Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಸಕ ಹೆಚ್.ವೈ.ಮೇಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ
KARNATAKA

ಶಾಸಕ ಹೆಚ್.ವೈ.ಮೇಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದರು.

ಜನಪರ ಕಾಳಜಿಯ ಸೇವೆ

ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989 ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದರು.

ನಾಳೆ ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಜನರೊಂದಿಗೆ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದು:ಖ ತಂದಿದ್ದು, ಇದು ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ , ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. ಇಂದು ಸಂಜೆಯ ತನಕ ಬೆಂಗಳೂರಿನ ಕುಟುಂಬದವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಿ, ನಂತರ ಬಾಗಲಕೋಟೆಗೆ ತೆರಳಲಾಗುವುದು. ನಾಳೆ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವೂ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅತಿಯಾದ ‘ಹಸ್ತಮೈಥುನ’ವು ಈ ಅಪಾಯಕಾರಿ ಸಮಸ್ಯೆಗಳ ಬರಬಹುದು ಎಚ್ಚರ!

BREAKING : ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Share. Facebook Twitter LinkedIn WhatsApp Email

Related Posts

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

State News
KARNATAKA

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ಆಡಳಿತದಲ್ಲಿ ಮುನ್ನುಗ್ಗಿದ್ದಾರೆ. ಇಂದು ನಡೆದ…

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.