ಬೆಂಗಳೂರು: ಇಂದು ಮಳೆಗಾಲ ಅಧಿವೇಶನ ಅಂತ್ಯಗೊಂಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಎರಡು ಅಧಿವೇಶನ ನಡೆದಿದೆ. ಸದನದಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆ ನಡೆಸಲಾಯಿತು. ವಿಪಕ್ಷದವರು ಎತ್ತಿರುವ ವಿಚಾರಗಳು ಅವರಿಗೇ ತಿರುಗೇಟು ಆಗಿದೆ ಎಂದರು.

BIGG NEWS: SCST,OBC ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಪತ್ರದ ಬಗ್ಗೆ ಈಗಾಗಲೇ ಉತ್ತರಿಸಿದ್ದೇನೆ. ಗುತ್ತಿಗೆದಾರರ ಸಂಘಕ್ಕೆ ಈಗಲೂ ನಾನು ಕೇಳುತ್ತೇನೆ ದಾಖಲೆ ಕೊಡಿ ಅಂತಾ.
ದಾಖಲೆ ಕೊಟ್ಟರೆ ನೇರವಾಗಿ ಲೋಕಾಯುಕ್ತ ತನಿಖೆಗೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಪೇ ಸಿಎಂ ಪೋಸ್ಟರ್‌ ಅಭಿಯಾನಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನವರು ಯಾವ ಕ್ಯಾಂಪೇನ್‌ ಬೇಕಾದ್ರೂ ಮಾಡಲಿ. ಕೊನೆಗೂ ಸತ್ಯಕ್ಕೆ ಜಯ ಸಿಗುತ್ತೆ ಎಂದಿದ್ದಾರೆ

Share.
Exit mobile version