Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾರ್ತಾ ಇಲಾಖೆ ಸಂಬಂಧಿತ ಶ್ರೀನಿವಾಸಮೂರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ: ಶೀಘ್ರವೇ ಆಯುಕ್ತರ ಜತೆ ಚರ್ಚೆ
KARNATAKA

ವಾರ್ತಾ ಇಲಾಖೆ ಸಂಬಂಧಿತ ಶ್ರೀನಿವಾಸಮೂರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ: ಶೀಘ್ರವೇ ಆಯುಕ್ತರ ಜತೆ ಚರ್ಚೆ

By kannadanewsnow0918/01/2026 4:27 PM

ಬೆಂಗಳೂರು: ವಾರ್ತಾ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ‌ ಸಮಿತಿ ಸಲ್ಲಿಸಿದ ವರದಿ ಜಾರಿ ಮಾಡುವಂತೆ ಆಗ್ರಹಿಸಿ, ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ, ವಿಧಾನ ಪರಿಷತ್ ಶಾಸಕರಾದ ದಿನೇಶ ಗೂಳಿಗೌಡ ಅವರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ತಕ್ಷಣ ಚರ್ಚಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ಮನವಿಯಲ್ಲಿ ಏನಿದೆ..?

1978ರಲ್ಲಿ ವಾರ್ತಾ ಇಲಾಖೆ ಅಳವಡಿಸಿಕೊಂಡಿದ್ದ ಅವೈಜ್ಞಾನಿಕ ವೃಂದ ಮತ್ತು ನೇಮಕಾತಿ ನಿಯಮದ ಪರಿಣಾಮವಾಗಿ ವಾರ್ತಾ ಇಲಾಖೆ . ಇದನ್ನು ಸರಿಪಡಿಸುವ ಕೆಲಸ ಮಾಡಿಲ್ಲ ಅನುಗುಣವಾಗಿ ಹೊಸ ವೃಂದ ಮತ್ತು ನೇಮಕಾತಿ ನಿಯಮ ಅಳವಡಿಸಿಕೊಳ್ಳುವ ಬದಲು ಹಳೆ ಪದ್ದತಿ ಇದೆ . ಈಗಾಗಲೇ 15-20 ವರ್ಷದಿಂದ ಬಡ್ತಿ ಇಲ್ಲದೆ ಸರ್ಕಾರದ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ.

ಆದ್ದರಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊಸದಾಗಿ ಅಳವಡಿಸಿಕೊಳ್ಳಲು ಉದ್ದೇಶಿಸಿರುವ ವೃಂದ ಮತ್ತು ನೇಮಕಾತಿ ನಿಯಮದ ಕರಡು ಪ್ರಸ್ತಾವನೆಯನ್ನು ಎಲ್ಲ ನೌಕರರಿಗೆ ಅಧಿಕೃತವಾಗಿ ನೀಡಿ, ತಕರಾರು, ಸಲಹೆ,‌ ಸೂಚನೆಗಳನ್ನು ಲಿಖಿತವಾಗಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವೈಜ್ಞಾನಿಕ ನೇಮಕಾತಿ ನಿಯಮ ರೂಪಿಸಿ

ಎಲ್ಲ ವೃಂದದ ನೌಕರರಿಗೆ ಸೇವಾ ಅವಧಿಯಲ್ಲಿ ಕನಿಷ್ಠ 3 ಬಡ್ತಿಗಳಾದರೂ ಸಿಗುವಂತೆ ವೈಜ್ಞಾನಿಕವಾಗಿ ಹಾಗೂ ತರ್ಕಬದ್ಧವಾಗಿ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಯಾರಿಸಲು ಸಂಬಂಧಪಟ್ಟವರಿಗೆ ಸೂಚಿಸಬೇಕು. ಹಳೆಯ ವೃಂದ ಮತ್ತು ನೇಮಕಾತಿ ನಿಯಮದಿಂದ ತೊಂದರೆಗೊಳಗಾದ ನೌಕರರು ಹೊಸ ವೃಂದ ಮತ್ತು ನೇಮಕಾತಿ ನಿಯಮಗಳ ಅಳವಡಿಕೆಯ ನಂತರವೂ ಮತ್ತೆ ಸರಿಯಾದ ಬಡ್ತಿ ಇಲ್ಲದೆ ಅನ್ಯಾಯಕ್ಕೆ ಒಳಗಾಗದಂತೆ ಎಚ್ಚರವಹಿಸಲು ಸಂಬಂಧಪಟ್ಟವರಿಗೆ ಸೂಚಿಸಬೇಕು ಎಂದು ದಿನೇಶ ಗೂಳಿಗೌಡ ಮನವಿ ಮಾಡಿದ್ದರು.

