ಚಿತ್ರದುರ್ಗ: ಜಿಲ್ಲಾ ಮೂರನೆಯ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ( Civil Court ) ನ್ಯಾಯಾಧೀಶರಾಗಿ ನೇಮಕಗೊಂಡು ಆಗಮಿಸಿರುವ ನ್ಯಾಯಾಧೀಶರಾದ ಸಹನಾ ಅವರನ್ನು ಜಿಲ್ಲಾ ವಕೀಲರ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

BIG NEWS: ರಾಜ್ಯ ರಾಜಕೀಯ, ಪ್ರಕೃತಿ ವಿಕೋಪದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji

ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ ಶಿವು ಯಾದವ್ ( C Shivu Yadav ), ಸುಮಾರು ವರ್ಷಗಳಿಂದ ನ್ಯಾಯಾಧೀಶರು ನೇಮಕಗೊಳ್ಳದೆ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಸಹನಾರವರು ಆಗಮಿಸಿರುವುದು ತುಂಬಾ ಸಂತೋಷದಾಯಕ ವಿಷಯವಾಗಿದೆ. ಸಹನಾರವರು ಹೊಸದಾಗಿ ನ್ಯಾಯಾಧೀಶರಾಗಿ ಆಯ್ಕೆಯಾಗಿ ಚಿತ್ರದುರ್ಗಕ್ಕೆ ನೇಮಕಗೊಂಡು ಆಗಮಿಸುತ್ತಿರುವುದು ತುಂಬಾ ಸಂತೋಷದಾಯಕ ವಿಷಯವಾಗಿದೆ. ಅವರ ನ್ಯಾಯಾಧೀಶರ ವೃತ್ತಿಜೀವನವು ಚಿತ್ರದುರ್ಗದಿಂದ ಆರಂಭಿಸುತ್ತಿದ್ದಾರೆ. ಅವರ ಮುಂದಿನ ನ್ಯಾಯಾಧೀಶರ ವೃತ್ತಿಜೀವನವು ಸುಂದರವಾಗಿರಲಿ ಎಂದು ಹಾರೈಸಿದರು.

BIG BREAKING NEWS: ಕಾಮನ್ ವೆಲ್ತ್ ಗೇಮ್ಸ್: ಲಾನ್ ಬೌಲ್ಸ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ

ಹೊಸದಾಗಿ ಆಗಮಿಸಿರುವ ನ್ಯಾಯಾಧೀಶರಾದ ಸಹನರವರಿಗೆ ನ್ಯಾಯದಾನ ವಿಚಾರದಲ್ಲಿ ಎಲ್ಲಾ ರೀತಿಯಿಂದಲೂ ವಕೀಲರ ಸಂಘದಿಂದ ಸಹಕಾರ ನೀಡಲಾಗುವುದು. ತ್ವರಿತ ನ್ಯಾಯದಾನದಲ್ಲಿ ನ್ಯಾಯಾಧೀಶರ ಮತ್ತು ವಕೀಲರ ಪರಸ್ಪರ ಸಹಕಾರ ಅತ್ಯವಶ್ಯಕವಾಗಿರುತ್ತದೆ ಎಂದು ಹೇಳಿದರು.

ಇದೇ ವೇಳೆ ನೂತನ ನ್ಯಾಯಾಧೀಶರಾಗಿ ಆಯ್ಕೆಯಾಗಿ ಬಂದಿರುವ ಸಹನಾ ಅವರಿಗೆ ಪುಷ್ಪಗುಚ್ಛ ನೀಡುವುದರ ಮೂಲಕ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಬಳ್ಳಾರಿಯಲ್ಲಿ ವೇದಾವತಿ ನದಿಯಲ್ಲಿ ಸಿಲುಕಿ 25 ಕಾರ್ಮಿಕರ ಪರದಾಟ: 2 ಗಂಟೆಯೇ ಕಳೆದರೂ ಬಾರದ ರಕ್ಷಣಾ ಸಿಬ್ಬಂದಿ

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರೇಮವತಿ ಮನಗೂಳಿ ಅವರು ಮಾತನಾಡಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಸಹನಾರವರನ್ನು ನೇಮಕ ಮಾಡಿರುವುದು ಸಂತೋಷದಾಯಕ ವಿಷಯವಾಗಿದೆ. ತಮ್ಮ ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಲಿ ನ್ಯಾಯಾಂಗದಿಂದ ಎಲ್ಲಾ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಕಲ್ಕಣಿಯವರು, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆಂಪರಾಜುರವರು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿಕೆ ಗಿರೀಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಮೂರ್ತಿ, ಸಹ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ, ಖಜಾಂಚಿ ಅಜ್ಜಯ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

Share.
Exit mobile version