Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
KARNATAKA

ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

By kannadanewsnow0913/08/2024 6:02 PM

ಹೊಸಪೇಟೆ : ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954 ರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಪ್ರಾರಂಭಿಸಲಾಯಿತು. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್ ನ ಚೈನ್ ತುಂಡಾಗಿರಲಿಲ್ಲ ಎಂದು ವಿವರಿಸಿದರು.

ತಜ್ಞರ ಸಲಹೆ ಮೇರೆಗೆ ದುರಸ್ತಿ ಕಾರ್ಯ

ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ. ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್ ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.

ಆಗಸ್ಟ್.17 ರಿಂದ ರಾಜ್ಯದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ

ಕರ್ನಾಟಕದಲ್ಲಿ ಸುಮಾರು 9 ಲಕ್ಷ ಹಾಗೂ ಆಂಧ್ರ ತೆಲಂಗಾಣಗಳಲ್ಲಿ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಕಿರುವ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅದಲ್ಲದೇ, ಆಗಸ್ಟ್ 17 ರಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಬರುವ ನಿರೀಕ್ಷೆ ಇದೆ ಎಂದರು.

ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಪ್ಲಾಸ್ಟಿಕ್ ಧ್ವಜ’ ಬಳಸುವಂತಿಲ್ಲ: ಸಾಗರ ನಗರಸಭೆ ಆಯುಕ್ತ ಹೆಚ್.ಕೆ.ನಾಗಪ್ಪ

BREAKING: ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ

Share. Facebook Twitter LinkedIn WhatsApp Email

Related Posts

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM2 Mins Read

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM1 Min Read

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM2 Mins Read
Recent News

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM

BREAKING : ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ : ಕೊಚ್ಚಿ ಹೋದ 8 ಮನೆಗಳು, 9 ಮಂದಿ ನಾಪತ್ತೆ.!

01/07/2025 8:40 AM
State News
KARNATAKA

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

By kannadanewsnow5701/07/2025 9:00 AM KARNATAKA 2 Mins Read

ಯುವ ಜನತೆಯಲ್ಲಿ ಆಧುನಿಕ ಜೀವನ ಶೈಲಿಯಿಂದ, ಮಧ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಹೃದಯಘಾತಗಳು ಸಂಭವಿಸುವ ಅವಕಾಶಗಳು ಹೆಚ್ಚಾಗಿವೆ ಇದರ…

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

01/07/2025 8:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.