8 ವರ್ಷವಾದರೂ ಜಾರಿಯಾಗದ ವರದಿ

ಹಿಂದೆ ನಮ್ಮದೇ ಸರ್ಕಾರ ಈ ಸಂಬಂಧ ಅಧ್ಯಯನಕ್ಕೆ ನಿವೃತ್ತ ಐ.ಎ.ಎಸ್. ಅಧಿಕಾರಿಯಾದ ಶ್ರೀ ಎಂ. ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿಯನ್ನು ನೇಮಕ ಮಾಡಿತ್ತು. ಸಮಿತಿಯು ವಿವಿಧ ರಾಜ್ಯಗಳಿಗೆ ಹೋಗಿ ಭೇಟಿ ಕೊಟ್ಟು, ಅಲ್ಲಿನ ವ್ಯವಸ್ಥೆಯನ್ನು ಅಧ್ಯಯನ ಮಾಡಿದೆ. ವಿವಿಧ ಕ್ಷೇತ್ರಗಳ ಗಣ್ಯರನ್ನು ಮಾತನಾಡಿಸಿ ಸಮಗ್ರ ವರದಿ ನೀಡಿದೆ.

ಆದರೆ, ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿ 08 ವರ್ಷ ಕಳೆದರೂ ವರದಿಯು ಅನುಷ್ಠಾನಗೊಂಡಿಲ್ಲ. ಹಳೇ ಪದ್ಧತಿಯನ್ನೇ ಮುಂದುವರಿಸಿಕೊಂಡು ಬಂದಿವೆ.
ಇಲಾಖೆಯಲ್ಲಿ ಹಲವಾರು ಅಧಿಕಾರಿಗಳು ಮತ್ತು ಸಿಬ್ಬಂದಿ 15-20 ವರ್ಷಗಳು ಬಡ್ತಿ ಇಲ್ಲದೆ, ಒಂದೇ ವೃಂದ(ಕೇಡರ್)ದಲ್ಲಿ ಸೇವೆ ಸಲ್ಲಿಸುತ್ತಿದ್ದು, ಇದರಿಂದಾಗಿ ನೌಕರರಲ್ಲಿ, ನಿರುತ್ಸಾಹ ಉಂಟಾಗಿದೆ.

ಸರ್ಕಾರದ ಪ್ರಚಾರದ ಕೆಲಸಗಳು ಸಮರ್ಪಕವಾಗಿ ಇನ್ನಷ್ಟು ವೇಗವಾಗಿ ಆಗಬೇಕು ಅನ್ನುವುದು ಜನಪ್ರತಿನಿಧಿಗಳ, ಮಾಧ್ಯಮ ಪ್ರತಿನಿಧಿಗಳ ಅಭಿಲಾಷ ಹೊಂದಿದ್ದಾರೆ
ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಯನ್ನು ಮಾಡಲಾಗುತ್ತಿದ್ದು, ಕೆಲವೇ ಕೆಲವರಿಗೆ ಅನುಗುಣವಾಗಿ ಕರಡು ತಯಾರಿಸಿಕೊಳ್ಳಲಾಗಿದೆ ಎಂಬುದು ತಿಳಿದುಬಂದಿದೆ. ಮನಸೋ ಇಚ್ಛೆ ಸಂಬಂಧವೇ ಇಲ್ಲದ ಒಂದು ವೃಂದದಿಂದ ಮತ್ತೊಂದು ವೃಂದಕ್ಕೆ ಬಡ್ತಿ ನೀಡಲು ಪ್ರಸ್ತಾಪಿಸಲಾಗಿದೆ.

