ಬೆಂಗಳೂರು : ನಾಳೆ ವಿಜಯಪುರಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದು, ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ನಾಳೆ ನಾಳೆ ವಿಜಯಪುರಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದು, ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇನ್ನೂ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ ವಾಗಿದೆ ಎಂದು ವೈದ್ಯ ಮೂಲಿಮನಿ ಮಾಹಿತಿ ನೀಡಿದ್ದಾರೆ.

ಸಿದ್ದೇಶ್ವರ ಶ್ರೀಗಳ ನಾಡಿಮಿಡಿತದಲ್ಲಿ ಸ್ವಲ್ಪ ಏರುಪೇರು ಆಗಿದೆ. ಉಸಿರಾಟದಲ್ಲಿ ಸ್ವಲ್ಪ ಸಮಸ್ಯೆ ಆಗುತ್ತಿದೆ. ಹೀಗಾಗಿ ಆಕ್ಸಿಜನ್ ಕೊಡಲಾಗುತ್ತಿದೆ. ಸಿದ್ದೇಶ್ವರ ಸ್ವಾಮೀಜಿಯವರ ಪಲ್ಸ್, ಬಿಪಿ, ಸ್ವಲ್ಪ ಕಡಿಮೆಯಾಗಿದೆ. ಅವರು ಬೆಳಗ್ಗೆಯಿಂದಲೂ ಆಹಾರವನ್ನು ಸೇವಿಸಿಲ್ಲ ಎಂದು ಹೇಳಿದ್ದಾರೆ.

‘KSRTC ಚಾಲನಾ ಸಿಬ್ಬಂದಿ’ಗೆ ಗುಡ್ ನ್ಯೂಸ್: ‘ಸಾಂದರ್ಭಿಕ ಒಪ್ಪಂದ’ದ ಮೇಲೆ ಕರ್ತವ್ಯ ನಿರ್ವಹಿಸುವವರಿಗೆ ಪ್ರೋತ್ಸಾಹಧನ ಘೋಷಣೆ

BREAKING NEWS : ‘ರಾಹುಲ್ ಗಾಂಧಿ’ P.A ಹೆಸರಿನಲ್ಲಿ ಶಾಸಕ ಯು.ಟಿ ಖಾದರ್ ಗೆ ದೂರವಾಣಿ ಕರೆ : ವಂಚನೆಗೆ ಯತ್ನ

Share.
Exit mobile version