ಚಿಕ್ಕಮಗಳೂರು : ಚಾಲಕನ ನಿಯಂತ್ರಣದ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ನಡೆದಿದೆ.
ಅಪಘಾತದಲ್ಲಿ ಪಿಕಪ್ ವಾಹನದ ಚಾಲಕ ಸೇರಿದಂತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ಚಿಕ್ಕಮಗಳೂರು ನಿಂದ ಪಿಕಪ್ ವಾಹನದಲ್ಲಿ ಉಡುಪಿಗೆ ತರಕಾರಿ ಸಾಗಿಸಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿದೆ. ಅಪಘಾತದ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.