ಹೊಸ ತಿದ್ದುಪಡಿ

ಉದಾಹರಣೆಗೆ ಸಹಾಯಕ ನಿರ್ದೇಶಕ, ಹಿರಿಯ ಸಹಾಯಕ ನಿರ್ದೇಶಕ, ಉಪ ನಿರ್ದೇಶಕ, ಜಂಟಿ ನಿರ್ದೇಶಕ ಹುದ್ದೆಗಳು ವಾರ್ತಾ ವಿಷಯಗಳ ಹಿನ್ನೆಲೆ ಇರುವ ಹುದ್ದೆಗಳಾಗಿವೆ. ಪತ್ರಿಕೋದ್ಯಮ ಶಿಕ್ಷಣ ಹಾಗೂ ಪತ್ರಕರ್ತರಾಗಿ ಸುದ್ದಿ ಮಾಧ್ಯಮದಲ್ಲಿ 2-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದವರು ಸಹಾಯಕ ನಿರ್ದೇಶಕರಾಗಿ, ಹಿರಿಯ ಸಹಾಯಕ ನಿರ್ದೇಶಕರಾಗಿ ನಂತರ ಉಪ ನಿರ್ದೇಶಕ ಹುದ್ದೆಗೆ ಬಡ್ತಿ ಹೊಂದಬೇಕಾಗುತ್ತಿದೆ. ಆದರೆ, ಪತ್ರಿಕೋದ್ಯಮದ ಅನುಭವ ಹಾಗೂ ಪ್ರಚಾರ ಕೆಲಸವನ್ನು ಎಂದೂ ನಿರ್ವಹಿಸ ಆಡಳಿತಾಧಿಕಾರಿ ಹುದ್ದೆಯಿಂದ ಉಪ ನಿರ್ದೇಶಕ ಹುದ್ದೆಗೆ ಬಡ್ತಿ ನೀಡುವ ಅವೈಜ್ಞಾನಿಕ ಪ್ರಸ್ತಾವನೆಯನ್ನು ಹೊಸ ತಿದ್ದುಪಡಿಯಲ್ಲಿ ಅಳವಡಿಸಲಾಗುತ್ತಿದೆ. ಇದರಿಂದ ಇಲಾಖೆ ಕಾರ್ಯಸ್ವರೂಪದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ, ಹಿರಿಯ ಸಹಾಯಕ ನಿರ್ದೇಶಕ ಹಾಗೂ ಉಪ ನಿರ್ದೇಶಕ ಹುದ್ದೆಗಳು ಪತ್ರಿಕೋದ್ಯಮ ವಿಷಯದ ತಾಂತ್ರಿಕ ಹುದ್ದೆಗಳಾಗಿರುತ್ತವೆ. ಆದರೆ, ಲಿಪಿಕ ವರ್ಗದಲ್ಲಿ 3-4 ಬಡ್ತಿ ಪಡೆದುಕೊಂಡಿರುವ ಹಾಗೂ ಪತ್ರಿಕೋದ್ಯಮದ ಅನುಭವ ಇಲ್ಲದ ಆಡಳಿತಾಧಿಕಾರಿಯಾದವರನ್ನು ತಾಂತ್ರಿಕ ಹುದ್ದೆಯಾದ ಉಪ ನಿರ್ದೇಶಕ ಹುದ್ದೆಗೆ ಬಡ್ತಿ ಮೂಲಕ ನೇಮಕ ಮಾಡುವ ಅವೈಜ್ಞಾನಿಕ ಕ್ರಮವನ್ನು ಹೊಸ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ/ಎಂದು ದಿನೇಶ ಗೂಳಿಗೌಡ ತಮ್ಮ ಮನವಿಯಲ್ಲಿ ವಿವರಿಸಿದ್ದಾರೆ.

ಈ ಬಾರಿ ಗಿಲ್ಲಿ ನಟ ಗೆಲ್ಲೋದು ಫಿಕ್ಸ್: ಬಿಗ್ ಬಾಸ್ 11 ವಿನ್ನರ್ ಹನುಮಂತು ಭವಿಷ್ಯ

ಮ್ಯಾಟ್ರಿಮೋನಿಯಲ್ಲಿ ವಿವಾಹಕ್ಕಾಗಿ ಹುಡುಗರನ್ನು ಹುಡುಕೋ ಹುಡುಗಿಯರೇ ಈ ಸುದ್ದಿ ಓದಿ.!

Share. Facebook Twitter LinkedIn WhatsApp Email

Related Posts

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM1 Min Read

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM1 Min Read

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM1 Min Read
Recent News

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

03/05/2026 5:26 PM

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM
State News
KARNATAKA

BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

By kannadanewsnow0903/05/2026 5:26 PM KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ…

BREAKING: ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

03/05/2026 5:23 PM

ಬೆಂಗಳೂರಲ್ಲಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ, ಇಬ್ಬರು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

03/05/2026 5:02 PM

ಜೀವ ನೀಡುವವನಿಗೆ ಸಿಗಲಿಲ್ಲ ಜೀವದಾನ: ಡಿಗ್ಗಿ ಕಾಡಿನ ನಗುಮೊಗದ ಡಾ.ಲೋಬೋ ಇನ್ನು ನೆನಪು ಮಾತ್ರ!

03/05/2026 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.