ಕಲಬುರ್ಗಿ: ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಶಾಲಾ ವಾಹನವೊಂದು ಹರಿದ ಪರಿಣಾಮ, ಸ್ಥಳದಲ್ಲೇ ಮಗು ದುರ್ಮಣರ ಹೊಂದಿರುವಂತ ಘಟನೆ ಇಂದು ನಡೆದಿದೆ. ಈ ಹಿನ್ನಲೆಯಲ್ಲಿ ಶಾಲಾ ವಾಹನವನ್ನು ಜಖಂ ಗೊಳಿಸಲಾಗಿದೆ.
ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ ಹರಿದು ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವೊಂದು ಧಾರುಣವಾಗಿ ಸಾವನ್ನಪ್ಪಿದೆ.
ಮೃತ ಮಗುವನ್ನು ಮನೋಜ್(2) ಎಂಬುದಾಗಿ ಗುರುತಿಸಲಾಗಿದೆ. ಶಾಲಾ ವಾಹನ ಚಾಲಕನ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬುದಾಗಿ ಆರೋಪಿಸಿ, ಪೋಷಕರು, ಸಂಬಂಧಿಕರು ಶಾಲಾ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಕಲ್ಲು ತೂರಾಟ ನಡೆಸಿದ ಕಾರಣ, ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ಸಿನ ಗ್ಲಾಸ್ ಪುಡಿ ಪುಡಿಯಾಗಿದೆ. ಘಟನೆಯ ಬಳಿಕ ಶಾಲಾ ವಾಹನದ ಚಾಲಕ ಬಸ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದಂತ ಕಲಬುರ್ಗಿ ಸಂಚಾರ-2 ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
BREAKING : ‘RBI’ನಿಂದ ‘Paytm’ ಬಿಗ್ ಶಾಕ್ : ‘ಪೇಟಿಎಂ ಬ್ಯಾಂಕ್’ಗೆ ‘ಹೊಸ ಗ್ರಾಹಕರ ಸೇರ್ಪಡೆ’ ನಿಷೇಧ