ಬೆಂಗಳೂರು : ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಕೇಸು ದಾಖಲಿಸುತ್ತಿದೆ. ಅನಗತ್ಯ ತೊಂದರೆ ಕೊಡುವ ಬಗ್ಗೆ ವರದಿಗಳು ಮತ್ತು ದೂರುಗಳು ಬಂದಿವೆ. ಅರಣ್ಯ ಸಿಬ್ಬಂದಿಯ ತಪ್ಪು ಗ್ರಹಿಕೆಯಿಂದ ಕುರಿಗಾಹಿಗಳಿಗೆ ತೊಂದರೆಯಾಗುತ್ತಿದೆ. ಕುರಿಗಾಹಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುರಿಗಾಹಿಗಳ ರಕ್ಷಣೆಗೆ ಬಂದೂಕು ಪರವಾನಿಗೆ ಕೊಡಲು ಸೂಚಿಸಿದ್ದೆ. ಅದು ಇನ್ನೂ ಕೆಲವು ಕಡೆಗೆ ಜಾರಿಗೆ ಬಂದಿಲ್ಲ. ಕುರಿ ಕಳ್ಳತನ ಜೊತೆಗೆ ಕುರಿಗಾಹಿಗಳನ್ನು ಕೊಲೆ ಮಾಡಿರುವ ಘಟನೆಗಳು ನಡೆದಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೀಗಾಗಿ ಬಂದೂಕು ಪರವಾನಿಗೆ ಕೊಡುವುದನ್ನು ಸಮರ್ಪಗೊಳಿಸಬೇಕು. ಕುರಿಗಾಹಿಗಳ ಬಂದೂಕು ನೀಡುವ ಕಾರ್ಯದ ಬಗ್ಗೆ ನಿಗಾ ಇಡಬೇಕು ಎಂದು ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.