Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2025ರಲ್ಲಿ ಆಪಲ್ ಭಾರತದಿಂದ $50 ಬಿಲಿಯನ್ ಮೌಲ್ಯದ ಐಫೋನ್‌ಗಳನ್ನು ರಪ್ತು | Apple iPhones

05/01/2026 5:10 PM

BREAKING: ಆಂಧ್ರಪ್ರದೇಶದಲ್ಲಿ ONGC ಪೈಪ್ ಲೈನ್ ಸ್ಪೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಮನೆ ತೊರೆದ ನೂರಾರು ಜನ

05/01/2026 5:05 PM

BREAKING : ಆಂಧ್ರದಲ್ಲಿ ‘ONGC ಪೈಪ್ಲೈನ್’ನಿಂದ ಅನಿಲ ಸೋರಿಕೆ ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ |VIDEO

05/01/2026 5:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ: ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆ ‘AD ರವಿಕುಮಾರ್’ ಅಮಾನತು
KARNATAKA

ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ: ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆ ‘AD ರವಿಕುಮಾರ್’ ಅಮಾನತು

By kannadanewsnow0908/11/2024 2:26 PM

ಬೆಂಗಳೂರು: ಚಿಕ್ಕೋಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಲಂಚಕ್ಕೆ ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ರವಿಕುಮಾರ್ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಲಂಚದ ಹಣ ಪಡೆಯುತ್ತಿದ್ದಾಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು, ವೀಡಿಯೋ ಕೂಡ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲ್ಲೂಕು ಸಹಾಯಕ ನಿರ್ದೇಶಕ ಗ್ರೇಡ್-1 ರವಿಕುಮಾರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 07.11.2024ರಂದು ಮಾಧ್ಯಮಗಳಲ್ಲಿ ಪುಸಾರಗೊಂಡಿರುವ ದೃಶ್ಯವಳಿಗಳಲ್ಲಿ ರವಿಕುಮಾರ್, ಸಹಾಯಕ ನಿರ್ದೇಶಕರು ಗ್ರೇಡ್-1, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರು ಲೋಕೋಪಯೋಗಿ ಇಲಾಖೆ, ಚಿಕ್ಕೋಡಿ ತಾಲ್ಲೂಕು ಇವರಿಗೆ ವಹಿಸಿರುವ 2020-21 ನೇ ಸಾಲಿನಲ್ಲಿ ಪರಿಶಿಷ್ಟ ತಾಲ್ಲೂಕಿನ ಅಕ್ಕೋಳ ಗ್ರಾಮದಲ್ಲಿ ಕಾಲೋನಿಯಲ್ಲಿ ರೂ. 20.00 ಲಕ್ಷಗಳ ವೆಚ್ಚದಲ್ಲಿ ಸುದಾಯ ಭವನ ನಿರ್ಮಾಣ ಕಾಮಗಾರಿಯ ಜಂಟಿ ಪರಿಶೀಲನಾ ವರದಿಯನ್ನು ನೀಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಗುತ್ತಿಗೆದಾರರು ರೂ.10,000/- ನೀಡಲಾಗಿ, ರೂ.20,000/- ಕ್ಕೆ ಬೇಡಿಕೆ ಇಟ್ಟು, ಬಾರ್‌ನಲ್ಲಿ ಮಧ್ಯ ಸೇವನೆ ಮಾಡುವಾಗ ಲಂಚದ ಹಣ ಪಡೆಯುತ್ತಿರುವುದು ಹಾಗೂ ಸದರಿ ಕಛೇರಿಯ ಕಿರಣ್, ಕಂಪ್ಯೂಟರ್ ಆಪರೇಟರ್ (ಹೊರ ಸಂಪನ್ಮೂಲ ಸಿಬ್ಬಂದಿ) ಕಛೇರಿ ಕೆಲಸ ಮಾಡಿಕೊಡಲು ರೂ.500/-ಗಳನ್ನು ಕಛೇರಿಯಲ್ಲಿ ಪಡೆಯುತ್ತಿರುವುದು ಪವರ್ ಟಿವಿ ದೃಶ್ಯವಳಿಗಳಲ್ಲಿ ಕಂಡುಬರುತ್ತದೆ ಎಂದಿದ್ದಾರೆ.

ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ ಜಿಲ್ಲೆ ಇವರ ಪತ್ರದಲ್ಲಿ ರವಿಕುಮಾರ್, ಸಹಾಯಕ ನಿರ್ದೇಶಕರು ಜವಾಬ್ದಾರಿಯುತ ತಾಲ್ಲೂಕು ಗ್ರೇಡ್-1, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರು ಮಟ್ಟದ ಅಧಿಕಾರಿಯಾಗಿ ಈ ರೀತಿ ಬಾರ್ ನಲ್ಲಿ ಮಧ್ಯ ಸೇವನೆ ಮಾಡುವಾಗ ಲಂಚದ ಹಣ ಸ್ವೀಕರಿಸುತ್ತಿರುವುದು ಮೇಲ್ನೋಟಕ್ಕೆ ಭ್ರಷ್ಟಾಚಾರ ಪುತಿಬಂಧಕ ಕಾಯ್ದೆಯ ಉಲ್ಲಂಘಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಇಲಾಖೆಯ ಮೇಲೆ ಇಟ್ಟ, ವಿಶ್ವಾಸಕ್ಕೆ ದಕ್ಕೆ ತಂದಿರುವುದರಿಂದ ಸದರಿ ಅಧಿಕಾರಿಯ ಮೇಲೆ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆರವರನ್ನು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ದೃಶ್ಯ ಮಾಧ್ಯಮದ ಸದರಿ ಅಂಶಗಳನ್ನು ಹಾಗೂ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಲಾಗಿ ರವಿಕುಮಾರ್ ಇವರು ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ, 1988 ರನ್ವಯ ಹಾಗೂ ಕರ್ನಾಟಕ ನಾಗರಿಕ ಸೇವೆಗಳ (ನಡತೆ) ನಿಯಮಗಳು, 2021 ರ ನಿಯಮ 3(1)(iii)(iii)ನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇವರ ಮೇಲಿನ ಆರೋಪಗಳ ಸತ್ಯಾಸತ್ಯತೆಯನ್ನು ತಿಳಿಯಲು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು ನಿಯಮ-10(1)()ರನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ 19570 ಸದರಿರವರನ್ನು ಅಮಾನತ್ತುಗೊಳಿಸಲು ನಿರ್ಧರಿಸಿ, ಈ ಕೆಳಕಂಡಂತೆ ಆದೇಶಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಂತೆ ರವಿಕುಮಾರ್, ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರನ್ನು ಗಂಭೀರ ಸ್ವರೂಪದ ಕರ್ತವ್ಯ ಲೋಪದ ಕಾರಣಕ್ಕಾಗಿ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ-10(1)(ಡಿ)ರನ್ವಯ ಪುದತ್ತವಾದ ಸೇವೆಯಿಂದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ
ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

ಸದರಿ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ನಿಯಮ-98ರನ್ನಯ ನಿಯಮ-98ರನ್ವಯ ಜೀವನಾಧಾರ  ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಸದರಿ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನವನ್ನು ಬಿಡತಕ್ಕದಲ್ಲ ಎಂದು ತಿಳಿಸಿದ್ದಾರೆ.

ಸರ್ಕಾರದ ಆದೇಶ ಸಂಖ್ಯೆ ಸಕಇ 508 ಪಕಸೇ 2024

ಶ್ರೀ ರವಿಕುಮಾರ್, ಸಹಾಯಕ ನಿರ್ದೇಶಕರು, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರನ್ನು ಗಂಭೀರ ಸ್ವರೂಪದ ಕರ್ತವ್ಯ ಲೋಪದ ಕಾರಣಕ್ಕಾಗಿ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು… pic.twitter.com/MpHD68cPf2

— ಸಮಾಜ ಕಲ್ಯಾಣ ಇಲಾಖೆ (@SWDGoK) November 8, 2024

ಸಂಡೂರಲ್ಲಿ ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ: ಸಿದ್ದರಾಮಯ್ಯ ಕರೆ

ಉದ್ಯೋಗ ವಾರ್ತೆ : `ಪವರ್ ಮ್ಯಾನ್’ ಸೇರಿ `KPTCL’ನ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ | KPTCL Recruitment

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

05/01/2026 4:18 PM1 Min Read

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ

05/01/2026 4:09 PM1 Min Read

BIG NEWS: ಕರ್ನಾಟಕದ ಸುದೀರ್ಘ ಅವಧಿಯ `CM’ ಆಗಲು ಜನರ ಆಶೀರ್ವಾದವೇ ಕಾರಣ : ಸಿಎಂ ಸಿದ್ದರಾಮಯ್ಯ

05/01/2026 3:49 PM2 Mins Read
Recent News

2025ರಲ್ಲಿ ಆಪಲ್ ಭಾರತದಿಂದ $50 ಬಿಲಿಯನ್ ಮೌಲ್ಯದ ಐಫೋನ್‌ಗಳನ್ನು ರಪ್ತು | Apple iPhones

05/01/2026 5:10 PM

BREAKING: ಆಂಧ್ರಪ್ರದೇಶದಲ್ಲಿ ONGC ಪೈಪ್ ಲೈನ್ ಸ್ಪೋಟ: ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಮನೆ ತೊರೆದ ನೂರಾರು ಜನ

05/01/2026 5:05 PM

BREAKING : ಆಂಧ್ರದಲ್ಲಿ ‘ONGC ಪೈಪ್ಲೈನ್’ನಿಂದ ಅನಿಲ ಸೋರಿಕೆ ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ |VIDEO

05/01/2026 5:04 PM

BREAKING : ಕೋಲ್ಕತ್ತಾದಲ್ಲಿ SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ‘ಮೊಹಮ್ಮದ್ ಶಮಿ, ಸಹೋದರ’ನಿಗೆ ಸಮನ್ಸ್

05/01/2026 4:45 PM
State News
KARNATAKA

ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0905/01/2026 4:18 PM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ…

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ

05/01/2026 4:09 PM

BIG NEWS: ಕರ್ನಾಟಕದ ಸುದೀರ್ಘ ಅವಧಿಯ `CM’ ಆಗಲು ಜನರ ಆಶೀರ್ವಾದವೇ ಕಾರಣ : ಸಿಎಂ ಸಿದ್ದರಾಮಯ್ಯ

05/01/2026 3:49 PM

ಇಂದಿನಿಂದ ರಾಜ್ಯಾಧ್ಯಂತ ಹುಲಿ ಗಣತಿ ಆರಂಭ: ಸಚಿವ ಈಶ್ವರ ಖಂಡ್ರೆ

05/01/2026 3:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.