Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ
KARNATAKA

ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

By kannadanewsnow0703/09/2024 12:33 PM

ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌.

ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು.

ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು.

ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು

CM Siddaramaiah: Appropriate action will be taken against those concerned if quality arrangements are not provided at Chamundeshwari Sannidhi: CM Siddaramaiah
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM1 Min Read

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM1 Min Read
Recent News

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

25/03/2026 4:40 AM
State News
KARNATAKA

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

By kannadanewsnow5725/03/2026 5:19 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ರೇಷನ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ಕನಿಷ್ಠ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

25/03/2026 4:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.