ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಎರಡೂವರೆ ವರ್ಷದ ಗಂಡು ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ.

ಮೃತ ಮಗುವನ್ನು ಲೇಖನ್ ಎಂದು ಗುರುತಿಸಲಾಗಿದ್ದು, ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಲೇಖನ್ ತಂದೆ ಗೋವಿಂದರಾಜು ಹಾಗೂ ತಾಯಿ ಗಾಯತ್ರಿ ಆರೋಪಿಸಿದ್ದಾರೆ.
ಜ್ವರ ಹಿನ್ನೆಲೆ ಲೇಖನ್ ಅನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇರಿಸಿಕೊಳ್ಳುತ್ತದ್ದ ಲೇಖನ್ ಏಕಾಏಕಿ ಸಂಪೂರ್ಣವಾಗಿ ಅಸ್ವಸ್ಥನಾಗಿದ್ದಾನೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸುವ ವೇಳೆ ಮಗು ಸಾವನ್ನಪ್ಪಿದೆ. ಮಗುವಿಗೆ ಚಿಕಿತ್ಸೆ ನೀಡಲು ವೈದ್ಯರು ತಡ ಮಾಡಿದ್ದರಿಂದ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆಸರೆ ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Share.
Exit mobile version