Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ‘RTE’ ಅಡಿ ಅರ್ಜಿ ಸಲ್ಲಿಕೆಗೆ ಅವಕಾಶ : ರಾಜ್ಯ ಸರ್ಕಾರದಿಂದ ಆದೇಶ
KARNATAKA

ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ‘RTE’ ಅಡಿ ಅರ್ಜಿ ಸಲ್ಲಿಕೆಗೆ ಅವಕಾಶ : ರಾಜ್ಯ ಸರ್ಕಾರದಿಂದ ಆದೇಶ

By kannadanewsnow5731/03/2024 11:52 AM

ಬೆಂಗಳೂರು : 2015 ರ ನಂತರ ಬರಗಾಲದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ 2024-25 ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯಿದೆ-2009 ರ ಸೆಕ್ಷನ್ 12(1)(ಬಿ) ಮತ್ತು ಸೆಕ್ಷನ್ 12(1) (ಸಿ)ಅಡಿ ಪ್ರವೇಶ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪ್ರವೇಶ ಪ್ರಕ್ರಿಯೆ ನಡೆಸಲು ಉಲ್ಲೇಖ (5) ಮತ್ತು (7) ರ ಸರ್ಕಾರದ ಆದೇಶದಂತೆ ನೆರೆಹೊರೆಯನ್ನು ಈ ಕೆಳಕಾಣಿಸಿದಂತೆ ವ್ಯಾಖ್ಯಾನಿಸಲಾಗಿದೆ.

ನೆರೆಹೊರ
ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಿಸಿದ ಕಂದಾಯ ಗ್ರಾಮದ ಭೌಗೋಳಿಕ ಗಡಿ;
ಶಾಲೆ ಇರುವ ನಗರ ಸಭೆ, ಟೌನ್ ಮುನಿಸಿಪಲ್ ಕೌನ್ಸಿಲ್ ಮತ್ತು ಪಟ್ಟಣ ಪಂಚಾಯಿತಿಯ ಭೌಗೋಳಿಕ ಗಡಿ;
ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ ಭೌಗೋಳಿಕ ಗಡಿ.

ಈಗಾಗಲೇ ಉಲ್ಲೇಖ(10)ರಂತೆ 2024-25ನೇ ಸಾಲಿನ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲೆಗಳ ಮ್ಯಾಪಿಂಗ್ ಮಾಡುವ ಕುರಿತು ಕಳುಹಿಸಿರುವ ಸುತ್ತೋಲೆಯನ್ನು ಮುಂದುವರಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು (ಆಡಳಿತ) ಈ ಕೆಳಕಾಣಿಸಿದ ಕ್ರಮ ತೆಗೆದುಕೊಳ್ಳಲು ತಿಳಿಸಿದೆ.

1. ನೆರೆಹೊರೆಯಲ್ಲಿರುವ ಯಾವುದೇ ಶಾಲೆಯನ್ನು ಕೈಬಿಡದಂತೆ ಎಲ್ಲಾ ಸರ್ಕಾರಿ, ಬಿ.ಬಿ.ಎಂ.ಪಿ. ಶಾಲೆಗಳು ಅನುದಾನಿತ ಮತ್ತು ಅನುದಾನರಹಿತ, ಶಾಲೆಗಳನ್ನು ಮ್ಯಾಪ್ ಮಾಡುವುದು.

2. ಅಲ್ಪಸಂಖ್ಯಾತ ಶಾಲೆಗಳೆಂದು ಘೋಷಣಾ ಪತ್ರ ಪಡೆದಿರುವ, ಈಗಾಗಲೇ ಮುಚ್ಚಿರುವ ಮತ್ತುನ್ಯಾಯಾಲಯದ ತಡೆಯಾಜ್ಞೆ ಪಡೆದಿರುವ ಶಾಲೆಗಳನ್ನು ಪಟ್ಟಿಯಿಂದ ಕೈಬಿಡುವುದು.

3. ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳನ್ನು ಮಾತ್ರ ನಡೆಸುವ ಶಾಲೆಗಳನ್ನು ಪಟ್ಟಿಯಲ್ಲಿ ಸೇರಿಸಬಾರದು.

ಅಲ್ಪ ಸಂಖ್ಯಾತವಲ್ಲದ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ದಿ: 31.12.2023 ರಲ್ಲಿದ್ದಂತೆ ಎಲ್.ಕೆ.ಜಿ. ಮತ್ತು 1 ನೇ ತರಗತಿಯ ಒಟ್ಟು ದಾಖಲಾತಿ ಸಂಖ್ಯೆಯನ್ನು ಎಸ್.ಎ.ಟಿ.ಎಸ್. ತಂತ್ರಾಂಶದ ಆಧಾರದ ಮೇಲೆ ಶೇ.25% ಸೀಟು ಹಂಚಿಕೆಗೆ ಪರಿಗಣಿಸಲಾಗುವುದು.

