ಚೆನ್ನಗಿರಿ ಪೊಲೀಸ್ ಠಾಣೆ ಲಾಕಪ್ ಡೆತ್ ಕೇಸ್: ಹೃದಯಾಘಾತದಿಂದ ಆದಿಲ್ ಸಾವು: ಮರಣೋತ್ತರ ಪರೀಕ್ಷಾ ವರದಿ

ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲೇ ಆದಿಲ್ ಎಂಬಾತನ ಲಾಕಪ್ ಡೆತ್ ಆಗಿತ್ತು. ಇದು ಪೊಲೀಸರೇ ನಡೆಸಿದಂತ ಕೃತ್ಯ ಎಂಬುದಾಗಿ ಸಿಡಿದೆದ್ದಿದ್ದಂತ ಜನರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆದ್ರೇ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಸಂಬಂಧ ಮೃತ ಆದಿಲ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ವರದಿ ಪೊಲೀಸರ ಕೈಸೇರಿದೆ. ಅದರಲ್ಲಿ ಆದಿಲ್ ಲೋಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಕಾರ್ಡಿಯಾ … Continue reading ಚೆನ್ನಗಿರಿ ಪೊಲೀಸ್ ಠಾಣೆ ಲಾಕಪ್ ಡೆತ್ ಕೇಸ್: ಹೃದಯಾಘಾತದಿಂದ ಆದಿಲ್ ಸಾವು: ಮರಣೋತ್ತರ ಪರೀಕ್ಷಾ ವರದಿ