Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

BIG NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ

BREAKING : ಭಾರಿ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್ | cockroach Instagram account hacked

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅ.5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅದ್ಧೂರಿ ಸನ್ಮಾನ: ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು
KARNATAKA

ಅ.5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅದ್ಧೂರಿ ಸನ್ಮಾನ: ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಈಗ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಬಸವಣ್ಣನ ಅನುಯಾಯಿಗಳೆಲ್ಲರೂ ಸಮೀಕ್ಷೆಯ ‘ಇತರೆ’ ಕಾಲಿನಲ್ಲಿ ‘ಲಿಂಗಾಯತ ಧರ್ಮ’ ಎಂದು ಬರೆಸಿ, ಜಾತಿ ಕಾಲಂನಲ್ಲಿ ತಮ್ಮತಮ್ಮ ಉಪಜಾತಿ/ಪಂಗಡಗಳ ಹೆಸರು ಬರೆಸಲು ಹೇಳಿದ್ದು, ಅದೇ ರೀತಿ ರಾಜ್ಯದ ಎಲ್ಲೆಡೆ ಮಾಡುತ್ತಿದ್ದಾರೆ ಎಂದು ಲಿಂಗಾಯತ ಮಠಾಧೀಶರ ಒಕ್ಕೂಟದ ಮುಖ್ಯಸ್ಥರಾಗಿರುವ ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ.

ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಜಾತಿ ಗಣತಿಯಲ್ಲಿ ನಮ್ಮ ಸಮಾಜದವರೆಲ್ಲ ಲಿಂಗಾಯತ ಧರ್ಮ ಎಂದೇ ನಮೂದಿಸುವಂತೆ ಸಮುದಾಯದ ಸದಸ್ಯರಿಗೆ ಹೇಳಿದ್ದೇವೆ. ನಮ್ಮ ಒಕ್ಕೂಟದಲ್ಲಿ 400 ಸ್ವಾಮೀಜಿಗಳಿದ್ದಾರೆ. ಈ ವಿಚಾರದಲ್ಲಿ ಒಕ್ಕೂಟ ಒಮ್ಮತವನ್ನು ತಾಳಿದೆ. ಇದರಲ್ಲಿ ಬೇರೆಯವರು ಅನಗತ್ಯವಾಗಿ ಗೊಂದಲ ಹುಟ್ಟಿಸುತ್ತಿದ್ದಾರೆ’ ಎಂದು ಅವರು ನುಡಿದಿದ್ದಾರೆ.

‘ಅ.5ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿ 500ಕ್ಕೂ ಹೆಚ್ಚು ಬಸವಪರ ಶ್ರೀಗಳು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ, ಒಕ್ಕೂಟದ ಬೇಡಿಕೆಯಂತೆ ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ನ್ಯಾ. ನಾಗಮೋಹನ್ ದಾಸ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ ಮಾತನಾಡಿ, ‘ಭಾರತದಲ್ಲಿ ಹುಟ್ಟಿದವರೆಲ್ಲರೂ ಸಾಂಸ್ಕೃತಿಕ ದೃಷ್ಟಿಯಿಂದ ಹಿಂದೂಗಳೇ ಆಗಿದ್ದಾರೆ. ಆದರೆ ಧರ್ಮ ಮತ್ತು ಜಾತಿಗಳ ನಡುವೆ ಗೊಂದಲ ಮಾಡಿಕೊಳ್ಳಬಾರದು. ಜನರಲ್ಲಿ ಲಿಂಗಾಯತ ಪ್ರಜ್ಞೆಯನ್ನು ಮೂಡಿಸಬೇಕು. ಬಸವಣ್ಣನ ನಾಲ್ಕು ಪ್ರಧಾನ ವಿಚಾರಗಳನ್ನು ಬಿಂಬಿಸಬೇಕು. ಬೇರೆಯವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಸವಧರ್ಮ ಪೀಠದ ಮಾತೆ ಗಂಗಾದೇವಿ ಮಾತನಾಡಿ, ಬಸವಣ್ಣ ಕನಸು ಕಂಡ ಸಮಸಮಾಜವು 21ನೇ ಶತಮಾನದಲ್ಲಾದರೂ ನನಸಾಗಬೇಕು. ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಈಗ ಒಂದು ವರ್ಷವಾಗುತ್ತಿದೆ. ಇದರ ಅಂಗವಾಗಿ ನಡೆದ ಅಭಿಯಾನದ ಸಮಾರೋಪದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದಿದ್ದಾರೆ.

ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಮಾತನಾಡಿ, ಬಸವಣ್ಣ ಕರುನಾಡಿನ ಯುಗಪುರುಷ. ಭಾವೈಕ್ಯತೆ, ಪ್ರಜಾಸತ್ತೆ, ಸಮಾಜಮುಖಿ ಸೇವೆ ಅವರ ವಿಚಾರಗಳಾಗಿದ್ದು, ಒಕ್ಕೂಟವು ಕೂಡ ಇವುಗಳನ್ನು ಪ್ರಧಾನ ಆಶಯಗಳನ್ನಾಗಿ ಇಟ್ಟುಕೊಂಡಿದೆ. ಒಕ್ಕೂಟವು ನಡೆಸಿದ ಅಭಿಯಾನವು ರಾಜಕೀಯರಹಿತ ಕಾರ್ಯಕ್ರಮವಾಗಿದೆ ಎಂದು ನುಡಿದಿದ್ದಾರೆ.

ಮಾಧ್ಯಮ ಗೋಷ್ಠಿಯಲ್ಲಿ ಬೆಳಗಾವಿಯ ನಾಗನೂರು ಮಠದ ಶ್ರೀ ಅಲ್ಲಮಪ್ರಭು ಸ್ವಾಮೀಜಿ, ಬೆಂಗಳೂರು ಶ್ರೀ ಗುರುವಣ್ಣದೇವರ ಮಠದ ಸ್ವಾಮೀಜಿ ಉಪಸ್ಥಿತರಿದ್ದರು.

ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!

BREAKING : ಶೀಘ್ರದಲ್ಲೇ ಮದುವೆ ಆಗ್ತೀನಿ : ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

Share. Facebook Twitter LinkedIn WhatsApp Email

Related Posts

BIG NEWS : ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

2 Mins Read

BIG NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ

3 Mins Read

BREAKING : ಬೆಂಗಳೂರಿನಲ್ಲಿ ಯುವತಿ ಮೇಲೆ 15ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ : ಆಸ್ಪತ್ರೆಗೆ ದಾಖಲು!

1 Min Read
Recent News

BIG NEWS : ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

BIG NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ

BREAKING : ಭಾರಿ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್ | cockroach Instagram account hacked

SHOCKING : ಮಹಿಳೆ ಮೇಲೆ 30 ವರ್ಷಗಳಲ್ಲಿ 1000ಕ್ಕೂ ಹೆಚ್ಚು ಕಾಮುಕರಿಂದ ಅತ್ಯಾಚಾರ ಮಾಡಿಸಿದ್ದ ರಾಕ್ಷಸನಿಗೆ 16 ವರ್ಷ ಜೈಲು ಶಿಕ್ಷೆ!

State News
KARNATAKA

BIG NEWS : ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

By ಸುರೇಶ್‌ KARNATAKA 2 Mins Read

ಬೆಂಗಳೂರು: ದೇಶದ ಕ್ರೀಡಾ ಲೋಕದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ದೇಶದ ಎರಡನೇ ಅತಿದೊಡ್ಡ ಅಂತರರಾಷ್ಟ್ರೀಯ…

BIG NEWS : ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿ ಸರ್ಕಾರ ಮಹತ್ವದ ಆದೇಶ

BREAKING : ಬೆಂಗಳೂರಿನಲ್ಲಿ ಯುವತಿ ಮೇಲೆ 15ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ : ಆಸ್ಪತ್ರೆಗೆ ದಾಖಲು!

BREAKING : ಬೆಂಗಳೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೇಸ್ : ಕೇರಳದಲ್ಲಿ ಆರೋಪಿ ಹೈನಾಸ್ ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.