2024-25ನೇ ಸಾಲಿನಲ್ಲಿ ಕಾಯ್ದೆಯ ಸೆಕ್ಷನ್ 12(1) (ಬಿ) ಮತ್ತು 12(1)(ಸಿ) ಅನ್ವಯ ಪ್ರವೇಶ ಪ್ರಕ್ರಿಯೆಗೆ ನಿಗದಿಪಡಿಸಿದ ವೇಳಾಪಟ್ಟಿಯನ್ನು ಈ ಸುತ್ತೋಲೆಗೆ ಲಗತ್ತಿಸಿದೆ. ವೇಳಾಪಟ್ಟಿ ಪ್ರಕಾರ ಸಂಬಂಧಿಸಿದ ಪ್ರಾಧಿಕಾರ ಸಕಾಲಿಕ ಕ್ರಮ ತೆಗೆದುಕೊಳ್ಳುವುದು. ಆನ್‌ಲೈನ್ ತಂತ್ರಾಂಶದಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಪ್ರತಿ ವರ್ಷದಂತೆ ಅಗತ್ಯ ಗಣಕಯಂತ್ರ ವ್ಯವಸ್ಥೆ ಮತ್ತು ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳುವುದು.

ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಮೊದಲು ನೆರೆಹೊರೆಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆ ಇಲ್ಲದಿರುವುದನ್ನು ಪಡಿಸಿಕೊಂಡು ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತವಲ್ಲದ ಅಧಿಕೃತ ಅನುದಾನ ರಹಿತ ಶಾಲೆಗಳ ಅಂತಿಮ ಪಟ್ಟಿ ಹಾಗೂ ಸದರಿ ಶಾಲೆಗಳಲ್ಲಿ ಶಾಲಾವಾರು ಶೇಕಡಾ 25ರ ಪ್ರಮಾಣದಲ್ಲಿ ಲಭ್ಯವಿರುವ ಸೀಟುಗಳ ಸಂಖ್ಯೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅದರಂತೆ ಉಪನಿರ್ದೇಶಕರು(ಆಡಳಿತ)ರವರ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲು ಕ್ರಮವಹಿಸುವುದು.

ಅನುದಾನಿತ ಶಾಲೆಗಳಲ್ಲಿ ಅನುದಾನದ ಅನುಪಾತಕ್ಕೆ ಅನುಗುಣವಾಗಿ ಸೆಕ್ಷನ್ 12(1)(ಬಿ) ಅಡಿ 1ನೇ ತರಗತಿಗೆ ಶಾಲಾವಾರು ಶೇಕಡಾ 25ರ ಪ್ರಮಾಣದಲ್ಲಿ ಲಭ್ಯವಿರುವ ಸೀಟುಗಳ ಮಾಹಿತಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅದರಂತೆ ತಮ್ಮ ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲು ಕ್ರಮವಹಿಸುವುದು.

ನೆರೆಹೊರೆ ಶಾಲೆಗಳಿಗೆ ಸಂಬಂಧಿಸಿದಂತೆ ನಿಗಧಿತ ಅವಧಿಯಲ್ಲಿ ಆಕ್ಷೇಪಣೆಗಳನ್ನು ಸ್ವೀಕರಿಸಿ, ದತ್ತಾಂಶ ಪರಿಶೀಲಿಸಿ, ನೈಜತೆಯನ್ನು ಖಾತರಿ ಪಡಿಸಿಕೊಂಡು ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡುವುದು ಕ್ಷೇತ್ರಶಿಕ್ಷಣಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಉಪನಿರ್ದೇಶಕರ ಕಛೇರಿಯಿಂದ ಈ ಕುರಿತು ಅನುಪಾಲನೆ ಮಾಡಲು ತಿಳಿಸಿದೆ.

ಅರ್ಜಿ ಸಲ್ಲಿಸುವ ಕ್ರಮ ಹಾಗೂ ಪರಿಶೀಲನೆ:

