ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಬಳಿಕ, ವಿಜಯಪುರ ಸೇರಿದಂತೆ ಇತರೆಡೆ ಮಾಡೋದಾಗಿ ಸರ್ಕಾರದ ಮೂಲಗಳಿಂದ ತಿಳಿದು ಬಂದಿತ್ತು. ಆದರೇ ಮೇ.9ರಂದು ಬೆಂಗಳೂರಲ್ಲೇ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ.
ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 09-05-2025ರಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 10ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಒಳ ಮೀಸಲಾತಿಯ ಬಗ್ಗೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈಗಾಗಲೇ ಸಿಎಂ ಸಿದ್ಧರಾಮಯ್ಯ ತಮ್ಮ ಸಂಪುಟದ ಸಹೋದ್ಯೇಗಿಗಳೊಂದಿಗೆ ಚರ್ಚಿಸಿದ್ದರು. ಆದರೇ ಈ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸಿನ ನೆರವು ನೀಡಲಿದೆ ಎನ್ನಲಾಗುತ್ತಿದೆ.
Good News: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಸಿಗ್ತಾರೆ ‘VA’