Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿ : ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯ ಕೊಂದು ಅಪಘಾತದ ನಾಟಕ : ಪತಿ ಸೇರಿ ಮೂವರು ಅರೆಸ್ಟ್

10/09/2025 10:09 AM

RRB Group D Exam Date 2025 : ರೈಲ್ವೆ ಇಲಾಖೆಯ `RRB’ ಗ್ರೂಪ್ D ಪರೀಕ್ಷೆ ದಿನಾಂಕ, ಮಾದರಿ ಬಿಡುಗಡೆ : ಇಲ್ಲಿದೆ ಮಾಹಿತಿ

10/09/2025 10:06 AM

ಉರಿಯೂತ ನಿವಾರಣೆಗೆ ಸುಲಭ ಪರಿಹಾರ: ಈ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇವಿಸಿ | inflammation

10/09/2025 10:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ದರಾಮಯ್ಯ ಜೊತೆಗೆ ಸರ್ಕಾರಕ್ಕೂ ಅಭದ್ರತೆ ಕಾಡುತ್ತಿದೆ: ಬಸವರಾಜ ಬೊಮ್ಮಾಯಿ
KARNATAKA

ಸಿಎಂ ಸಿದ್ದರಾಮಯ್ಯ ಜೊತೆಗೆ ಸರ್ಕಾರಕ್ಕೂ ಅಭದ್ರತೆ ಕಾಡುತ್ತಿದೆ: ಬಸವರಾಜ ಬೊಮ್ಮಾಯಿ

By kannadanewsnow0903/10/2024 8:22 PM

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ದಿನ ಮೂರು ವರ್ಷ ನಾನೇ ಸಿಎಂ ಅಂತ ಹೇಳುತ್ತಿರುವುದು ನೋಡಿದರೆ ಅವರಿಗೆ ಎಷ್ಟು ಅಭದ್ರತೆ ಕಾಡುತ್ತಿದೆ ಎನ್ನುವುದು ಗೊತ್ತಾಗುತ್ತದೆ. ಸಿಎಂ ಜೊತೆಗೆ ಸರ್ಕಾರವೂ ಅಭದ್ರವಾಗಿದ್ದು, ಯಾವುದೇ ಅಭಿವೃದ್ದಿ ಕೆಲಸ ಆಗುತ್ತಿಲ್ಲ, ಜನರ ಪರ‌ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಅವರು ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಸರ್ಕಾರವೂ ಅಭದ್ರವಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಎಲ್ಲವೂ ನಿಂತು ಹೋಗಿದೆ. ನನಗಿರುವ ಮಾಹಿತಿಯ ಪ್ರಕಾರ ಮಹತ್ವದ ಯಾವುದೇ ಕಡತಗಳಿಗೆ ಸಹಿ ಹಾಕುತ್ತಿಲ್ಲ. ಜನರ ಪರ‌ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ರಾಜಿನಾಮೆ ‌ಕೊಡಬೇಕೆಂದರೆ ಕೇಂದ್ರ ಸಚಿವ ಎಚ್.‌ಡಿ.ಕುಮಾರಸ್ವಾಮಿಯವರೂ ರಾಜೀನಾಮೆ ನೀಡಬೇಕಾಗುತ್ತದೆ ಎಂದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿ.ಟಿ. ದೇವೇಗೌಡರು ಏನು ಹೇಳಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ಅವರ ವಿರುದ್ದ ದೂರು ಕೊಟ್ಟಾಗಲೂ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ, ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ಕೊಟ್ಟಾಗಲೂ ಕೂಡ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಹೈಕೋರ್ಟ್ ಬಹಳ ಸ್ಪಷ್ಟವಾಗಿ ಎಲ್ಲೆಲ್ಲಿ ತಪ್ಪುಗಳಾಗಿದೆ, ಎಲ್ಲಿ ಸ್ವಜನ ಪಕ್ಷಪಾತವಾಗಿದೆ ಎನ್ನುವುದು ಹೇಳಿ ತೀರ್ಪು ನೀಡಿದೆ. ಅದಾದ ಬಳಿಕ ಸಿಎಂ ತಮ್ಮ ಅಡಿಯಲ್ಲಿಯೇ ಕೆಲಸ ಮಾಡುವ ಲೋಕಾಯುಕ್ತ ಸಂಸ್ಥೆಯಿಂದ ತನಿಖೆ ನಡೆಸಲು ಸೂಚಿಸುತ್ತಾರೆ ಎಂದರೆ ಅದನ್ನು ಯಾರು ಒಪ್ಪುತ್ತಾರೆ, ಮುಖ್ಯಮಂತ್ರಿ ಗಳಾದವರು ಕರ್ನಾಟಕದ ಜನತೆಯ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಆತ್ಮಸಾಕ್ಷಿಯೇ ಅಂತಿಮ ನ್ಯಾಯಾಲಯ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಆತ್ಮಸಾಕ್ಷಿಯನ್ನು ನೋಡುವವರು ಯಾರು ? ಅವರ ಆತ್ಮಸಾಕ್ಷಿ ನಡೆಯಿಂದ ಗೊತ್ತಾಗಬೇಕು. ನುಡಿಯಿಂದ ಅಲ್ಲ ಎಂದು ಹೇಳಿದರು.

ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ವಿರುದ್ದ ಕಾಂಗ್ರೆಸ್ ‌ನಾಯಕರು ಮಾಡಿರುವ ಆರೋಪದ ಕುರಿತು ಅಶೋಕ್ ಅವರೇ ಎಳೆ ಎಳೆಯಾಗಿ ಬಿಡಿಸಿ ಹೇಳಿದ್ದಾರೆ. ಅವರ ಪ್ರಕರಣಕ್ಕೂ ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ವ್ಯತ್ಯಾಸ ಇದೆ. ಅಶೋಕ್ ಅವರು ಪ್ರಕರಣ ದಾಖಲಾಗುವ ಮುನ್ನವೇ ಜಮೀನು ವಾಪಸ್ ಕೊಟ್ಡಿದ್ದರು. ಶೇ 70 ರಷ್ಟು ಬಿಡಿಎ‌ ಇಟ್ಟುಕೊಂಡು ಹಾಗೂ ಶೇಕಡಾ 30% ರಷ್ಟು ಜಮೀನು ಬಿಟ್ಟುಕೊಡುವ ವ್ಯವಸ್ಥೆ ಇತ್ತು. ಅಶೋಕ್ ಅವರ ವಿರುದ್ದ ಜನಪ್ರತಿನಿಧಿಗಳ ಕೋರ್ಟ್, ಹೈಕೋರ್ಟ್, ವಿಭಾಗೀಯ ಪೀಠ ಗಳಲ್ಲಿ ಅಶೋಕ್ ಅವರ ವಿರುದ್ದ ಆಪಾದನೆಗಳು ಬಂದಿಲ್ಲ. ಇಷ್ಟಾದರೂ ಕೂಡ ಅವರು ನಾನು ನೈತಿಕತೆ ಹೊತ್ತು ರಾಜಿನಾಮೆ ಕೊಡುತ್ತೇನೆ, ನೀವೂ ರಾಜಿನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ ಎಂದು ಹೇಳಿದರು.

GOOD NEWS: ‘ಗೃಹ ಲಕ್ಷ್ಮೀ ಯೋಜನೆ’ ಫಲಾನುಭವಿಗಳಿಗೆ ಸಿಹಿಸುದ್ದಿ: ಅ.7, 9ರಂದು ಎರಡು ಕಂತಿನಲ್ಲಿ ಹಣ ಜಮಾ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ | Gruhalakshmi Scheme

BREAKING: ‘BMTC ನಿರ್ವಾಹಕ ಹುದ್ದೆ’ಗಳ ನೇಮಕಾತಿಯ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ | BMTC Recruitment 2024

Share. Facebook Twitter LinkedIn WhatsApp Email

Related Posts

ಬೆಳಗಾವಿ : ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯ ಕೊಂದು ಅಪಘಾತದ ನಾಟಕ : ಪತಿ ಸೇರಿ ಮೂವರು ಅರೆಸ್ಟ್

10/09/2025 10:09 AM1 Min Read

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

10/09/2025 10:00 AM2 Mins Read

SHOCKING : ರಾಜ್ಯದಲ್ಲಿ ಬೀಳಿಸೋ ಕೃತ್ಯ : ಲವರ್ ಜೊತೆ ಸೇರಿ ಹೆತ್ತ ಮಗುವನ್ನೇ ಕೊಂದು ಸುಟ್ಟು ಹಾಕಿದ ಪಾಪಿ ತಾಯಿ.!

10/09/2025 9:15 AM1 Min Read
Recent News

ಬೆಳಗಾವಿ : ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯ ಕೊಂದು ಅಪಘಾತದ ನಾಟಕ : ಪತಿ ಸೇರಿ ಮೂವರು ಅರೆಸ್ಟ್

10/09/2025 10:09 AM

RRB Group D Exam Date 2025 : ರೈಲ್ವೆ ಇಲಾಖೆಯ `RRB’ ಗ್ರೂಪ್ D ಪರೀಕ್ಷೆ ದಿನಾಂಕ, ಮಾದರಿ ಬಿಡುಗಡೆ : ಇಲ್ಲಿದೆ ಮಾಹಿತಿ

10/09/2025 10:06 AM

ಉರಿಯೂತ ನಿವಾರಣೆಗೆ ಸುಲಭ ಪರಿಹಾರ: ಈ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇವಿಸಿ | inflammation

10/09/2025 10:03 AM

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

10/09/2025 10:00 AM
State News
KARNATAKA

ಬೆಳಗಾವಿ : ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯ ಕೊಂದು ಅಪಘಾತದ ನಾಟಕ : ಪತಿ ಸೇರಿ ಮೂವರು ಅರೆಸ್ಟ್

By kannadanewsnow0510/09/2025 10:09 AM KARNATAKA 1 Min Read

ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿ ಪ್ರೇಯಸಿಗಾಗಿ ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕೊಂದು ಅಪಘಾತವಾದಂತೆ…

ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

10/09/2025 10:00 AM

SHOCKING : ರಾಜ್ಯದಲ್ಲಿ ಬೀಳಿಸೋ ಕೃತ್ಯ : ಲವರ್ ಜೊತೆ ಸೇರಿ ಹೆತ್ತ ಮಗುವನ್ನೇ ಕೊಂದು ಸುಟ್ಟು ಹಾಕಿದ ಪಾಪಿ ತಾಯಿ.!

10/09/2025 9:15 AM

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ | Lokayukta Raid

10/09/2025 8:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.