ಶಿಕ್ಷಣ ಹಕ್ಕು ಕಾಯಿದೆಯಡಿ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗಾಗಿ ಪ್ರವೇಶ ಕೋರುವ ಮಗು ಮತ್ತು ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಕಡ್ಡಾಯ. ಶಿಕ್ಷಣ ಹಕ್ಕು ಕಾಯಿದೆ ಅಡಿಯಲ್ಲಿ ಸೀಟು ಬಯಸುವ ಪಾಲಕರು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗಳಲ್ಲಿ ಉಚಿತವಾಗಿ ಅಥವಾ ಸರ್ಕಾರದ ಪಾವತಿ ಕೇಂದ್ರಗಳಾದ ಬೆಂಗಳೂರು ನಗರದಲ್ಲಿ, ಬೆಂಗಳೂರು-ಒನ್, ಇತರೆ ನಗರ ಪ್ರದೇಶಗಳಲ್ಲಿ ಕರ್ನಾಟಕ-ಒನ್, ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ಆಟಲ್‌ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಶಾಲೆಗಳ ಆದ್ಯತೆ ನಮೂದಿಸಿ ಅರ್ಜಿಯನ್ನು ಸಲ್ಲಿಸಬಹುದು. ತಂದೆ/ತಾಯಿ/ಪಾಲಕರ ಬಳಿ ಸ್ವಂತ ಮೊಬೈಲ್ ಫೋನ್ ಮತ್ತು ಇಂಟರ್‌ನೆಟ್ ಸೌಲಭ್ಯ ಲಭ್ಯವಿದ್ದಲ್ಲಿ ಆನ್‌ಲೈನ್ ಮುಖಾಂತರ ನೇರವಾಗಿ ಅರ್ಜಿ ಸಲ್ಲಿಸಬಹುದು.

ಜಾತಿ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಆರ್.ಡಿ. ಸಂಖ್ಯೆಯನ್ನು ನಿಗದಿತ ಕಾಲಂನಲ್ಲಿ ಸರಿಯಾಗಿ ನಮೂದಿಸುವುದು. ಈ ದಾಖಲೆಗಳನ್ನು ಆಪ್‌ ಲೋಡ್ ಮಾಡುವ ಅವಶ್ಯಕತೆ ಇಲ್ಲ. ಅರ್ಜಿ ಸಲ್ಲಿಸುವಾಗಲೇ ತಂತ್ರಾಂಶದ ಮೂಲಕ ನಿಜಕಾಲಿಕ ಪರಿಶೀಲನೆ ನಡೆಸಿ, ಸದರಿ ದಾಖಲೆಗಳ ನೈಜತೆಯನ್ನು ಖಾತರಿ ಪಡಿಸಿಕೊಳ್ಳಲಾಗುವುದು.

ವಿಶೇಷ ಪ್ರವರ್ಗದಡಿ ಮೀಸಲಾತಿ ಕೋರುವ ಪೋಷಕರು ಸೂಕ್ತ ಕಾಲಂನಲ್ಲಿ ನಿರ್ದಿಷ್ಟವಾಗಿ ಮೀಸಲಾತಿ ಕೋರಿರುವ ಪ್ರವರ್ಗವನ್ನು ನಮೂದಿಸುವುದು ಹಾಗೂ ಸದರಿ ಪವರ್ಗಕ್ಕೆ ಸಂಬಂಧಿಸಿದ ದಾಖಲೆಯನ್ನು ತಂತ್ರಾಂಶದಲ್ಲಿ ಆಪ್‌ ಲೋಡ್ ಮಾಡುವುದು.

ಅನಾಥ ಮಗು, ವಿಶೇಷ ಅಗತ್ಯತೆಯುಳ್ಳ ಮಗು (ಸಿ.ಡಬ್ಲ್ಯೂ.ಎಸ್.ಎನ್), ಹೆಚ್.ಐ.ವಿ. ಸೋಂಕಿತ /ಭಾದಿತ ಮಗು, ವಲಸೆ ಮತ್ತು ಬೀದಿ ಮಗು, ಬರಗಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಮಗು, ಮಂಗಳಮುಖಿ ಇತ್ಯಾದಿ ವಿಶೇಷ ಪ್ರವರ್ಗದಡಿ ಮೀಸಲಾತಿ ಕೋರಿ ಸಲ್ಲಿಸಿರುವ ಅರ್ಜಿಗಳ ಮತ್ತು ದಾಖಲೆಗಳ ನೈಜತೆಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಖುದ್ದಾಗಿ ಮೂಲ ದಾಖಲೆಗಳೊಂದಿಗೆ ತಾಳೆ ನೋಡಿ, ಪರಿಶೀಲಿಸಿ ಸರಿಯಿದ್ದಲ್ಲಿ ಮಾತ್ರ ದಾಖಲೆಯನ್ನು ಸ್ಕ್ಯಾನ್ ಮಾಡಿ. ಅಪ್‌ಲೋಡ್ ಮಾಡುವಂತೆ ಸೂಚನೆ ನೀಡಲಾಗಿದೆ.

Children of farmers who committed suicide can apply for RTE: State govt ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ‘RTE’ ಅಡಿ ಅರ್ಜಿ ಸಲ್ಲಿಕೆಗೆ ಅವಕಾಶ : ರಾಜ್ಯ ಸರ್ಕಾರದಿಂದ ಆದೇಶ
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM1 Min Read

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM1 Min Read

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM1 Min Read
Recent News

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM
State News
KARNATAKA

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

By kannadanewsnow0909/05/2025 9:51 PM KARNATAKA 1 Min Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

09/05/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.