Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಮ್ಮ ದಾಂಪತ್ಯ ಜೀವನ ಪುನಃ ನಿರ್ಮಿಸಿಕೊಳ್ಳುತ್ತೇವೆ : ಮತ್ತೆ ಒಂದಾದ ನಟ ಅಜೇಯ್ ರಾವ್ ದಂಪತಿ

17/08/2025 5:13 PM

ಮತಗಳ್ಳತನ ಆರೋಪ: 7 ದಿನಗಳಲ್ಲಿ ಅಫಿಡವಿಟ್ ಸಲ್ಲಿಸಿ, ಇಲ್ಲವೇ ಕ್ಷಮೆ ಕೇಳಲು ರಾಹುಲ್ ಗಾಂಧಿಗೆ ECI ಸೂಚನೆ

17/08/2025 5:12 PM

ಬೆಂಗಳೂರಿನ ಸರ್ಜಾಪುರದಲ್ಲಿ ‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್ ಕ್ಲಿನಿಕ್’ ನೂತನ ಶಾಖೆ ಆರಂಭ

17/08/2025 5:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಪರಿವಾರ, ತಳವಾರ ಜನಾಂಗ’ದವರನ್ನು ‘ST’ಗೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

BREAKING: ‘ಪರಿವಾರ, ತಳವಾರ ಜನಾಂಗ’ದವರನ್ನು ‘ST’ಗೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0909/02/2024 6:57 PM

ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅವರು ಇಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು

ಬುದ್ಧಿವಂತಿಕೆ ಯಾರ ಸ್ವತ್ತಲ್ಲ

ಅಕ್ಷರ ಸಂಸ್ಕೃತಿಯಿಂದ ವಂಚಿತರಾದಾಗ ಸಾಮಾಜಿಕ ಆರ್ಥಿಕ ಅಸಮಾನತೆ ನಿರ್ಮಾಣವಾಗಿರುವುದು. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದರು.

ಸಮಸಮಾಜ ನಿರ್ಮಾಣವಾದಾಗಲೇ ರಾಮರಾಜ್ಯದ ಸ್ಥಾಪನೆ

ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ ಕಾವ್ಯಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ರಾಮರಾಜ್ಯ ಎಂದು ಹೇಳಬಹುದು.

ಸಹಿಷ್ಣುತೆ ಹಾಗೂ ಸಹಬಾಳ್ವೆ

ಇಂದು ಜಾತಿ ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್ ಸಿ , ಎಸ್ ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.

BREAKING: ಫೆ.25ರಂದು ‘1137 ಪೊಲೀಸ್ ಪೇದೆ’ಗಳ ನೇಮಕಾತಿಗೆ ಲಿಖಿತ ಪರೀಕ್ಷೆ: ಈ ‘ವಸ್ತ್ರ ಸಂಹಿತೆ’ ಪಾಲನೆ ಕಡ್ಡಾಯ

“ನಿಮಗೊಂದು ಶಿಕ್ಷೆ ನೀಡ್ತೀನಿ” : ಕ್ಯಾಂಟೀನ್’ನಲ್ಲಿ ವಿವಿಧ ಪಕ್ಷಗಳ ‘8 ಸಂಸದ’ರೊಂದಿಗೆ ‘ಪ್ರಧಾನಿ ಮೋದಿ’ ಭೋಜನಕೂಟ

Share. Facebook Twitter LinkedIn WhatsApp Email

Related Posts

BREAKING : ನಮ್ಮ ದಾಂಪತ್ಯ ಜೀವನ ಪುನಃ ನಿರ್ಮಿಸಿಕೊಳ್ಳುತ್ತೇವೆ : ಮತ್ತೆ ಒಂದಾದ ನಟ ಅಜೇಯ್ ರಾವ್ ದಂಪತಿ

17/08/2025 5:13 PM1 Min Read

ಬೆಂಗಳೂರಿನ ಸರ್ಜಾಪುರದಲ್ಲಿ ‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್ ಕ್ಲಿನಿಕ್’ ನೂತನ ಶಾಖೆ ಆರಂಭ

17/08/2025 5:00 PM3 Mins Read

ಉತ್ತರಕನ್ನಡ : ತರಗತಿಗೆ ಹೋಗಿ ಬರುವುದಾಗಿ ಹೇಳಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!

17/08/2025 4:59 PM1 Min Read
Recent News

BREAKING : ನಮ್ಮ ದಾಂಪತ್ಯ ಜೀವನ ಪುನಃ ನಿರ್ಮಿಸಿಕೊಳ್ಳುತ್ತೇವೆ : ಮತ್ತೆ ಒಂದಾದ ನಟ ಅಜೇಯ್ ರಾವ್ ದಂಪತಿ

17/08/2025 5:13 PM

ಮತಗಳ್ಳತನ ಆರೋಪ: 7 ದಿನಗಳಲ್ಲಿ ಅಫಿಡವಿಟ್ ಸಲ್ಲಿಸಿ, ಇಲ್ಲವೇ ಕ್ಷಮೆ ಕೇಳಲು ರಾಹುಲ್ ಗಾಂಧಿಗೆ ECI ಸೂಚನೆ

17/08/2025 5:12 PM

ಬೆಂಗಳೂರಿನ ಸರ್ಜಾಪುರದಲ್ಲಿ ‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್ ಕ್ಲಿನಿಕ್’ ನೂತನ ಶಾಖೆ ಆರಂಭ

17/08/2025 5:00 PM

ಉತ್ತರಕನ್ನಡ : ತರಗತಿಗೆ ಹೋಗಿ ಬರುವುದಾಗಿ ಹೇಳಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!

17/08/2025 4:59 PM
State News
KARNATAKA

BREAKING : ನಮ್ಮ ದಾಂಪತ್ಯ ಜೀವನ ಪುನಃ ನಿರ್ಮಿಸಿಕೊಳ್ಳುತ್ತೇವೆ : ಮತ್ತೆ ಒಂದಾದ ನಟ ಅಜೇಯ್ ರಾವ್ ದಂಪತಿ

By kannadanewsnow0517/08/2025 5:13 PM KARNATAKA 1 Min Read

ಬೆಂಗಳೂರು : ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟ ಅಜಯ್ ರಾವ್ ವಿರುದ್ಧ…

ಬೆಂಗಳೂರಿನ ಸರ್ಜಾಪುರದಲ್ಲಿ ‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್ ಕ್ಲಿನಿಕ್’ ನೂತನ ಶಾಖೆ ಆರಂಭ

17/08/2025 5:00 PM

ಉತ್ತರಕನ್ನಡ : ತರಗತಿಗೆ ಹೋಗಿ ಬರುವುದಾಗಿ ಹೇಳಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!

17/08/2025 4:59 PM

ಇಂದಿನಿಂದ ರಾಜ್ಯಾಧ್ಯಂತ ದೇಗುಲಗಳಲ್ಲಿ ಪ್ಲಾಸ್ಟಿಕ್ ಬ್ಯಾನ್: 36,000 ಮುಜರಾಯಿ ಇಲಾಖೆ ದೇವಾಲಯಗಳಿಗೆ ಅನ್ವಯ

17/08/2025 4:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.