Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆಗೆ ಗಮನಕ್ಕೆ: ‘ಬನಶಂಕರಿ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ

18/10/2025 6:27 PM

ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆಗೆ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

18/10/2025 6:23 PM

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

18/10/2025 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಮೀಕ್ಷೆ’ ಕಾರ್ಯವನ್ನು ಚುರುಕುಗೊಳಿಸಿ : ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಿಎಂ ‘ಸಿದ್ದರಾಮಯ್ಯ’ ಖಡಕ್‌ ಸೂಚನೆ 
KARNATAKA

‘ಸಮೀಕ್ಷೆ’ ಕಾರ್ಯವನ್ನು ಚುರುಕುಗೊಳಿಸಿ : ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಿಎಂ ‘ಸಿದ್ದರಾಮಯ್ಯ’ ಖಡಕ್‌ ಸೂಚನೆ 

By kannadanewsnow0726/09/2025 7:31 PM

ಬೆಂಗಳೂರು:   ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ  ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿಗಳು, ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳಿಸಲು ಸೂಚಿಸಿದರು.

ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು  ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರುವಂತೆ ಸೂಚಿಸಿದರು.

ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು ಎಂದರು.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‍ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚಿಸಿದರು.

ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ಸಹ ನೀಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಭೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಎ.ಎಸ್. ಪೆÇನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

CM Khadak instructs all district collectors to expedite survey work ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಳಿಗೆ ಸಿಎಂ ಖಡಕ್‌ ಸೂಚನೆ
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಗಮನಕ್ಕೆ: ‘ಬನಶಂಕರಿ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ

18/10/2025 6:27 PM1 Min Read

ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆಗೆ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

18/10/2025 6:23 PM2 Mins Read

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

18/10/2025 6:20 PM1 Min Read
Recent News

ಬೆಂಗಳೂರು ಜನತೆಗೆ ಗಮನಕ್ಕೆ: ‘ಬನಶಂಕರಿ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ

18/10/2025 6:27 PM

ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆಗೆ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

18/10/2025 6:23 PM

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

18/10/2025 6:20 PM

ಆರ್ಥಿಕವಾಗಿ ಸ್ವತಂತ್ರವಾಗಿರುವ ಸಂಗಾತಿಗೆ ‘ಜೀವನಾಂಶ’ ನೀಡಬೇಕಿಲ್ಲ : ಹೈಕೋರ್ಟ್ ಮಹತ್ವದ ಆದೇಶ

18/10/2025 5:55 PM
State News
KARNATAKA

ಬೆಂಗಳೂರು ಜನತೆಗೆ ಗಮನಕ್ಕೆ: ‘ಬನಶಂಕರಿ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ

By kannadanewsnow0918/10/2025 6:27 PM KARNATAKA 1 Min Read

ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರದ ಫರ್ನೆಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ…

ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆಗೆ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

18/10/2025 6:23 PM

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

18/10/2025 6:20 PM

BIG Alert: ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ, ಮೀರಿದ್ರೆ ಕಾನೂನು ಕ್ರಮ ಫಿಕ್ಸ್

18/10/2025 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.