವರೆಗೆ ರಾವುತ್ ಅವರ ಕಸ್ಟಡಿಯನ್ನು ವಿಸ್ತರಿಸಿದೆ.
ಇದಕ್ಕೂ ಮೊದಲು ಆಗಸ್ಟ್ 1 ರಂದು ರಾವತ್ ಅವರನ್ನು ಇದೇ ಪ್ರಕರಣದಲ್ಲಿ ಆಗಸ್ಟ್ 4 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಲಾಗಿತ್ತು. ಅದೇ ದಿನ, ಬಂಧನದ ನಂತರ ಇಡಿ ಅವರನ್ನು ವಿಶೇಷ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತು.
ಇಡಿ ಅಧಿಕಾರಿಗಳು ಜುಲೈ 31 ರಂದು ಶಿವಸೇನಾ ನಾಯಕನ ಮನೆಯ ಮೇಲೆ ದಾಳಿ ನಡೆಸಿತ್ತು. ಹಲವಾರು ಗಂಟೆಗಳ ಕಾಲ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಆಗಸ್ಟ್ 1 ರಂದು ಅವರನ್ನು ಬಂಧಿಸಲಾಯಿತು.
ಜೂನ್ 28 ರಂದು, 1,034 ಕೋಟಿ ರೂ. ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ತಡೆಗಟ್ಟುವ ಸಂಬಂಧವಾಗಿ ಜಾರಿ ನಿರ್ದೇಶನಾಲಯ (ಇಡಿ) ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿತ್ತು.
Optical illusion: ನಿಮಗೊಂದು ಸವಾಲ್: ಈ ನಾಯಿಯ ಮುಖದ ಚಿತ್ರದೊಳಗೆ ಇದೆ ಮಾನವನ ಮುಖ… ಕಂಡುಹಿಡಿಯಿರಿ!