ಚಿಕ್ಕಬಳ್ಳಾಪುರ: ಬ್ಲಡ್ ಡ್ರಾ ಮಾಡುತ್ತಿದ್ದಾಗ ನವಜಾಶ ಶಿಶು ಸಾವನ್ನಪ್ಪಿದ ಘಟನೆ ಆರೋಗ್ಯ ಸಚಿವರ ತವರು ಕ್ಷೇತ್ರದ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಘಟನೆ ಕುರಿತು ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನಿಸಿದ ಹಸುಗೂಸಿಗೆ ವಾಂತಿ ಹಾಗೂ ಮೂತ್ರ ವಿಸರ್ಜನೆ ಸರಿಯಾಗುತ್ತಿರಲಿಲ್ಲ, ಇದರಿಂದ ಆತಂಕಗೊಂಡ ಪೋಷಕರು ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆರೋಗ್ಯವಾಗಿದ್ದ ಮಗುವಿನ ಪರೀಕ್ಷೆಗೆಂದು ಬ್ಲಡ್ ಡ್ರಾ ಮಾಡುತ್ತಿದ್ದ ವೇಳೆ ಮಗು ಇದ್ದಕ್ಕಿದ್ದ ಹಾಗೇ ಮೃತಪಟ್ಟಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಕೊರೇನಹಳ್ಳಿ ನಿವಾಸಿ ಸಂಧ್ಯಾ ಹಾಗೂ ಗಂಗರಾಜು ದಂಪತಿಯ ಮೂರು ತಿಂಗಳ ಮಗು ಗೆ ಸರಿಯಾಗಿ ವಾಂತಿ ಹಾಗೂ ಮೂತ್ರ ವಿಸರ್ಜನೆ ಆಗುತ್ತಿರಲಿಲ್ಲ, ಆದ್ದರಿಂದ ಮಗುವನ್ನು ಪೋಷಕರು ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು , ವೈದ್ಯರ ಚಿಕಿತ್ಸೆ ಬಳಿಕ ಮಗು ಹುಷಾರಾಗಿತ್ತು, ಆದರೆ ಮಗುವಿಗೆ ಯಾಕೆ ಹೀಗಾಯಿತು ಎಂದು ತಿಳಿದುಕೊಳ್ಳಲು ವೈದ್ಯರು ಮುಂದಾಗಿದ್ದರು ಎನ್ನಲಾಗಿದ್ದು, ಆರೋಗ್ಯವಾಗಿದ್ದ ಮಗುವಿನ ಪರೀಕ್ಷೆಗೆಂದು ಬ್ಲಡ್ ಡ್ರಾ ಮಾಡುತ್ತಿದ್ದ ವೇಳೆ ಮಗು ಇದ್ದಕ್ಕಿದ್ದ ಹಾಗೇ ಮೃತಪಟ್ಟಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಘಟನೆ ಕುರಿತು ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಪಟ್ಟು
BIGG UPDATE : ‘ಪೋಕ್ಸೋ ಕೇಸ್’ : ‘ಮುರುಘಾ ಶ್ರೀ’ ಸೇರಿ ಮೂವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಧೃಡ…! |Murgha Sri
BIGG NEWS : ಶೀಘ್ರದಲ್ಲೇ ಪ್ರತಿ ಮೂರು ಜಿಲ್ಲೆಗೆ ಒಂದು SDRF ಪಡೆ ನಿಯೋಜನೆ : ಸಚಿವ ಆರಗ ಜ್ಞಾನೇಂದ್ರ ಘೋಷಣೆ