ಬೆಂಗಳೂರು: ನಗರದಲ್ಲಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ, 11 ಜನ ಅಮಾಯಕರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕ ಆರ್.ಅಶೋಕ್, ನಮ್ಮ ಶಾಸಕರು ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದರು. ಈ ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಆದ ಕಾರ್ಯಕ್ರಮ ನಾನು ನೋಡಿಕೊಂಡೆ. ನನಗೆ ಬೇರೆ ಯಾವುದೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗಮನ ಸೆಳೆದರು. ಹಾಗಿದ್ದರೆ ನೀವು ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಗಳೇ? ಈ ರಾಜ್ಯಕ್ಕೆ ಮುಖ್ಯಮಂತ್ರಿ ಯಾರು? ಡಿ.ಕೆ.ಶಿವಕುಮಾರ್? ಪರಮೇಶ್ವರ್ ಅವರೇ? ಅಥವಾ ಮುಖ್ಯ ಕಾರ್ಯದರ್ಶಿಗಳೇ? ಎಂದು ಕೇಳಿದರು.
ನೀವು ಯಾವ ಯೋಗ್ಯತೆ ಇಟ್ಟುಕೊಂಡು ಮುಖ್ಯಮಂತ್ರಿ ಎಂದು ಕರೆಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ‘ಯು ಮಸ್ಟ್ ರಿಸೈನ್’ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. 11 ಜನರ ಸಾವಿನ ಪ್ರಕರಣದಲ್ಲಿ ನೀವೇ ಆರೋಪಿ. ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಯವರ ಕ್ರೆಡಿಟ್ ವಾರ್ನಲ್ಲಿ ರಾಜ್ಯ ಇವತ್ತು ಕಪ್ಪು ಛಾಯೆಯಲ್ಲಿದೆ ಎಂದು ನುಡಿದರು.
ಮಾನ್ಯ ರಾಜ್ಯಪಾಲರು ಬರುವ ವೇಳೆ ಶಿಷ್ಟಾಚಾರ ಪಾಲಿಸಿಲ್ಲ. ಸರಕಾರವು ಶಿಷ್ಟಾಚಾರಗಳನ್ನು ಉಲ್ಲಂಘಿಸಿದೆ ಎಂದು ಅವರು ಆಕ್ಷೇಪಿಸಿದರು. ಸಾಂವಿಧಾನಿಕ ಶಿಷ್ಟಾಚಾರ ಉಲ್ಲಂಘನೆಗೆ ಸಿಎಂ, ಡಿಸಿಎಂ ಕಾರಣರಾಗಿದ್ದಾರೆ ಎಂದು ಟೀಕಿಸಿದರು. ಡಿಪಿಆರ್ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗೆ ಇಂಚಿಂಚು ಮಾಹಿತಿ ಇರಬೇಕಿತ್ತು. ಅವರಿಗೆ ಏನು ಆದೇಶ ಇತ್ತೆಂಬ ತನಿಖೆ ಆಗಲಿ ಎಂದು ಒತ್ತಾಯಿಸಿದರು.
ಪುಸ್ತಕ ಪ್ರಿಯರ ಗಮನಕ್ಕೆ: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ
BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು